ಹೆಮ್ಮಾಡಿ(ಅ,18): ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ HCES ಪದವಿಪೂರ್ವ ಕಾಲೇಜು ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಶ ಶೆಟ್ಟಿ ಪ್ರಥಮ ಪಿ.ಯು.ಸಿ 97ಕೆ.ಜಿ ಮೇಲ್ಪಟ್ಟು ವಿಭಾಗದಲ್ಲಿ ಬೆಳ್ಳಿ ಪದಕ,ಆರ್ಯ ಮೊಗವೀರ ದ್ವಿತೀಯ ಪಿ.ಯು.ಸಿ 92 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ, ಹಾಗೂ ರೋಹಿತ್ ದೇವಾಡಿಗ ಪ್ರಥಮ ಪಿ.ಯು.ಸಿ. 97ಕೆ.ಜಿ.ವಿಭಾಗದಲ್ಲಿ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಸ್ಮಾರ್ಟ್ ಕ್ರಿಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್(ರಿ) ಹಾಯ್ಕಾಡಿ : ರಂಗಾಭಿನಯ ತರಬೇತಿ ಮತ್ತು ಬಹುಮಾನ ವಿತರಣಾ ಸಮಾರಂಭ
ಹಾಲಾಡಿ (ಅ,16): ಸ್ಮಾರ್ಟ್ ಕ್ರಿಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜು ಹಾಲಾಡಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಅ.10 ರಂದು ಸೋಮವಾರ ರಂಗಾಭಿನಯ ತರಬೇತಿ ಶ್ರೀಮತಿ ಸಾಧು ಅಧ್ಯಕ್ಷರು ಗ್ರಾಮ ಪಂಚಾಯತ್ ಹಾಲಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಪೆರ್ಡೂರು ಪ್ರಭಾಕರ ಕಲ್ಯಾಣಿ ಇವರು ಕಾರ್ಯಕ್ರಮದ ಉದ್ಘಾತಿಸಿದರು. ಗ್ರಾಮೀಣ ಭಾಗದಲ್ಲಿ […]
ಅವನಿ ಪ್ರಕಾಶನ ಮಂಗಳೂರು : ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಮಂಗಳೂರು (ಅ.10): ಅವನಿ ಪ್ರಕಾಶನ, ಮಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ “ಕುಂದಗನ್ನಡದ ನನ್ನ ಊರು – ಜನ – ಸಂಸ್ಕೃತಿ – ಪರಂಪರೆ” ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಹೈಸ್ಕೂಲ್ ವಿಭಾಗ,ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಎಂದು ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು ,ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ , ತೃತೀಯ ಮತ್ತು ಮೂರು ಪ್ರೋತ್ಸಾಹಕರ ಬಹುಮಾನ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕ: ಆರೋಗ್ಯ ಶಿಬಿರ ಸಂಪನ್ನ
ಬೈಂದೂರು(ಅ,10): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕದ ನೇತೃತ್ವದಲ್ಲಿ ನಾಡೋಜ ಡಾ. ಜಿ. ಶಂಕರ್ ಜನ್ಮದಿನದ ಪ್ರಯುಕ್ತ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಉಡುಪಿ ಮತ್ತು ಕೆ ಎಮ್ ಸಿ ಮಣಿಪಾಲ ಇವರ ಸಹಯೋಗದಲ್ಲಿ ಚರ್ಮ, ಕಿವಿ, ಮೂಗು ಹಾಗೂ ಗಂಟಲಿನ ಉಚಿತ ತಪಾಸಣಾ ಶಿಬಿರ ಅ .09 ರಂದು ಸಂಪನ್ನಗೊಂಡಿತು. ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುನ್ನೂರಕ್ಕೂ […]
ಸ್ವಾತಂತ್ರ್ಯ ಹೋರಾಟಗಾರ ಹಂದಾಡಿ ಸಂಜೀವ ಶೆಟ್ಟಿ ಬೆಣ್ಣೆಕುದ್ರು ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ಬ್ರಹ್ಮಾವರ (ಅ,7): ಬ್ರಹ್ಮಾವರ ತಾಲೂಕು ಹಂದಾಡಿ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಸಂಜೀವ ಶೆಟ್ಟಿ ಬೆಣ್ಣೆಕುದ್ರು ಇವರ ಮನೆಗೆ ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಸೆ.25 ರಂದು ನಡೆಯಿತು . ” ಸ್ವರಾಜ್ಯ75 “ಸಂಘಟನೆಯ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಸುವ ಅಭಿಯಾನದ 17ನೇ ಮನೆಯ ನಾಮಫಲಕ ಅನಾವರಣ ಕಾಯ೯ಕ್ರಮವನ್ನು ಸ.ಪ್ರ.ದ.ಕಾಲೇಜು ಕಾಲೇಜು ಶಂಕರನಾರಾಯಣ ನಿವೃತ್ತ ಪ್ರಾಂಶುಪಾಲರಾಗಿರುವ ಡಾ.ಉದಯ್ ಕುಮಾರ್ ಶೆಟ್ಟಿರವರು ನೆರವೇರಿಸಿದರು. ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆಯ ಮೂಲಕ ಶ್ರೀ ಚಂದ್ರಶೇಖರ […]
ಲ. ಅಶೋಕ್ ಶೆಟ್ಟಿ ಸಂಸಾಡಿಯವರಿಗೆ ಪಿತ್ರ ವಿಯೋಗ
ಕುಂದಾಪುರ(ಅ,6): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ನ ಸ್ಥಾಪಕಾಧ್ಯಕ್ಷರು, ಕುಂದಾಪುರದ ಪ್ರತಿಷ್ಠಿತ ಶುಭಲಕ್ಷ್ಮಿ ಹೋಟೆಲ್ಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ಪಾಲುದಾರರಾದ ಲ. ಅಶೋಕ್ ಶೆಟ್ಟಿ ಸಂಸಾಡಿ ಅವರ ತಂದೆ ಬಡಾಕೆರೆ ಶಂಕರ ಶೆಟ್ಟಿ (88 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಅ.6 ರಂದು ನಿಧನರಾಗಿದ್ದಾರೆ. ಮೃತರು ಧರ್ಮಪತ್ನಿ ಸೇರಿದಂತೆ ಐದು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ನಮ್ಮ ನಡಿಗೆ ಗ್ರಾಮದೆಡೆಗೆ-ಸ್ವಾತಂತ್ರ್ಯಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ “ಹೊಂಬೆಳಕು”
ಕುಂದಾಪುರ (ಅ.05) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಸ್ವರಾಜ್ಯ 75 ಸಂಘಟನೆಯ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯಹೋರಾಟಗಾರ ತಲ್ಲೂರು ಎಸ್.ಎನ್. ಸುಬ್ಬಣ್ಣ ಗುಪ್ತ ಅವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.02 ರಂದು ನಡೆಯಿತು. ರಾಷ್ಟ್ರ ಧ್ವಜಕ್ಕೆ ಪುಪ್ಪಾರ್ಚನೆಯ ಮೂಲಕ ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭೀಮವ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವದಾಖಲೆಯ ಯೋಗಪಟು ತಲ್ಲೂರು ನಿರಂಜನ ಶೆಟ್ಟಿ ನಾಮಫಲಕ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಕಡಲ ಕಿನಾರೆಯಲ್ಲಿ ಉದ್ಯಾನವನ
ಬೈಂದೂರು(ಅ,4): ಉಡುಪಿ ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಕಡಲ ತೀರದಲ್ಲಿ ಒಂದಾದ ಅಳ್ವೆಗದ್ದೆ ಬೀಚ್ ನಲ್ಲಿ ಇಂದು ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ, ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆ ಶಿರೂರು ಹಾಗೂ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಬೀಚ್ ಅಭಿವೃದ್ಧಿಯ ದೃಷ್ಟಿಯಿಂದ ‘ಕಡಲ ಕಿನಾರೆಯಲ್ಲಿ ಉದ್ಯಾನವನ’ ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಪ್ರವಾಸಿಗರಿಗೆ ನೆರಳು ನೀಡುವ ಹಾಗೂ ಮರಳನ್ನು ಸಂರಕ್ಷಿಸುವ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ : ತಲ್ಲೂರಿನ ನಾರಾಯಣ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ನಾಡೋಜ ಡಾ.ಜಿ.ಶಂಕರ್ ರವರ 67 ನೇ ಹುಟ್ಟು ಹಬ್ಬ ಆಚರಣೆ
ತಲ್ಲೂರು(ಆ.05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 67 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಅ .05 ರಂದು ಆಚರಿಸಲಾಯಿತು. ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು.ಮೊಗವೀರ […]
ಸ್ವಾತಂತ್ರ್ಯ ಹೋರಾಟಗಾರ ತಲ್ಲೂರು ಎಸ್ ಎನ್ ಸುಬ್ಬಣ್ಣ ಗುಪ್ತ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ತಲ್ಲೂರು(ಅ.04): ಸ್ವರಾಜ್ಯ 75 ಸಂಘಟನೆಯ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಅಭಿಯಾನದ ಅಂಗವಾಗಿ ಅಕ್ಟೋಬರ್ 2 ರಂದು ಕುಂದಾಪುರ ತಾಲೂಕು ಸ್ವಾತಂತ್ರ್ಯ ಹೋರಾಟಗಾರರಾಗಿರುವ ಎಸ್.ಎನ್. ಸುಬ್ಬಣ್ಣ ಗುಪ್ತ ಇವರ ಮನೆಗೆ ನಾಮ ಫಲಕ ಅಳವಡಿಸಲಾಯಿತು. ” ಸ್ವರಾಜ್ಯ 75 ರ ” 18 ನೇ ಮನೆ ಯಲ್ಲಿ ವಿಶ್ವ ದಾಖಲೆಯ ಯೋಗ ಪಟು ಶ್ರೀ ನಿರಂಜನ್ ಶೆಟ್ಟಿ ತಲ್ಲೂರು ಇವರಿಂದ ನಾಮ ಫಲಕ ಅನಾವರಣ ನೆರವೇರಿಸಿದರು. […]










