ಕುಂದಾಪುರ (ನ,30): ಗುಣಮಟ್ಟದ ಆಹಾರ ಮತ್ತು ಆತಿಥ್ಯದಲ್ಲಿ ದೇಶದಾದ್ಯಂತ ಹೆಸರುವಾಸಿಯಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಯವರ ಸಾರಥ್ಯದ ಚೆಫ್ ಟಾಕ್ ಪ್ರೈವೇಟ್ ಲಿಮಿಟೆಡ್ ನ ಕೋಲಾರ ಶಾಖೆ ಇತ್ತೀಚೆಗೆ ಉದ್ಘಾಟನೆಗೊಂಡಿತು. ಕೋಲಾರದ ನರಸಾಪುರದಲ್ಲಿನ ಶಾಖೆಯ ಉದ್ಘಾಟನೆಯಲ್ಲಿ ಮಾಜಿ ಶಾಸಕರಾದ ಶ್ರೀ ವರ್ತೂರ್ ಪ್ರಕಾಶ್ ,ಹಾಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಗೋವಿಂದರಾಜು ಹಾಗೂ ಶ್ರೀ ಜೈನ ಯಕ್ಷೇಶ್ವರಿ ಮತ್ತು ಶ್ರೀ ಶನೇಶ್ವರ ಪಾತ್ರಿಗಳಾದ ವಿಜಯ್ ಪೂಜಾರಿ ಉಪ್ಪುಂದ ರವರು ಉಪಸ್ಥಿತರಿದ್ದು […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ನೈಕಂಬ್ಳಿ: ಸಂಭ್ರಮದ ಕಾರ್ತಿಕ ದೀಪೋತ್ಸವ
ಮಾರಣಕಟ್ಟೆ (ನ,30): ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿಯಲ್ಲಿ ಸಂಭ್ರಮದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನ,29ರಂದು ಜರುಗಿತು. ದೀಪೋತ್ಸವ ಪ್ರಯುಕ್ತ ರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನೆ , ಮಹಾ ಮಂಗಳಾರತಿ ಹಾಗೂ ಅನ್ನಪ್ರಸಾದ ಸೇವೆ ನೆರವೇರಿತು. ಜೀರ್ಣೋದ್ಧಾರ ಸಮಿತಿ ಪ್ರಮುಖರು, ಪ್ರೇರಣಾ ಯುವ ವೇದಿಕೆ ಸದಸ್ಯರು, ಊರ ಗಣ್ಯರು ಉಪಸ್ಥಿತರಿದ್ದರು.
ಈಶ್ವರ್ ಮಲ್ಪೆಯವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ
ಉಡುಪಿ (ನ,28); ಉಡುಪಿಯ ಪ್ರತಿಷ್ಠಿತ ಸಂಸ್ಥೆಯಾದ ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯಿಂದ ಪ್ರತಿವರ್ಷ ಮಹಾಸಭೆಯ ದಿನ ಸಮಾಜ ಸೇವಕರನ್ನು ಗುರುತಿಸಿ ಅರ್ಹ ವ್ಯಕ್ತಿಗಳಿಗೆ ನೀಡುವ ಸೇವಾ ರತ್ನ ಪ್ರಶಸ್ತಿಯನ್ನು ಈ ವರುಷ ಮುಳುಗು ತಜ್ಞ ,ಜೀವರಕ್ಷಕ ,ಆಪದ್ಬಾಂಧವ ಈಶ್ವರ್ ಮಲ್ಪೆ ಬಲರಾಮನಗರ ಇವರಿಗೆ 2021 ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ . ಈಶ್ವರ್ ಮಲ್ಪೆಯವರು ಹಗಲು ರಾತ್ರಿ ಯನ್ನದೇ 24 ಗಂಟೆ ಜನಸೇವೆಯಲ್ಲಿದ್ದು, ಇಲ್ಲಿಯತನಕ […]
ಮುಳ್ಳಿಕಟ್ಟೆ: ಎಚ್. ಎಸ್. ಫ್ಯೂಯಲ್ಸ್ ಶುಭಾರಂಭ
ಮುಳ್ಳಿಕಟ್ಟೆ(ನ,28): ಮುಳ್ಳಿಕಟ್ಟೆ ಹೊಸಾಡುವಿನ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಇಂಡಿಯನ್ ಆಯಲ್ ಕಾರ್ಪೋರೇಶನ್ ನ ಎಚ್. ಎಸ್. ಫ್ಯೂಯಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿತು. ಬೈಂದೂರು ಶಾಸಕ ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಬ್ಲಾಡಿ ಮಂಜಯ್ಯ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ ,ಡಾ|ಅತುಲ್ ಕುಮಾರ್ ಶೆಟ್ಟಿ, ಫೆಲಿಕ್ಸ್ ಕ್ರಾಸ್ಟಾ ,ಪ್ರಸನ್ನ ಶೆಟ್ಟಿ ,ವರುಣ್ ಉಪ್ಪಿನಲ್ ,ಬಿ […]
ನ,27 ರಂದು ಗಂಗೊಳ್ಳಿಯಲ್ಲಿ ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣಿ ಅಭಿಯಾನ
ಗಂಗೊಳ್ಳಿ (ನ,26): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಮತ್ತು ಮಣಿಪಾಲ್ ಸಿಗ್ನಾ ಆರೋಗ್ಯ ವಿಮಾ ಕಂಪನಿಯ ಸಹಯೋಗದೊಂದಿಗೆ ಮಾಹೆ ಮಣಿಪಾಲ ಇವರ ಸಹಕಾರದೊಂದಿಗೆ ಯಾವುದೇ ಜಾತಿ, ಮತ,ಧರ್ಮ ಬೇಧಭಾವವಿಲ್ಲದೇ ಸಮಾಜದ ಎಲ್ಲಾ ವರ್ಗದವರಿಗೆ ಲಭ್ಯವಿರುವ ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡುಗಳ ನೋಂದಾವಣಿ ನ,15 ರಿಂದ ಪ್ರಾರಂಭಗೊಂಡಿದ್ದು ಪ್ರಯುಕ್ತ ನ,27ರಂದು ಶನಿವಾರ ಮಧ್ಯಾಹ್ನ ಸಮಯ 2 ರಿಂದ 5 ಗಂಟೆಯ ತನಕ ಗಂಗೊಳ್ಳಿ ಗ್ರಾಮ ಪಂಚಾಯತ್ ಎದುರುಗಡೆ ಇರುವ ಮಂಜುನಾಥ […]
ಗಂಗೊಳ್ಳಿಯ ಶ್ಯಾಮ್ ಗೆ ಕರಾಟೆಯಲ್ಲಿ ಬೆಳ್ಳಿ ಪದಕ
ಗಂಗೊಳ್ಳಿ (ನ, 17) : ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಫೈಟ್ ವಿದ್ ಗೋಲ್ಡನ್ ಬ್ರೌನ್ ವಿಭಾಗದಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾನೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯಲ್ಲಿ ಓದುತ್ತಿರುವ […]
ಕoಬದಕೋಣೆ: ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಆರ್. ಕೆ. ಸಂಜೀವರಾಯರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಕoಬದಕೋಣೆ(ನ,16);“ಸ್ವರಾಜ್ಯ ೭೫” ರವರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಅಭಿಯಾನದ ಪ್ರಯುಕ್ತ ಕoಬದಕೋಣೆಯ ದಿವಂಗತ ಆರ್. ಕೆ. ಸಂಜೀವರಾಯರ ಮನೆಯಲ್ಲಿ ನ,13 ರ ಶನಿವಾರದಂದು ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶ್ರೀ ಜನಾರ್ಧನ್ ಮರವಂತೆ ಯವರು ನಾಮಫಲಕವನ್ನು ಅನಾವರಣ ಮಾಡಿದರು. ನಂತರ ಸರ್ವರು ದಿವಂಗತ ಸಂಜೀವರಾಯ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿದರು. ಶ್ರೀ.ಬಿ ಪಿ ಶಿವಾನಂದ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.”ಸ್ವರಾಜ್ಯ75″ ರ ಸಂಚಾಲಕರಾದ ಪ್ರದೀಪ್ ಕುಮಾರ್, ಬಸ್ರೂರು […]
ಜಿಲ್ಲಾಮಟ್ಟದ ಸಾಂಸ್ಕೃತಿಕ ಉತ್ಸವ ಕಲಾ ಸಂಗಮ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ರೋಟರಾಕ್ಟ್ ಕ್ಲಬ್ ಚಾಂಪಿಯನ್
ಬ್ರಹ್ಮಾವರ(ನ ,17):ರೋಟರಿ ಕ್ಲಬ್ ಬ್ರಹ್ಮಾವರದ ಆಶ್ರಯದಲ್ಲಿ ಅಲ್ಲಿನ ರೋಟರಾಕ್ಟ್ ಕ್ಲಬ್ ಸಹಯೋಗದೊಂದಿಗೆ ಬ್ರಹ್ಮಾವರದ ರೋಟರಿ ಹಾಲ್ ನಲ್ಲಿ ಕಳೆದ ಶನಿವಾರ ರೋಟರಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸಾಂಸ್ಕೃತಿಕ ಉತ್ಸವ ಕಲಾ ಸಂಗಮದಲ್ಲಿ ಅತ್ಯುತ್ತಮವಾದ ನಿರ್ವಹಣೆಯನ್ನು ನೀಡುವ ಮೂಲಕ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಾಕ್ಟ್ ಕ್ಲಬ್ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಎಂಟು ತಂಡಗಳು ಭಾಗವಹಿಸಿದ್ದ ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾಲಯದ ರೋಟರಾಕ್ಟ್ ವಿದ್ಯಾರ್ಥಿಗಳು ನಿರೂಪಣೆಯಲ್ಲಿ ಪ್ರಥಮ […]
ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಉದ್ಯಮಿ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸನ್ಮಾನ
ಕುಂದಾಪುರ (ನ,15) : ದುಬೈ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹೆಸರಾಂತ ಹೋಟೆಲ್ ಉದ್ಯಮಿ ಹಾಗೂ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರನ್ನುಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ ನಾಗೇಶ್ ರವರು ಸನ್ಮಾನಿಸಿದರು. ಈ ಸಂದರ್ಭ ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಅಧ್ಯಕ್ಷರಾದ ಸಾಧನ್ದಾಸ್, ಉಪಾಧ್ಯಕ್ಷರಾದ ದಿನೇಶ್ ದೇವಾಡಿಗ ನಾಗೂರು,ಕೃಷ್ಣಪ್ರಸಾದ್ ಅಡ್ಯಂತಾಯ ಮೊದಲಾದವರು ಉಪಸ್ಥಿತರಿದ್ದರು.
ನ,15 ರಿಂದ ಜಿ. ಶಂಕರ್ ಆರೋಗ್ಯಸುರಕ್ಷಾ ಕಾರ್ಡ್ಗಳ ನವೀಕರಣ ಪ್ರಾರಂಭ
ಕುಂದಾಪುರ (ನ,12): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಪ್ರವರ್ತಕರಾದ ನಾಡೋಜಾ ಡಾ. ಜಿ. ಶಂಕರ್ ರವರು ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಬಡವರ ಅರೋಗ್ಯ ಸ್ವಾಸ್ಥ್ಯಕ್ಕಾಗಿ ಮಣಿಪಾಲ ಸಿಗ್ನಾ ಹೆಲ್ತ್ ಇನ್ಸೂರೆನ್ಸ್ ಕಂಪೆನಿ ಸಹಯೋಗದೊಂದಿಗೆ ಮಾಹೆ ಮಣಿಪಾಲದ ಸಹಕಾರದಿಂದ ಹಮ್ಮಿಕೊಂಡ ಜಿ. ಶಂಕರ್ ಆರೋಗ್ಯ ವಿಮಾ ಯೋಜನೆ ನವೀಕರಣ ಮತ್ತು ಹೊಸ ಕಾರ್ಡುಗಳ ನೋಂದಾವಣಿ ಅಭಿಯಾನ ಇದೇ ನವೆಂಬರ್ ,15 ರಿಂದ 30 ರ ತನಕ ನಡೆಯಲಿದೆ. 2021ರಲ್ಲಿ ಒಟ್ಟು 52,505 […]