ಹೆಮ್ಮಾಡಿ( ನ .04):ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರರವರು ಅಧ್ಯಕ್ಷತೆ ವಹಿಸಿ ಕನ್ನಡದ ಮನಸ್ಸುಗಳೆಲ್ಲವೂ ಒಂದಾಗಿ ಕನ್ನಡದ ಹಿರಿಮೆಯನ್ನು ಜಗದಗಲ ಪಸರಿಸಬೇಕೆಂದರು.ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಉದಯ ನಾಯ್ಕರವರು ನಾಡು-ನುಡಿ-ಸಂಸ್ಕ್ರತಿಯ ಅನಾವರಣದ ಕುರಿತಾಗಿ ಮಾತನಾಡಿ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ರಾಜ್ಯ ಮಟ್ಟದ ಅಬಾಕಸ್ ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ನ .04): ಕಳೆದ ವರ್ಷ ಹಾಸನದಲ್ಲಿ ಜರುಗಿದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ‘ಚಾಂಪಿಯನ್ ಆಫ್ ಚಾಂಪಿಯನ್’ ಹಾಗೂ ಮಹಾಬಲಿಪುರಂನಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ‘‘Gold prize winner in World City Cup-2023’ ’ ಬಹುಮಾನ ಪಡೆದ ಲಕ್ಷ್ ರಾಜೇಶ್ ಆಕ್ಟೋಬರ್ 27 ರಂದು ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ […]
ಶ್ರೀ ಉದಯಕುಮಾರ್ ಹಟ್ಟಿಯಂಗಡಿಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ(ಆ, 31): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಅಧಿಕೃತ ಪಟ್ಟಿಯನ್ನು ಉಡುಪಿ ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು ಸಮಾಜ ಸೇವಾ ವಿಭಾಗದಲ್ಲಿ ಶ್ರೀ ಉದಯಕುಮಾರ್ ಹಟ್ಟಿಯಂಗಡಿಯವರು ಆಯ್ಕೆಯಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ (ನಿ), ಇದರ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಂಘದ ಸ್ಥಾಪನೆಯಿಂದ ಹಿಡಿದು ಸಂಘಕ್ಕೆ ಎನ್ ಸಿ ಡಿ ಸಿ ಪ್ರಶಸ್ತಿ, ಜಿಲ್ಲಾ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಘ […]
ರಕ್ತದಾನಿಗಳು ವೈದ್ಯರು ಹಾಗೂ ರೋಗಿಗಳ ನಡುವಿನ ಸೇತುವೆ: ಡಾ. ಜಿ .ಎಸ್ ಚಂದ್ರಶೇಖರ್
ಉಡುಪಿ ( ಆ,30): ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಉಡುಪಿ ಗ್ರೂಪ್ಸ್ ಆಫ್ ಇನ್ಸ್ ಟ್ಯೂಷನ್ ಮಣಿಪಾಲ, ಮಾಹೆ ಎನ್ ಎಸ್ ಎಸ್ ಯೂನಿಟ್ 1&2 ಎಂಐಟಿ ಮಣಿಪಾಲ, ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಅಕ್ಟೋಬರ್ 27 ರಂದು ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆದರ್ಶ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ […]
ಬಾಳಿಕೆರೆ : ಅಶಕ್ತ ಕುಟುಂಬಕ್ಕೆ ಸಹಾಯ ಧನ ಹಸ್ತಾಂತರ
ಹೆಮ್ಮಾಡಿ(ಆ,21): ದಿವಂಗತ ಶೀನ ಮೊಗವೀರ ಬಾಳಿಕೆರೆ ಅರ್ಸುಮಕ್ಕಿ ಇವರ ಕುಟುಂಬಕ್ಕೆ ಇಂದು ದಾನಿಗಳ ನೆರವಿನಿಂದ ಸಂಗ್ರಹವಾದ ಹಣವನ್ನು ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಬಿ ಕಾಂಚನ ರವರ ನೇತ್ರತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬಾಳಿಕೆರೆ ಮೊಗವೀರ ಗ್ರಾಮ ಸಭಾ ಕುಡಿಗೆಯ ಅಧ್ಯಕ್ಷರಾದ ಸುಧಾಕರ್ ಕಾಂಚನ್ , ಕೂಡಿಗೆಯ ಗೌರವ ಸಲಹೆಗಾರರಾದ ಗಣೇಶ ಟಿ. ಕಾಂಚನ್ , ಹೆಮ್ಮಾಡಿ ಘಟಕ ಮಾಜಿ ಅಧ್ಯಕ್ಷರಾದ ಲೋಹಿತಾಶ್ವ ಆರ್ […]
ಬಗ್ವಾಡಿ: ಸುಧಾ ಮೊಗವೀರರಿಗೆ ಸನ್ಮಾನ
ಬಗ್ವಾಡಿ( ಆ,21): ಶ್ರೀ ಕ್ಷೇತ್ರ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಸುಧಾ ಮೊಗವೀರರವರು ಶ್ರೀ ಕ್ಷೇತ್ರ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಜನ ಸೇವಾ ಸಂ(ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ ಮಾತನಾಡಿ ಈ ಹಿಂದಿನ ಕೊಲ್ಲೂರು ದೇವಳದ ಆಡಳಿತ ಮಂಡಳಿಯ ವ್ಯೆವಸ್ಥಾಪನ […]
ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಪಂದ್ಯಾವಳಿ: ಮಾಸ್ಟರ್ ಶ್ರೀಶ ಗುಡ್ರಿ ಹಾಗೂ ಸಂಭ್ರಮ್ ಎಸ್ ಗುಡ್ರಿ ಉತ್ತಮ ಸಾಧನೆ
ಕುಂದಾಪುರ (ಅ,13): ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (R) ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 11 ರಿಂದ 12 ತನಕ ಬೆಂಗಳೂರಿನ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ, ಡಾ.ಪುನೀತ್ ರಾಜ್ಕುಮಾರ್ ಮೈದಾನ, ವೆಂಕಟೇಶ್ವರಪ್ಪ ಲೇಔಟ್ ಇಲ್ಲಿ ನಡೆದ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗುರುತಿಸಲ್ಪಟ್ಟ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿಯಿಂದ ಆಯೋಜಿಸಲಾದ 7 ನೇ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ […]
ಭಾಮಾ ಅಸೋಸಿಯೇಟ್ಸ್ ಸಂಸ್ಥೆಯ ವೈಬ್ ಸೈಟ್ ಅನಾವರಣ
ಕುಂದಾಪುರ( ಆ,13): ಭಾಮಾ ಅಸೋಸಿಯೇಟ್ಸ್ ಸಂಸ್ಥೆಯ ವೈಬ್ ಸೈಟ್ ಅನಾವರಣ ಕಾರ್ಯಕ್ರಮ ಕುಂದಾಪುರದ ಸಾಯಿ ಸೆಂಟರ್ ಬಿಲ್ಡಿಂಗ್ ನಲ್ಲಿ ಅಕ್ಟೋಬರ್, 11 ರಂದು ಅನಾವರಣಗೊಂಡಿತು. ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಆಡಳಿತ ಮೊಕ್ತೇಸರರು ಹಾಗೂ ಮಾಜಿ ಶಾಸಕರಾದ ಶ್ರೀ ಬಿ.ಅಪ್ಪಣ್ಣ ಹೆಗ್ಡೆ ವಹಿಸಿದ್ದರು. ಉಡುಪಿ ಜಿಲ್ಲೆಯ ಪರಿಸರ ಇದೊಂದು ವಿನೂತನ ಪ್ರಯೋಗ ಈಗಿನ ಕಾಲಕ್ಕೆ ತಕ್ಕಂತೆ ಹೊಸ ಆಲೋಚನೆಗಳ ಮೂಲಕ ಭಾಮಾ […]
ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕನಿಗೆ ಸನ್ಮಾನ
ಕುಂದಾಪುರ(ಅ,10 ): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ 2024 ನೇ ಸಾಲಿನ ತೆಲಂಗಾಣ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನೆಡೆಸಿದ 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 10 ಕ್ಕೆ 10 ಸಿಜಿಪಿಎ ಗಳಿಸುವ ಮೂಲಕ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ತಾಲೂಕಿನ ತೆಕ್ಕೆಟ್ಟೆಯ ಮಲ್ಯಾಡಿ ಗ್ರಾಮದ ಯುವ ಸಾಧಕ ಶ್ರೀ ಮುಗ್ಧ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕ […]
ಬಗ್ವಾಡಿ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ವನ ಮಹೋತ್ಸವ
ಹೆಮ್ಮಾಡಿ (ಸೆ. 25) ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ಮಾಣೂರು, ಪಡುಕೆರೆ ವತಿಯಿಂದ ಶ್ರೀ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಲ್ಲಿ ಆನಂದದ ಸೃಷ್ಟಿ ಪರಿಕಲ್ಪನೆಯ ಅತ್ಯಮೂಲ್ಯವಾದ ಗಿಡಗಳನ್ನು ದೇಗುಲದ ಪ್ರಾಂಗಣದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಕುಂದಾಪುರ ಇದರ ಶಾಖಾಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಕೋಶಾಧಿಕಾರಿ ಸತೀಶ್ ನಾಯ್ಕ್ […]










