ಗಂಗೊಳ್ಳಿ(ನ,2): ಕನ್ನಡ ಮಾಧ್ಯಮದ ಓದಿನ ಬಗ್ಗೆ ಯಾವತ್ತೂ ಕೀಳರಿಮೆಯನ್ನು ಬೆಳೆಸಿಕೊಳ್ಳದಿರಿ. ಸಾಧನೆ ಮಾಡುವ ಛಲ ಮತ್ತು ಪರಿಶ್ರಮ ಇದ್ದಾಗ ಯಶಸ್ಸು ಗಳಿಸಲು ಭಾಷಾ ಮಾಧ್ಯಮ ಯಾವತ್ತೂ ಅಡ್ಡಿಯಾಗಲಾರದು ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಗೂಡುದೀಪ ಸ್ಪರ್ಧೆ ಬಹುಮಾನ ವಿತರಣೆ
ಗಂಗೊಳ್ಳಿ(ನ,2): ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಗೂಡು ದೀಪ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ನಟರಾಜ, ದ್ವಿತೀಯ ಸ್ಥಾನವನ್ನು ನಾಗಲಕ್ಷ್ಮಿ ಜಿ.ಎನ್ ಮತ್ತು ತೃತೀಯ ಸ್ಥಾನವನ್ನು ನಿಮಿಷ ಪಡೆದರು. ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ ಬಹುಮಾನವನ್ನು ವಿತರಿಸಿದರು.
ಗಂಗೊಳ್ಳಿ: ರೋಟರಿ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಗಂಗೊಳ್ಳಿ (ನ,2): ರೋಟರಿ ಕ್ಲಬ್ ಗಂಗೊಳ್ಳಿ ,ರೋಟರಾಕ್ಟ್ ಕ್ಲಬ್ ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಇದರ ಸಂಯುಕ್ತ ಆಶ್ರಯದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಲೈಬ್ರರಿ ಹಾಲ್ ನಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಸುಗುಣ ಆರ್ ಕೆ ವಹಿಸಿದ್ದರು. ಪ್ರಧಾನ ಭಾಷಣಕಾರರಾಗಿ ಆಗಮಿಸಿದ ಡಾ. ಬಿ ಬಿ ಪ್ರಥಮ ದರ್ಜೆ ಕಾಲೇಜಿನ ಉಪ […]
ಟೀಮ್ ಕುಂದಾಪುರಿಯನ್ ವತಿಯಿಂದ ಬೆಂಗಳೂರಿನಲ್ಲಿ ಅರ್ಥಪೂರ್ಣ ದೀಪಾವಳಿ ಆಚರಣೆ
ಬೆಂಗಳೂರು ( ಅ,31): ಇಲ್ಲಿನ ಕೂಡ್ಲು ಸಮೀಪ ಇರುವ ವಲಸೆ ಕಾರ್ಮಿಕರ ಕೇರಿಯ ಜನರೊಂದಿಗೆ ಟಿಮ್ ಕುಂದಾಪುರಿಯನ್ ತಂಡದವರು ಸಂಭ್ರಮದಿಂದ ದೀಪಾವಳಿ ಹಬ್ಬ ಮತ್ತು ಪುನೀತ್ ರಾಜ್ಕುಮಾರ್ ಪುಣ್ಯ ಸ್ಮರಣೆ ಆಚರಿಸಿದರು. ಈ ಸಂದರ್ಭದಲ್ಲಿ ಟಿಮ್ ಕುಂದಾಪುರಿಯನ್ ತಂಡದ ಸದಸ್ಯ ಮತ್ತು ಮಾಧ್ಯಮ ನಿರೂಪಕ ರಂಜಿತ್ ಶಿರಿಯಾರ ಮಾತನಾಡಿ ಮಹಾನಗರದ ಒತ್ತಡದ ಜೀವನದ ಮಧ್ಯೆ ಬಿಡುವು ಮಾಡಿಕೊಂಡು ನಿಮ್ಮೊಂದಿಗೆ ನಾವು ನಮ್ಮ ಪೋಷಕರನ್ನು ಕಾಣುತ್ತವೆ. ನಿಮ್ಮ ಮಕ್ಕಳ ಮುಂದಿನ ಶೈಕ್ಷಣಿಕ ಜೀವನ […]
ಆಪದ್ಬಾಂಧವ ಈಶ್ವರ ಮಲ್ಪೆಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಉಡುಪಿ(ಅ.30) : ಸಮಾಜ ಸೇವಕ, ಮುಳುಗು ತಜ್ಞ, ಜೀವರಕ್ಷಕ, ಆಪದ್ಬಾಂಧವ ಉಡುಪಿಯ ಈಶ್ವರ ಮಲ್ಪೆಯವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ . ತಮ್ಮ ವೈಯುಕ್ತಿಕ ಹಾಗೂ ಕೌಟುಂಬಿಕ ಬದುಕಿನ ಸಾಕಷ್ಟು ಸವಾಲುಗಳ ನಡುವೆಯೂ ಜನಸೇವೆ ಮಾಡಬೇಕೆಂದು ಸ್ವಯಂ ಪ್ರೇರಣೆಯಿಂದ, ನಿಸ್ವಾರ್ಥ ಸೇವೆಯಲ್ಲಿ ತಲ್ಲೀನರಾಗಿರುವುದರ ಜೊತೆಗೆ ತುರ್ತು ಆಂಬ್ಯುಲೆನ್ಸ್ ಸೇವೆಯಲ್ಲಿ ನಿರತರಾಗಿ ,ನೀರಿಗೆ ಬಿದ್ದವರನ್ನು ಅಪಾಯದಿಂದ ಪಾರುಮಾಡುವ ,ಹಾಗೆಯೇ ನೀರಿಗೆ ಬಿದ್ದು ನಾಪತ್ತೆಯಾಗಿ ಕಣ್ಮರೆಯಾಗಿರುವ ಅದೆಷ್ಟೋ ಮ್ರತ ದೇಹವನ್ನು […]
ಮಾರಣಕಟ್ಟೆಯ ಕರ್ಣ, ಕೊಡುಗೈ ದಾನಿ ಶ್ರೀ ಕೃಷ್ಣಮೂರ್ತಿ ಮಂಜರಿಗೆ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ (ಅ,30): ಮಾರಣಕಟ್ಟೆಯ ಕರ್ಣ, ಕೊಡುಗೈ ದಾನಿ, ಸಮಾಜಸೇವಕ, ಶಿಕ್ಷಣ ಪ್ರೇಮಿ, ತನ್ನ ದುಡಿಮೆಯ ಅರ್ಧ ಭಾಗಕ್ಕೂ ಹೆಚ್ಚು ಹಣವನ್ನು ಸಮಾಜಕ್ಕೆ ನೀಡುವ ಕೃಷ್ಣಮೂರ್ತಿ ಮಂಜರು ಈ ಬಾರಿಯ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ ಮೂಲಕ ನೂರಾರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಕಾರಣರಾದವರು, ತನ್ನ ದುಡಿಮೆ ಹಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳದೇ ಸಮಾಜಕ್ಕಾಗಿ ವಿನಿಯೋಗಿಸುವ ಧೀಮಂತ ವ್ಯಕ್ತಿತ್ವದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರುರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರೋದು […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ನವೆಂಬರ್ 06 ರಂದು ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರ
ಹೆಮ್ಮಾಡಿ(ಅ,27): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರ ಆದಿತ್ಯವಾರ ಬೆಳಿಗ್ಗೆ ಗಂಟೆ 8 […]
ಮೊಗವೀರ ಯುವ ಸಂಘಟನೆ (ರಿ.), ) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ: ರಕ್ತದಾನ ಶಿಬಿರ ಸಂಪನ್ನ
ಬೈಂದೂರು (ಅ,28): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ,ಅಂಬಲಪಾಡಿ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ರಕ್ತನಿಧಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಬೈಂದೂರು ರಕ್ತನಿಧಿ ಕೇಂದ್ರ ಇವರ ಸಹಯೋಗದಲ್ಲಿ “ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ”ವು 58 ಯೂನಿಟ್ ರಕ್ತವನ್ನು ಸಂಗ್ರಹಿಸುವ ಮೂಲಕ ಅ.22 ರಂದು ಸಂಪನ್ನಗೊಂಡಿತು. ಮೊಗವೀರ […]
ಅನಾರೋಗ್ಯದಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ತವರೂರಿಗೆ ತಲುಪಿಸಿದ ಈಶ್ವರ್ ಮಲ್ಪೆ
ಕುಂದಾಪುರ(ಅ,20): ಅನಾರೋಗ್ಯಕ್ಕೆ ಪೀಡಿತರಾದ ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ ಮನೆಯ ವಿಜಯ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತ ಪಟ್ಟಿರುತ್ತಾರೆ. ಈ ಹಿಂದೆ ಶಿರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಕರ್ತವ್ಯ ನಿರ್ವಹಿಸುತ್ತಿದ್ದು ಇವರು 6 ತಿಂಗಳ ಹಿಂದೆ ಅನಾರೋಗ್ಯ ಸಮಸ್ಯೆಯಿಂದ ವೃತ್ತಿಯಿಂದ ದೂರವಿದ್ದು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ವಿಷಯ ತಿಳಿದ ತಕ್ಷಣ ಸಮಾಜ ಸೇವಕ ಈಶ್ವರ್ ಮಲ್ಪೆ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮೃತಪಟ್ಟಿರುವ ವಿಜಯ್ ಅವರ ಮೃತದೇಹವನ್ನು ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ […]
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ನೆಂಪು ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟದ ಪ್ಲೇಟ್ ಮತ್ತು ಲೋಟ ಕೊಡುಗೆ
ವಂಡ್ಸೆ(ಅ,19); ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರದಗಳಲ್ಲಿ ಒಂದಾದ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮಂಡಳಿಯ ವತಿಯಿಂದ ಉಪ್ಪಿನ ಕುದ್ರು ಗೊಂಬೆಯಾಟ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹಾಗೂ ಸಮಾಜ ಸೇವಕ ರಾಘವೇಂದ್ರ ನೆಂಪು ರವರ ಕೋರಿಕೆಯ ಮೇರೆಗೆ ಅಂದಾಜು 40 ಸಾವಿರ ರೂಪಾಯಿ ಮೌಲ್ಯದ ಬಿಸಿಯೂಟದ ಪ್ಲೇಟ್ ಮತ್ತು ಲೋಟವನ್ನು ನೆಂಪುವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ್ದಾರೆ. ಕ್ಷೇತ್ರದಿಂದ ಕೊಡುಗೆಯಾಗಿ ನೀಡಿದ […]










