ಕುಂದಾಪುರ( ಎ,21): ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ ಸಂಸ್ಥೆಯಾಗಿದ್ದು,ಇತ್ತೀಚಿನ ವರ್ಷಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಹಿಂದುಳಿದ ಮತ್ತು ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿವಿಧ ಸಂಯೋಜನೆಗಳಿದ್ದು ಪ್ರತಿ ವರ್ಷವು ಪ್ರತಿಶತ 90 % ಕ್ಕಿಂತ ಹೆಚ್ಚು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಬರುತ್ತಿದೆ. ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 739 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಕ್ಸಲೆಂಟ್ ಪಿಯು ಕಾಲೇಜು ಕುಂದಾಪುರ ಪಿ.ಯು.ಸಿ. ಫಲಿತಾಂಶ : 5 ರಾಜ್ಯ ಮಟ್ಟದ ರ್ಯಾಂಕ್ ಸಾಧನೆ
ಕುಂದಾಪುರ( ಎ,21): ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ನಡೆಸಿದ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕುಂದಾಪುರ ಎಕ್ಸಲೆಂಟ್ ಪಿ.ಯು ಕಾಲೇಜಿನ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರ್ಯಾಂಕ್ ಪಡೆದಿದ್ದು ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿನಿ ವಾಸವಿ ಬೋಳಾರ್ ವಿಜ್ಞಾನ ವಿಭಾಗದಲ್ಲಿ 592 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ 3ನೇ ರ್ಯಾಂಕ್ ಪಡೆದಿರುತ್ತಾಳೆ. ಪ್ರಸ್ತುತ ಎಕ್ಸಲೆಂಟ್ ಪಿ.ಯು ಕಾಲೇಜಿನಲ್ಲಿ ಪಿ.ಸಿ.ಎಮ್.ಸಿ […]
ದ್ವಿತೀಯ ಪಿಯುಸಿ ಫಲಿತಾಂಶ : ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ
ಹೆಮ್ಮಾಡಿ( ಎ,21): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.ವಿಜ್ಞಾನ ವಿಭಾಗದ […]
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ- ಏಳು ರ್ಯಾಂಕ್
ಕಾರ್ಕಳ( ಎ ,21): 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಎರಡನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 380 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಪ್ರಸ್ತುತ್ ಪಟೇಲ್ 592 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರ್ಯಾಂಕ್ , ಸುಮಂತ್ ಶೆಟ್ಟಿ 591 […]
ಡಾ|ಬಿ. ಬಿ ಹೆಗ್ಡೆ ಕಾಲೇಜು: ಬಿಬಿಎ ವಿದ್ಯಾರ್ಥಿಗಳಿಂದ ಕೈಗಾರಿಕಾ ಪರಿವೀಕ್ಷಣೆ
ಕುಂದಾಪುರ (ಎ ,20): ಇಲ್ಲಿನ ಡಾ|ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ಬ್ರಹ್ಮಾವರದ ಉಪ್ಪುರಿನ ಕೆ ಎಮ್ ಎಫ್ ನಂದಿನಿ ಹಾಲಿನ ಉತ್ಪನ್ನ ಘಟಕ ಹಾಗೂ ತೆಕಟ್ಟೆ ಯ ಹೆಬ್ಬಾರ್ ಕೋಕೋನಟ್ ಆಯಿಲ್ ಘಟಕಕ್ಕೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಹಾಗೂ ಉಪನ್ಯಾಸಕ ರಜತ್ ಬoಗೇರ ಉಪಸ್ಥಿತರಿದ್ದರು .
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೆರಡು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1500 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಯುಜಿಸಿ “ನ್ಯಾಕ್’ ಸಂಸ್ಥೆಯ “B++’ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೆರಡು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1500 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಯುಜಿಸಿಯ ಅಂಗ ಸಂಸ್ಥೆಯಾದ “ನ್ಯಾಕ್’ […]
ಸರಕಾರಿ ಪದವಿಪೂರ್ವ ಕಾಲೇಜು, ಹೊಸಂಗಡಿ: ದಾಖಲಾತಿ ಆರಂಭ
ಇತ್ತೀಚಿನ ದಿನದಲ್ಲಿ ಸರಕಾರಿ ಪದವಿ ಪೂರ್ವ ಹೊಸಂಗಡಿ ತನ್ನ ಹೊಸ ಛಾಪನ್ನು ಮೂಡಿಸುತ್ತಿದೆ. ಯಾವುದೇ ಖಾಸಗಿ ಕಾಲೇಜುಗಳಿಗಿಂತ ಕಡಿಮೆ ಇಲ್ಲದ ಹಾಗೆ ಸರಕಾರಿ ಪದವಿಪೂರ್ವ ಕಾಲೇಜು ಜನರ ಮನೆ ಮಾತಾಗಿದೆ. ಇಲ್ಲಿರುವಂತಹ ಕಲಾ ,ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ನಿರಂತರವಾಗಿರುವ ಉತ್ತಮವಾದ ಫಲಿತಾಂಶ ಹಾಗೂ ಅತ್ಯುತ್ತಮ ಬೋಧನೆ ಹಾಗೂ ಬೋಧನಾ ವಿಧಾನಗಳು, ಶಿಸ್ತು ಹಾಗೂ ನಿಯಮ ಪಾಲನೆ, ಸುಸಜ್ಜಿತವಾಗಿರುವಂತಹ ಸುಂದರವಾಗಿರುವಂತಹ ಕಟ್ಟಡ , ಅತ್ಯುತ್ತಮ ಉಪನ್ಯಾಸಕ ವೃಂದ ,ಕಲಿಕೆಯಲ್ಲಿ ಮುಂದಿರುವ […]
ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ :ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಕುಂದಾಪುರ:(ಏ:18): ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆಯನ್ನು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀಯುತ ಜಯಕರ್ ಶೆಟ್ಟಿಯವರು ನೆರವೇರಿಸಿ, ಪ್ರತಿಯೊಂದು ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳು ಪ್ರಾರಂಭಗೊಳ್ಳಬೇಕು ಎಂದರು . ಮಾನವೀಯತೆಯ ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತಹದ್ದು, “ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಯಾರು ಕಷ್ಟದಲ್ಲಿ ಇರುತ್ತಾರೆಯೋ ಅಂತವರಿಗೆ ಸಹಾಯ ಮಾಡುವುದು ರೆಡ್ ಕ್ರಾಸ್ ಸಂಸ್ಥೆಯ ಮುಖ್ಯ ಉದ್ದೇಶ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಯುವ ರೆಡ್ ಕ್ರಾಸ್ ಕುಂದಾಪುರ ಇದರ ಸಂಯೋಜಕರಾದ ಶ್ರೀಯುತ ಸತ್ಯನಾರಾಯಣ್ ಪುರಾಣಿಕ್ ಇವರು ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೆರವೇರಿಸಿದರು. ಹಾಗೆಯೇ […]
ಜಗತ್ತು ವಿಶೇಷ ಪ್ರತಿಭೆಗಳನ್ನು ಗುರುತಿಸುತ್ತದೆ-ಜೆಸಿಐ ರಾಷ್ಟ್ರೀಯ ತರಬೇತುದಾರ ಕೆ. ರಾಜೇಂದ್ರ ಭಟ್
ಕಾರ್ಕಳ (ಎ,19): ವಿಶೇಷ ಪರಿಶ್ರಮದಿಂದ ಕೂಡಿದ ಪ್ರಯತ್ನ ಯಶಸ್ಸನ್ನು ದೊರಕಿಸಿಕೊಡುತ್ತದೆ. ತನ್ಮೂಲಕ ವಿಶ್ವವ್ಯಾಪಿಯನ್ನಾಗಿಸಿ ಪ್ರಪಂಚವನ್ನು ಆಳಲು ತೊಡಗುತ್ತದೆ. ಆದ್ದರಿಂದ ಕ್ರಿಯಾಶೀಲತೆಯೇ ಇಂದಿನ ವಿದ್ಯಾರ್ಥಿಗಳಿಗೆಪ್ರೇರಣೆಯಾಗಲಿ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ,ಖ್ಯಾತ ವಾಗ್ಮಿ ಕೆ. ರಾಜೇಂದ್ರ ಭಟ್ ನುಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸಾಧನೆಯ ಕಡೆಗೆ ತುಡಿತ, ಅವಕಾಶವನ್ನು ಸೃಷ್ಟಿಸುವುದು ನಮ್ಮ ಗುರಿಯಾಗಬೇಕೆಂದು ಕರೆ ನೀಡಿದರು. […]










