ಬೆಂಗಳೂರು (ನ,20): ಟೀಮ್ ಉತ್ಸಹಿ ಬೆಂಗಳೂರು ತಂಡ ಮತ್ತು ಬಡಗುತಿಟ್ಟಿನ ಸುಪ್ರಸಿದ್ಧ ಅತಿಥಿ ಕಲಾವಿದರ ಸಂಗಮದಲ್ಲಿ ” ನರಕಾಸುರ ವಧೆ” ಎನ್ನುವ ಪೌರಾಣಿಕ ಯಕ್ಷಗಾನ ಪ್ರಸಂಗವು ಬೆಂಗಳೂರಿನ ಕತ್ರಿಗುಪ್ಪೆ ಹೋಟೆಲ್ ಅನ್ನಕುಟೀರದ ಸಭಾಂಗಣದಲ್ಲಿ ವೈಭವದಿಂದ ಪ್ರದರ್ಶನಗೊಂಡಿತು. ಬಡಗು ತಿಟ್ಟಿನ ಹಿರಿಯ ಭಾಗವತರಾದ ಹೆರಂಜಾಲು ಗೋಪಾಲ ಗಾಣಿಗ ರವರ ಹಿಮ್ಮೇಳ , ಕಲಾವಿದರಾದ ನಾಗ ಶ್ರಿ ಜಿ.ಎಸ್ , ಅರ್ಪಿತ ಹೆಗ್ಡೆ ಮತ್ತು ಸಹ ಕಲಾವಿದರು ರಂಗವನ್ನು ವೈಭಿಕರಿಸಿದರು. ವರದಿ: ರಾಘವೇಂದ್ರ […]
Category: ರಾಜ್ಯ ಸುದ್ದಿ
ಸುದ್ದಿ ಸಮಾಚಾರ — > ರಾಜ್ಯ ಸುದ್ದಿ
ಜೀವ ರಕ್ಷಕ, ಮುಳುಗು ತಜ್ಞ ಸುರೇಶ ಖಾರ್ವಿ ಭಟ್ಕಳ್ (ಕಡಲಾಳದ ಅಂತರಂಗ- ಬದುಕಿನ ಕಥೆ ವ್ಯಥೆ )
ಜೀವ ರಕ್ಷಣೆ ಮತ್ತು ಸಾವು ಅದು ಎಷ್ಟು ಕಠೋರವೆಂದರೆ ಆ ಚಕ್ರವ್ಯೂಹಕ್ಕೆ ಸಿಲುಕಿ ಬದುಕು ಬಂದವರರಿಗೆ ಮಾತ್ರ ಗೊತ್ತು .ಸಾವಿನಂಚಿನ ಕದ ತಟ್ಟಿ ಬದುಕಿ ಬರುವುದೆಂದರೆ ಅದೇನು ಆಟವಲ್ಲಾ.ಅದರ ಪರಿಕಲ್ಪನೆ ಮಾಡುವುದು ಕೂಡ ಕಷ್ಟ, ಅಂತಹ ಪರಿಸ್ಥಿತಿಯಲ್ಲಿ ಇರುವವರನ್ನು ಬದುಕಿಸುವವರೇ ಜೀವ ರಕ್ಷಕರು. ಜೀವರಕ್ಷಕರು ಅಕ್ಷರಶಃ ದೇವರಿಗೆ ಸಮನಾದವರು. ಆದರೆ ಇಂಥ ದೇವರುಗಳು ಮಾತ್ರ ಕಣ್ಣೀರಲ್ಲಿ ಕೈತೊಳೆತ್ತಾ ಇರುವುದು ಮಾತ್ರ ಶೋಚನೀಯ…!ಇವರ ನಿಸ್ವಾರ್ಥ ಸೇವಾ ಕಾರ್ಯವನ್ನು ಗುರುತಿಸಿ ಇವರಿಗೆ ಗೌರವದ […]
ಅ,28 ರಂದು ಪ್ರಜ್ಞಾ ಸಾಗರ್ ರೆಸ್ಟೋರೆಂಟ್ ಶುಭಾರಂಭ
ಬೆಂಗಳೂರು(ಅ 27): ಪ್ರಜ್ಞಾ ಸಾಗರ್ ಹೋಟೇಲ್ಸ್ ಆಂಡ್ ರೆಸೋರ್ಟ್ ಇದರ ಮೂರನೇ ಶಾಖೆ ಪ್ರಜ್ಞಾ ಸಾಗರ್ ರೆಸ್ಟೋರೆಂಟ್ ಅ,28 ರಂದು ಬೆಂಗಳೂರಿನ ಅಂಬೇಡ್ಕರ್ ನಗರದ ಕೆ.ಆರ್ .ಟವರ್ ನಲ್ಲಿ ಶುಭಾರಂಭಗೊಳ್ಳಲಿದೆ. ಮಾಜಿ ಸಚಿವ ಶ್ರೀ ಅರವಿಂದ ಲಿಂಬಾವಳಿಯವರು ಪ್ರಜ್ಞಾ ಸಾಗರ್ ರೆಸ್ಟೋರೆಂಟ್ ನ್ನು ಉದ್ಘಾಟಿಸಲಿದ್ದು, ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಸಮಾಜ ಸೇವಕ ಶ್ರೀ ಕಾವೇರಪ್ಪ, ಶ್ರೀ ಮನೋಹರ್ ರೆಡ್ಡಿ ,ಶ್ರೀ ರಾಜ ರೆಡ್ಡಿ, ಶ್ರೀ ಜಯಚಂದ್ರ ರೆಡ್ಡಿ, […]
ಕರಾವಳಿಯ ಹೆಮ್ಮೆ,ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ
ಮಂಗಳೂರು (ಅ,23): ಮಂಗಳೂರು ಬೀದಿಯಲ್ಲಿ ಬುಟ್ಟಿಯಲ್ಲಿ ಕಿತ್ತಾಳೆ ಹಣ್ಣು ಮಾರಾಟ ಮಾಡಿ ಬಂದ ಲಾಭದ ಹಣವನ್ನು ಗ್ರಾಮೀಣ ಪ್ರದೇಶವಾದ ಹರೇಕಳ ನ್ಯೂಪಡ್ಪುವಿನಲ್ಲಿ ಸರಕಾರಿ ಶಾಲೆ ಆರಂಭಿಸಲು ಶ್ರಮವಹಿಸಿದ ಹರೇಕಳ ಹಾಜಬ್ಬ ನವರ ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ಕೇಂದ್ರ ಸರಕಾರ 2020ರ ಸಾಲಿನಲ್ಲಿ ಪ್ರಕಟಿಸಿದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ನ.8ರಂದು ದೆಹಲಿಗೆ ಆಗಮಿಸುವಂತೆ ಕೇಂದ್ರ ಗೃಹಸಚಿವಾಲಯದಿಂದ ಅಧಿಕೃತ ಅಹ್ವಾನ ಬಂದಿದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿರುವ ಸರಳ ಸಜ್ಜನಿಕೆಯ […]
ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆ : ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ
ಕುಂದಾಪುರ (ಅ, 12) : ಶಿವಮೊಗ್ಗ ಯುವ ದಸರಾದಲ್ಲಿ ನಡೆದ ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆಯ 65 ಕೆಜಿ ವಿಭಾಗದಲ್ಲಿ ಹೆಮ್ಮಾಡಿಯ ನ್ಯೂ ವೀರ ಮಾರುತಿ ವ್ಯಾಯಾಮ ಶಾಲೆಯ ಶ್ರೀ ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ ಪಡೆದಕೊಂಡಿದ್ದಾರೆ. ವಿವಿಧ ಜಿಲ್ಲಾ ಮತ್ತು ರಾಜ್ಯ ಮಟ್ಟದ ದೇಹದಾಢ್ಯ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಸೋಮಶೇಖರ್ ಖಾರ್ವಿ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಪೂರ್ವತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಕುಂದಾಪುರದ ಕುವರ ಕಿಕ್ ಬಾಕ್ಸರ್ ಅನೀಶ್ ಶೆಟ್ಟಿಗೆ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ
ಪಣಜಿ(ಸೆ,27): ಗೋವಾದ ಪಣಜಿಯಲ್ಲಿ ನಡೆದ ರಾಷ್ಟ್ರೀಯ ಥಾಯ್ ಬಾಕ್ಸಿಂಗ್ ಚಾಂಪಿಯನ್ಷಿಪ್ ನಲ್ಲಿ ಮೊದಲ ಬಾರಿಗೆ ಅಮೆಚೂರು ವಿಭಾಗದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ ವೃತ್ತಿಪರ ಕಿಕ್ ಬಾಕ್ಸರ್ ಕುಂದಾಪುರ ಮೂಲದ ಅನೀಶ್ ಶೆಟ್ಟಿ ಬೆಳ್ಳಿಯ ಪದಕ ಪಡೆದಿದ್ದಾರೆ. ವೃತ್ತಿಪರ ಸ್ಪರ್ಧೆಗಳಲ್ಲಿ ಹೆಚ್ಚಿನ ಯಶಸ್ಸನ್ನು ಕಾಣಲು ಗೋವಾದಲ್ಲಿ ತರಬೇತಿ ಪಡೆಯುತ್ತಿರುವ ಅನೀಶ್, ಅಲ್ಲಿಯ ಟ್ರೈಬಲ್ ವಾರಿಯರ್ಸ್ ಗೋವಾ (TWG) ತಂಡವನ್ನು ಪ್ರತಿನಿಧಿಸಿರುತ್ತಾರೆ.ನಾಲ್ಕು ಸುತ್ತಿನ ಹೋರಾಟದಲ್ಲಿ ಅನೀಶ್ ಒಡಿಶಾದ ಸ್ಪರ್ಧಿಯ ವಿರುದ್ಧದ ಅಂತಿಮ ಸುತ್ತಿನಲ್ಲಿ ಪರಾಜಯ ಅನುಭವಿಸಿದರು. […]
ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಕುರಿತು ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ
ಬೈಂದೂರು (ಸೆ,22): ಉಡುಪಿ ಜಿಲ್ಲೆಯ ಹಿಂದುಳಿದ ಹಾಗೂ ಗ್ರಾಮೀಣ ಪ್ರದೇಶವನ್ನು ಹೊಂದಿರುವ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 9000 ವಸತಿ ರಹಿತರಿದ್ದು, ಅವರಿಗೆ ಶಾಶ್ವತ ನೆಲೆ ಕಂಡುಕೊಳ್ಳಲು ಹೆಚ್ಚುವರಿ ಮನೆಗಳನ್ನು ಮಂಜುರು ಮಾಡಬೇಕು,ಹಿಂದೆ ಪ್ರತಿ ಗ್ರಾಮ ಪಂಚಾಯತ್ ಗೆ ನೀಡಿರುವ 20 ಮನೆಗಳ ಆದೇಶ ಆದಷ್ಟು ಶೀಘ್ರವಾಗಿ ಶೀಘ್ರ ನೀಡಬೇಕು ಎಂದು ಬೈಂದೂರಿನ ಶಾಸಕ ಬಿ.ಎಂ .ಸುಕುಮಾರ ಶೆಟ್ಟಿ ಸದನದಲ್ಲಿ ವಸತಿ ಸಚಿವ ಶ್ರೀ ವಿ. ಸೋಮಣ್ಣ […]
ಬಂಟಕಲ್ಲಿನ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ
ಉಡುಪಿ (ಸೆ,20): ಉಡುಪಿಯ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದ ವಿದ್ಯಾರ್ಥಿಗಳಾದ ನವೀನ್ ಹೆಗ್ಡೆ, ಹರ್ಷವರ್ಧನ ಎನ್. ಸೌರವ್ .ಕೆ ,ಮಹಮ್ಮದ್ ನೌಫಾಲ್ ರವರು ಅಭಿವೃದ್ಧಿ ಪಡಿಸಿದ ಮಣ್ಣಿನ ತೇವಾಂಶ ಹಾಗೂ ತೇವಾಂಶ ಹಿಡಿದಿಡುವ ಸಾಮರ್ಥ್ಯವನ್ನು ಕೃತಕ ಬುದ್ಧಿಮತ್ತೆ ಉಪಯೋಗಿಸಿ ಅಳೆಯುವ ಸಾಧನಕ್ಕೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ “ವರ್ಷದ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ” ದೊರಕಿದೆ. ಸಿವಿಲ್ ವಿಭಾಗದ ಪ್ರೊ. ಸುನಿಲ್ ಹಲ್ದಂಕರ್ ಹಾಗೂ […]
ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿ ಕೇಂದ್ರಿತ ನೀತಿ – ಡಾ. ಕರುಣಾಕರ್. ಎ.ಕೋಟೆಗಾರ್
ಕುಂದಾಪುರ (ಸೆ,16): ರಾಷ್ಟ್ರೀಯ ಶಿಕ್ಷಣ ನೀತಿ 2021 – 22 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದ್ದು, ಇದರಲ್ಲಿನ ಪ್ರತಿ ಅಂಶವನ್ನೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯ ಮೂಲಕ ಆಸಕ್ತಿ-ಕೌಶಲ್ಯ ಆಧಾರಿತ ಕಲಿಕೆ ಹಾಗೂ ದೇಶದ ಮಾನವ ಸಂಪನ್ಮೂಲದ ಸದ್ಬಳಕೆ ನಿಜಾರ್ಥದಲ್ಲಿ ಆಗಲಿದೆ ಎಂದು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಕರುಣಾಕರ ಕೊಟೇಗಾರ್ ಹೇಳಿದರು. ಅವರು ಗುರುವಾರ ಕುಂದಾಪುರದ ಡಾ. […]
ಮಲ್ಪೆ: ಮೀನುಗಾರರ ತುರ್ತು ಆರೋಗ್ಯ ಸೇವೆಗೆ ಕೆಪಿಸಿಸಿ ವತಿಯಿಂದ ಆಂಬುಲೆನ್ಸ್ ಸೇವೆ -ಹಸ್ತಾಂತರ ಕಾರ್ಯಕ್ರಮ
ಮಲ್ಪೆ (ಸೆ,11): ಕೆಪಿಸಿಸಿ ವತಿಯಿಂದ ರಾಜ್ಯದ ಪ್ರಮುಖ ಮೀನುಗಾರಿಕಾ ಬಂದರಾದ ಮಲ್ಪೆಯ ಮೀನುಗಾರರ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು .ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಮಲ್ಪೆಗೆ ಹಿಂದೊಮ್ಮೆ ಆಗಮಿಸಿದಾಗ ಮೀನುಗಾರ ಸಮುದಾಯದವರು ಆಂಬ್ಯುಲೆನ್ಸ್ನ ಬೇಡಿಕೆ ಇಟ್ಟಿದ್ದರು. ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಭವನದ ಮುಂಭಾಗ ಆಂಬುಲೆನ್ಸ್ ನ ಕೀಯನ್ನು ಮಲ್ಪೆಯ ಸಮಾಜ ಸೇವಕ […]










