ಕುಂದಾಪುರ(ಸೆ,20): ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಂಟ ಸಮಾಜದ ಹತ್ತು ಮಂದಿ ಸಾಧಕರಿಗೆ ದಶಮ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಿದೆ. ಹಿರಿಯ ಸಾಧಕರಾದ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಪ್ರೊ. ಇಆರ್. ಮೊಳಹಳ್ಳಿ ಸುಬ್ಬಣ್ಣ ಶೆಟ್ಟಿ ಕೋಟೇಶ್ವರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ವೈ ಎಸ್ ಹೆಗ್ಡೆ ಹಿರಿಯ ನೇತ್ರ ಶಸ್ತ್ರಚಿಕಿಸ್ತಕರು ಕುಂದಾಪುರ, ಲೆಕ್ಕಪರಿಶೋಧನ ಕ್ಷೇತ್ರದಲ್ಲಿ ಶ್ರೀ ಸುಧಾಕರ ಹೆಗ್ಡೆ ಹಿರಿಯ ಲೆಕ್ಕ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಜೈಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: ಮಾನವೀಯ ನೆಲೆಯ ನೆರವು
ಕುಂದಾಪುರ( ಸೆ,18): ರಾಜ್ಯದ ಹಲವು ಜಿಲ್ಲೆಯ ಅದೇಷ್ಟೋ ಜನರ ಬದುಕಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಹಸ್ತ ಚಾಚುತ್ತಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ ಸಂಸ್ಥೆಯು ಕೋಟೇಶ್ವರದ ಬೀಜಾಡಿಯ ನಿವಾಸಿ ಹೃದಯ ಸಂಭಂದಿ ಅನಾರೋಗ್ಯದಿಂದ ಬಳಲುತ್ತಿರುವ ಕೃಷ್ಣ ಎನ್ನುವವರ ವೈದ್ಯಕೀಯ ಚಿಕಿತ್ಸೆಗೆ ಮಾನವೀಯ ನೆಲೆಯ ಸಹಾಯ ಹಸ್ತ ಚಾಚಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಜವಾಬ್ದಾರಿ […]
ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ:ವೈದ್ಯಕೀಯ ಚಿಕಿತ್ಸೆಗೆ ನೆರವು
ಕುಂದಾಪುರ( ಸೆ,18): ತೆರೆಮರೆಯಲ್ಲಿ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ ಸಂಸ್ಥೆ ವತಿಯಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕುಂದಾಪುರದ ತಲ್ಲೂರಿನ ನಿವಾಸಿ ಮಧುರಾ ಭಂಡಾರಿಯವರ ವೈದ್ಯಕೀಯ ಚಿಕಿತ್ಸೆಗೆ ಸಂಸ್ಥೆಯಿಂದ 5000/-ರೂ ಗಳ ಚೆಕ್ ಸಹಾಯ ಹಸ್ತವನ್ನು ಸೆಪ್ಟೆಂಬರ್ 10 ರಂದು ಕುಂಭಾಶಿಯಲ್ಲಿ ಅವರ ಕುಟುಂಬಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಪುಂಡಲೀಕ ಮೊಗವೀರ,ಪದಾಧಿಕಾರಿಗಳಾದ ಮನೀಶ್ ಕುಲಾಲ್, ಶಿವರಾಮ್ ಕೋಡಿ, ಸಂಸ್ಥೆಯ ಪೋಷಕರಾದ […]
ತ್ರಾಸಿ:ಆರಾಧ್ಯ ಯೋಗ ತರಬೇತಿ ಕೇಂದ್ರ ಉದ್ಘಾಟನೆ
ತ್ರಾಸಿ(ಸೆ.18): ಯೋಗ ಕೇವಲ ದೈಹಿಕ ಕಸರತ್ತು ಮಾತ್ರವಲ್ಲದೇ ದೇಹ ಮತ್ತು ಮನಸ್ಸನ್ನು ಸದೃಢಗೊಳಿಸುವ ಒಂದು ಸಾಧನ. ಯೋಗ ಬಲ್ಲವನು ನಿರೋಗಿಯಾಗಿ ಆರೋಗ್ಯಪೂರ್ಣ ಬದುಕನ್ನು ಸಾಗಿಸಬಹುದು ಆ ನಿಟ್ಟಿನಲ್ಲಿ ತ್ರಾಸಿಯಲ್ಲಿ ಆರಂಭಗೊಂಡಿರುವ ಆರಾಧ್ಯ ಯೋಗ ಕೇಂದ್ರದ ಸುದುಪಯೋಗವನ್ನು ಪಡೆದುಕೊಳ್ಳಿ ಎಂದು ಖ್ಯಾತ ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ ಹೇಳಿದರು. ಅವರು ತ್ರಾಸಿ ಕಲ್ಲಾಣಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಆರಾಧ್ಯ ಯೋಗ ಕೇಂದ್ರ ದ ಉದ್ಘಾಟನೆ ಕಾರ್ಯಕ್ರಮದ ಮುಖ್ಯ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ:ಇಂಜಿನಿಯರ್ಸ್ ಡೇ ಆಚರಣೆ
ಕುಂದಾಪುರ(ಸೆ,15): ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಮೆಸ್ಕಾಂ ಇಂಜಿನಿಯರ್ ಶ್ರೀ ಭರತ್ ರಾಜ್ ಶೆಟ್ಟಿ ಜಾಂಬೂರು ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಆಚರಿಸಿದರು. ಸನ್ಮಾನ ಸ್ವೀಕರಿಸಿದ ಭರತ್ ರಾಜ್ ಶೆಟ್ಟಿ ರಾಷ್ಟ್ರೀಯ ಅಭಿಯಂತರರ ದಿನಾಚರಣೆಯ ಪ್ರಸ್ತುತತೆಯ ಬಗ್ಗೆ ಮಾತನಾಡಿ, ಇಂದು […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ನಿವೃತ್ತ ಮುಖ್ಯಶಿಕ್ಷಕ ಎಚ್. ಬಿ . ಬಾಬಯ್ಯ ಶೆಟ್ಟಿಯವರಿಗೆ ಸನ್ಮಾನ
ಕುಂದಾಪುರ(ಸೆ.10) : ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುದೀರ್ಘ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಪಾರು ಗ್ರಾಮದ ನಿವೃತ್ತಮುಖ್ಯ ಶಿಕ್ಷಕರಾದ ಶ್ರೀ ಎಚ್. ಬಿ . ಬಾಬಯ್ಯ ಶೆಟ್ಟಿಯವರನ್ನು ಕುಂದಾಪುರದ ಜೆ .ಕೆ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷದಾದ ಲ. ವಸಂತರಾಜ್ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಡಾ. […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಎನ್.ಎಸ್.ಎಸ್. ಘಟಕದ ವತಿಯಿಂದ ನಿರ್ಮಲ ನಗರ ಅಭಿಯಾನ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಕಾರ್ಯಕ್ರಮದಡಿಯಲ್ಲಿ ನಿರ್ಮಲ ನಗರ ಅಭಿಯಾನ ನಡೆಯಿತು. ಕುಂದಾಪುರ ಸಿಟಿ ಜೆಸಿಐನ ಸ್ಥಾಪಕಾಧ್ಯಕ್ಷ ಶ್ರೀ ಹುಸೇನ್ ಹೈಕಾಡಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪನ್ಯಾಸಕರಾದ ಶ್ರೀ ರಂಜಿತ್ ಟಿ.ಎನ್., ಪ್ರವೀಣ್ ಮೊಗವೀರ ಗಂಗೊಳ್ಳಿ, […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ : ನಾರಾಯಣ ಗುರುಗಳ ಜನ್ಮ ದಿನಾಚರಣೆ
ಗಂಗೊಳ್ಳಿ (ಸೆ,03): ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಸಂಘದ ಕಚೇರಿಯಲ್ಲಿ ಆಚರಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಮಾತನಾಡಿ ನಾರಾಯಣ ಗುರುಗಳು ಪ್ರತಿಪಾದಿಸಿದ ಸಿದ್ದಾಂತ ಮತ್ತು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಟ್ಟು ಸಮಾಜದ ಹಿತರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನವನ್ನು […]
ಸಂಕದಹೊಳೆ ನವಶಕ್ತಿ ಜ್ಞಾನ ವಿಕಾಸ ಕೇಂದ್ರ: ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ
ಕುಂದಾಪುರ(ಆ,29): ಸಂಕದ ಹೊಳೆ ಯುವಕ ಸಂಘದ ಸಭಾಂಗಣದಲ್ಲಿ ವರ ಮಹಾಲಕ್ಷ್ಮೀ ಪೂಜೆಯನ್ನು ಆಗಸ್ಟ್ 29 ರಂದು ಆಯೋಜಿಸಲಾಯಿತು. ಆಪ್ರಯುಕ್ತ ಆಯೋಜಿಸಿದ ಧಾರ್ಮಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ತೀರ್ಥಹಳ್ಳಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಮಂಜುನಾಥ್ ಮೃಗವಧೆ ಯವರು ಆಗಮಿಸಿ ಧಾರ್ಮಿಕತೆಯ ಬಗ್ಗೆ ಮಾಹಿತಿ ನೀಡಿದರು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ನವಶಕ್ತಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ವನಜಾಕ್ಷಿಯವರು ಧಾರ್ಮಿಕ ಸಭೆಯ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆರಟೂರು ಗ್ರಾಮ ಪಂಚಾಯತ್ ಅಧ್ಯಕ್ಷೆ […]
ಉಡುಪಿ ಜಿಲ್ಲಾ ಕರಾಟೆ ಚಾಂಪಿಯನ್ ಶಿಪ್ :ಫೀಯೋನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆ ಉತ್ತಮ ಸಾಧನೆ
ಕುಂದಾಪುರ (ಆ,30): ಉಡುಪಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಇವರು ಆಯೋಜಿಸಿದ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ (AKSKA) ಮತ್ತು ಕರಾಟೆ ಇಂಡಿಯಾ ಆರ್ಗನೈಸೇಷನ್(KIO) ಇವರ ಸಂಯೋಜನೆಯಲ್ಲಿ ಆಗಸ್ಟ್ 27ರಂದು ಪರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀಯೋನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕರಾಟೆ ಪಟುಗಳು 11 ಚಿನ್ನದ ಪದಕ, 9 ಬೆಳ್ಳಿಯ ಪದಕ ಮತ್ತು 4 ಕಂಚಿನ ಪದಕವನ್ನು ಗೆಲ್ಲುವ ಮುಖಾಂತರ ಸಂಸ್ಥೆಗೆ ಬಹುದೊಡ್ಡ ಕೊಡುಗೆಯನ್ನು […]










