ಕಾರ್ಕಳ ( ಆ .04): ಕೇಂದ್ರ ಲೋಕಸೇವಾ ಆಯೋಗ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ನಡೆದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ 14 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಎಸ್.ಎಸ್.ಬಿ. ( ಸರ್ವಿಸ್ ಸೆಲೆಕ್ಷನ್ ಬೋರ್ಡ್ ) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ನಾಗದೇವ ಎಂ.ಜಿ, ಪ್ರಥಮ್ ತಮ್ಮಣ್ಣಗೌಡರ್, ನಿಶಾಂತ್ ಹೊನ್ನಾವರ, ನಮಿತ್ ಕೃಷ್ಣಮೂರ್ತಿ ಹೆಗ್ಡೆ, ಸಂವಿತ್ ಅಮಿತ್ ಗೋಕರ್ಣ, ಸುಕ್ಷಿತ್ ಗಿರೀಶ್ ಗೌಡ, […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಬಿ. ಬಿ. ಹೆಗ್ಡೆ ಕಾಲೇಜು: ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ
ಕುಂದಾಪುರ (ಅ.02): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕ -1 ಹಾಗೂ 2 ಮತ್ತು ರೋವರ್ಸ್-ರೇಂಜರ್ಸ್, ಘಟಕದ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜೀವನ […]
ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಿಗೆ ಸನ್ಮಾನ
ಕುಂದಾಪುರ (ಅ.04): ನಿರಂತರ ಕಲಿಕೆ ಸಾಧ್ಯವಾದಾಗ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ. ಅದರಲ್ಲಿಯೂ ಸಂಶೋಧನಾತ್ಮಕ ಕಲಿಕೆಗೆ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಸಂಸ್ಥೆಯಲ್ಲಿ ಸಂಶೋಧನಾರ್ಥಿಗಳು ಹೆಚ್ಚಾದಷ್ಟು ಸಂಸ್ಥೆಯ ಮೌಲ್ಯ ಹೆಚ್ಚುತ್ತದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ ಅವರು ಹೇಳಿದರು ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. […]
ಚಂದ್ರಶೇಖರ ನಾವಡರ ವ್ಯಕ್ತಿತ್ವ ಅನುಕರಣೀಯ – ಶ್ರೀ ರವೀಂದ್ರ ಕಿಣಿ
ಬೈಂದೂರು ( ಆ .01): ನಿವೃತ್ತ ಯೋಧರೂ , ಬರಹಗಾರರೂ ಆಗಿ ಬೈಂದೂರು ಪರಿಸರದಲ್ಲಿ ಖ್ಯಾತರಾಗಿರುವ ಬೈಂದೂರು ಚಂದ್ರಶೇಖರ ನಾವಡರ ಶಿಸ್ತು, ಸ್ನೇಹಪರ ವ್ಯಕ್ತಿತ್ವ, ವೃತ್ತಿಪರತೆ ಸಮಾಜಕ್ಕೆ ಹಾಗೂ ಯುವ ಉದ್ಯೋಗಿಗಳಿಗೆ ಆದರ್ಶವಾಗಬೇಕು. ಶಾಖೆಗೆ ಬರುವ ಗ್ರಾಹಕರನ್ನು ಪ್ರೀತಿಯಿಂದ ಆದರಿಸಿ ಮಾತನಾಡುವ ಅವರ ಗ್ರಾಹಕ ಸ್ನೇಹಿ ನಡವಳಿಕೆ ಅನುಕರಣೀಯ ಎಂದು ಉದ್ಯಮಿ ಶ್ರೀ ರವೀಂದ್ರ ಕಿಣಿ ಶ್ಲಾಘಿಸಿದರು. ಯೂನಿಯನ್ ಬ್ಯಾಂಕ್ ಬೈಂದೂರು ಶಾಖೆಯಲ್ಲಿ ಸೇವೆಯಿಂದ ನಿವೃತ್ತರಾದ ಉದ್ಯೋಗಿ ಶ್ರೀ ಚಂದ್ರಶೇಖರ […]
ಸೇವಾ ಸಿಂಚನ ಶೈಕ್ಷಣಿಕ ದತ್ತಿನಿಧಿಗೆ ಅರ್ಜಿ ಆಹ್ವಾನ
ಕುಂದಾಪುರ (ಅ. 01): ಸೇವಾ ಸಿಂಚನ ಪ್ರತಿಷ್ಠಾನವು ತನ್ನ ಮೂರನೇ ವರ್ಷದ ಯಶಸ್ವಿ ಸಂಸ್ಥಾಪನಾ ದಿನದ ಸವಿನೆನಪಿನಲ್ಲಿ 2025ರ ಶೈಕ್ಷಣಿಕ ದತ್ತಿನಿಧಿಯನ್ನು ಘೋಷಿಸಿದೆ. ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 30 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹವನ್ನು ನೀಡಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವುದು ಈ ದತ್ತಿನಿಧಿಯ ಮುಖ್ಯ ಉದ್ದೇಶವಾಗಿದೆ. ಈ ದತ್ತಿನಿಧಿಯು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ
ಕುಂದಾಪುರ (ಸೆ.27): ಶ್ರೀ ಕೃಷ್ಣನ ತತ್ವಗಳು ಅನನ್ಯವಾದುದು. ರಂಗೋಲಿ ಹಾಕುವಲ್ಲಿ ಕೈ ಬೆರಳ ವಿನ್ಯಾಸಗಳಲ್ಲಿ ಕೃಷ್ಣನ ತತ್ವಗಳು ಅಡಗಿವೆ. ಈ ತತ್ವಗಳನ್ನು ಅರ್ಥೈಸಿಕೊಂಡರೆ ಬದುಕು ಅರ್ಥವತ್ತಾಗುತ್ತದೆ ಎಂದು ವಿದ್ವಾಂಸರಾದ ಉಡುಪಿಯ ಶ್ರೀ ಆಯನೂರು ಮಧುಸೂಧನ ಆಚಾರ್ಯ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಆಯೋಜಿಸಿದ ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಭಾ ಕಾರ್ಯಕ್ರಮದ ಮುಖ್ಯ […]
ಕುಂದಾಪುರ ಮೂಲದ ಕುಮಾರಿ ನಿಶಾಲಿ ಉಮೇಶ್ ಕುಂದರ್ ರವರಿಗೆ ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025”ಪ್ರಶಸ್ತಿ
ಕುಂದಾಪುರ( ಸೆ.24): ಕುಂದಾಪುರ ಮೂಲದ ಕುಮಾರಿ ನಿಶಾಲಿ ಉಮೇಶ್ ಕುಂದರ್ ರವರು ದೆಹಲಿಯಲ್ಲಿ ಇತ್ತೀಚೆಗೆ ನಡೆದ ದೆಹಲಿಯ ಪ್ರತಿಷ್ಠಿತ ಡಿ ಕೆ ಪೆಜೆನ್ಟ್ ಸಂಸ್ಥೆಯವರು ಆಯೋಜಿಸುವ “ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025” ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಒಟ್ಟು 43 ಸ್ಪರ್ಧಾಳುಗಳನ್ನು ಹಿಂದಿಕ್ಕಿ ,ಸ್ಪರ್ಧೆಯ ಭಾಗವಾಗಿ ಯಕ್ಷಗಾನ ಪಾತ್ರದ ಅಭಿನಯ ಮಾಡಿ ಜೂರಿ ಗಳ ಮನಸೆಳೆದದ್ದು ಸಂತೋಷದ ಸಂಗತಿ. ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಿಶಾಲಿ, […]
ಬಾಸ್ಕೆಟ್ಬಾಲ್ : ಕಾರ್ಕಳ ಜ್ಞಾನಸುಧಾದ ಭುವನ್ ರಾಜ್ಯ ತಂಡಮಟ್ಟಕ್ಕೆ
ಕಾರ್ಕಳ( ಸೆ.23) : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಭುವನ್ ಎಸ್ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಬಿ.ಬಿ. ಹೆಗ್ಡೆ ಕಾಲೇಜು: ತ್ರಾಸಿ ಬೀಚ್ ಕ್ಲೀನಿಂಗ್
ಕುಂದಾಪುರ (ಸೆ.20): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ತ್ರಾಸಿ ಗ್ರಾಮ ಪಂಚಾಯತ್, ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ಗಂಗೊಳ್ಳಿ ಹಾಗೂ ಸಿಬ್ಬಂದಿ ವರ್ಗ, ಸ್ವಚ್ಛ ಕರಾವಳಿ ಮಿಷನ್ ಸದಸ್ಯರು, ಎಸ್.ವಿ. ಪದವಿ ಪೂರ್ವ ಕಾಲೇಜು, ಗಂಗೊಳ್ಳಿ ಎನ್.ಎಸ್.ಎಸ್. ಸ್ವಯಂಸೇವಕರು ಮತ್ತು ಖಾರ್ವಿ ಆನ್ಲೈನ್ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಹಾಗೂ ಸ್ವಚ್ಛತಾ ಹೀ […]
ಕ್ರಿಯೇಟಿವ್ ಸ್ಫೂರ್ತಿಮಾತು ಕಾರ್ಯಕ್ರಮ : ವಿಶ್ವದ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯ ಹಿರಿಮೆಯ ಪಶ್ಚಿಮ ಬಂಗಾಳದ ಶ್ರೀ ಬಾಬರ್ ಅಲಿ ಭಾಗಿ
ಕಾರ್ಕಳ ( ಸೆ. 24): ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ಶಿಕ್ಷಣವೇ ಎಲ್ಲಾ” ಶೀರ್ಷಿಕೆಯಡಿಯಲ್ಲಿ ಕ್ರಿಯೇಟಿವ್ ಸ್ಫೂರ್ತಿಮಾತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶ್ಚಿಮ ಬಂಗಾಳದ ಶಿಕ್ಷಣತಜ್ಞ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಶ್ರೀ ಬಾಬರ್ ಅಲಿ ಅವರು ಶೈಕ್ಷಣಿಕ ವಿಚಾರಗಳ ಕುರಿತು ಹೇಳುತ್ತಾ, ತಾನು ಬೆಳೆದು ಬಂದ ಹಾದಿಯ ರೋಚಕತೆಯನ್ನು ವಿವರಿಸಿ ಇತರರಿಗೂ ಸ್ಫೂರ್ತಿಯಾದರು. ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ. ಇಂದು ಶ್ರದ್ದೆಯಿಂದ […]










