ಬೈಂದೂರು(ಸೆ,25): ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀ ರವಿರಾಜ ಚಂದನ ಕಳವಾಡಿ ಯವರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಕಳವಾಡಿ- ಮಯ್ಯಾಡಿ ಇದರ 28ನೇ ವರ್ಷದ ಅಧ್ಯಕ್ಷ ರಾಗಿ ಪುನರಾಯ್ಕೆಯಾಗಿದ್ದಾರೆ. ಹಾಗೆಯೇ ಕಾರ್ಯಾದರ್ಶಿಯಾಗಿ ಶ್ರೀ ರಾಜು ಪೂಜಾರಿ ಕಳವಾಡಿ ಪುನರಾಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿಯ ಚಿತ್ರ ರಚಿಸುವ ಸ್ಪರ್ಧೆ
ಕೋಟೇಶ್ವರ (ಸೆ,24): ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಮತ್ತು ಜ್ಞಾನವಾಹಿನಿ ಯುಟ್ಯೂಬ್ ಚಾನೆಲ್ ರವರ ಸಹಭಾಗಿತ್ವದಲ್ಲಿ ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂಗವಾಗಿ “ನಮ್ಮ ಬಾಪೂಜೀ” ಶೀರ್ಷಿಕೆ ಅಡಿಯಲ್ಲಿ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿ ಚಿತ್ರ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗ(ಎಲ್.ಕೆ.ಜಿ ಯಿಂದ 7ನೇ ತರಗತಿವರೆಗೆ), ಪ್ರೌಢ ವಿಭಾಗ (8ನೇ ತರಗತಿಯಿಂದ 10ನೇ ತರಗತಿ) ಹಾಗೂ ಪದವಿಪೂರ್ವ ವಿಭಾಗ ( ಪ್ರಥಮ ಪಿಯುಸಿ ಮತ್ತು […]
ರಕ್ತದಾನ ಶಿಬಿರದ ಕ್ರಾಂತಿ ಪುರುಷ ನಾಡೋಜ ಡಾ. ಜಿ. ಶಂಕರ್ ರವರ ಹುಟ್ಟುಹಬ್ಬದ ಪ್ರಯುಕ್ತ – ಅಕ್ಟೋಬರ್,05 ರಂದು ಬೃಹತ್ ರಕ್ತದಾನ ಶಿಬಿರ
ಉಡುಪಿ(ಸೆ.23): ಕರ್ನಾಟಕ ರಾಜ್ಯದ ಉದ್ದಗಲಕ್ಕೂ ನಾಡೋಜ ಡಾ.ಜಿ.ಶಂಕರ್ ರವರ ಹೆಸರು ಚಿರಪರಿಚಿತ. ಬೃಹತ್ ರಕ್ತದಾನ ಶಿಬಿರ, ಶಿಕ್ಷಣ, ಆರೋಗ್ಯ ಸುರಕ್ಷಾ, ಅಶಕ್ತ ಕಲಾವಿದರಿಗೆ ನೆರವು, ಬಡ ಹಾಗೂ ದುರ್ಬಲ ವರ್ಗದವರಿಗೆ ಆರ್ಥಿಕ ನೆರವು ಹೀಗೆ ಬಹುಬಗೆಯ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡು ಹಲವು ಜನತೆಯ ಬದುಕಿಗೆ ಬೆಳಕಾದವರು ನಾಡೋಜ ಡಾ.ಜಿ.ಶಂಕರ್. ನಮ್ಮ ಕರಾವಳಿ ಭಾಗದಲ್ಲಿ ರಕ್ತದಾನ ಶಿಬಿರದ ಕ್ರಾಂತಿಯನ್ನು ಕೈಗೊಂಡು “ಕ್ರಾಂತಿ ಪುರುಷ” ಎಂದು ಗುರುತಿಸಲ್ಪಡುವ ನಾಡೋಜ ಡಾ. ಜಿ. […]
ಅನಾರೋಗ್ಯ ಪೀಡಿತ ರಾಜೇಶ್ ಮೊಗವೀರ ರವರಿಗೆ ವೀಲ್ ಚೇರ್ ಹಸ್ತಾಂತರಿಸಿದ ಶ್ರೀ ಗೋವಿಂದ ಬಾಬು ಪೂಜಾರಿ
ನಾವುಂದ (ಸೆ,22): ಕಿಡ್ನಿ ವೈಫಲ್ಯದಿಂದ ದೇಹದ ಬಲ ಕಳೆದುಕೊಂಡಿರುವ ಅರೆಹೊಳೆಯ ಚೌದಿ ಮನೆ ರಾಜೇಶ್ ಮೊಗವೀರ ರವರ ಮನೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರು ಭೇಟಿ ಮಾಡಿ ವೀಲ್ ಚೇರ್ ಹಸ್ತಾಂತರಿಸಿ ಧನ ಸಹಾಯ ಮಾಡಿದರು. ಉದ್ಯಮಿ ಶ್ರೀ ಗೋವಿಂದ ಬಾಬು ಪೂಜಾರಿಯವರು ತಮ್ಮ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮೂಲಕ ಹಲವಾರು ನೊಂದ ಹಾಗೂ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿರುತ್ತಾರೆ.
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ :ಪದಪ್ರದಾನ ಸಮಾರಂಭ
ಕೋಟೇಶ್ವರ(ಸೆ,21): ರಾಜ್ಯ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಮತ್ತು ಮಹಿಳಾ ಸಂಘಟನೆ ಇದರ ಹದಿನಾರನೇ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದ ಇತ್ತೀಚೆಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷರಾದ ರವೀಶ್ ಎಸ್. ಕೊರವಡಿಯವರು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೊಗವೀರ ಸಂಘಟನೆ (ರಿ) ಉಡುಪಿ ಇದರ ಜಿಲ್ಲಾಧ್ಯಕ್ಷರಾದ ಶಿವರಾಮ ಕೆ.ಎಂ ರವರು ಮುಂದಿನ ಎರಡು ವರ್ಷಗಳ ಸಾಲಿಗೆ ಆಯ್ಕೆಯಾದ […]
ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ : ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ
ಗಂಗೊಳ್ಳಿ (ಸೆ,16): ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ವತಿಯಿಂದ ಎಸ್ ಎಂ ಗೋಪಾಲಕೃಷ್ಣ ಬೆಳ್ಳಾರೆ ಮತ್ತು ಪೈ ಟೆಕ್ಸ್ ಟೈಲ್ಸ್ ಮತ್ತು ಪೈ ಗಾರ್ಮೆಂಟ್ಸ್ ಗಂಗೊಳ್ಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ “ನನ್ನ ಪ್ರೇರಣೆಯ ಶ್ರೀಕೃಷ್ಣ ” ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಹಾಲಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಿವಾನಿ ಬಿ ಶೆಟ್ಟಿ ಮತ್ತು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ […]
ಹಾಲಾಡಿ: ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ
ಹಾಲಾಡಿ(ಸೆ,16): ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಳಗಾವಿ, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ-ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸಪ್ಟೆಂಬರ್, 15 ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಮಂಜುನಾಥ ಹೆಬ್ಬಾರ್ ರವರು ಮಾತನಾಡಿ ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ […]
ಕುಂದಾಪುರ: ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
ಕುಂದಾಪುರ(ಸೆ,15): ಇಲ್ಲಿನ ಕಲಾಮಂದಿರದಲ್ಲಿ ರೋಟರಿ ಕುಂದಾಪುರ, ತಾಲೂಕು ಆರೋಗ್ಯ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕಿನ ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಯಿತು. ತಾಲೂಕಿನ ಬೇರೆ ಬೇರೆ ಗ್ರಾಮಗಳಿಂದ ಆಗಮಿಸಿದ ಸುಮಾರು 500 ಮಕ್ಕಳಿಗೆ ಚಿಕಿತ್ಸೆಯನ್ನು ನೀಡಲಾಯಿತು. ಸಮಾರಂಭವನ್ನು ಸಹಾಯಕ ಆಯುಕ್ತರಾದ ಶ್ರೀ ರಾಜು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ರಾಜೇಶ್ವರಿ, ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ.ರಾಬರ್ಟ್, […]
ಆಪತ್ಭಾಂಧವ ಈಶ್ವರ್ ಮಲ್ಪೆ ಕುಟುಂಬಕ್ಕೆ ಸಹ್ರದಯಿ ಯುವಕರಿಂದ ಸಹಾಯ ಧನ ಹಸ್ತಾಂತರ
ಮಲ್ಪೆ (ಸೆ,12): ತನ್ನ ಕೌಟುಂಬಿಕ ಸವಾಲುಗಳ ನಡುವೆಯೂ ಇನ್ನೊಬ್ಬರ ಸಹಾಯಕ್ಕೆ ಸದಾ ಸಿದ್ದರಾಗುವ, ಜೊತೆಗೆ ಅದೆಷ್ಟೋ ಜನರಿಗೆ ಆಪತ್ ಕಾಲದಲ್ಲಿ ಸಹಾಯಹಸ್ತ ಚಾಚಿರುವ ಈಶ್ವರ ಮಲ್ಪೆಯವರ ಕೌಟುಂಬಿಕ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಉಡುಪಿಯ ಸಹೃದಯಿ ಯುವಕರಾದ ಸ್ಯಾನ್ಫೋರ್ಡ್ ಡಿ’ಸೋಜಾ,ಸತ್ಯ ಆಚಾರ್ಯ,ನವೀನ್ ಸಾಲಿಯಾನ್,ಮಿಥುನ್ ಪೂಜಾರಿಯವರ ತಂಡ ಈಶ್ವರ್ ಮಲ್ಪೆ ಯವರ ಮನೆಗೆ ಭೇಟಿ ನೀಡಿ ಇವರ 2 ವಿಕಲ ಚೇತನ ಮಕ್ಕಳ ಚಿಕಿತ್ಸೆಗಾಗಿ 25000 ರೂ, ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಯುವಕರ ತಂಡದ ಸಹಾಯಕ್ಕೆ […]
ಮಾರಣಕಟ್ಟೆ: ಶ್ರೀ ಬ್ರಹ್ಮಲಿಂಗೇಶ್ವರ ಯಕ್ಷಗಾನ ಕಲಾವಿದರ ಕಾರ್ಮಿಕರ ಹಿತರಕ್ಷಣಾ ಯಕ್ಷಕಲಾ ಟ್ರಸ್ಟ್ ಉದ್ಘಾಟನೆ
ವಂಡ್ಸೆ(ಸೆ,11): ಕರಾವಳಿಯ ಸಾಂಸ್ಕೃತಿಕ ವೈಭವ ಸಾರುವ ಯಕ್ಷಗಾನ ಇಂದು ಜಗತ್ ಪ್ರಸಿದ್ದ ವಾಗಿದ್ದು , ಯಕ್ಷಗಾನ ಕಲಾವಿದರು ಸಂಘಟಿತರಾಗಿ ಹೊಸ ಟ್ರಸ್ಟ್ ಹುಟ್ಟುಹಾಕಿದ್ದು, ಕಲಾವಿದರು ಜೊತೆಗೆ ಕಾರ್ಮಿಕರನ್ನೂ ಸೇರಿಸಿಕೊಂಡಿರುವುದು ಧನಾತ್ಮಕ ಬೆಳವಣಿಗೆ. ಈ ಟ್ರಸ್ಟ್ ಸಮಾಜದೊಂದಿಗೆ ಸೇರಿ ಸೌಹಾರ್ದತೆಗೆ ದಾರಿಯಾಗಬೇಕು ಹಾಗೂ ಕಲಾವಿದರಿಗೆ, ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡುವ ಜೊತೆಗೆ ಅವರ ಕಷ್ಟಸುಖಗಳಲ್ಲಿ ಭಾಗಿಯಾಗಬೇಕು ಎಂದು ಹೋಟೆಲ್ ಉದ್ಯಮಿ, ಸಹ್ರದಯಿ ಕೃಷ್ಣಮೂರ್ತಿ ಮಂಜ ಹೇಳಿದರು. ಅವರು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಕಲ್ಯಾಣ […]










