ಕುಂದಾಪುರ (ಜು:14): ದತ್ತಾಶ್ರಮ ಆದಿಶಕ್ತಿ ಮಠ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ ಆನಗಳ್ಳಿ,ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಿಜಾಯ್ ಇವೆಂಟ್ ಗ್ರೂಪ್, ಹಾಗೂ ರಕ್ತ ನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಜುಲೈ 14 ರಂದು ಆನಗಳ್ಳಿಯಲ್ಲಿ ನಡೆಯಿತು. ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ ರಕ್ತದಾನ ಮಹಾದಾನ, […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಶ್ರೀ ಚಂದ್ರಶೇಖರ ಶೆಟ್ಟಿ ಬಡ್ತಿ
ಉಡುಪಿ (ಜು, 13):ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸಿರುವ ಶ್ರೀಚಂದ್ರಶೇಖರ ಶೆಟ್ಟಿಯವರು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ (CLASS-1)ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಇವರು ದೈಹಿಕ ಶಿಕ್ಷಣ ವಿಭಾಗದಲ್ಲಿ ಹಲವಾರು ಸಂಸ್ಥೆಗಳಲ್ಲಿ ಸೇವೆಸಲ್ಲಿಸಿ,ಪ್ರೌಢಶಾಲಾ ಮುಖ್ಯಶಿಕ್ಷಕರಾಗಿ,ತಾಲೂಕು ಯುವ ಜನಸೇವಾ ಕ್ರೀಡಾಧಿಕಾರಿಯಾಗಿ,ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಹೀಗೆ ಮುಂತಾದ ಹುದ್ದೆಗಳಲ್ಲಿ ಸೇವೆಸಲ್ಲಿಸಿ, ಆಲೂರಿನ ಶೈಕ್ಷಣಿಕ,ಕ್ರೀಡಾ, ಸಾಂಸ್ಕೃತಿಕ,ಧಾರ್ಮಿಕ ಹೀಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.
ಆಲೂರು ಗೋಳಿಕಟ್ಟೆ ಸಂಪನ್ನ ಶೆಟ್ಟಿ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ
ಕುಂದಾಪುರ ( ಜು,13): ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕು ಆಲೂರು ಗೋಳಿಕಟ್ಟೆ ದುಗ್ಗಪ್ಪ ಶೆಟ್ಟಿ ಮನೆ ಸಂಪನ್ನ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಇವರು ಬೈಂದೂರು ತಾಲೂಕು ಹೇರೂರು ಗ್ರಾಮದ ಗರಡಿ ಮನೆ ಶೇಖರ ಶೆಟ್ಟಿ ಮತ್ತು ಆಲೂರು ಗೋಳಿಕಟ್ಟೆ ದುಗ್ಗಪ್ಪ ಶೆಟ್ರ ಮನೆ ಸುಜಾತಾ ಶೆಟ್ಟಿ ದಂಪತಿಗಳ ಪುತ್ರ. ಇವರು ಉಡುಪಿಯ ಸುರೇಂದ್ರ ನಾಯಕ್ ಕೋ.ಚಾರ್ಟೆಡ್ ಅಕೌಂಟೆಂಟ್ ಅವರಲ್ಲಿ ತರಬೇತಿ ಪಡೆದುಕೊಂಡಿರುತ್ತಾರೆ.
ಜುಲೈ 14 ರಂದು ಗಂಗೊಳ್ಳಿಯಲ್ಲಿ ‘ಮೃಡ’ ನಾಟಕ ಪ್ರದರ್ಶನ
ಗಂಗೊಳ್ಳಿ(ಜು,13) : ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಅಂಗವಾಗಿ ಜುಲೈ 14 ಭಾನುವಾರ ಸಂಜೆ 4:00 ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ‘ಮೃಡ’ ನಾಟಕ ಪ್ರದರ್ಶನ ನಡೆಯಲಿದೆ. ಶಿವನ ನೈಜ ದರ್ಶನವನ್ನು ಅಪೇಕ್ಷಿಸಿ ಹೊರಡುವ ಭಕ್ತನೊಬ್ಬನಿಗೆ ಜೀವನದ ಸತ್ಯ ದರ್ಶನವಾಗುವ ಕಥೆಯನ್ನು ನಾಟಕ ಹೊಂದಿದ್ದು , […]
ಸುಣ್ಣಾರಿ: ನಿವೃತ ಮುಖ್ಯೋಪಾಧ್ಯಾಯಿನಿ ಸರೋಜನಿಯವರಿಗೆ ಸನ್ಮಾನ
ಕೋಟೇಶ್ವರ (ಜು,13): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೊಂಬಾಡಿ-ಮಂಡಾಡಿ ಇಲ್ಲಿ ಮುಖ್ಯೋಪಾಧ್ಯಾಯಿನಿ ಯಾಗಿದ್ದ ಶ್ರೀಮತಿ ಸರೋಜನಿ ಯವರು ಶಿಕ್ಷಕ ವ್ರತ್ತಿಯಿಂದ ನಿವೃತ್ತಿ ಹೊಂದಿದ್ದು, ಆ ಪ್ರಯುಕ್ತ ಸುಣ್ಣಾರಿ ವೆಂಕಟೇಶ ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕರಾದ ಶ್ರೀ ಕಿಶೋರ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಮತ್ತು ಅಧ್ಯಾಪಕರ ಪರವಾಗಿ ಶ್ರೀಮತಿ ಸರೋಜನಿ ಮೇಡಂ ಮತ್ತು ಅವರ ಪತಿ ಶ್ರೀ […]
ಸಿಎ ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ
ಕೊಲ್ಲೂರು (ಜು,12): ಇಲ್ಲಿನ ಶ್ರೀ ಮೂಕಾಂಬಿಕೆ ದೇವಳದ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಕ್ಷಿತ್ ಕುಮಾರ್ ಶೆಟ್ಟಿ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದನೆ ಹಾಗೂ ಶುಭಾಶಯ ಕೋರಿರುತ್ತಾರೆ.
ಶ್ರೀ ಮೂಕಾಂಬಿಕ ದೇವಳದ ಸ್ವತಂತ್ರ ಪಿ ಯು ಕಾಲೇಜು :ಪೋಷಕರ ಸಭೆ
ಕೊಲ್ಲೂರು ( ಜು,13): ಇಲ್ಲಿನ ಶ್ರೀ ಮೂಕಾಂಬಿಕ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ಇತ್ತೀಚೆಗೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ. ಬಿ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂದರ್ಭದಲ್ಲಿ ಪ್ರಥಮ ಪಿಯುಸಿಯ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಭೂಮಿಕಾ ,ದ್ವಿತೀಯ ಸ್ಥಾನ ತಿಲಕ್ ಪಿ ಸಿ, ತೃತೀಯ ಸ್ಥಾನ ಪಡೆದ ಸುಬ್ರಹ್ಮಣ್ಯ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ […]
ಏಷ್ಯಾನ್ ಪೆಷಿಫಿಕ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್:ವಿಜಯ ಕಾಂಚನ್ ಬೈಕಂಪಾಡಿಯವರಿಗೆ ಚಿನ್ನದ ಪದಕ
ಉಡುಪಿ (ಜು,10): ದಕ್ಷಿಣ ಆಫ್ರಿಕಾದಲ್ಲಿ ಇತ್ತೀಚೆಗೆ ಜರಗಿದ ಏಷ್ಯಾನ್ ಪೆಷಿಫಿಕ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ -2024ನಲ್ಲಿ 105ಕೆಜಿ ವಿಭಾಗದ M2 ನಲ್ಲಿ 2 ಚಿನ್ನದ ಪದಕ ಪಡೆದು ಬೆಸ್ಟ್ ಲಿಫ್ಟಿರ್ ಪ್ರಶಸ್ತಿಯನ್ನು ವಿಜಯ ಕಾಂಚನ್ ಬೈಕಂಪಾಡಿ ಪಡೆದು ಸಾಧನೆಗೈದಿದ್ದಾರೆ. ಇವರು ಏಕಲವ್ಯ ಪಶಸ್ತಿ ವಿಜೇತ ಸತೀಶಕುಮಾರ್ ಕುದ್ರೋಳಿಯವರ ಶಿಷ್ಯ, ಸೆನ್ ಕ್ರೈಂ ಮಂಗಳೂರು ಸಿಟಿ ಯಲ್ಲಿ ಉದ್ಯೋಗ ಹಾಗೂ ಮಂಗಳೂರು ಬಾಲಾoಜನೇಯ,ರಾಮಾಂಜನೇಯ,ಪವರ್ ಜೋನ್,ಬ್ಲಾಕ್ ರಾಕ್, ಮೈ ಫಿಟ್ನೆಸ್ ಜಿಮ್ […]
ಕುಂದಾಪುರ: ಜು. 12 ರಿಂದ 14 ರ ತನಕ ಹಲಸು ಮತ್ತು ಕೃಷಿ ಮೇಳ
ಕುಂದಾಪುರ (ಜು. 12): ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ಉದ್ದೇಶದಿಂದ ಹಲಸು ಮತ್ತು ಕೃಷಿ ಉತ್ಪನ್ನಗಳ ವಿಶೇಷ ಆಹಾರ ಹಾಗೂ ಕೃಷಿ ಯಂತ್ರೋಪಕರಣ ಮತ್ತು ಸಾವಯವ ಉತ್ಪನ್ನ ಗಳ ಮಾರಾಟ ಹಾಗೂ ಪ್ರದರ್ಶನವನ್ನು ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ವತಿಯಿಂದ ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ ಜುಲೈ 12 ರಿಂದ 14 ರ ತನಕ ನಗರದ ನೆಹರು ಮೈದಾನದಲ್ಲಿ ಯೋಜಿಸಲಾಗಿದೆ. ಇದರ ಉಪಯೋಗವನ್ನು ಕುಂದಾಪುರ ಪರಿಸರದ […]
ಎಕ್ಸಲೆಂಟ್ ಪಿ ಯು ಕಾಲೇಜು ಕುಂದಾಪುರ: ವಿಶೇಷ ಡಿಪಿಪಿ ತರಗತಿ ಉದ್ಘಾಟನೆ
ಕುಂದಾಪುರ(ಜು,06): ಇಲ್ಲಿನ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿನ ಸ್ಪಧಾತ್ಮಕ ಪರೀಕ್ಷೆಗಳಾದ ನೀಟ್,ಜೆಇಇ, ಸಿಇಟಿ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ವಿಶೇಷ ಡಿಪಿಪಿ ತರಗತಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ನೀಟ್, ಜೆಇಇ, ಸಿಇಟಿ ಕೋರ್ಸ್ಗಳ ಅನುಭವಿ ಹಿರಿಯ ಉಪನ್ಯಾಸಕರಾದ ಮಿ. ಬಾಲಾಜಿ ಗುಪ್ತ ಇವರ ಮಾಗದರ್ಶನದಲ್ಲಿ ಡಿಪಿಪಿ ತಂಡದ ಅನುಭವಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೀಪ ಬೆಳಗುವ ಮೂಲಕ ಉದ್ಘಾಟಿಸಲಾಯಿತು. ಈ ಕುರಿತು ಮಾತನಾಡಿದ […]










