ಹೆಮ್ಮಾಡಿ;(ಸೆ,28): ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳಾದ,ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ,ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ರುಪಿನ್,ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಜ್ವಲ್ ಜಿ.,ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಸಂಜನಾ ಕಟ್ಟೆ,ಮತ್ತು ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ರಾಜ್ಯ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿ .ಯು ಕಾಲೇಜಿನ ಕೇದಾರ್ ಮರವಂತೆ ದ್ವಿತೀಯ ಸ್ಥಾನ
ಹೆಮ್ಮಾಡಿ(ಸೆ,28): ಶ್ರೀ ಶಾರದಾ ಪದವಿಪೂರ್ವ ಕಾಲೇಜು ಬಸ್ರೂರು ಇವರು ಆಯೋಜಿಸಿದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಎನ್.ಎಸ್.ಎಸ್ ಘಟಕದ ವತಿಯಿಂದ ಸಭಾ ನಿರ್ವಹಣೆ ಕುರಿತಾದ ಮಾಹಿತಿ ಕಾರ್ಯಕ್ರಮ
ಕುಂದಾಪುರ(ಸೆ,25): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕವತಿಯಿಂದ “ಸಭಾ ನಿರ್ವಹಣೆ ಕುರಿತಾದ ಮಾಹಿತಿ” ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಕಾಲೇಜು ತೆಂಕನಿಡಿಯೂರುಇದರ ಉಪನ್ಯಾಸಕರಾದ ಶ್ರೀ ಪಾಂಡುರoಗ ರವರು ಸಭಾ ಕಂಪನ, ನಿರೂಪಣೆ, ಸ್ವಾಗತ, ಧನ್ಯವಾದ ಸಮರ್ಪಣೆ ಹಾಗೂ ಸಂವಹನ ಕೌಶಲ್ಯ ಮುಂತಾದವುಗಳ ನಿರ್ವಹಣೆಯ ಕುರಿತಾಗಿ ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ […]
ರಾಷ್ಟ್ರಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ: ಡಾ| ಬಿ.ಬಿ ಹೆಗ್ಡೆ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕಿ ಶ್ರೇಯ ಖಾರ್ವಿ ಪ್ರಥಮ ಸ್ಥಾನ
ಕುಂದಾಪುರ (ಸೆ.22): ಜೈಪುರದ ಐಐಎಸ್ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದಡಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕಿ ಶ್ರೇಯ ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ. ದೇಶದ ವಿವಿಧ ವಿಶ್ವವಿದ್ಯಾನಿಲಯದ ಕಾಲೇಜುಗಳ ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ ಈ ರಾಷ್ಟ್ರಮಟ್ಟದ ಈ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ ಎನ್ಎಸ್ಎಸ್ […]
ಪ್ರತಿಭಾ ಕಾರಂಜಿಯಲ್ಲಿ ಹಲವು ಸ್ಥಾನಗಳನ್ನು ತನ್ನದಾಗಿಸಿಕೊಂಡ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳು
ಕುಂದಾಪುರ [ಸೆ.23]: ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಯೋಗದಲ್ಲಿ ಕುಂದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉರ್ದು ಕೋಟಿ ಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು: ವಿವಿಧ ವೇದಿಕೆಗಳ ಪೂರ್ವ ಪರಿಚಯ
ಕುಂದಾಪುರ (ಸೆ, 20): ಕಾಲೇಜಿನಲ್ಲಿ ನಡೆಯುವ ವಿವಿಧ ವಿಸ್ತರಣಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಬೇಕು. ಶೈಕ್ಷಣಿಕ ಸಂಸ್ಥೆಯೊoದು ಪಠ್ಯ ಕೇಂದ್ರಿತ ತಾಣವಾಗದೆ, ಪ್ರಾಯೋಗಿಕ ಕೇಂದ್ರವಾಗಿ, ಕಲಿಕೆಗಳಲ್ಲಿ ಅಂತಸ್ಥವಾಗಿರುವ ಗ್ರಹಿಕೆ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಬಲಗೊಳಿಸಿದಾಗಲೇ ವಿದ್ಯಾರ್ಥಿ ಸಮುದಾಯ ಶಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕಿ ಡಾ| ಪಾರ್ವತಿ ಜಿ. ಐತಾಳ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ […]
ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರೋವರ್ಸ & ರೇಂಜರ್ಸ್ ಘಟಕದ ವತಿಯಿಂದ ಪರಿಸರ ಸ್ನೇಹಿ ಗಣಪ
ಕುಂದಾಪುರ (ಸೆಪ್ಟೆಂಬರ್ 19): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ & ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 19ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ ಸ್ವಸ್ತಿಕ್ ಪ್ರಥಮ ಸ್ಥಾನ, ತೃತೀಯ ಬಿಸಿಎ ವಿದ್ಯಾರ್ಥಿ ವಿನೋದ್ ರಾಜ್ ದ್ವಿತೀಯ ಸ್ಥಾನ ಹಾಗೂ ಪ್ರಥಮ ಬಿ.ಕಾಂ. ಇ ವಿಭಾಗದ ಸುಜನ್ ಹಾಗೂ […]
ಮಂಗಳೂರು ವಿ. ವಿ. ಕ್ರೀಡಾ ರ್ಯಾಂಕಿoಗ್: ಡಾ| ಬಿ. ಬಿ. ಹೆಗ್ಡೆ ಕಾಲೇಜು ಉಡುಪಿ ಜಿಲ್ಲೆಗೆ ಪ್ರಥಮ
ಕುಂದಾಪುರ (ಸೆಪ್ಟೆಂಬರ್ 21) : ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ನಡೆಸಿದ ವಿಶ್ವವಿದ್ಯಾನಿಲಯ ವ್ಯಾಪ್ತಿಯ 220 ಕಾಲೇಜುಗಳ ಕ್ರೀಡಾ ರ್ಯಾಂಕಿoಗ್ನಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪುರುಷ ವಿಭಾಗದಲ್ಲಿ 7ನೇ ರ್ಯಾಂಕ್ ಮಹಿಳೆಯರ ವಿಭಾಗದಲ್ಲಿ 11ನೇ ರ್ಯಾಂಕ್ ಪಡೆಯುವ ಮೂಲಕ ಸಮಗ್ರ 7ನೇ ರ್ಯಾಂಕ್ ಪಡೆದಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಉತ್ಕೃಷ್ಟ ಸಾಧನೆಗೈದಿದೆ. ಕಾಲೇಜು ಆಡಳಿತ […]
ಎಂಐಟಿ ಕುಂದಾಪುರ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ
ಕುಂದಾಪುರ(ಸೆ.21): ಇಲ್ಲಿನ ಎಂಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಡಕ್ಷನ್ ಕಾರ್ಯಕ್ರಮ 2023-24ರ ಅಂಗವಾಗಿ, ಎನ್ಐಟಿಕೆ ಸುರತ್ಕಲ್ನ ಸಿಎಸ್ಇ ವಿಭಾಗದ ಪ್ರಾಧ್ಯಾಪಕ ಡಾ. ಮೋಹಿತ್ ತಹಿಲಿಯಾನಿ ಅವರಿಂದ ವೃತ್ತಿಪರ ಬೆಳವಣಿಗೆಯಲ್ಲಿ ಸಂಘದ ಸದಸ್ಯತ್ವದ ಪಾತ್ರ*ವಿಷಯದ ಕುರಿತು ಸಂವಾದವನ್ನು ಏರ್ಪಡಿಸಲಾಗಿತ್ತು. ಅವರು ವಿದ್ಯಾರ್ಥಿಗಳಿಗೆ ಅದರ ಪ್ರಾಮುಖ್ಯತೆ, ಅನುಕೂಲಗಳು, ಸ್ಕಾಲರ್ಶಿಪ್ಗಳು ಮತ್ತು ವಿದ್ಯಾರ್ಥಿಗಳು ವೃತ್ತಿಪರ ಸಂಸ್ಥೆಗಳ ಸದಸ್ಯರಾಗಿದ್ದರೆ ಅವರಿಗೆ ಇರುವ ಜಾಗತಿಕ ಅವಕಾಶಗಳನ್ನು ಐಇಇಇ ಯ ಉದಾಹರಣೆಯನ್ನು ಉಲ್ಲೇಖಿಸಿ ವಿವರಿಸಿದರು. ಸದಸ್ಯತ್ವ ಶುಲ್ಕವನ್ನು ಪಾವತಿಸಿ […]
ಜೈಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: ಮಾನವೀಯ ನೆಲೆಯ ನೆರವು
ಕುಂದಾಪುರ( ಸೆ,18): ರಾಜ್ಯದ ಹಲವು ಜಿಲ್ಲೆಯ ಅದೇಷ್ಟೋ ಜನರ ಬದುಕಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಹಸ್ತ ಚಾಚುತ್ತಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ ಸಂಸ್ಥೆಯು ಕೋಟೇಶ್ವರದ ಬೀಜಾಡಿಯ ನಿವಾಸಿ ಹೃದಯ ಸಂಭಂದಿ ಅನಾರೋಗ್ಯದಿಂದ ಬಳಲುತ್ತಿರುವ ಕೃಷ್ಣ ಎನ್ನುವವರ ವೈದ್ಯಕೀಯ ಚಿಕಿತ್ಸೆಗೆ ಮಾನವೀಯ ನೆಲೆಯ ಸಹಾಯ ಹಸ್ತ ಚಾಚಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಹಾಗೂ ಮೂವರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಜವಾಬ್ದಾರಿ […]










