ಎಂ.ಎo . ಹೆಗ್ಡೆ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ಇದರ ಅಂಗಸoಸ್ಥೆ ಎಕ್ಸಲೆಂಟ್ ಪಿ.ಯು ಕಾಲೇಜ್ ಕುಂದಾಪುರ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಹೊಸ ಆಡಳಿತದೊಂದಿಗೆ ಕಳೆದ ಕೆಲವು ವರ್ಷಗಳಿಂದ ಪಿಯುಸಿ ವಿಜ್ಞಾನ ವಿಭಾಗದ ಪಿಸಿಎಮ್ಬಿ, ಪಿಸಿಎಮ್ಸಿ, ಪಿಸಿಎಮ್ಎಸ್ ಮತ್ತು ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಸ್ಟಾಟಿಸ್ಟಿಕ್ಸ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಪಿ.ಯು.ಸಿ ಶಿಕ್ಷಣವನ್ನು ನೀಡುತ್ತಾ ಪಿ.ಯು.ಸಿ ವಿಭಾಗದಲ್ಲಿ ರಾಜ್ಯಕ್ಕೆ ಅನೇಕ ರ್ಯಾಂಕ್ಗಳನ್ನು ನೀಡಿರುವ ಪ್ರತಿಷ್ಠಿತ ಕಾಲೇಜ್ ಎಕ್ಸಲೆಂಟ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕ್ರಿಯೇಟಿವ್ ಕಾಲೇಜ್ ಉಡುಪಿ :ಸಂವಿಧಾನ ಶಿಲ್ಪಿ ಡಾ. ಬಿ . ಆರ್ ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ
ಉಡುಪಿ(ಎ,14): ಮಹಾನ್ ಮಾನವತವಾದಿ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಜಗತ್ತಿನಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸವನ್ನು ಮಾಡಿ, ಶೋಷಿತ ಸಮುದಾಯದ ಬಾಳಿನ ಬೆಳಕಾಗಿ, ಇಡೀ ವಿಶ್ವವೇ ಮೆಚ್ಚುವಂತಹ ಜಗತ್ತಿನ ಅತಿ ದೊಡ್ಡ , ಶ್ರೇಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಅಂಬೇಡ್ಕರ್ ರವರದ್ದು. ಅವರ ಕಠಿಣ ಪರಿಶ್ರಮ, ನಡೆದು ಬಂದ ದಾರಿ, ಅವರ ಜ್ಞಾನ, ಇಡೀ ವಿಶ್ವಕ್ಕೆ ಮಾದರಿ ಎಂದು […]
ಕ್ರಿಯೇಟಿವ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ
ಕಾರ್ಕಳ(ಎ,14): ಸಂವಿಧಾನ ಶಿಲ್ಪಿ ಡಾ| ಬಿ ಆರ್ ಅಂಬೇಡ್ಕರ್ ರವರ 132 ನೇ ಜಯಂತಿಯನ್ನು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಡಾ| ಬಿ ಆರ್ ಅಂಬೇಡ್ಕರ್ ರವರು ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಹೆಚ್ಡಿ) ಪದವಿ ಪಡೆದ ಮೊದಲ ಭಾರತೀಯ. ಸುಮಾರು 64 ವಿಷಯಗಳಲ್ಲಿ ಸ್ನಾತಕೊತ್ತರ ಪದವಿಗಳನ್ನು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ ಚಳವಳಿಗಳ ಹಿಂದಿನ ಶಕ್ತಿ ಎಂಬ […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ “ESPERANZA 2K23” ಫ್ರೆಶರ್ಸ್ ಡೇ ಸಂಭ್ರಮ
ಕುಂದಾಪುರ(ಎ:06): ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ “ESPERANZA 2K23” ಫ್ರೆಶರ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ದ್ವಿತೀಯ ವರ್ಷದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆದರದಿಂದ ಸ್ವಾಗತಿಸಿಕೊಂಡರು. ವಿದ್ಯಾರ್ಥಿಗಳು ವಿವಿಧ ಮನೋರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಜೆನಿಫರ್ ಫ್ರೀಡಾ ಮಿನೇಜೆಸ್ ಹಾಗೂ ಐ.ಎಂ.ಜೆ. ಸಮೂಹ ವಿದ್ಯಾಸಂಸ್ಥೆಯ ನಿರ್ದೇಶಕರಾದ ಪ್ರೊಫೆಸರ್ ದೋಮ ಚಂದ್ರಶೇಖರ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಐ.ಎಂ.ಜೆ.ಐ.ಎಸ್.ಸಿ. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಮತ್ತು […]
ಮಿಲಾಗ್ರಿಸ್ ಕಾಲೇಜನಲ್ಲಿ ನಂಗೆಲಿಯ ರೂಪಕ
ಉಡುಪಿ(ಎ,06): ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರದಲ್ಲಿ ಎಪ್ರಿಲ್ 06 ರ ಗುರುವಾರ ಅಪರಾಹ್ನ ನೆಡೆದ ವಿದ್ಯಾರ್ಥಿ ದರ್ಬಾರ್ ಕಾರ್ಯಕ್ರಮದಲ್ಲಿ ಕೇರಳದಲ್ಲಿ 19 ನೇ ಶತಮಾನದ ಸಂದರ್ಭದಲ್ಲಿ ಇದ್ದ ನಂಗೆಲಿಯ ಎನ್ನುವ ಮಹಿಳೆಯ ಮೂಲಕ ಮೊಲೆ ತೆರಿಗೆ ಕಾನೂನು ನಿಂತು ಹೋದ ಬಗ್ಗೆ ಕಾಲೇಜ್ ನ ಪ್ರಾಂಗಣದಲ್ಲಿ ದಲ್ಲಿ ಉಡುಪಿಯ ರೋಬೋ ಸಾಫ್ಟ್ ಉದ್ಯೋಗಿ ಬಿ. ಇ ಪದವೀಧರೆ ಹೊನ್ನಾವರದ ಚಿಕ್ಕನಕೊಡಿಯ ಕುಮಾರಿ ಪವಿತ್ರ ರೂಪಕದ ಮೂಲಕ ವಿದ್ಯಾರ್ಥಿಗಳಿಗೆ ಅಭಿನಯ ಮಾಡಿ ತೋರಿಸಿದರು. […]
ಬದುಕಿನ ಸ್ವಯಂ ವಿಶ್ಲೇಷಣೆ ಮುಖ್ಯ : ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ(ಏ .01): ನಮ್ಮ ಬದುಕಿನ ಸ್ವಯಂ ವಿಶ್ಲೇಷಣೆ ಮಾಡಿಕೊಂಡಾಗ ಆತ್ಮತೃಪ್ತಿ ಸಂತೋಷ ಕಾಣಸಿಗುವಂತಾಗಬೇಕು ಅದು ನಿಜವಾದ ಬದುಕಿನ ಸಾರ್ಥಕತೆ ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಇದರ 39ನೇ ವಾರ್ಷಿಕೋತ್ಸವ ಮತ್ತು ಗುರು ಜ್ಯೋತಿ ಶಿಕ್ಷಣ ನಿಧಿ ಯೋಜನೆಯ 22ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ […]
ಐ.ಎಂ.ಜೆ. ವಿದ್ಯಾ ಸಂಸ್ಥೆ: ಸಂಸ್ಥಾಪಕ ದಿನದ ಅಂಗವಾಗಿ ವಿಸ್ಮಯ ಕಾರ್ಯಕ್ರಮ
ಕುಂದಾಪುರ(ಏ,01): ಏಪ್ರಿಲ್ 10 ರಂದು ಐ.ಎಂ.ಜೆ. ವಿದ್ಯಾ ಸಂಸ್ಥೆಯಲ್ಲಿ ‘ಸಂಸ್ಥಾಪಕ ದಿನ’ವನ್ನು ಆಚರಿಸುವ ಅಂಗವಾಗಿ ಕುಂದಾಪುರ ‘ಮಾನಸ- ಜ್ಯೋತಿ’ ವಿಕಲಚೇತನ ಮಕ್ಕಳಿಗೆ ನಮ್ಮ ಐ. ಎಂ. ಜೆ. ವಿದ್ಯಾ ಸಂಸ್ಥೆ ಬೋಧಕ- ವಿದ್ಯಾರ್ಥಿವೃಂದದವರು ‘ವಿಸ್ಮಯ’ ಕಾರ್ಯಕ್ರಮದಡಿ ವಿವಿಧ ಪ್ರದರ್ಶನದಿಂದ ಮಕ್ಕಳನ್ನು ರಂಜಿಸಿದರು. ಮಾನಸ ಜ್ಯೋತಿ ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀಮತಿ ಶೋಭಾ ಮಧ್ಯಸ್ಥ ಅವರು ಈ ಸಂಸ್ಥೆಯನ್ನು ಪ್ರಸ್ತುತ ನಿರ್ವಹಿಸುತ್ತಿದ್ದಾರೆ. ಈ ಸಂಸ್ಥೆಯಲ್ಲಿ 2011 ರಿಂದ ನೆದರ್ಲ್ಯಾಂಡಿನ ಮಾರ್ಟೆ ವಾನ್ ಡೆನ್ ಬ್ಯಾಂಡ್ ನವರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಐ.ಎಂ.ಜೆ ವಿದ್ಯಾ ಸಂಸ್ಥೆಯ […]
ಎಚ್. ಎಮ್. ಎಮ್.ಆಂಗ್ಲ ಮಾಧ್ಯಮ ಶಾಲೆ: ಗ್ರಾಜುಯೇಷನ್ ಡೇ ಆಚರಣೆ
ಕುಂದಾಪುರ( ಏ.01): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ ನಡೆಯಿತು . ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾIಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಜೊತೆ ಪೋಷಕರ ಪಾತ್ರವೂ ಅತಿ ಮಹತ್ವವಾದದ್ದು ಎಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ […]
ಎ.06ಕ್ಕೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವ
ಹೆಮ್ಮಾಡಿ (ಮಾ,28) ಕುಂದಾಪುರ ತಾಲೂಕಿನ ಪ್ರಮಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಇದೇ ಎಪ್ರಿಲ್ 06 ರ ಗುರುವಾರದಂದು ನಡೆಯಲಿದೆ. ರಥೋತ್ಸವದ ಪ್ರಯುಕ್ತ ಎ.0 4ರಿಂದ 08ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಡಾ| ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಪಿಜಿಸಿಇಟಿ ಕುರಿತು ಮಾಹಿತಿ ಕಾರ್ಯಗಾರ
ಕುಂದಾಪುರ (ಮಾ, 28): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಅಭಿಜ್ಞಾ ವಿದ್ಯಾಸಂಸ್ಥೆಯ ನಿರ್ದೇಶಕರಾದ ಶ್ರೀ ಅಭಿಲಾಷ್ ಪರೀಕ್ಷೆಯ ತಯಾರಿ ಹೇಗಿರಬೇಕು, ಪರೀಕ್ಷೆ ಯಾವ ಸಂದರ್ಭದಲ್ಲಿ ನಡೆಸಲಾಗುತ್ತದೆ, ಪರೀಕ್ಷೆಯ ಪೂರ್ವ ತಯಾರಿಯೊಂದಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದರ ಬಗ್ಗೆ […]










