ಕುಂದಾಪುರ(ಜ,18): ಮೊಗವೀರ ಮಹಾಜನ ಸೇವಾ ಸಂಘ (ರಿ) (ಬಗ್ವಾಡಿ ಹೋಬಳಿ-1941) ಮುಂಬೈ, ಕುಂದಾಪುರ ಶಾಖೆಯ ಆಡಳಿತಕ್ಕೆ ಒಳಪಟ್ಟ , ಕುಂದಾಪುರದಲ್ಲಿ ಚಿಕನ್ಸಾಲ್ ರಸ್ತೆಯಲ್ಲಿ ಪ್ರಸ್ತುತ ಜನರ ಅಭಿರುಚಿ, ಬೇಡಿಕೆಗೆ ಅನುಗುಣವಾಗಿ ಬಹುಕೋಟಿ ವೆಚ್ಚದಲ್ಲಿ ಸುಸಜ್ಜಿತ, ಹವಾನಿಯಂತ್ರಿತ ಮೊಗವೀರ ಭವನ ನಿರ್ಮಾಣವಾಗಿದ್ದು ಇದೇ ಜನವರಿ,22 ರಂದು ಉದ್ಘಾಟನೆ ಗೊಳ್ಳಲ್ಲಿದೆ. ಕೊರೋನಾ ಸಂಕಷ್ಟದ ಕಾರಣಗಳಿಂದಾಗಿ ಭವನ ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದು ಇತ್ತೀಚೆಗೆ ಕಾಮಗಾರಿ ವೇಗ ಪಡೆದುಕೊಂಡು, ಈಗ ಅಂದುಕೊoಡ ತೆ ಮೊಗವೀರ ಭವನ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಕ್ರಿಯೇಟಿವ್ ಪಿ ಯು ಕಾಲೇಜಿನ ನಿಧಿ .ಯು .ಆಚಾರ್ ಗೆ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಕಾರ್ಕಳ ( ಜ,06): ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಡಿ 26 ರಿಂದ 28 ವರೆಗೆ ಇಂಡಿಯಾ ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಫೌಂಡೇಶನ್ ನ (S. G. S. D. F India) ವತಿಯಿಂದ ನಡೆಸಲಾದ ಮೂರನೇ ಅಂತರಾಷ್ಟ್ರೀಯ 19 ವರ್ಷದೊಳಗಿನ ಯೋಗ ಚಾಂಪಿಯನ್ ಶಿಪ್ ನಲ್ಲಿ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಪೂರ್ವ ವಿದ್ಯಾರ್ಥಿನಿ ನಿಧಿ ಯು ಆಚಾರ್ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕವನ್ನು ಗಳಿಸಿರುತ್ತಾರೆ. ನಿಧಿ ಯು ಆಚಾರ್ […]
ಹಾಡಿಗರಡಿ ದೈವಸ್ಥಾನ: ಜ.14 ಮತ್ತು15 ರಂದು ವಾರ್ಷಿಕ ಜಾತ್ರಾ ಮಹೋತ್ಸವ
ಮುಳ್ಳಿಕಟ್ಟೆ(ಜ,6): ಶ್ರೀ ಹಾಡಿಗರಡಿ ದೇವಸ್ಥಾನ ನಾಡ ಇದರ ವಾರ್ಷಿಕ ಹಾಲುಹಬ್ಬ ,ಗೆಂಡಸೇವೆ ಇದೇ ಜನವರಿ,14 ಹಾಗೂ 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಉಡುಪಿ: ಶಿರಿಬೀಡು ಸ್ವಾತಂತ್ರ್ಯ ಹೋರಾಟಗಾರ ಕೆ.ದಾಸ ಸೇರಿಗಾರ್ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಉಡುಪಿ( ಜ,3): ಉಡುಪಿ ತಾಲೂಕು ಶಿರಿಬೀಡು ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ದಾಸ ಸೇರಿಗಾರ್ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಅಭಿಯಾನದ ಅಡಿಯಲ್ಲಿ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಜನವರಿ .01 ರಂದು ಜರುಗಿತು. ” ಸ್ವರಾಜ್ಯ 75″ ಸಂಘಟನೆಯ 22ನೇ ಮನೆ ಯಲ್ಲಿ ರಾಷ್ಟ್ರೀಯ ಚಿಂತನೆಯ ಲೇಖಕರು ಪ್ರಖರ ವಾಗ್ಮಿಯಾಗಿರುವ ಶ್ರೀ ಪ್ರಕಾಶ್ ಮಲ್ಪೆಯವರೊಂದಿಗೆ ದಾಸ್ ಸೇರಿಗಾರ್ ಒಡನಾಟ ಹೊಂದಿರುವ ಸಂಜೀವ ಸೇರಿಗಾರ್ ಇವರು ನಾಮ ಫಲಕ ಅನಾವರಣ ನೆರವೇರಿಸಿ […]
ಬೆಂಗಳೂರು : ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ
ಬೆಂಗಳೂರು( ಡಿ,24): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಿಂದ ಸಿರಿಕಲಾ ಮೇಳದ ಕಲಾವಿದರಿಂದ ಬೆಂಗಳೂರಿನ ಚಾಮರಾಜ ಪೇಟೆಯ ಉದಯಭಾನು ಕಲಾಸಂಘದಲ್ಲಿ “ಮೋಕ್ಷ ಸಂಗ್ರಾಮ” ಎಂಬ ಯಕ್ಷಗಾನ ಇತ್ತೀಚೆಗೆ ಪ್ರದರ್ಶನಗೊಂಡಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್ ಚಂದ್ರಶೇಖರ್,ಉದ್ಯಮಿಗಳಾದ ಚಂದ್ರಶೇಖರ್ ಹೆಬ್ಬಾರ್ , ರಾಘವೇಂದ್ರ ಹತ್ವಾರ್ ಮತ್ತು ಕರುಣಾಳು ಟ್ರಸ್ಟ್ ನ ಆನಗಳ್ಳಿ ಕರುಣಾಕರ ಹೆಗಡೆ ಭಾಗವಹಿಸಿ ಯಕ್ಷಗಾನಕ್ಕೆ ಶುಭ ಹಾರೈಸಿದರು. […]
ಜೇಸಿಐ ಕುಂದಾಪುರದ ನೂತನ ಅಧ್ಯಕ್ಷರಾಗಿ ಸುಧಾಕರ್ ಕಾಂಚನ್ ಆಯ್ಕೆ
ಕುಂದಾಪುರ(ಡಿ,23): ಜೇಸಿಐ ಕುಂದಾಪುರದ ನೂತನ ಅಧ್ಯಕ್ಷರಾಗಿ ಸುಧಾಕರ್ ಕಾಂಚನ್ ಹಾಗೂ ಕಾರ್ಯದರ್ಶಿಯಾಗಿ ರಾಕೇಶ್ ಶೆಟ್ಟಿಯ ಆಯ್ಕೆ ಯಾಗಿದ್ದಾರೆ . ನಿಕಟಪೂರ್ವಧ್ಯಕ್ಷರಾಗಿ ಶ್ರೀಮತಿ ನಾಗರತ್ನ ಜಿ ಹೆರ್ಳೆ, ಉಪಾಧ್ಯಕ್ಷರುಗಳಾಗಿ ಪ್ರವೀಣ್ ಎಮ್ , ಶ್ರೀಮತಿ ಶರ್ಮಿಳಾ ಕಾರಂತ್, ಚಂದನ್ ಗೌಡ , ಸುಬ್ರಮಣ್ಯ ಆಚಾರ್ಯ , ಶಶಿಧರ್ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಚೇತನ್ ದೇವಾಡಿಗ , ಕೋಶಾಧಿಕಾರಿಯಾಗಿ ಧನುಷ್ ಕುಮಾರ್, ಜ್ಯೂನಿಯರ್ ಜೇ.ಸಿ ಅಧ್ಯಕ್ಷರಾಗಿ ಸತ್ಯನ್ ಎಸ್ ಕಾಂಚನ್ , […]
ಭದ್ರಾವತಿ : ಸ್ವಾತಂತ್ರ್ಯ ಹೋರಾಟಗಾರ ಎಮ್. ನಾಗಪ್ಪರವರ ಮನೆಗೆ ನಾಮಫಲಕ ಅನಾವರಣ
ಭದ್ರಾವತಿ(ಡಿ,20): ”ಸ್ವರಾಜ್ಯ 75″ ಇವರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅನಾವರಣ ಅಭಿಯಾನದ 21ನೇ ಮನೆಯ ಕಾಯ೯ಕ್ರಮ ಭದ್ರಾವತಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಎಮ್ ನಾಗಪ್ಪ ರವರ ಮನೆಗೆ ನಾಮ ಫಲಕ ಅಳವಡಿಸುವ ಮೂಲಕ ಹಮ್ಮಿಕೊಳ್ಳಲಾಯಿತು . ವೈದ್ಯಾಧಿಕಾರಿ ಡಾ.ಮಂಜುನಾಥ್ ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು. ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆಗೈದು ಭದ್ರಾವತಿ ಎಮ್ ನಾಗಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಯ೯ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕರಾದ ನಾಗೇಶ್ ಭದ್ರಾವತಿ ಯವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ […]
ಉಡುಪಿ:’ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ
ಉಡುಪಿ( ಡಿ,06): ಸುಹಾಸಂ ವತಿಯಿಂದ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಓ.ಆರ್.ಪ್ರಕಾಶ್ ಬರೆದ ‘ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ ಸಮಾರಂಭವು ಇತ್ತೀಚೆಗೆ ಉಡುಪಿ ಕಿದಿಯೂರು ಹೊಟೇಲಿನ ಅನಂತಶಯನ ಹಾಲ್ನಲ್ಲಿ ನಡೆಯಿತು. ಪುಸ್ತಕವನ್ನು ಬಿಡುಗಡೆಗೊಳಿಸಿದ ಮನೋ ತಜ್ಞ ಡಾ.ಪಿ.ವಿ.ಭಂಡಾರಿ ಮಾತನಾಡಿ, ಗಾಂಧೀಜಿ ವೈಯಕ್ತಿಕ, ಸಾರ್ವಜನಿಕ ಬದುಕು ಒಂದೇ ಆಗಿದ್ದರಿಂದಲೇ ಮಹಾತ್ಮನ ಪಟ್ಟವೇರಿದ್ದಾರೆ. ಜನರ ಹೃದಯದಲ್ಲಿ ಇಂದಿಗೂ ನೆಲೆಸಿದ್ದಾರೆ. ಗಾಂಧೀಜಿ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಯುತ್ತಿದೆ. ಗಾಂಧಿ […]
ಡಾ.ಗಣೇಶ್ ಗಂಗೊಳ್ಳಿಯವರಿಗೆ ರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ನ,30): ಗೋವಾ ರಾಜ್ಯದ ಪಣಜಿ ಕನ್ನಡ ಸಂಘ ಮತ್ತು ರೇಣುಕಾ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಹಾಗೂ ಸಮಾಜ ಮುಖಿ ಸಂಸ್ಥೆ (ರಿ) ಇವರು ನ,27 ರಂದು ಪಣಜಿಯ ಮಾರ ಮಾರ್ ಇಂಟರ್ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಗಮ ಸಂಗೀತ ಮತ್ತು ಸಂಘಟನಾ ಕ್ಷೇತ್ರದಲ್ಲಿನ 32 ವರ್ಷದ ವಿಶೇಷ ಸೇವೆಯನ್ನು ಗುರುತಿಸಿ ಡಾ.ಗಣೇಶ್ ಗಂಗೊಳ್ಳಿ ಯವರಿಗೆ […]
ಸಂವಿಧಾನದ ಆಶಯವನ್ನು ಅರಿತು ಬಾಳೋಣ: ಪ್ರವೀಣ್ ಗಂಗೊಳ್ಳಿ
ಗಂಗೊಳ್ಳಿ(ನ,29): ಜಗತ್ತಿನಲ್ಲಿಯೇ ಅತಿ ಶ್ರೇಷ್ಠವಾದ ಮತ್ತು ಬ್ರಹತ್ ಗಾತ್ರದ ಸಂವಿಧಾನವನ್ನು ಹೊಂದಿರುವ ದೇಶ ನಮ್ಮದು.ಸಂವಿಧಾನ ರಚನಾ ಸಮಿತಿಯವರು ಬಲಿಷ್ಠ ಭಾರತದ ನಿರ್ಮಾಣದ ಕನಸ್ಸನ್ನು ಹೊತ್ತು 1949 ರ ನವೆಂಬರ್,26 ರಂದು ಸಂವಿಧಾನವನ್ನು ಶಾಸನಬದ್ದವಾಗಿ ದೇಶದ ಜನರ ಹೆಸರಿನಲ್ಲಿ ಅರ್ಪಿಸಿದ್ದಾರೆ. ಆ ನಿಟ್ಟಿನಲ್ಲಿ ಸಂವಿಧಾನದ ಆಶಯಗಳನ್ನು ಅರಿತು ಬಾಳುವುದರೊಂದಿಗೆ ಬಲಿಷ್ಠ ಭಾರತದ ನಿರ್ಮಾಣ ನಮ್ಮ ಜವಾಬ್ದಾರಿಯಾಗಿದೆ ಎಂದು ಕುಂದಾಪುರದ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು.ಅವರು ನ.29 […]










