ಕುಂದಾಪುರ (ಆ, 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ‘ಪರಿಚಯ 2023’ ಕಾರ್ಯಕ್ರಮ ಆಯೋಜಿಸಲಾಯಿತು . ಈ ‘ಪ್ರೇರಣಾ ಶಿಬಿರ’ದ ಅಂಗವಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಜೆಸಿಐ ತರಬೇತುದಾರರಾದ ಶ್ರೀ ಕೆ.ಕೆ. ಶಿವರಾಮ್ ಅವರು “ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಹಲವು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸರಸ್ವತಿ ವಿದ್ಯಾಲಯ ಗಂಗೊಳ್ಳಿ:ಉಪನ್ಯಾಸಕ ಕೃಷ್ಣ ಗುಜ್ಜಾಡಿಯವರಿಗೆ ಬೀಳ್ಕೊಡುಗೆ
ಗಂಗೊಳ್ಳಿ(ಸೆ,03): ವಿದ್ಯಾರ್ಥಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ತಾನು ಕೂಡ ಬೆಳೆಯುವುದು ಓರ್ವ ನಿಜವಾದ ಶಿಕ್ಷಕನ ಸಾಮರ್ಥ್ಯವಾಗಿರುತ್ತದೆ. ಬದುಕಿನಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಜಿ. ಎಸ್ ವಿ. ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ10 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಇದೀಗ ಸರಕಾರಿ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಬೇರೆಡೆಗೆ ತೆರಳುತ್ತಿರುವ ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ […]
ಶ್ರೀ ಮೂಕಾಂಬಿಕಾ ದೇವಳದ ಪಿ .ಯು ಕಾಲೇಜು ಕೊಲ್ಲೂರು :ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಕುಸ್ತಿ ಪಂದ್ಯಾಟ
ಕೊಲ್ಲೂರು(ಸೆ,04) : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವನ್ನು ಕಾಲೇಜಿನ ಹಳೆ ವಿದ್ಯಾರ್ಥಿ ಅಂತಾರಾಷ್ಟ್ರೀಯ ಮಟ್ಟದ ವೈಟ್ ಲಿಪ್ಟರ್ ಮಂಜುನಾಥ ಮರಾಠಿ ಉದ್ಘಾಟಿಸಿದರು. ಕ್ರೀಡಾ ಜೀವನದ ಪರಿಶ್ರಮ ಸಾಧನೆ ಮತ್ತು ಬದ್ದತೆಯನ್ನು ಮಕ್ಕಳಿಗೆ ಅವರು ತಿಳಿಸಿದರು. ಕಠಿಣ ಪರಿಶ್ರಮ, […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಒಂದು ದಿನದ ವಿಶೇಷ ಶಿಬಿರ- ಸ್ವಚ್ಛತಾ ಕಾರ್ಯಕ್ರಮ – ಅಮೃತ ಕೆರೆ
ಕುಂದಾಪುರ (ಆ,27): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಶ್ರೀ ಚಂದ್ರಶೇಖರ್ ಆಜಾದ್ ಮಿತ್ರಮಂಡಳಿ, ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರದ ಅಂಗವಾಗಿ ‘ಅಮೃತ ಕೆರೆ’ ಎಂಬ ಶೀರ್ಷಿಕೆಯಲ್ಲಿ ಬಸ್ರೂರಿನ ಕೆರೆಕಟ್ಟೆಯ ದೇವರ ಕೆರೆಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ತಾಲೂಕ್ ಪಂಚಾಯತ್ ಮಾಜಿ ಉಪಾಧ್ಯಕ್ಷ ಶ್ರೀ ರಾಮ್ಕಿಶನ್ ಹೆಗ್ಡೆ ಶ್ರಮದಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ […]
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು : ವೃತ್ತಿ ಮಾರ್ಗದರ್ಶನ- ಮಾಹಿತಿ ಕಾರ್ಯಕ್ರಮ
ಹೆಮ್ಮಾಡಿ(ಸೆ,02): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ಶ್ರೀ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವೃತ್ತಿ ಮಾರ್ಗದರ್ಶನದ ಅಗತ್ಯತೆಯ […]
ಜನತಾ ಸ್ವತಂತ್ರ ಪಿ ಯು ಕಾಲೇಜು ಹೆಮ್ಮಾಡಿ: ಪೋಷಕ- ಶಿಕ್ಷಕರ ಸಭೆ
ಹೆಮ್ಮಾಡಿ(ಸೆ,2): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇಲ್ಲಿಯ ಶಿಕ್ಷಣ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.02): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ಬಿಬಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 02 ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೆ ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು.ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಪ್ರಸ್ತಾವಿಕ ಮಾತುಗಳಾಡಿದರು. ವಿಭಾಗದ ಪ್ರಾಧ್ಯಾಪಕರಾದ ಹರೀಶ್.ಬಿ. ಪ್ರವೀಣ್ ಮೊಗವೀರ […]
ಸರ್ಕಾರಿ ಪಿ ಯು ಕಾಲೇಜು ಬಿದ್ಕಲ್ ಕಟ್ಟೆ: ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆ
ಬಿದ್ಕಲ್ ಕಟ್ಟೆ(ಆ,31): ಇಲ್ಲಿನ ಸರ್ಕಾರಿ ಪಿ ಯು ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ,ವಾಣಿಜ್ಯಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆಯನ್ನು ಸಂಸ್ಥೆಯ ಪ್ರಾಂಶುಪಾಲ ರಾದ ಶ್ರೀ ವಿಘ್ನೇಶ್ವರ ಭಟ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಮುಂಬರುವ ಮದ್ಯವಾರ್ಷಿಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕೆಂದು ಮಾರ್ಗದರ್ಶನ ಮಾಡಲಾಯಿತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಶೇಕಡಾ 100%ರಷ್ಟು […]
ಗಂಗೊಳ್ಳಿ :ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜಿನ ವಿದ್ಯಾರ್ಥಿ ಅಬ್ದುಲ್ ರಾಜಿಕ್ ರಾಜ್ಯಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ಆ,31): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಬ್ದುಲ್ ರಾಜಿಕ್ ಎಪ್ಪತ್ತು ಕೆ.ಜಿ ಕೆಳಗಿನ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಯಿಂದ ಆಯ್ಕೆ ಆಗಿರುತ್ತಾರೆ . ಸರಸ್ವತಿ […]
ಗೀತಗಾಯನ ಸ್ಪರ್ಧೆ : ಎಚ್.ಎಮ್.ಎಮ್ & ವಿ.ಕೆ.ಆರ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ,26): ಇಲ್ಲಿನ ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಆಶ್ರಯದಲ್ಲಿ ಕುಂದಾಪುರದ ವ್ಯಾಸರಾಯ ಸಭಾ ಭವನದಲ್ಲಿ ಹಮ್ಮಿಕೊಂಡ ಗೀತಗಾಯನ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ. ಸಂಸ್ಥೆಯ ಬುಲ್ ಬುಲ್ ತಂಡದ ವಿದ್ಯಾರ್ಥಿಗಳಾದ ರಿನೊಲಾ, ಸಂಹಿತಾ, ಪ್ರಕೃತಿ, ಸಿಂಚನಾ ಮತ್ತು ಗೋಪಿಕಾ, ಸ್ಕೌಟ್ ತಂಡದ ವಿದ್ಯಾರ್ಥಿಗಳಾದ ಕೌಸ್ತುಭ, ಶ್ರವಣ್, ಕೌಶಿಕ್, ಅರುಶ್, ಸಾತ್ವಿಕ್, ನಿರಂಜನ್ ಉಡುಪ, ತ್ರಿಶೂಲ್ […]










