ಕಾರ್ಕಳ (ಜೂ,15): ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್ ಇಂಡಿಯಾ ರ್ಯಾಂಕಿಂಗ್ನಲ್ಲಿ ಕುಮಾರಿ ಜಾಗೃತಿ ಕೆ ಪಿ 661 ಅಂಕಗಳೊಂದಿಗೆ ಕೆಟೆಗರಿಯಲ್ಲಿ 23 ನೇ ರ್ಯಾಂಕ್, ಉದ್ಭವ್ ಎಂ ಆರ್ 625 ಅಂಕಗಳೊಂದಿಗೆ ಕೆಟೆಗರಿಯಲ್ಲಿ 72 ನೇ ರ್ಯಾಂಕ್ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ತನುಶ್ರೀ ಕೆ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಂ ಐ ಟಿ ಮೂಡ್ಲಕಟ್ಟೆ: ಹೊಸ ಇಂಜಿನಿಯರಿಂಗ್ ಕೋರ್ಸ್ ಪ್ರಾರಂಭ
ಕುಂದಾಪುರ(ಜೂ,15): ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹೊಸ ಇಂಜಿನಿಯರಿಂಗ್ ಕೋರ್ಸ್ ಇನ್ಫರ್ಮೇಷನ್ ಸೈನ್ಸ್ & ಇಂಜಿನಿಯರಿಂಗ್ ಅನ್ನು ಆರಂಭಿಸಲು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಇಂದ ಅನುಮೋದನೆ ದೊರೆತಿದೆ. ಸಾಫ್ಟ್ ವೇರ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಕೋರ್ಸ್ ನ್ನು ಆಯ್ಕೆ ಮಾಡುತ್ತಿರುವುದನ್ನು ಗಮನದಲ್ಲಿಟ್ಟು ಬೇಡಿಕೆ ಹೆಚ್ಚಿದ್ದರಿಂದ ಈ ಶೈಕ್ಷಣಿಕ ವರ್ಷದಿಂದ ಹೊಸ ಕೋರ್ಸ್ ಅರಂಭಿಸುತ್ತಿದ್ದೇವೆ. ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕಾಲೇಜಿನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಪಾನ್ ಕಾರ್ಡ್ ಮೇಳ
ಕುಂದಾಪುರ,(ಜೂನ್ 15): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ಪಾನ್ ಕಾರ್ಡ್ ಮೇಳ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಮಹಲಾಸ ಕಂಪ್ಯೂಟರ್ ಅಕಾಡೆಮಿ, ಕುಂದಾಪುರ ಇದರ ಮಾಲೀಕರಾದ ಶ್ರೀ ಸಂತೋಷ್, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಂಘಟಕರಾದ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ, ಶ್ರೀ ರಜತ್ ಬಂಗೇರ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ:ವಿಶ್ವ ರಕ್ತದಾನ ದಿನಾಚರಣೆ
ಕುಂದಾಪುರ(ಜೂ,15): ಕಾಲೇಜಿನ ಯುವ ರೆಡ್ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಜೆಸಿಐ ಕುಂದಾಪುರ ಸಿಟಿ ಹಾಗೂ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನ ದಿನಾಚರಣೆಯ ಪ್ರಯುಕ್ತ ನಡೆದ ರಕ್ತದಾನ ಶಿಬಿರವನ್ನು ಕುಂದಾಪುರದ ತಹಶೀಲ್ದಾರರಾದ ಶ್ರೀಮತಿ ಶೋಭಲಕ್ಷ್ಮೀ ಉದ್ಘಾಟಿಸಿದರು. ಈ ಸಂದರ್ಭ ರಕ್ತದಾನದ ಮಹತ್ವದ ಕುರಿತು ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ […]
ನೀಟ್ ಫಲಿತಾಂಶ-2023: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ಕ್ರಷ್ಟ ಸಾಧನೆ
. ಹೆಮ್ಮಾಡಿ(ಜೂ,15): ವೈದ್ಯಕೀಯ ಪ್ರವೇಶ ಪರೀಕ್ಷೆಗೆ ರಾಷ್ಟ್ರ ಮಟ್ಟದಲ್ಲಿ ನಡೆಯುವ ನೀಟ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಮರ್ ಪುರಾಣಿಕ್ 544/720, ಐಶ್ವರ್ಯ ಖಾರ್ವಿ 482/720,ತನಿಷಾ 459/720 ಅಂಕಗಳನ್ನು ಪಡೆದು ಅರ್ಹತೆಯನ್ನು ಪಡೆದಿರುತ್ತಾರೆ. ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ವಿ. ಕೆ. ಆರ್. ಶಾಲೆ ಕುಂದಾಪುರದ ವೈಷ್ಣವಿ ಎಸ್. ಶೆಟ್ಟಿ ರಾಜ್ಯಕ್ಕೆ 9ನೇ ರ್ಯಾಂಕ್
ಕುoದಾಪುರ(ಜೂ,13) : ಕುಂದಾಪುರ: ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ವೈಷ್ಣವಿ ಎಸ್. ಶೆಟ್ಟಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 614 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 617 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 9ನೇ ರ್ಯಾಂಕ್ ಪಡೆದಿರುತ್ತಾಳೆೆ. ವಿಜ್ಞಾನ ವಿಷಯದಲ್ಲಿ 3 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾಳೆ. ಈಕೆ ವಕ್ವಾಡಿಯ ಶರತ್ […]
ವಿ. ಕೆ. ಆರ್. ಶಾಲೆ ಕುಂದಾಪುರದ ಪ್ರಥಮಾ ಆರ್. ತಾಳಿಕೋಟಿ ರಾಜ್ಯಕ್ಕೆ 2ನೇ ರ್ಯಾಂಕ್ ,ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ
ಕುಂದಾಪುರ(ಜೂ ,13): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಥಮಾ ಆರ್. ತಾಳಿಕೋಟಿ ಯವರು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 618 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 2ನೇ ರ್ಯಾಂಕ್ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಆಂಗ್ಲ ಭಾಷಾ ವಿಷಯದಲ್ಲಿ 6 ಹೆಚ್ಚುವರಿ ಅಂಕ […]
ವಿ. ಕೆ. ಆರ್. ಶಾಲೆ ಕುಂದಾಪುರದ ಪ್ರಸ್ತುತಿ ಶೆಟ್ಟಿ ರಾಜ್ಯಕ್ಕೆ 5ನೇ ರ್ಯಾಂಕ್
ಕುoದಾಪುರ(ಜೂ,13): ಕುoದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಸ್ತುತಿ ಶೆಟ್ಟಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 618 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 621 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದಿರುತ್ತಾಳೆ. ಕನ್ನಡ, ಆಂಗ್ಲ ಭಾಷೆ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 3 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾಳೆ. […]
ವಿ. ಕೆ. ಆರ್. ಶಾಲೆ ಕುಂದಾಪುರದ ತೇಜಸ್ ವಿ. ನಾಯಕ್ ರಾಜ್ಯಕ್ಕೆ 8ನೇ ರ್ಯಾಂಕ್
ಕುoದಾಪುರ(ಜೂ,13): ಇಲ್ಲಿನ ಕುoದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ತೇಜಸ್ ವಿ. ನಾಯಕ್ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 611 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 618 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿರುತ್ತಾನೆ. ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 7 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]
ವಿ. ಕೆ. ಆರ್. ಶಾಲೆ ಕುಂದಾಪುರ: ಪ್ರತೀಕ್ ಎನ್ ಶೆಟ್ಟಿ ರಾಜ್ಯಕ್ಕೆ 6ನೇ ರ್ಯಾಂಕ್
ಕುoದಾಪುರ(ಜೂ,12): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರತೀಕ್ ಎನ್. ಶೆಟ್ಟಿ ಇವನು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 616 ಅಂಕ ಗಳಿಸಿದ್ದು ಮರುಮೌಲ್ಯಮಾಪನದ ನಂತರ 620 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿರುತ್ತಾನೆ. ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ 4 ಹೆಚ್ಚುವರಿ ಅಂಕ ಗಳಿಸುವುದರೊಂದಿಗೆ ಈ ಸಾಧನೆ ಮಾಡಿರುತ್ತಾನೆ. […]










