ಬೈಂದೂರು(ಆ.19): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ ಇದರ “ಸಂಭ್ರಮ 2023″ಅಂಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಕಡಲ ತೀರದಲ್ಲಿ ಒಂದಾದ ಅಳ್ವೆಗದ್ದೆ ಬೀಚ್ ನಲ್ಲಿ ಕರಾವಳಿ ಕಾವಲು ಪಡೆಯ ಸಹಕಾರದೊಂದಿಗೆ ಕಡಲತೀರ ಸ್ವಚ್ಛತೆ ಮತ್ತು ಉದ್ಯಾನ ನಿರ್ಮಾಣ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಡಲ ತೀರದಲ್ಲಿ ರಾಶಿ ಬಿದ್ದಿರುವ ಪ್ಲಾಸ್ಟಿಕ್ ಮತ್ತು ತ್ಯಾಜ್ಯಗಳನ್ನು ಆಯ್ದು ಪ್ರತ್ಯೇಕಿಸಿ ಗ್ರಾಮ ಪಂಚಾಯತ್ನ ವಾಹನದಲ್ಲಿ ಸಾಗಿಸಲಾಯಿತು.ಪ್ರವಾಸಿಗರಿಗೆ ನೆರಳು ನೀಡುವ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ರೋಟರಿ ಸಮುದಾಯ ದಳ ಕೊರವಡಿ: ಸ್ವಾತಂತ್ರ್ಯೋತ್ಸವ & ಪದ ಪ್ರದಾನ ಕಾರ್ಯಕ್ರಮ
ಕೋಟೇಶ್ವರ(ಆ,15): ರೋಟರಿ ಸಮುದಾಯ ದಳ ಕೊರವಡಿ ಇವರ ಆಶ್ರಯದಲ್ಲಿ 77 ನೆಯ ಸ್ವಾತಂತ್ರ್ಯೋತ್ಸವ ಮತ್ತು 2023/2024 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಆ.15 ರಂದು ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಮುದಾಯ ದಳ ಕೊರವಡಿ ಇದರ ಅಧ್ಯಕ್ಷರಾದ ಶ್ರೀ ಮಹಾಬಲ ಎಂ ಪುತ್ರನ್ ವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸೇನಾನಿ ಸನ್ಮಾನ್ಯ ಶ್ರೀ ಶಿವಣ್ಣ ಎಂ. ಬಿ. ಪಡುಕೆರೆ ಇವರನ್ನು ಸನ್ಮಾನಿಸಿ […]
ಮಾರ್ಕೆಟ್ ಬಾಯ್ಸ್ ಕುಂದಾಪುರ:77 ನೇ ಸ್ವಾತಂತ್ರ ದಿನಾಚರಣೆ
ಕುಂದಾಪುರ(ಆ,17): ಇಲ್ಲಿನ ಮಾರ್ಕೆಟ್ ಬಾಯ್ಸ್ ಕುಂದಾಪುರ ಇವರ ಆಶ್ರಯದಲ್ಲಿ 77ನೇ ಸ್ವಾತಂತ್ರ ದಿನಾಚರಣೆಯನ್ನು ಫಿಶ್ ಮಾರ್ಕೆಟ್ ಬಳಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಿಟಿ ಜೆಸಿಐ ಕುಂದಾಪುರ ಇದರ ಅಧ್ಯಕ್ಷೆಯಾದ ಡಾಕ್ಟರ್ ಸೋನಿ ಡಿಕೋಸ್ತ ಧ್ವಜಾರೋಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಡಿದ ವೀರ ಯೋಧರನ್ನು ಸ್ಮರಿಸಲಾಯಿತು. ಸ್ವತಂತ್ರ ಭಾರತದಲ್ಲಿ ಯುವಕರ ಜವಾಬ್ದಾರಿ ಕುರಿತು ಮಾತನಾಡಿದರು. ಸ್ವತಂತ್ರ ದಿನಾಚರಣೆಯನ್ನು ಅಚ್ಚು ಕಟ್ಟಾಗಿ ಆಚರಣೆ ಮಾಡುತ್ತಿರುವ ಮಾರ್ಕೆಟ್ […]
ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕ: ಸೈನಿಕರಿಗೆ ಗೌರವಾರ್ಪಣೆ
ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ ,ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ಸೈನಿಕರಿಗೊಂದು ಗೌರವಾರ್ಪಣೆ ಕಾರ್ಯಕ್ರಮಹಿನ್ನೆಲೆಯಲ್ಲಿ ಹೆಮ್ಮಾಡಿಯ ನಿವ್ರತ್ತ ಯೋಧ ನಾರಾಯಣ ಬಿಲ್ಲವರ ಸ್ವ ಗೃಹಕ್ಕೆ ತೆರಳಿ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ(ರಿ.), ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿ ಯಂಗಡಿ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್: ಪದ ಪ್ರಧಾನ ಸಮಾರಂಭ
ಕುಂದಾಪುರ(ಜುಲೈ 15): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಇದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 15 ರಂದು ಬಂಟರೆ ಯಾನೆ ನಾಡವರ ಸಂಕೀರ್ಣದ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಯೂತ್ ಎಂಪವರ್ಮೆಂಟ್ ಜಿಲ್ಲಾ ಕೋ ಆರ್ಡಿನೆಟರ್ಲ .ರಾಜೀವ್ ಕೋಟ್ಯಾನ್ ಎಂ.ಜೆ.ಎಫ್ ಪದಗ್ರಹಣ ನೆರವೇರಿಸಿದರು. ಲ. ವಸಂತರಾಜ್ ಶೆಟ್ಟಿ ನೂತನ ಅಧ್ಯಕ್ಷರಾಗಿ, ಲ. ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಕಾರ್ಯದರ್ಶಿಯಾಗಿ, ಲ.ಸುಕುಮಾರ ಶೆಟ್ಟಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಕುಂದಾಪುರ (ಜುಲೈ 17 ):ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಜುಲೈ 17 ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಅಂಚೆ ಇಲಾಖೆ ಸಿಬ್ಬಂದಿ ಅಂಪಾರಿನ ರತ್ನಾಕರ ಕಿಣಿ (ಆರ್ ಕೆ.) ಯವರು ಕುಂದಗನ್ನಡ ಅಜ್ಜಿಕತೆ, ಭತ್ತಕುಟ್ಟುವ ಹಾಡು ಹಾಗೂ ಸ್ವರಚಿತ ಕುಂದಾಪ್ರ ಕನ್ನಡ ಹಾಡೊಂದನ್ನು ವಾಚಿಸಿದರು. ಇದೇ ಸಂದರ್ಭ ಕುಂದಾಪ್ರ ಭಾಷೆಯ ಅನನ್ಯತೆ ಮತ್ತು ಸಾಂಸ್ಕçತಿಕ […]
ಯಕ್ಷ ನಕ್ಷತ್ರ ಟ್ರಸ್ಟ್ (ರಿ.) ಕಿರಾಡಿ ಲೋಕಾರ್ಪಣೆ
ಮಂದಾರ್ತಿ(ಜು,13): ಯಕ್ಷರಂಗದ ಬಹು ಬೇಡಿಕೆಯ ಪುಂಡು ವೇಷಧಾರಿ ಕಿರಾಡಿ ಪ್ರಕಾಶ್ ಮೊಗವೀರರ ಸಾರಥ್ಯದಲ್ಲಿ ಯಕ್ಷ ನಕ್ಷತ್ರ ಟ್ರಸ್ಟ್ (ರಿ.) ಕಿರಾಡಿ ಇದರ ಲಾಂಛನವನ್ನು ಜುಲೈ12 ರಂದು ಬೆಳಿಗ್ಗೆ ಮಂದಾರ್ತಿಯ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ವಿಧ್ಯುಕ್ತವಾಗಿ ಬಿಡುಗಡೆ ಮಾಡುವ ಮೂಲಕ ಯಕ್ಷ ನಕ್ಷತ್ರ ಟ್ರಸ್ಟ್ ಲೋಕಾರ್ಪಣೆಗೊಂಡಿತು. ಶ್ರೀ ಕ್ಷೇತ್ರದ ಆಡಳಿತ ಮುಕ್ತೇಸರರಾದ ಶ್ರೀ ಧನಂಜಯ ಶೆಟ್ಟಿ ಹಾಗೂ ಕಲೋಪಾಸಕರಾದ ಶ್ರೀ ಶಂಬು ತಿಂಗಳಾಯ, ಶ್ರೀಸಂಜೀವ ಪೂಜಾರಿ, ಶ್ರೀ ಅಶೋಕ ಕುಂದರ್ , ಶ್ರೀಪ್ರವೀಣ […]
ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಹೈಕಾಡಿ:ಅದೃಷ್ಟ ಚೀಟಿ ಡ್ರಾ ದಿನಾಂಕ ಮುಂದೂಡಿಕೆ
ಹೈಕಾಡಿ( ಜು,13): ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಹೈಕಾಡಿ ,ಉಡುಪಿ ಜಿಲ್ಲೆ ಸಂಸ್ಥೆಯು ತರಬೇತಿ ಮತ್ತು ವೈದ್ಯಕೀಯ ನೆರವಿಗಾಗಿ ಹಮ್ಮಿಕೊಂಡ 50ರೂ ಬೆಲೆಯ ಅದೃಷ್ಟ ಚೀಟಿ ಡ್ರಾ ದಿನಾಂಕ:16-07-2023ನೇ ಭಾನುವಾರ ಸಂಜೆ 5ಗಂಟೆಗೆ ನಡೆಯಬೇಕಾಗಿದ್ದು ಕಾರಣಾಂತರಗಳಿಂದ ದಿನಾಂಕ: 16-09-2023ನೇ ಶನಿವಾರ ಸಂಜೆ 5ಗಂಟೆಗೆ ಮುಂದೂಡಲಾಗಿದೆ. ಈಗಾಗಲೇ 15ಸಾವಿರ ಮೊತ್ತವನ್ನು ವೈದ್ಯಕೀಯ ನೆರವಿಗೆ ನೀಡಲಾಗಿದ್ದು ಇನ್ನು ಮುಂದೆಯು ನೆರವು ನೀಡಬೇಕಾಗಿದ್ದು ಅದೃಷ್ಟ ಚೀಟಿಯ ಡ್ರಾ ದಿನಾಂಕ ಮುಂದೂಡಲಾಗಿದೆ. ಮಾಹಿತಿಗಾಗಿ 9743682692 […]
ಕುಂದಾಪುರ ತಾಲೂಕು ಯುವ ಬಂಟರ ಸಂಘ: ಯುವ ಸಾಧಕರಿಗೆ ಸನ್ಮಾನ- ಮಾಹಿತಿ ಆಹ್ವಾನ
ಕುಂದಾಪುರ(ಜು,12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕರನ್ನು ಗುರುತಿಸಿ, ಅಭಿನಂದಿಸುವ ಯೋಜನೆಯನ್ನು ರೂಪಿಸಲಾಗಿದೆ. ಕೆಸಿಇಟಿ, ನೀಟ್, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಅತ್ಯುತ್ತಮ ರಾಂಕ್ ಪಡೆದ ವಿದ್ಯಾರ್ಥಿಗಳು, ಐಎಎಸ್/ಕೆಎಎಸ್ ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆಗೈದ ಅಭ್ಯರ್ಥಿಗಳು, ಸಾಹಿತ್ಯ, ಲಲಿತಕಲೆ, ಕ್ರೀಡೆ, ಪರಿಸರ ಮೊದಲಾದ ರಂಗಗಳಲ್ಲಿ ರಾಜ್ಯ, ರಾಷ್ಟ ಹಾಗೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಅಥವಾ ಬಹುಮಾನ ಪಡೆದ ಯುವ ಸಾಧಕರು-ಮೊದಲಾದವರ ನ್ನು […]
ವಿದ್ಯಾರ್ಥಿ ವೇತನ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ
ಕುಂದಾಪುರ (ಜುಲೈ 12): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅಗಸ್ಟ್ 20ರ ಭಾನುವಾರ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ 2023-24 ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣೆಯ ನಿರ್ವಹಣಾ ಸಮಿತಿಯ ಸಂಚಾಲಕರಾಗಿ ಶ್ರೀ ಸತೀಶ್ ಶೆಟ್ಟಿ ಹೆಸ್ಕತ್ತೂರು ಆಯ್ಕೆ ಆಗಿದ್ದಾರೆಂದು ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇವರು ಕುಂದಾಪುರದ […]










