ಬೈಂದೂರು (ಏ,10): ಸ್ವಾತಂತ್ರ್ಯ ಹೋರಾಟಗಾರ ಬಾಡಾ ದಿ.ಮಂಜುನಾಥ ಜೋಶಿ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕ ಅಳವಡಿಕೆ ಕಾರ್ಯಕ್ರಮ ಇತ್ತೀಚೆಗೆ ಬೈಂದೂರು ತಾಲೂಕು ವ್ಯಾಪ್ತಿಯ ಬಾಡಾದಲ್ಲಿ ನಡೆಯಿತು. ನಾಮ ಫಲಕ ಅನಾವರಣವನ್ನು ಉದ್ಯಮಿ ಶ್ರೀ ಸುಜೀತ್ ಶೆಟ್ಟಿ ಹಿಲಿಯಾಣ ರವರು ನೆರವೇರಿಸಿದರು. ಕಾರ್ಯಕ್ರಮದ ಅತಿಥಿಯಾಗಿ ಶ್ರೀ ಜಯಾನಂದ ಹೋಬಳಿದಾರ್, ನಾಗರತ್ನ ಹೇರಳೆ,ಶ್ರೀ ಜಯದೇವಿ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅರುಣ ಶಿರೂರು ರವರು ವಹಿಸಿದ್ದರು.ಸ್ವರಾಜ್ಯ75 ಸಂಘಟನೆಯ ನೇತ್ರತ್ವದಲ್ಲಿ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಕುಂದಾಪುರ ತಾಲ್ಲೂಕು ಪತ್ರಕರ್ತರ ಸಂಘ(ರಿ): ನೂತನ ಪದಾಧಿಕಾರಿಗಳ ಆಯ್ಕೆ
ಕುಂದಾಪುರ(ಏ.7): ಕುಂದಾಪುರ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಕಿರಣ್ ಪೂಜಾರಿ,ಕಾರ್ಯದರ್ಶಿಯಾಗಿ ಸಂತೋಷ ಪಟೇಲ್, ಗೌರವಾಧ್ಯಕ್ಷರಾಗಿ ಎಸ್ ಸತೀಶ್ ಕುಮಾರ್ ಕೋಟೇಶ್ವರ ರವರನ್ನು ಆಯ್ಕೆ ಮಾಡಲಾಯಿತು. ಕಾನೂನು ಸಲಹೆಗಾರರಾಗಿ ಶ್ರೀ ರವಿಕಿರಣ್ ಮುರ್ಡೇಶ್ವರ ಮತ್ತು ಶ್ರೀ ಸೋಮನಾಥ ಹೆಗ್ಡೆ ಮತ್ತು ಸಂಘದ ಗೌರವ ಸಲಹೆಗಾರರಾಗಿ ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕರಾದ ಟಿ. ಪಿ. ಮಂಜುನಾಥ್, ಉಪಾಧ್ಯಕ್ಷರಾಗಿ ಪ್ರದೀಪ್ ಪಟೇಲ್, ದಯಾನಂದ್ ನಾಯಕ್ ಮತ್ತು […]
ಎ.16ಕ್ಕೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವ
ಹೆಮ್ಮಾಡಿ (ಏ,7): ಕುಂದಾಪುರ ತಾಲೂಕಿನ ಪ್ರಮಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಇದೇ ಎಪ್ರಿಲ್ 16 ರ ಶನಿವಾರ ದಂದು ನಡೆಯಲಿದೆ. ರಥೋತ್ಸವದ ಪ್ರಯುಕ್ತ ಎ.14ರಿಂದ 18ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಮರವಂತೆ ಸರ್ಕಾರಿ ಶಾಲೆಗೆ ಶಾಶ್ವತ ಶುದ್ಧ ನೀರಿನ ಘಟಕ ನೀಡಿದ ಡಾ.ಗೋವಿಂದ ಬಾಬು ಪೂಜಾರಿ
ಮರವಂತೆ(ಏ ,03):ಸರ್ಕಾರಿ ಶಾಲಾ ಉಳಿಸುವ ಅಭಿಯಾನದಲ್ಲಿ ತನ್ನ ಪಾತ್ರವಹಿಸುತ್ತಿರುವ ಡಾ.ಗೋವಿಂದ ಬಾಬು ಪೂಜಾರಿಯವರು ಈಗಾಗಲೇ ಅನೇಕ ಸರ್ಕಾರಿ ಶಾಲೆಗಳಿಗೆ ಒಂದೊಂದೇ ಕೊಡುಗೆ ನೀಡುತ್ತಾ ಬಂದಿದ್ದಾರೆ . ಹಾಗೆಯೇ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಕೊಡುಗೆಯಾಗಿ ರೂ.80,000 ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಏ.03 ರಂದು ಶಾಲೆಗೆ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಿರಿಯ ಚಿಂತಕರು ಶ್ರೀ ಎಸ್. […]
ಕೋಟೇಶ್ವರ: ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಕೋಟೇಶ್ವರ ಆಶ್ರಯದಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಮಾರ್ಚ್ 31 ರಂದು ಬೆಳಿಗ್ಗೆ 11 ಗಂಟೆಗೆ ಕೋಟೇಶ್ವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೃಷ್ಣ ಗೊಲ್ಲ ಮಾತನಾಡಿ ಗ್ರಾಮೀಣ ಭಾಗದಲ್ಲಿ ವಿಶೇಷ ಚೇತನರನ್ನ ಗುರುತಿಸಿ ಎಪಿಡಿ ಸಂಸ್ಥೆ […]
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ: ಕುಂದಾಪುರ ಘಟಕದ ಪದಪ್ರದಾನ ಸಮಾರಂಭ
ಕುಂದಾಪುರ(ಮಾ.28): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ 2022-24 ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಮಾ.27 ರಂದು ಕುಂದಾಪುರದ ಕುಂಭಾಶಿ ರಾಧಾಬಾಯಿ ವೆಂಕಟ್ರಮಣ ಪ್ರಭು ರಂಗಮಂದಿರ (ಕೊಯಾಕುಟ್ಟಿ) ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ 2022-24 ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ […]
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ: ಹಾಲಾಡಿ ಶಂಕರನಾರಾಯಣ ಘಟಕದ ಮಹಾಸಭೆ & ಪದಪ್ರದಾನ ಸಮಾರಂಭ – ಸಮುದಾಯವನ್ನು ಒಗ್ಗೂಡಿಸುವಲ್ಲಿ ಯುವ ಸಂಘಟನೆಯ ಪಾತ್ರ ಮಹತ್ವವಾದುದ್ದು: ಯಶಪಾಲ್.ಎ.ಸುವರ್ಣ
ಹಾಲಾಡಿ(ಮಾ.27): ನಾಡೋಜ ಡಾ.ಜಿ.ಶಂಕರ್ ರವರ ಸಂಘಟನಾತ್ಮಕ ಚಿಂತನೆ ,ಮಾರ್ಗದರ್ಶನ, ಸಂಘನೆಯ ಕುರಿತಾದ ಅವರ ದೂರದರ್ಶಿತ್ವ ನಮಗೆಲ್ಲರಿಗೂ ಸ್ಪೂರ್ತಿದಾಯಕವಾಗಿದ್ದು ಹಾಗೂ ಸಮುದಾಯವನ್ನು ಒಗ್ಗೂಡಿಸುವಲ್ಲಿ ಯುವ ಸಂಘಟನೆಯ ಪಾತ್ರ ಮಹತ್ವವಾದುದ್ದು ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ ಹೇಳಿದರು. ಅವರು ಮಾ.26 ರಂದು ಹಾಲಾಡಿಯ ಶಾಲಿನಿ ಜಿ. ಶಂಕರ್ ಕನ್ವೆನ್ಷನ್ ಸೆಂಟರ್ ನ ತೆರೆದ ಸಭಾಂಗಣದಲ್ಲಿ ನಡೆದ ಮೊಗವೀರ ಯುವ ಸಂಘಟನೆ (ರಿ.), […]
ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಉಪ್ಪುಂದ: ಮನೆ ಹಸ್ತಾಂತರ ಕಾರ್ಯಕ್ರಮ ಡಾ.ಗೋವಿಂದ ಬಾಬು ಪೂಜಾರಿಯವರ ಸಮಾಜ ಸೇವೆ ಶ್ಲಾಘನೀಯ: ಕಲ್ಲಡ್ಕ ಡಾ.ಪ್ರಭಾಕರ್ ಭಟ್
ಬೈಂದೂರು( ಮಾ. 29:): ಡಾ.ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಮೂಲಕ ಮಾನವೀಯ ನೆಲೆಯಲ್ಲಿ ಸಮಾಜ ಸೇವೆಗೈಯುತ್ತಿರುವುದು ಶ್ಲಾಘನೀಯ ಎಂದು ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಡಾ.ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಮೂಲಕ ನಿರ್ಮಾಣಗೊಂಡ ಶ್ರೀ ವರಲಕ್ಷ್ಮೀ ನಿಲಯದ ಏಳನೆಯ ಮನೆಯ ಹಸ್ತಾಂತರ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಬೈಂದೂರಿನ ಗದ್ದೆಮನೆ ಲಕ್ಷ್ಮೀ ದೇವಾಡಿಗ ಬಡ ವ್ರದ್ಡ […]
ಯುವ ಲೇಖಕ -ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಗೆ ಸನ್ಮಾನ
ಗಂಗೊಳ್ಳಿ( ಮಾ.29) : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಇವರ ವತಿಯಿಂದ ಕಳೆದ ಸೋಮವಾರ ಯುವ ಬರಹಗಾರ ವಾಗ್ಮಿ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜು ಎನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಜಿ.ಸುಬ್ಬ, ಉಪಾಧ್ಯಕ್ಷರಾದ ಜಿ ಕೆ ಸುರೇಶ್, ಕೋಶಾಧಿಕಾರಿ […]
ಕುಂದಾಪುರ :ಸ್ವಾತಂತ್ರ್ಯ ಹೋರಾಟಗಾರ ಕೊಳ್ಕೈಬೈಲು ಮಹಾಬಲ ಶೆಟ್ಟಿಯವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ಸೌಕೂರು(ಮಾ,13): ಸ್ವಾತಂತ್ರ್ಯ ಹೋರಾಟಗಾರ ಕೊಳ್ಕೈಬೈಲು ಮಹಾಬಲ ಶೆಟ್ಟಿಯವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ ಮಾ.13ರಂದು ಕುಂದಾಪುರದ ಗುಳ್ವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಕೂರು ಬೋಳ್ ಕಟ್ಟೆನಲ್ಲಿ ನಡೆಯಿತು. ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆ ಕಂಡ್ಲೂರು ಇದರ ಠಾಣಾಧಿಕಾರಿ ಶ್ರೀ ನಿರಂಜನ್ ಗೌಡ ರವರು ನಾಮ ಫಲಕ ಅನಾವರಣಗೈದರು. ಕೊಳ್ಕೈಬೈಲು ಮಹಾಬಲ ಶೆಟ್ಟಿ ಯವರ ಕೊಡುಗೆಯಕುರಿತು ಅಂತರಾಷ್ಟ್ರೀಯ ಚಿತ್ರ ಕಲಾವಿದ ಮಹೇಂದ್ರ ವಕ್ವಾಡಿ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಘವೇಂದ್ರ ಮೊಗವೀರ ದುರ್ಗಾ ನಗರ ಸೌಕೂರು […]










