ಬೆಂಗಳೂರು (ಜು,18) : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 545, 402 ನಾಗರಿಕ ಪೊಲೀಸ್ ಸಬ್ಇನ್ಸ್ಪೆಕ್ಟರ್(PSI) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗಳಿಗೆ ದಿನಾಂಕ ನಿಗದಿಪಡಿಸಿದೆ. 545 ಸಿವಿಲ್ ಪಿಎಸ್ಐ ಹುದ್ದೆಗಳ ನೇಮಕಾತಿಗೆ ದಿನಾಂಕ 10-10-2021 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. 402 ಸಿವಿಲ್ ಪಿಎಸ್ಐ ಹುದ್ದೆಗಳ ನೇಮಕಾತಿಗೆ ದಿನಾಂಕ 24-10-2021 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪ್ರಸ್ತುತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೈಹಿಕ […]
Category: ರಾಜ್ಯ ಸುದ್ದಿ
ಸುದ್ದಿ ಸಮಾಚಾರ — > ರಾಜ್ಯ ಸುದ್ದಿ
ಜುಲೈ, 20 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ
ಬೆಂಗಳೂರು (ಜು, 18) : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜು. 20ಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ಪಿ.ಯು ಶಿಕ್ಷಣ ಇಲಾಖೆಯ ನಿರ್ದೇಶಕರ ಕಛೇರಿಯಿಂದ ಪ್ರಕಟಣೆ ಹೊರಬಿದ್ದಿದೆ. 2020-21ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸುವ ಸಲುವಾಗಿ ನೋಂದಣಿ ಸಂಖ್ಯೆ ನೀಡಲಾಗುತ್ತಿದೆ.ಫಲಿತಾಂಶ ಪ್ರಕಟಗೊಳಿಸುವ ವಿಚಾರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ […]
ಭಾಗಮಂಡಲ : ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭದಲ್ಲಿ ಉಚಿತ ಆಟೋ ರೀಕ್ಷಾ ಸೇವೆ
ಭಾಗಮಂಡಲ (ಜು, 17) : ಕೋವಿಡ್ ಸಂಕಷ್ಟ ಹಾಗೂ ಸವಾಲುಗಳ ನಡುವೆಯೂ ಕರ್ನಾಟಕ ಸರಕಾರವು ಅತ್ಯಂತ ಸುರಕ್ಷಿತ ಮುಂಜಾಗ್ರತಾ ಕ್ರಮ ಗಳೊಂದಿಗೆ ಈ ಬಾರಿಯ ಎಸ್. ಎಸ್. ಎಲ್. ಸಿ. ಪರೀಕ್ಷೆ ಯನ್ನು ಇದೇ ಜುಲೈ 19 ರಿಂದ ನಡೆಸಲು ತೀರ್ಮಾನಿಸಿದೆ. ಹಾಗೆಯೇ ಪರೀಕ್ಷಾ ಕೇಂದ್ರಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಕೂಡ ಸರ್ಕಾರದ ವತಿಯಿಂದ ಮಾಡಲಾಗಿದೆ. ಒಂದು ವೇಳೆ ದೂರದಿಂದ ಕಾಲ್ನಡಿಗೆಯಲ್ಲಿ ಬಂದು ಆಕಸ್ಮಿಕ ವಾಗಿ ಬಸ್ಸು […]
ಜುಲೈ, 25 ಭಾನುವಾರದಂದು ಕೆಸೆಟ್ ಪರೀಕ್ಷೆ
ಮೈಸೂರು (ಜು, 10): ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ.ಎಸ್.ಇ.ಟಿ.) ಯನ್ನು ಜುಲೈ,25 ರ ಆದಿತ್ಯವಾರದಂದು ನಡೆಸಲು ನಿರ್ಧರಿಸಿದೆ.ದಿನಾಂಕ 11 ನೇ ಏಪ್ರಿಲ್ 2021 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆದ್ದರಿಂದ, ಸದರಿ ಕೆಸೆಟ್ 2021 ಪರೀಕ್ಷೆಯನ್ನು 25.07.2021 (ಭಾನುವಾರ) ರಂದು ನಡೆಸಲು ತೀರ್ಮಾಸಲಾಗಿರುತ್ತದೆ. ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ರ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಕೆಸೆಟ್ ವೆಬ್ಸೈಟ್ನಲ್ಲಿ (http://kset.uni-mysore.ac.in) ಆಗಿಂದಾಗ್ಗೆ […]
ಮಾಜಿ ಶಾಸಕ ವೈ.ಎಸ್.ವಿ. ದತ್ತ ರವರ 68 ನೆಯ ಜನ್ಮದಿನದ ಪ್ರಯುಕ್ತ ಪೌರಕಾರ್ಮಿಕರಿಗೆ ಫಲಹಾರ ವಿತರಣೆ
ಬೆಂಗಳೂರು (ಜೂ, 24): ಕರ್ನಾಟಕ ರಾಜ್ಯ ಕಂಡ ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಜಕಾರಣಿಗಳಲ್ಲಿ ಪ್ರಮುಖರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಾಜಿ ಶಾಸಕರಾದ ವೈ.ಎಸ್.ವಿ. ದತ್ತ ರವರು ತಮ್ಮ 68 ನೇ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ನಿವಾಸದಲ್ಲಿ ಪೌರಕಾರ್ಮಿಕರಿಗೆ ಫಲಹಾರ ವಿತರಿಸಿದರು.
ಕಾಲೇಜು ಉಪನ್ಯಾಸಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ಕಾಲೇಜುಗಳು ಪುನರಾರಂಭಿಸಲು ಸರ್ಕಾರದ ಚಿಂತನೆ
ಬೆಂಗಳೂರು (ಜೂ, 22): ರಾಜ್ಯದಲ್ಲಿನ ಕಾಲೇಜು ಉಪನ್ಯಾಸಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ಕಾಲೇಜುಗಳನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಜೂನ್ 22 ರ ಮಂಗಳವಾರ ದಂದು ಕರೋನಾ 3 ನೇ ಅಲೆಯ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಡಾ|ದೇವಿ ಶೆಟ್ಟಿ ನೇತೃತ್ವದಲ್ಲಿ ನಡೆಸಲಾದ ಉನ್ನತಮಟ್ಟದ ಸಮಿತಿಯ ಸದಸ್ಯರ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಶೀಘ್ರದಲ್ಲಿಯೇ ಕೋವಿಡ್ ಲಸಿಕೆ ನೀಡಲು ಕ್ರಮಗಳನ್ನು […]
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ: ಸಚಿವ ಆರ್. ಅಶೋಕ್
ಬೆಂಗಳೂರು (ಜೂ, 20): ಕರ್ನಾಟಕ ರಾಜ್ಯ ಸರ್ಕಾರವು ಮಳೆಗಾಲ ಸಂದರ್ಭದಲ್ಲಿನ ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಇತ್ತೀಚೆಗೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ 300 ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ, ಹಾಗೆಯೇ ಭಾಗಶಃ ಹಾನಿಯಾಗಿರುವ ಮನೆಗೆ 1ಲಕ್ಷ ರೂ. ಮತ್ತು ನೀರು ನುಗ್ಗಿ ಮನೆಗೆ ಹಾನಿಯಾಗಿದ್ದರೆ 10 […]
ವಿಶ್ವ ವಿಖ್ಯಾತ ಮುರ್ಡೇಶ್ವರದ ಶಿವನ ಮೂರ್ತಿಯ ಸೊಬಗಿಗೆ ಅಂತರಾಷ್ಟ್ರೀಯ ಪ್ರಶಸ್ತಿ
ಭಟ್ಕಳ (ಜೂ, 18) : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ವಿಶ್ವ ವಿಖ್ಯಾತ ಮುರ್ಡೇಶ್ವರದ ಶಿವನ ಮೂರ್ತಿಯ ಎಲ್ ಇ ಡಿ ವಿದ್ಯುತ್ ಅಲಂಕಾರಕ್ಕೆ ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತಿದೆ. ಅಮೆರಿಕಾದ ಇ- ಗ್ಲೋಬಲ್ ಫಿಲಿಪ್ಸ್ ಆಯೋಜಿಸಿದ್ದ ಸರ್ಟಿಫೈಡ್ ಸಿಸ್ಟಮ್ ಇಂಟಿಗ್ರೇಟರ್ ಸಮಿಟ್ನಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಜಗತ್ತಿನ 24 ಪ್ರಾಜೆಕ್ಟ್ ಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಮುರ್ಡೇಶ್ವರದ ಶಿವನ ಮೂರ್ತಿಗೆ ಮಾಡಲಾದ ವಿದ್ಯುತ್ ಅಲಂಕಾರ […]
ಯುವ ಸಾಹಿತಿ ಕೊಡಗಿನ ಕಿಗ್ಗಾಲು ಜಿ. ಹರೀಶ್ ಕುಂದವಾಹಿನಿಯಲ್ಲಿ ತಮ್ಮ ಸಾಹಿತ್ಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ
ಯುವ ಸಾಹಿತಿ ಕಿಗ್ಗಾಲು ಜಿ. ಹರೀಶ್ ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲು ಗ್ರಾಮದವರು. ಮೂರ್ನಾಡುವಿನ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿರುವ ಇವರು ಈಗಾಗಲೇ ಹಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಇವರ ರಾಯರ ತೋಟ ಎಂಬ ಲಲಿತ ಪ್ರಬಂಧಗಳ ಸಂಕಲನ 2011 ರಲ್ಲಿ ಬಿಡುಗಡೆಯಾಗಿದೆ. ಕಥೆ,ಕವನ ,ಲೇಖನ ರಚನೆಯ ಜೊತೆಗೆ ವರದಿಗಾರಿಕೆಯನ್ನು ಕಳೆದ ಇಪ್ಪತ್ತೈದು ವರ್ಷಗಳಿಂದ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ ಶಕ್ತಿ ದಿನಪತ್ರಿಕೆಯಲ್ಲಿ, ಸುಧಾ, […]
ದಾನದಲ್ಲಿ ಕರ್ಣ, ಆದರ್ಶದಲ್ಲಿ ರಾಮ, ಕಾರ್ಮಿಕರ ಅನ್ನದಾತ ಶ್ರೀ ಗೋವಿಂದ ಬಾಬು ಪೂಜಾರಿ
ಅವರ ಒಂದು ಹಿತನುಡಿಯೇ ಸಾಕು ನಿಮ್ಮ ಸಂಕಷ್ಟಗಳ ಸಾಂತ್ವನಕ್ಕೆ . ಅದರಲ್ಲೂ ಅವರ ಶ್ರೀರಕ್ಷೆ, ಸಹಾಯ ಹಾಗೂ ಸಹಕಾರ ಸಿಕ್ಕರಂತೂ ನೀವು ನಿಜವಾಗಿಯೂ ಜೀವನದಲ್ಲಿ ಸಾಧನೆಯ ಜೊತೆಗೆ ಯಶಸ್ಸನ್ನು ಕಾಣುತ್ತೀರಿ. ಜೀವನದಲ್ಲಿ ಎಂದಿಗೂ ಸೋತೆ ಎನ್ನುವ ಭಾವನೆಯೊಂದಿಗೆ ಜೀವನ ನೆಡೆಸಬೇಡಿ ,ಒಂದಲ್ಲ ಒಂದು ದಿನ ಗೆದ್ದೆ ಗೆಲ್ಲುವೆ ಎನ್ನುವ ಛಲದೊಂದಿಗೆ ಜೀವನ ನೆಡೆಸಿ ಎನ್ನುವ ಅವರ ಆದರ್ಶ ಪಾಲನೆಯ ಬದುಕು ಅನುಕರಣೀಯ. ಧೈರ್ಯದಿಂದ ಮುಂದೆ ಹೋಗಿ ,ಜಗತ್ತಿನ ಎಲ್ಲಾ ಕೆಲಸವನ್ನು […]










