ಬೆಂಗಳೂರು (ಆ,18): ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಪಟ್ಟಿದ್ದ ಕುಂದಾಪುರ ಮೂಲದ ಹರೀಶ್ ಬಂಗೇರ ಬೆಂಗಳೂರು ಏರ್ಪೋರ್ಟ್ ತಲುಪಿದ್ದಾರೆ. ಸೌದಿ ದೊರೆಯ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆಂದು ಆರೋಪ ಎದುರಿಸಿರುವ ಹರೀಶ್ ನಿರಪರಾಧಿ ಎಂದು ತಿಳಿದ ಮೇಲೆ ಸೌದಿ ಅರೇಬಿಯಾ ಸರಕಾರ ಇವರನ್ನು ಬಿಡುಗಡೆಗೊಳಿಸಿದ್ದು,ಇದೀಗ ಕುಂದಾಪುರ ಪರಿಸರದ ಜನತೆಗೆ ಸಂತೋಷ ತಂದಿದೆ. ಬೆಂಗಳೂರಿಗೆ ಆಗಮಿಸಿದ ಹರೀಶ್ ಬಂಗೇರರನ್ನು ಲೋಕೇಶ್ ಅಂಕದಕಟ್ಟೆ ಮತ್ತು ತಂಡ ಬೆಂಗಳೂರಿನ ಏರ್ಪೋರ್ಟ್ನಲ್ಲಿ ಬರಮಾಡಿಕೊಂಡರು.
Category: ರಾಜ್ಯ ಸುದ್ದಿ
ಸುದ್ದಿ ಸಮಾಚಾರ — > ರಾಜ್ಯ ಸುದ್ದಿ
ಸಂಸದ ಶ್ರೀ ಬಿ. ವೈ. ರಾಘವೇಂದ್ರ ರಿಗೆ ಜನ್ಮದಿನದ ಶುಭಾಶಯ ಕೋರಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ
ಶಿವಮೊಗ್ಗ (ಆ, 16) : ಶಿವಮೊಗ್ಗ ಲೋಕ ಸಭಾ ಕ್ಚೇತ್ರದ ಸಂಸದ ಶ್ರೀ ಬಿ. ವೈ. ರಾಘವೇಂದ್ರರವರ ಹುಟ್ಟು ಹಬ್ಬದ ದಿನದಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿಯವರು ಶಿಕಾರಿಪುರದ ಸಂಸದರ ನಿವಾಸಕ್ಕೆ ತೆರಳಿ ಶುಭಾಶಯ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ರವರು ಬೈಂದೂರು ಕ್ಷೇತ್ರದ ಬಗ್ಗೆ ತೋರಿದ ವಾತ್ಸಲ್ಯದಿಂದಾಗಿ ಹಿಂದುಳಿದ ಕ್ಷೇತ್ರವೊಂದು ಅಭಿವೃದ್ಧಿಯತ್ತ ದಾಪುಗಾಲು ಇಡುವಂತಾಗಿದೆ. ನಾನು ಚುನಾವಣೆಯ ಸಂದರ್ಭದಲ್ಲಿ ಹೇಳಿದಂತೆ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ- ಬೈಂದೂರು-ಶಿರೂರು ಘಟಕ : ಸ್ವತಂತ್ರ ದಿನದ ಅಮೃತೋತ್ಸವದ ಸಂಭ್ರಮ
ಬೈಂದೂರು (ಆ, 15) : ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು-ಶಿರೂರು ಘಟಕದ ಸ್ವತಂತ್ರ ದಿನದ ಅಮೃತೋತ್ಸವದ ಸಂಭ್ರಮವು ಸಂಘಟನೆಯ ಆಡಳಿತ ಕಛೇರಿಯಲ್ಲಿ ಆಗಸ್ಟ್ 15, ರಂದು ಜರುಗಿತು. ಕಾರ್ಯಕ್ರಮದ ಅಂಗವಾಗಿ ಧ್ವಜವಂದನೆ ಹಾಗೂ ಸಸಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಧ್ವಜಾರೋಹಣ ವನ್ನು ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲಾ ಕುಂದರ್ ನೆರವೇರಿಸಿದರು. ಅರಣ್ಯ ಇಲಾಖೆಯು ಪ್ರಾಯೋಜಿಸಿದ ಸಸಿಗಳನ್ನು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಂಗಾಧರ […]
ಶ್ರೀ ಕೃಷ್ಣನ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಡುಪಿ (ಆ, 13) : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉಡುಪಿಯ ಶ್ರೀ ಕೃಷ್ಣನ ದರ್ಶನ ಪಡೆದರು. ನಂತರ ಪರ್ಯಾಯ ಶ್ರೀಗಳ ಜೊತೆ ಸಮಾಲೋಚನೆ ನಡೆಸಿ ಶ್ರೀಗಳ ಆಶೀರ್ವಾದ ಪಡೆದರು. ಪರ್ಯಾಯ ಮಠಾಧೀಶರು ಮುಖ್ಯಮಂತ್ರಿಗಳಿಗೆ ಮಠದ ವತಿಯಿಂದ ಗೌರವ ಸಮರ್ಪಿಸಿದರು.
ಕೊಡುಗೈದಾನಿ, ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಕುಂದಾಪ್ರ ರತ್ನ ಪ್ರಶಸ್ತಿ
ಬೆಂಗಳೂರು (ಆ, 08) : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಳೆದ ಮೂರು ವರ್ಷಗಳಿಂದಲೂ ಕುಂದಾಪುರ ಭಾಗದ ಜನತೆ ಆಸಾಡಿ ಅಮವಾಸ್ಯೆದಿನದಂದು ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ವಿಶೇಷವಾಗಿ ಆಚರಿಸುತ್ತಿದ್ದು ,ಈ ಬಾರಿ ಆಗಸ್ಟ್ 08 ರ ಆಸಾಡಿ ಅಮವಾಸ್ಯೆಯೆಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಾಗೆಯೇ ಬೆಂಗಳೂರಿನಲ್ಲಿ ಟೀಮ್ ಕುಂದಾಪುರಿಯನ್ ತಂಡದ ನೇತೃತ್ವದಲ್ಲಿ ರಾಜಾಜಿನಗರದ ಕದಂಬ ಸಾಮ್ರಾಟ್ ಸಭಾ ಭವನದಲ್ಲಿ ವೈಭವದಿಂದ ನೆರವೇರಿತು. ಈ ಸಂದರ್ಭದಲ್ಲಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ […]
ಬೆಂಗಳೂರು : ಟಿಮ್ ಕುಂದಾಪುರಿಯನ್ ವತಿಯಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಬೆಂಗಳೂರು (ಆ, 08) : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಳೆದ ಮೂರು ವರ್ಷಗಳಿಂದಲೂ ಕುಂದಾಪುರ ಭಾಗದ ಜನತೆ ಆಸಾಡಿ ಅಮವಾಸ್ಯೆದಿನದಂದು ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ವಿಶೇಷವಾಗಿ ಆಚರಿಸುತ್ತಿದ್ದು, ಈ ಬಾರಿ ಆಗಸ್ಟ್ 08 ರ ಆಸಾಡಿ ಅಮವಾಸ್ಯೆಯೆಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಟಿಮ್ ಕುಂದಾಪುರಿಯನ್ ತಂಡದ ನೇತೃತ್ವದಲ್ಲಿ ರಾಜಾಜಿನಗರದ ಕದಂಬ ಸಾಮ್ರಾಟ್ ಸಭಾ ಭವನದಲ್ಲಿ ವೈಭವದಿಂದ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷರಾದ […]
ಕರಾವಳಿಯ ಮೂವರಿಗೆ ಮಂತ್ರಿ ಸ್ಥಾನ : ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ಕುಮಾರ್, ಶ್ರೀ ಅಂಗಾರ ಸಚಿವ ಸಂಪುಟಕ್ಕೆ !
ಬೆಂಗಳೂರು ( ಆ,4) : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಚಿವ ಸಂಪುಟಕ್ಕೆ ಕರಾವಳಿಯ ಮೂವರು ಆಯ್ಕೆಯಾಗಿದ್ದು, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಚಿವ ಸ್ಥಾನದ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಹಿಂದೆ ಮಂತ್ರಿಯಾಗಿದ್ದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಮೊದಲ ಬಾರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಸುಳ್ಯದ ಶಾಸಕ, ಮಾಜಿ ಸಚಿವ ಶ್ರೀ ಅಂಗಾರ ರವರಿಗೆ ಸಚಿವ ಸ್ಥಾನ ಪಕ್ಕಾ ಆಗಿದೆ. ಹಾಲಾಡಿ ಶ್ರೀನಿವಾಸ […]
ಗುರುಕುಲ ಚಾಣಕ್ಯ ಪ್ರಶಸ್ತಿಗೆ ಬಿ. ಎಸ್. ಬಾಗೇವಾಡಿಮಠ ಆಯ್ಕೆ
ರಾಣಿಬೇನ್ನೂರು (ಆ, 03) : ನಗರದ ಯುವ ಕವಿ ಸಾಹಿತಿ ಹಾಗೂ ಲೇಖಕರಾದ ಹಾವೇರಿ ಜಿಲ್ಲೆಯರಾಣಿಬೆನ್ನೂರಿನ ಬಸವರಾಜ .ಎಸ್ . ಬಾಗೇವಾಡಿಮಠ ರವರು ಸಾಹಿತ್ಯ, ಸಮಾಜ ಸೇವೆ, ಹಾಗೂ ಇವರ ಮಾನವೀಯ ಸೇವೆಗಳನ್ನು ಗುರುತಿಸಿ ಗುರು ಕುಲ ಚಾಣಕ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗುರುಕುಲ ಕಲಾ ಪ್ರತಿಷ್ಠಾನ (ರಿ) ರಾಜ್ಯ ಘಟಕದ ಸಂಸ್ಥೆಯ ಅಧ್ಯಕ್ಷರಾದ ಹುಲಿಯೂರು ದುರ್ಗ ಲಕ್ಷ್ಮೀ ನಾರಾಯಣ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುಕುಲ ಸೇವಾ ರತ್ನ ಪ್ರಶಸ್ತಿಗೆ ಡಾ. ಪಿ. ಎಮ್. ಭೋಜೆ ಆಯ್ಕೆ
ಬೆಳಗಾವಿ (ಆ, 2) : ಜಿಲ್ಲೆಯ ಸದಗಾಲ ಗ್ರಾಮದ ಡಾ| ಪ್ರಕಾಶ ಎಮ್. ಭೋಜೆಯವರು ಒರ್ವಸೃಜನಶೀಲ ಶಿಕ್ಷಕರು, ಸಾಹಿತಿ, ಹಾಗೂ ಲೇಖಕರಾಗಿದ್ದಾರೆ. ಇವರು ತಮ್ಮ ಶಿಕ್ಷಣ ಜೊತೆಗೆ ಬಡ ಮಕ್ಕಳಿಗೆ ಉಚಿತ ಪಾಠ ಬೋಧನೆ ಮಾಡಿ ಜ್ಞಾನ ದಾಸೋಹಿಯಾಗಿ ಪ್ರೇರಣೆರಾಗಿದ್ದಾರೆ. ಇವರ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಸಮಾಜ ಸೇವೆಯಲ್ಲಿನ ಗಣನೀಯ ಸೇವೆ ಹಾಗೂ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಗುರುತಿಸಿ ತುಮಕೂರಿನಲ್ಲಿ ನಡೆಯಲಿರುವ ಪ್ರಥಮ ರಾಜ್ಯ ಗುರುಕುಲ ಸಾಹಿತ್ಯ ಸಮ್ಮೇಳನದಲ್ಲಿ ಗುರುಕುಲ […]
ಮಡಿಕೇರಿ : ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ
ಮಡಿಕೇರಿ (ಜು. 28) : ಇಲ್ಲಿನ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿಯ ಪ್ರವೇಶಕ್ಕೆ ಆಗಸ್ಟ್, 11 ರಂದು ಜಿಲ್ಲೆಯ 06 ಕೇಂದ್ರಗಳಲ್ಲಿ ಆಯ್ಕೆ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರವನ್ನು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಬಳಸಿ https://cbseitms.nic.in/index.aspx ಲಿಂಕ್ ಮೂಲಕ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನೀರಜ್ 7676825036, ಪದ್ಮ ಡಿ.ಟಿ. 7019054680 ಮತ್ತು ಗಂಗಾಧರನ್ ಕೆ. 6363354829 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ […]










