ಗಂಗೊಳ್ಳಿ( ಡಿ .3) : ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ ದೊಡ್ಡ ಆಸ್ತಿ. ಉತ್ತಮ ಸ್ನೇಹಿತರನ್ನು ಪಡೆದುಕೊಳ್ಳುವಂತಹ ವ್ಯಕ್ತಿತ್ವವನ್ನು ನಾವು ನಮ್ಮದಾಗಿಸಿಕೊಳ್ಳಬೇಕು ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯಲ್ಲಿ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ಸರಸ್ವತಿ ವಿದ್ಯಾಲಯದ ನಿವೃತ್ತ ಇತಿಹಾಸ ಉಪನ್ಯಾಸಕ ಹೆಚ್ ಭಾಸ್ಕರ್ ಶೆಟ್ಟಿ ಅವರ ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಡಿ. 07 ರಂದು ಕುಂದಾಪುರದಲ್ಲಿ ಮೊಗವೀರರ ಸಾಂಸ್ಕೃತಿಕ ಸಿಂಚನ -“ಹೆಜ್ಜೆ ಗೆಜ್ಜೆ ” ಸಾಂಸ್ಕೃತಿಕ ಸ್ವರ್ಧೆ
ಕುಂದಾಪುರ (ಡಿ. 03): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ “ಹೆಜ್ಜೆ -ಗೆಜ್ಜೆ” -ಮೊಗವೀರ ಸಾಂಸ್ಕೃತಿಕ ಸಿಂಚನವು ಡಿಸೆಂಬರ್ 07 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿದೆ. ನಾಡೋಜ ಡಾ. ಜಿ ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೊಗವೀರ ಯುವ […]
ಕೋಟ ಸುಜಯೀಂದ್ರ ಹಂದೆಯವರಿಗೆ ಯಕ್ಷಗಾನ ಅಕಾಡೆಮಿ ಪುರಸ್ಕಾರ
ಮಂಗಳೂರು ( ನ .22): 2023 ರ ಸಾಲಿನ ಯಕ್ಷಗಾನ ಅಕಾಡೆಮಿ ಕೊಡಮಾಡುವ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಉಪನ್ಯಾಸಕ, ಲೇಖಕ, ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಕೋಟದ ಎಚ್. ಸುಜಯೀಂದ್ರ ಹಂದೆಯವರಿಗೆ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಹಂದೆಯವರ ‘ಯಕ್ಷ ದೀವಟಿಕೆ’ ಕೃತಿ ಬಹುಮಾನಕ್ಕೆ ಆಯ್ಕೆಯಾಗಿತ್ತು. ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ […]
ಹೆಜ್ಜೆ ಗೆಜ್ಜೆ -ಮೊಗವೀರ ಸಾಂಸ್ಕೃತಿಕ ಸಿಂಚನ -2024: ಪೋಸ್ಟರ್ ಬಿಡುಗಡೆ
ಹೆಮ್ಮಾಡಿ ( ನ,07): ಮೊಗವೀರ ಯುವ ಸಂಘಟನೆ(ರಿ.), ಉಡುಪಿ ಜಿಲ್ಲೆಯ ಹಿರಿತನದಲ್ಲಿ, ಜಿ ಶಂಕರ್ ಪ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ ಉಡುಪಿ ಇವರ ಸಹಯೋಗದಲ್ಲಿ, ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ಆತಿಥ್ಯದಲ್ಲಿ ಡಿಸೆಂಬರ್ ,07 ರಂದು ಕುಂದಾಪುರ ಮೊಗವೀರದ ಭವನದಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಅಂತರ್ ಘಟಕ ಗಳ ಸಂಸ್ಕೃತಿಕ ಕಾರ್ಯಕ್ರಮ “ಹೆಜ್ಜೆ ಗೆಜ್ಜೆ “ಮೊಗವೀರ ಸಾಂಸ್ಕೃತಿಕ ಸಿಂಚನ -2024 ಇದರ […]
ಹೆಮ್ಮಾಡಿ :ಜನತಾ ಪಿ ಯು ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಹೆಮ್ಮಾಡಿ( ನ .04):ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರರವರು ಅಧ್ಯಕ್ಷತೆ ವಹಿಸಿ ಕನ್ನಡದ ಮನಸ್ಸುಗಳೆಲ್ಲವೂ ಒಂದಾಗಿ ಕನ್ನಡದ ಹಿರಿಮೆಯನ್ನು ಜಗದಗಲ ಪಸರಿಸಬೇಕೆಂದರು.ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಉದಯ ನಾಯ್ಕರವರು ನಾಡು-ನುಡಿ-ಸಂಸ್ಕ್ರತಿಯ ಅನಾವರಣದ ಕುರಿತಾಗಿ ಮಾತನಾಡಿ […]
ರಾಜ್ಯ ಮಟ್ಟದ ಅಬಾಕಸ್ ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ನ .04): ಕಳೆದ ವರ್ಷ ಹಾಸನದಲ್ಲಿ ಜರುಗಿದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ‘ಚಾಂಪಿಯನ್ ಆಫ್ ಚಾಂಪಿಯನ್’ ಹಾಗೂ ಮಹಾಬಲಿಪುರಂನಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ‘‘Gold prize winner in World City Cup-2023’ ’ ಬಹುಮಾನ ಪಡೆದ ಲಕ್ಷ್ ರಾಜೇಶ್ ಆಕ್ಟೋಬರ್ 27 ರಂದು ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ […]
ಶ್ರೀ ಉದಯಕುಮಾರ್ ಹಟ್ಟಿಯಂಗಡಿಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ(ಆ, 31): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಅಧಿಕೃತ ಪಟ್ಟಿಯನ್ನು ಉಡುಪಿ ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು ಸಮಾಜ ಸೇವಾ ವಿಭಾಗದಲ್ಲಿ ಶ್ರೀ ಉದಯಕುಮಾರ್ ಹಟ್ಟಿಯಂಗಡಿಯವರು ಆಯ್ಕೆಯಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ನಿ), ಇದರ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಘದ ಸ್ಥಾಪನೆಯಿಂದ ಹಿಡಿದು ಸಂಘಕ್ಕೆ ಎನ್ ಸಿ ಡಿ ಸಿ ಪ್ರಶಸ್ತಿ, ಜಿಲ್ಲಾ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಘ […]
ರಕ್ತದಾನಿಗಳು ವೈದ್ಯರು ಹಾಗೂ ರೋಗಿಗಳ ನಡುವಿನ ಸೇತುವೆ: ಡಾ. ಜಿ .ಎಸ್ ಚಂದ್ರಶೇಖರ್
ಉಡುಪಿ ( ಆ,30): ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಉಡುಪಿ ಗ್ರೂಪ್ಸ್ ಆಫ್ ಇನ್ಸ್ ಟ್ಯೂಷನ್ ಮಣಿಪಾಲ, ಮಾಹೆ ಎನ್ ಎಸ್ ಎಸ್ ಯೂನಿಟ್ 1&2 ಎಂಐಟಿ ಮಣಿಪಾಲ, ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಅಕ್ಟೋಬರ್ 27 ರಂದು ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆದರ್ಶ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ […]
ಬಾಳಿಕೆರೆ : ಅಶಕ್ತ ಕುಟುಂಬಕ್ಕೆ ಸಹಾಯ ಧನ ಹಸ್ತಾಂತರ
ಹೆಮ್ಮಾಡಿ(ಆ,21): ದಿವಂಗತ ಶೀನ ಮೊಗವೀರ ಬಾಳಿಕೆರೆ ಅರ್ಸುಮಕ್ಕಿ ಇವರ ಕುಟುಂಬಕ್ಕೆ ಇಂದು ದಾನಿಗಳ ನೆರವಿನಿಂದ ಸಂಗ್ರಹವಾದ ಹಣವನ್ನು ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಬಿ ಕಾಂಚನ ರವರ ನೇತ್ರತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಾಳಿಕೆರೆ ಮೊಗವೀರ ಗ್ರಾಮ ಸಭಾ ಕುಡಿಗೆಯ ಅಧ್ಯಕ್ಷರಾದ ಸುಧಾಕರ್ ಕಾಂಚನ್ , ಕೂಡಿಗೆಯ ಗೌರವ ಸಲಹೆಗಾರರಾದ ಗಣೇಶ ಟಿ. ಕಾಂಚನ್ , ಹೆಮ್ಮಾಡಿ ಘಟಕ ಮಾಜಿ ಅಧ್ಯಕ್ಷರಾದ ಲೋಹಿತಾಶ್ವ ಆರ್ […]
ಬಗ್ವಾಡಿ: ಸುಧಾ ಮೊಗವೀರರಿಗೆ ಸನ್ಮಾನ
ಬಗ್ವಾಡಿ( ಆ,21): ಶ್ರೀ ಕ್ಷೇತ್ರ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಸುಧಾ ಮೊಗವೀರರವರು ಶ್ರೀ ಕ್ಷೇತ್ರ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಜನ ಸೇವಾ ಸಂ(ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ ಮಾತನಾಡಿ ಈ ಹಿಂದಿನ ಕೊಲ್ಲೂರು ದೇವಳದ ಆಡಳಿತ ಮಂಡಳಿಯ ವ್ಯೆವಸ್ಥಾಪನ […]