ಬೆಂಗಳೂರು (ಜ.9): ಬೆಂಗಳೂರಿನ ಪ್ರಸಿದ್ದ ಕೆಟರಿಂಗ್ ಸಂಸ್ಥೆಯಾದ ಕುಂದಾಪುರ ಮೂಲದ ಶ್ರೀ ರಾಘವೇಂದ್ರ ಹಾರ್ಮಣ್ ಮಾಲಕತ್ವದ ಎಸ್.ಆರ್.ಕ್ಯಾಟರರ್ಸ ನ ಹೊಸ ವರ್ಷದ ಕ್ಯಾಲೆಂಡರ್ ನ್ನು ಬೆಂಗಳೂರಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂತ್ರಾಲಯದ ಪರಮಪೂಜ್ಯ ಸ್ವಾಮಿಜಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ಇತ್ತೀಚೆಗೆ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಆರ್.ಕ್ಯಾಟರರ್ಸ ನ ಮಾಲಕ ಶ್ರೀ ರಾಘವೇಂದ್ರ ಹಾರ್ಮಣ್ ಹಾಗೂ ಗುರುದತ್ತ್ ಕುಲಕರ್ಣಿ ಉಪಸ್ಥಿತರಿದ್ದರು.
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಜೆ ಸಿ ಐ ಬೈಂದೂರು ಸಿಟಿ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕಕ್ಕೆ ಯುವ ಪ್ರೇರಣಾ ಪ್ರಶಸ್ತಿ ಪ್ರದಾನ
ಹೆಮ್ಮಾಡಿ(ಜ.30): ಜೆ.ಸಿ. ಐ ಬೈಂದೂರು ಸಿಟಿ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಪ್ರತಿಷ್ಠಿತ ಘಟಕವಾದ ಹೆಮ್ಮಾಡಿ ಘಟಕದ ಸೇವಾ ಚಟುವಟಿಕೆಗಳನ್ನು ಗುರುತಿಸಿ ಯುವ ಪ್ರೇರಣಾ ಪ್ರಶಸ್ತಿ ನೀಡಿ ಗುರುತಿಸುವ ಕಾರ್ಯಕ್ರಮವನ್ನು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸಭಾಂಗಣದಲ್ಲಿ ಜನವರಿ.30 ರಂದು ಹಮ್ಮಿಕೊಳ್ಳಲಾಯಿತು. ಜೆ.ಸಿ. ಐ ಬೈಂದೂರು ಸಿಟಿ ಅಧ್ಯಕ್ಷರಾದ ಜೆ.ಸಿ.ಎಚ್.ಜಿ.ಎಫ್ ಅನಿತಾ ಆರ್. ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಹೆಮ್ಮಾಡಿ ಘಟಕದ ಸೇವಾ ಚಟುವಟಿಕೆಯನ್ನು ಶ್ಲಾಘಿಸಿದರು. ಸನ್ಮಾನವನ್ನು ಸ್ವೀಕರಿಸಿ […]
ಮೊಗವೀರ ಯುವ ಸಂಘಟನೆ- ಹೆಮ್ಮಾಡಿ ಘಟಕದ ನೂತನ ಅಧ್ಯಕ್ಷರಾಗಿ ದಿನೇಶ್ ಕಾಂಚನ್ ಬಾಳಿಕೆರೆ ಆಯ್ಕೆ
ಹೆಮ್ಮಾಡಿ (ಜ.20): ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇದರ 2024-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಿನೇಶ್ ಕಾಂಚನ್ ಬಾಳಿಕೆರೆ, ಕಾರ್ಯದರ್ಶಿಯಾಗಿ ಜಗದೀಶ ನೆಂಪು ಹಾಗೂ ಕೋಶಾಧಿಕಾರಿಯಾಗಿ ವಿಜಯ ಕಾಂಚನ್ ನಾಡ ಆಯ್ಕೆಯಾಗಿದ್ದಾರೆ. ಬಗ್ವಾಡಿಯ ಶ್ರೀ ಮಹಿಷಾಸುರ ಮರ್ದಿನಿ ಸಭಾ ಭವನ ದಲ್ಲಿ ಜನವರಿ 20 ರಂದು ನಡೆದ 2022- 24ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಹೆಮ್ಮಾಡಿ ಘಟಕದ ಹಾಲಿ ಅಧ್ಯಕ್ಷರಾದ ಲೋಹಿತಾಶ್ವ ಆರ್.ಕುಂದರ್ ಕಾರ್ಯಕ್ರಮದ […]
ಸಾಲಿಗ್ರಾಮ: ಟೀಮ್ ಯಕ್ಷ ಬ್ರಹ್ಮ ಶ್ರೀ ವತಿಯಿಂದ ವೈಧ್ಯಕೀಯ ನೆರವು- ಧನ ಸಹಾಯ ಹಸ್ತಾಂತರ
ಸಾಲಿಗ್ರಾಮ (ಜ.20): ಇಲ್ಲಿನ ಟೀಮ್ ಯಕ್ಷ ಬ್ರಹ್ಮ ಶ್ರೀ ಸ್ವಯಂ ಸೇವಾ ಸಂಘಟನೆಯ ವತಿಯಿಂದ ಅನಾರೋಗ್ಯ ಪೀಡಿತ ಶ್ರೀ ಸುರೇಶ್ ಮೊಗವೀರ ರವರ ಚಿಕಿತ್ಸಾ ವೆಚ್ಚ ಬರಿಸಲು ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ಜನವರಿ 18 ರಂದು ಸಾಲಿಗ್ರಾಮ ಮೇಳದ ಯಕ್ಷಗಾನವನ್ನು ಆಯೋಜಿಸಿ ಸಂಗ್ರಹಿಸಿದ ಹಣವನ್ನು ಧನ ಸಹಾಯದ ರೂಪದಲ್ಲಿ ಶ್ರೀ ಸುರೇಶ್ ಮೊಗವೀರರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ,ಮೇಳದ ಯಜಮಾನರಾದ ಶ್ರೀ ಕಿಶನ್ […]
ಮೊಗವೀರ ಯುವ ಸಂಘಟನೆ- ಹೆಮ್ಮಾಡಿ ಘಟಕ: ಬಗ್ವಾಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ
ಹೆಮ್ಮಾಡಿ (ಜ.20): ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಜನವರಿ 19 ರಂದು ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ(ರಿ.), ಉಡಯಪಿ ಜಿಲ್ಲೆ ಇದರ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಹಿರಿಯಡ್ಕ ಅವರು ಆಗಮಿಸಿ ಹೆಮ್ಮಾಡಿ ಘಟಕದ ಸೇವೆಯನ್ನು ಶ್ಲಾಘಿಸಿದರು. ಈ ಸಂರ್ಭದಲ್ಲಿ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್.ಕುಂದರ್ ಹಾಗೂ ಸಂಘಟನೆಯ ಪದಾಧಿಕಾರಿಗಳು, ಘಟಕದ ಮಾಜಿ […]
ಡಾ.ಗಣೇಶ್ ಗಂಗೊಳ್ಳಿ ಯವರಿಗೆ ‘ಖಿದ್ಮಾ ಸೇವಾರತ್ನ’ ಪ್ರಶಸ್ತಿ ಪ್ರದಾನ
ಕುಂದಾಪುರ ( ಜ.12): ರಾಜ್ಯದ ಪ್ರಸಿದ್ದ ಸುಗಮ ಸಂಗೀತ ಗಾಯಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಯವರ ಸಂಘಟನೆ ಹಾಗೂ ಕನ್ನಡ ನಾಡು ನುಡಿ ಸುಗಮ ಸಂಗೀತದಲ್ಲಿ ಅಪಾರ ಮತ್ತು ಅನುಪಮ ಸಾಧನೆಯನ್ನು ಗುರುತಿಸಿ, “”ಖಿದ್ಮಾ ಸೇವಾರತ್ನ”” ರಾಜ್ಯ ಪ್ರಶಸ್ತಿ ಲಭಿಸಿದೆ. ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಬೆಂಗಳೂರಿನ ವಿಜಯ […]
ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ ತಗ್ಗರ್ಸೆ: ಜ.19, 20 ರಂದು ವಾರ್ಷಿಕ ಮಹೋತ್ಸವ
ಬೈಂದೂರು (ಜ.12): ಶ್ರೀ ಜೈನ ಜಟ್ಟಿಗೇಶ್ವರ ದೈವಸ್ಥಾನ, ಮೊಗವೀರ ಗರಡಿ ತಗ್ಗರ್ಸೆ ಇದರ ಸಪರಿವಾರ ದೇವರ ಕಲಾಭಿವೃದ್ಧಿ ಹೋಮ, ಶ್ರೀ ನಾಗದೇವರಿಗೆ ನವಕಾಧಿವಾಸ ಹಾಗೂ ವಾರ್ಷಿಕ ಮಹೋತ್ಸವ ಇದೇ ಜನವರಿ 19 ಮತ್ತು 20ರಂದು ನಡೆಯಲಿದೆ. ವಾರ್ಷಿಕ ಗಂಡಸೇವೆ ಹಾಲು ಹಬ್ಬ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದ್ದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ನಾಡ(ಜ.12): ಶ್ರೀ ಕ್ಷೇತ್ರ ಹಾಡಿಗರಡಿ ದೈವಸ್ಥಾನ ನಾಡ ಇದರ ಪರಿವಾರ ದೈವಗಳ ವಾರ್ಷಿಕ ಹಾಲುಹಬ್ಬ, ಗೆಂಡಸೇವೆ, ಮಹಾಪೂಜೆ, ದೈವದರ್ಶನ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಇದೇ ಜನವರಿ 14 ಮತ್ತು 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಟೀಮ್ ಯಕ್ಷ ಬ್ರಹ್ಮ ಶ್ರೀ ವತಿಯಿಂದ ಜ.18 ರಂದು ಮಾನವೀಯ ನೆಲೆಯ ಸಹಾಯಕ್ಕಾಗಿ ಯಕ್ಷಗಾನ
ಸಾಲಿಗ್ರಾಮ (ಜ.08): ಇಲ್ಲಿನ ಟೀಮ್ ಯಕ್ಷ ಬ್ರಹ್ಮ ಶ್ರೀ ಸ್ವಯಂ ಸೇವಾ ಸಂಘಟನೆಯ ವತಿಯಿಂದ ಅನಾರೋಗ್ಯ ಪೀಡಿತ ಶ್ರೀ ಸುರೇಶ್ ಮೊಗವೀರ ರವರ ಚಿಕಿತ್ಸಾ ವೆಚ್ಚ ಬರಿಸಲು ಸಾಲಿಗ್ರಾಮ ಜಾತ್ರೆಯ ಪ್ರಯುಕ್ತ ಜನವರಿ 18 ನೇ ತಾರೀಖಿನಂದು ಸಾಲಿಗ್ರಾಮ ಮೇಳದ ಯಕ್ಷಗಾನವನ್ನು ಹಮ್ಮಿಕೊಂಡಿದೆ. ಕಲಾಭಿಮಾನಿಗಳಾದ ತಾವುಗಳು ಮಾನವೀಯ ನೆಲೆಯ ಈ ಕಾರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತನು ಮನ ಧನ ಸಹಾಯದೊಂದಿಗೆ ನೊಂದ ಜೀವಕ್ಕೆ ನೆರವಾಗಬೇಕೆಂದು ಸಂಘಟಕರು ತಿಳಿಸಿದ್ದಾರೆ. ವರದಿ:ರಾಘವೇಂದ್ರ ಹಾರ್ಮಣ್.
ಬಂಟರ ಯಕ್ಷ ಸಂಭ್ರಮ -ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ
ಕುಂದಾಪುರ. (ಡಿ,30) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಇಲ್ಲಿನ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಶನಿವಾರ ಬಂಟರ ಯಕ್ಷ ಸಂಭ್ರಮ ಹಾಗೂ ಬಂಟ ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಸಮಾರಂಭವನ್ನು ಆಸ್ಟ್ರೇಲಿಯಾದ ಉದ್ಯಮಿ ಶ್ರೀ ದಯಾನಂದ ಶೆಟ್ಟಿ ಉದ್ಘಾಟಿಸಿದರು. ಇಂಗ್ಲೆಂಡ್ ನ ವೈದ್ಯ ಡಾ.ಅಸೋಡು ಅನಂತರಾಮ್ ಶೆಟ್ಟಿ ಅವರು 10 ಮಂದಿ ಸಾಧಕರಿಗೆ ಬಂಟ ಯಕ್ಷ ಭೂಷಣ ಪ್ರಶಸ್ತಿ ಪ್ರಧಾನ ಮಾಡಿದರು. ಯಕ್ಷದ್ರುವ […]










