ವಕ್ವಾಡಿ(ಮಾ.20): ಸ್ವಾಸ್ಥ್ಯ ಸಮಾಜಕ್ಕೆ ಪ್ರಜ್ಞಾವಂತ ಯುವಕರ ಪಾಲು ಮಹತ್ತರವಾದದ್ದು. ಊರಿನ ಸಮಗ್ರ ಅಭಿವೃದ್ಧಿಗಾಗಿ ಯುವಕರು ದುಡಿಯಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಯುವಶಕ್ತಿ ಮಿತ್ರ ಮಂಡಲಿ (ರಿ.) ಹೆಗ್ಗಾರ್ ಬೈಲು, ವಕ್ವಾಡಿ ಇದರ ಬೆಳ್ಳಿ ಹಬ್ಬದ ಪ್ರಯಕ್ತ ಹಮ್ಮಿಕೊಂಡ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಪಂಚದ ಯಾವುದೇ ದೇಶಗಳಲ್ಲೂ ಇಲ್ಲದಷ್ಟು ಯುವಶಕ್ತಿ ನಮ್ಮ ದೇಶದಲ್ಲಿದೆ. ಯುವ ಪೀಳಿಗೆಯಲ್ಲಿರುವ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಬಾಲಕನ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ನೆಂಪು ಫ್ರೆಂಡ್ಸ್
ವಂಡ್ಸೆ( ಮಾ.14): ಕುಂದಾಪುರ ತಾಲೂಕಿನ ಕಟ್ ಬೇಲ್ತೂರು ಗ್ರಾಮದ ನಿವಾಸಿಗಳಾದ ಶ್ರೀಮತಿ ಶ್ಯಾಮಲಾ ಮತ್ತು ಚರಣ್ ರವರ ಮಗನಾದ ಮಾಸ್ಟರ್ ಪವನ್ ಕುಮಾರ್ (ವಯಸ್ಸು 4 ವರ್ಷ) ಈ ಮಗು ತಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿದ್ದು ,ಬಾಲಕನ ಈ ಕಾಯಿಲೆಗೆ ತುರ್ತುಚಿಕಿತ್ಸೆಯ ಅಗತ್ಯವಿದ್ದು ಸುಮಾರು ರೂ. 40 ಲಕ್ಷದಷ್ಟು ಹಣ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿರುತ್ತಾರೆ. ಈ ನಿಟ್ಟಿನಲ್ಲಿ ನೆಂಪು ಫ್ರೆಂಡ್ಸ್ ಹಾಗೂ ನೆಂಪು ಪ್ರೀಮಿಯರ್ ಲೀಗ್ (NPL) ಇವರ ಸಹಾಯ ಹಸ್ತದಿಂದ […]
ನಾಯಕವಾಡಿ : ಸಂಗಮೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ
ನಾಯಕವಾಡಿ (ಮಾ.8 ): ಭಜನೆ ಎನ್ನುವುದು ಧಾರ್ಮಿಕ ಮನ ಶುದ್ಧಿಯನ್ನು ತರುವುದು ಮಾತ್ರವಲ್ಲದೆ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿಸಲು ಸಹಾಯಮಾಡುತ್ತವೆ. ಆ ಮೂಲಕ ಜನರಲ್ಲಿ ಪರಸ್ಪರ ಸಹಕಾರವನ್ನು ಮೂಡಿಸಿ ಸಮಾಜದಲ್ಲಿ ಶಾಂತಿ ನೆಲೆಸಲು ಅನುಕೂಲವಾಗುತ್ತದೆ ಎಂದು ಕೊಂಕಣ ಕೊಪ್ಪದ ಸನ್ಯಾಸಿನಿ ಪ್ರವಚನ ಕೇಸರಿ ಪದ್ಮಾದೇವಿ ಅವರು ಅಭಿಪ್ರಾಯಪಟ್ಟರು. ಅವರು ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ ಮತ್ತು ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿಯ 67ನೇ ವಾರ್ಷಿಕೋತ್ಸವ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ […]
ಮೊಗವೀರ ಯುವ ಸಂಘಟನೆ ಬೈಂದೂರು – ಶಿರೂರು ಘಟಕ : ವಿಶ್ವ ಮಹಿಳಾ ದಿನಾಚರಣೆ
ಬೈಂದೂರು (ಮಾ.8):ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಇದರ ಬೈಂದೂರು – ಶಿರೂರು ಘಟಕದ ಆಶ್ರಯದಲ್ಲಿ ಘಟಕದ ಯಡ್ತರೆಯ ಆಡಳಿತ ಕಛೇರಿಯಲ್ಲಿ ಮಾ.08ರಂದು “ವಿಶ್ವ ಮಹಿಳಾ ದಿನ”ವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ COVID – 19 ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷೆಗಾಗಿ ಅವಿರತವಾಗಿ ಶ್ರಮಿಸಿದ ಸಂಘಟನೆಯ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು – ಶಿರೂರು ಘಟಕದ ಅಧ್ಯಕ್ಷರಾದ ಶ್ರೀ ರವಿರಾಜ ಚಂದನ […]
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಪುನಃ ಪ್ರತಿಷ್ಠೆ : “ಶ್ರೀ ಮಹಾಲಕ್ಷ್ಮೀ ಪ್ರಚಾರ ರಥ “ಕ್ಕೆ ಚಾಲನೆ
ಉಚ್ಚಿಲ(ಮಾ.5): ಮೊಗವೀರ ಸಮುದಾಯದ ಆರಾಧ್ಯ ದೇವತೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಪುನಃಪ್ರತಿಷ್ಠೆ ,ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಎಪ್ರಿಲ್ 01ರಿಂದ 15ರವರಗೆ ಜರುಗಲಿದ್ದು , ಹೊರೆ ಕಾಣಿಕೆ,ಪುನರ್ ಪ್ರತಿಷ್ಠೆ,ಬ್ರಹ್ಮಕಲಶ, ನಾಗಮಂಡಲೋತ್ಸವ ಮತ್ತು ಅಂತರ್ ರಾಜ್ಯ ಮಟ್ಟದ ಮತ್ತು ಸ್ಥಳೀಯ ಕಲಾವಿದರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಪ್ಪಳ ದಿಂದ ಶೀರೂರು ತನಕ ಪ್ರಚಾರ ಪಡಿಸುವ ಉದ್ದೇಶದಿಂದ ನಿರ್ಮಿಸಲಾದ “ಶ್ರೀ ಮಹಾಲಕ್ಷ್ಮೀ ರಥ”ಕ್ಕೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ […]
ಹಕ್ಲಾಡಿ :ಸ್ವಾತಂತ್ರ್ಯ ಹೋರಾಟಗಾರ ಮಂಕಿ ದಿ. ರಾಮಣ್ಣರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಮುಳ್ಳಿಕಟ್ಟೆ(ಫೆ,27 ): ಕುಂದಾಪುರದ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿನಮಕ್ಕಿ ಗೋಳಿಕಟ್ಟೆಯ ಸ್ವಾತಂತ್ರ್ಯ ಹೋರಾಟಗಾರಮಂಕಿ ದಿ.ರಾಮಣ್ಣನವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಫೆ.27ರಂದು ನಡೆಯಿತು. ಕಾರ್ಯಕ್ರಮದಲ್ಲಿ ನಾಮ ಫಲಕವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ), ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಶ್ರೀ ಉದಯ ಕುಮಾರ್ ಹಟ್ಟಿಯಂಗಡಿ ಯವರು ಅನಾವರಣಗೈದರು. ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಹಾಗೂ ಮಂಕಿ ರಾಮಣ್ಣರ ಸೇವೆಯ […]
ಉಪ್ಪುಂದ: ಮಾ. 6 ರಂದು ಜ| ಬಿಪಿನ್ ರಾವತ್ ಕೃತಿ ಲೋಕಾರ್ಪಣೆ
ಬೈಂದೂರು (ಫೆ.26): ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ, ಕಳೆದ ವರ್ಷ ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ CDS ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ದೃಷ್ಟಿಯಿಂದ ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡರು `ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್` ಕೃತಿ ರಚಿಸಿರುತ್ತಾರೆ. ಮಂಗಳೂರಿನ ಅವನಿ ಪ್ರಕಾಶನ ಕೃತಿಯನ್ನು ಹೊರತಂದಿದೆ.ಕೃತಿ ಲೋಕಾರ್ಪಣೆ ಸಮಾರಂಭವು ಭಾನುವಾರ ಮಾ. 6 […]
ಪಡುಗಡಲಿನಿಂದ ಕೃತಿ ಲೋಕಾರ್ಪಣೆ
ಕುಂದಾಪುರ (ಫೆ. 13) : ಪಡುಗಡಲಿನಿಂದ ಕೃತಿಯಲ್ಲಿ ಕಡಲಿಗೆ ಸಂಬಂಧಿಸಿದಂತೆ ಜನಪದೀಯ ವಿಚಾರ, ವೈಚಾರಿಕ ಚಿಂತನೆ, ಸಂಸ್ಕೃತಿ-ಸಂಪ್ರದಾಯದ ವಿವರಣೆಗಳಿವೆ. ಖಾರ್ವಿಯವರು ಮೀನುಗಾರಿಕೆಯಲ್ಲಿ ಪಡೆದ ನೈಜ ಅನುಭವಗಳ ಮಿಶ್ರಣ ಈ ಕೃತಿಯಲ್ಲಿದೆ. ಮೀನುಗಾರಿಕೆ ಮತ್ತು ಕಡಲಿನ ಕುರಿತು ಇಷ್ಟು ಸಂಖ್ಯೆಯಲ್ಲಿ ಅಂಕಣಗಳನ್ನು ಬರೆದಿದ್ದು ಇದೇ ಮೊದಲು. ಮೀನುಗಾರಿಕಾ ಪದವಿಯಲ್ಲಿ ಪಠ್ಯವಾಗುವಷ್ಟು ಪ್ರಬುದ್ಧ ಮತ್ತು ಸಮೃದ್ಧ ಸಾಹಿತ್ಯ ಇದರಲ್ಲಿದೆ ಎಂದು ಹೊಸದಿಗಂತ ಪತ್ರಿಕೆಯ ಅಂಕಣಕಾರರಾದ ಹಕ್ಲಾಡಿ ಸಂದೇಶ್ ಹೆಚ್ ನಾಯ್ಕ್ ಅವರು ಹೇಳಿದರು. […]
ಫೆಬ್ರವರಿ 12ಕ್ಕೆ “ಪಡುಗಡಲಿನಿಂದ” ಕೃತಿ ಅನಾವರಣ
ಗಂಗೊಳ್ಳಿ(ಫೆ.10): ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಾಗರಾಜ ಖಾರ್ವಿಯವರು ಕಡಲು, ಕರಾವಳಿ ಜೀವನ, ಮೀನುಗಾರಿಕೆ, ಮತ್ಸ್ಯ ಸಂಪತ್ತಿನ ಕುರಿತು ಜಯಕಿರಣದಲ್ಲಿ ಬರೆಯುತ್ತಿರುವ ಸರಣಿ ಅಂಕಣಗಳ ಸಂಕಲನ ಪಡುಗಡಲಿನಿಂದ ಕೃತಿ ಇದೇ ಫೆಬ್ರವರಿ 12 ರಂದು, ಮುಲ್ಕಿ ಕಿನ್ನಿಗೋಳಿಯ ಯುಗಪುರುಷ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ದಶಕಗಳ ಕಾಲ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದ ನಾಗರಾಜ ಖಾರ್ವಿಯವರ ನೈಜ ಅನುಭವಗಳು, ರೋಚಕ ವಿಚಾರಗಳು ಈ ಕೃತಿಯಲ್ಲಿ ಅನಾವರಣಗೊಂಡಿದೆ. ಹೊಸದಿಗಂತ ಪತ್ರಿಕೆಯ ಅಂಕಣಕಾರರಾದ ಹಕ್ಲಾಡಿ ಸಂದೇಶ್ ನಾಯ್ಕ್ರವರ ಮುನ್ನುಡಿ, ಸಿದ್ಧಾಪುರ […]
ಗಂಗೊಳ್ಳಿ: ಶವ ಸ್ನಾನದ ಟೇಬಲ್ ಕೊಡುಗೆ
ಗಂಗೊಳ್ಳಿ(ಫೆ.10): ಇಲ್ಲಿನ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯ ಸಾರ್ವಜನಿಕರ ಉಪಯೋಗಕ್ಕಾಗಿ ಶವ ಸ್ನಾನಕ್ಕಾಗಿ ಬಳಸುವ ಟೇಬಲನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ. ಗೋಪಾಲ ಪೂಜಾರಿ, ಗೌರವಾಧ್ಯಕ್ಷರಾದ ಲಕ್ಷ್ಮಣ ಬಿಲ್ಲವ ಮತ್ತು ಶ್ರೀನಿವಾಸ ಜತ್ತನ್, ಉಪಾಧ್ಯಕ್ಷ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿ ಜಿ. ಆರ್ .ಲಕ್ಷ್ಮಣ ಬಿಲ್ಲವ, ಕೋಶಾಧಿಕಾರಿ ಮಂಜುರಾಜ್ ಗಂಗೊಳ್ಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.










