ಕುಂದಾಪುರ( ಸೆ .15): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಹಾಗೂ ವೈಯಕ್ತಿಕ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ‘Good Touch–Bad Touch’ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಸಮಾಲೋಚಕಿ ಹಾಗೂ ಯೋಗ ತರಬೇತುದಾರ್ತಿ ಶ್ರೀಮತಿ ಭಾರತಿ ಅವರು ಮಕ್ಕಳಿಗೆ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶದ ಕುರಿತು ಸರಳವಾಗಿ ವಿವರಿಸಿದರು. ತಮ್ಮ ದೇಹದ ಬಗ್ಗೆ ಜಾಗೃತಿ ಹೊಂದುವುದು, ಅಸೌಕರ್ಯ ಉಂಟುಮಾಡುವ ಸ್ಪರ್ಶವನ್ನು ಗುರುತಿಸುವುದು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕ್ರಿಯೇಟಿವ್ ಸ್ಫೂರ್ತಿಮಾತು:ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗಿ
ಕಾರ್ಕಳ( ಸೆ .12): ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸ್ಫೂರ್ತಿಮಾತು ಕಾರ್ಯಕ್ರಮದ 18 ನೇ ಸರಣಿಯಲ್ಲಿ “ಜೆನ್ ಜಿ: ಹೊಸ ಭಾರತದ ನವಶಕ್ತಿ” ಎಂಬ ವಿಷಯದ ಮೇಲೆ ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಅವರು ಭಾಗವಹಿಸಿ ಮಾತನಾಡಿದರು. ‘ಇಂದಿನ ಯುವಜನತೆ ಭಾರತೀಯ ಇತಿಹಾಸ ಮತ್ತು ಪರಂಪರೆಯನ್ನು ಮನೋಜ್ಞವಾಗಿ ಅರ್ಥೈಸಿಕೊಳ್ಳಬೇಕು. ಭಾರತೀಯ ನೆಲಮೂಲ ಸಂಸ್ಕೃತಿಯನ್ನು ಜಗತ್ತಿನೆಲ್ಲೆಡೆ ಪಸರಿಸುವ ಕಾರ್ಯಕ್ಕೆ ಮುಂದಾಗಬೇಕು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿಯೆ ತೊಡಗಿ ತಮ್ಮ […]
ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ : ಆಯ್ಷಾ ಅಥೀಫಾ ಸಾಧನೆ
ಗಂಗೊಳ್ಳಿ( ಸೆ.12): ತೌಹೀದ್ ಇಂಗ್ಲಿಷ್ ಮೀಡಿಯಂ ಸ್ಕೂಲ್, ಗಂಗೊಳ್ಳಿಯ 5ನೇ ತರಗತಿ ವಿದ್ಯಾರ್ಥಿನಿ ಆಯ್ಷಾ ಅಥೀಫಾ, ಅಬ್ದುಲ್ ರಝಾಕ್ ಮತ್ತು ಶಮ್ಶಾದ್ ಅವರ ಪುತ್ರಿ, ಶಿವಮೊಗ್ಗ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕಟಾ ಹಾಗೂ ಕುಮಿಟೆ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗೆದ್ದು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸಿದ್ದಾರೆ. ಭಾರತ ಸೇರಿದಂತೆ ಅಮೆರಿಕಾ, ಶ್ರೀಲಂಕಾ, ನೇಪಾಳ, ಮಲೇಷ್ಯಾ, ಗ್ಯಾಬೋನ್ ಮತ್ತು […]
ಮೊಗವೀರ ಯುವ ಸಂಘಟನೆ (ರಿ.),ಹೆಮ್ಮಾಡಿ ಘಟಕ : ಶಿಕ್ಷಕರ ದಿನಾಚರಣೆ ಪ್ರಯುಕ್ತ ಸನ್ಮಾನ
ಹೆಮ್ಮಾಡಿ(ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇದರ ಶಿಕ್ಷಕರಾದ ಶ್ರೀಮತಿ ಶಾರದಾರವರನ್ನು ಸೆಪ್ಟೆಂಬರ್ 05 ರಂದು ಹೆಮ್ಮಾಡಿಯ ಅವರ ಸ್ವಗ್ರಹಕ್ಕೆ ತೆರಳಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ,ಗೌರವಾಧ್ಯಕ್ಷ ದಿನೇಶ್ ಕಾಂಚನ್ ಬಾಳಿಕೆರೆ […]
ಕುಂದಾಪುರ: ಪಶುವೈದ್ಯೆ ಡಾ. ಪೂಜಿತಾ ಅವರಿಗೆ ಬೀಳ್ಕೊಡುಗೆ
ಕುಂದಾಪುರ( ಆ ,29): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಕುಂದಾಪುರ ತಾಲೂಕು ಪಶುವೈದ್ಯಕೀಯ ಶಿಬಿರ ಕಚೇರಿಯಲ್ಲಿ ಪಶುವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಪೂಜಿತಾ ಅವರಿಗೆ, ಕುಂದಾಪುರ ತಾಲೂಕು ಶಿಬಿರ ಕಚೇರಿ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕೃತಕ ಗರ್ಭಧಾರಣಾ ಕಾರ್ಯಕರ್ತರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕುಂದಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ […]
ರಾಷ್ಟ್ರೀಯ ಕ್ರೀಡಾ ದಿನಾಚಾರಣೆ : ಶ್ರೀಧರ ಶೆಟ್ಟಿ ಕೊಕ್ಕರ್ಣೆಯವರಿಗೆ ಸನ್ಮಾನ
ಕೊಲ್ಲೂರು( ಆ .30): ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀಧರ ಶೆಟ್ಟಿ ಕೊಕ್ಕರ್ಣೆ ಹಾಗೂ ಪತ್ನಿ ಗುಣವತಿ ಶ್ರೀಧರ ಶೆಟ್ಟಿ ಯವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಸುಕೇಶ ಶೆಟ್ಟಿ ಹೊಸಮಠ, ಕಾರ್ಯದರ್ಶಿ ದಿನೇಶ ಶೆಟ್ಟಿ ಕಿರಾಡಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ವಿಜಯ ಕುಮಾರ ಶೆಟ್ಟಿ , ರಾಘು […]
ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆ: ವಿ. ಕೆ. ಆರ್. ಆಚಾರ್ಯ ಶಾಲೆ ಅತ್ಯುತ್ತಮ ಸಾಧನೆ
ಕುಂದಾಪುರ( ಆ ,26): ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಹೋಲಿ ರೋಸರಿ ಚರ್ಚ್ ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಸಂಹಿತ ತಂತ್ರಿ ಆಯಿಷ ತಾನಾಜ್ಜ್ ,ರಿಯಾ ಅರ್ ಪುತ್ರನ್ , ಜೆನಿಫರ್ ಇಂಡಿಯಾ, ಆರಾಧ್ಯ ಎಂ,ಲಿಶಾ ಡಯಾಸ್ […]
ಕಾರ್ಕಳ: ಕ್ರಿಯೇಟಿವ್ ಪಿ .ಯು ಕಾಲೇಜಿನಲ್ಲಿ ನೂತನ ಎನ್ ಸಿ ಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ
ಕಾರ್ಕಳ( ಆ,26): ಇಲ್ಲಿನ ಕ್ರಿಯೇಟಿವ್ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಯಾದ ಎನ್ಸಿಸಿ ಕೆಡೆಟ್ಗಳಿಗಾಗಿ ಎನ್ಸಿಸಿ ಪರಿಚಯ ಕಾರ್ಯಕ್ರಮ ಆಗಸ್ಟ್.6 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ ನೌಕಾದಳ ಎನ್ಸಿಸಿ ಘಟಕ, ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಗಳನ್ನು ಅಸೋಸಿಯೇಟ್ ಎನ್ಸಿಸಿ ಅಧಿಕಾರಿ ಸಬ್ ಲೆಫ್ಟಿನೆಂಟ್ ಮಹೇಶ್ ಆರ್. ಶೆಣೈ ಕೆ. ವೇದಿಕೆಗೆ ಬರಮಾಡಿಕೊಂಡರು. […]
ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಂಜುಮನ್ ಶಾಲೆಯ ಅಯಾನ್ಗೆ ದ್ವಿತೀಯ ಸ್ಥಾನ
ಗಂಗೊಳ್ಳಿ(ಆ,20): ಗಂಗೊಳ್ಳಿಯ ಅಂಜುಮನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಅಯಾನ್, ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ. ಅಂಜುಮನ್ ನೂರುಲ್ ಇಸ್ಲಾಂ (ರಿ.), ಗಂಗೊಳ್ಳಿ ಸಂಸ್ಥೆಯ ನಿರ್ವಹಣೆಯಲ್ಲಿರುವ ಅಂಜುಮನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ಪ್ರತಿಭಾವಂತ ವಿದ್ಯಾರ್ಥಿ ಮುಹಮ್ಮದ್ ಅಯಾನ್, 3ನೇ Invitational National Level Karate Championship – COMPETE 5.0ರಲ್ಲಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ : ಕ್ರೋಷೆ ತರಬೇತಿ
ಗಂಗೊಳ್ಳಿ( ಆ ,08) : ಕರಕುಶಲ ಕಲೆಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಆರ್ಥಿಕವಾಗಿಯು ನಮ್ಮನ್ನು ಸಬಲರನ್ನಾಗಿಸಲು ಸಹಾಯ ಮಾಡುತ್ತದೆ. ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಎಸ್.ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕ್ರೋಷೆ ತರಬೇತಿ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಶಿಕ್ಷಕಿ ಜುನಿತಾ ಮಚಾದೋ ಮಾತನಾಡಿ ಈ […]










