ಹೆಮ್ಮಾಡಿ(ಡಿ,24); ಜಿಲ್ಲಾ ಸಹಕಾರ ಮಹಾಮಂಡಲ ಜಿಲ್ಲೆಯ ಪದವಿ ಪೂರ್ವ ಕಾಲೇಜುವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಸಮೃದ್ದ ಭಾರತ ನಿರ್ಮಾಣದಲ್ಲಿ ಸಹಕಾರ ಚಳುವಳಿ ಮಾತ್ರವೇ ಪ್ರಧಾನ ಪಾತ್ರವನ್ನು ವಹಿಸಬಲ್ಲುದು’ ಎಂಬ ವಿಷಯದ ಕುರಿತು ನಡೆದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪಥಮ ಪಿ.ಯು.ಸಿ ವಿದ್ಯಾರ್ಥಿನಿ ವರ್ಷಾ ರವಿಶಂಕರ್ ಪ್ರಥಮ ಸ್ಥಾನ ಪಡೆದು ಕರ್ನಾಟಕ ಸಹಕಾರ ಮಹಾಮಂಡಲ ನಡೆಸುವ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಹುಸೈನ್ ಹೈಕಾಡಿಯವರಿಗೆ ಸಮ್ಮಾನ
ಕುಂದಾಪುರ(ಡಿ,24): ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಎಲ್ಲರ ಕಷ್ಟಕ್ಕೆ ಸ್ಪಂದಿಸಿದ ಕುಂದಾಪುರ ಸಿಟಿ ಜೇಸಿಸ್ ಸ್ಥಾಪಕಾ ಅಧ್ಯಕ್ಷ ನಮ್ಮ ನಾಡ ಒಕ್ಕೂಟ (ರಿ ) ಕೇಂದ್ರ ಸಮಿತಿಯ ಸಂಘಟನ ಕಾರ್ಯದರ್ಶಿ ಹುಸೇನ್ ಹೈಕಾಡಿ ಅವರನ್ನು ಬುಧವಾರ ಕುಂದಾಪುರದ ಆರ್..ಎನ್..ಶೆಟ್ಟಿ ಸಭಾಂಗಣದಲ್ಲಿ ನಡೆದ ಹಂಗಳೂರು ಸ್ಟೆಪ್ ಆನ್ ಸ್ಟೆಪ್ ಡಾನ್ಸ್ ಅಕಾಡೆಮಿಯ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕೊರೋನಾ ಲಾಕ್ ಡೌನ್ ಸಮಯದಲ್ಲಿ ಕುಂದಾಪುರ ಪರಿಸರದಲ್ಲಿ ಜೇಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ಸುಮಾರು 15ಸಾವಿರ […]
ಶ್ರೀ ಮೂಕಾಂಬಿಕಾ ದೇವಳದ ಪಿ ಯು ಕಾಲೇಜು ಕೊಲ್ಲೂರು: ಪ್ರತಿಭಾ ಪುರಸ್ಕಾರ & ಬಹುಮಾನ ವಿತರಣಾ ಸಮಾರಂಭ
ಕೊಲ್ಲೂರು(ಡಿ,23): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ2022-23 ನೇ ಶೈಕ್ಷಣಿಕ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಡಾ. ಅತುಲ್ ಕುಮಾರ ಶೆಟ್ಟಿ ಸದಸ್ಯರು ವ್ಯವಸ್ಥಾಪನ ಸಮಿತಿ ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನದಲ್ಲಿ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಸುಖ ದು;ಖಗಳನ್ನು ಸಮಾನವಾಗಿ ಸ್ವೀಕರಿಸಿ ಎಲ್ಲರೊಂದಿಗೆ ಬೆರೆತು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಾಗಾರ
ಕುಂದಾಪುರ ( ಡಿ,23) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಯಶಸ್ಸಿನ ತಂತ್ರಗಳ ಕುರಿತು ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಶ್ರಯದಲ್ಲಿ ನಡೆಯುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಯಶಸ್ವಿಯಾಗಿ ತೇರ್ಗಡೆಗೊಳ್ಳಲು ಬೇಕಾದ ತಂತ್ರಗಳ ಕುರಿತು ಸಂಪನ್ಮೂಲ ವ್ಯಕ್ತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇದರ ರಾಜ್ಯಶಾಸ್ತ್ರ ಉಪನ್ಯಾಸಕ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬೃಹತ್ ರಕ್ತದಾನ ಶಿಬಿರ
ಕುಂದಾಪುರ (ಡಿ,23): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್.ಎಸ್. ಎಸ್., ಎನ್. ಸಿ. ಸಿ. ಘಟಕ ಹಾಗೂ ಇಂಡಿಯನ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಹೆಚ್. ಡಿ. ಎಫ್. ಸಿ. ಬ್ಯಾಂಕ್ ಕುಂದಾಪುರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ ಡಿಸೆಂಬರ್ 17 ರಂದು […]
ಗಂಗೊಳ್ಳಿ:ಮರಣಿ ಮಾಂಟೆ ನಾಟಕ ಪ್ರದರ್ಶನ
ಗಂಗೊಳ್ಳಿ(ಡಿ.18): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ವಿದ್ಯಾರ್ಥಿಗಳು ಮರಣಿ ಮಾಂಟೆ ಎನ್ನುವ ಭಿನ್ನ ಶೈಲಿಯ ನಾಟಕ ಇತ್ತೀಚೆಗೆ ಪ್ರದರ್ಶನಗೊಂಡಿತು . ಸಾವಿನ ದೇವತೆಯೊಂದಿಗೆ ಹೋರಾಡುವ ಕುತೂಹಲಕಾರಿ ಕಥಾನಕವನ್ನು ಮರಣಿ ಮಾಂಟೆ ನಾಟಕವು ಒಳಗೊಂಡಿದ್ದು ಇದನ್ನು ಇಲ್ಲಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ರಚಿಸಿ ನಿರ್ದೇಶಿಸಿದ್ದಾರೆ. ಶ್ರಾವ್ಯ ಎನ್, ನಿಶಾ ಬಿ ಪೂಜಾರಿ ಹೃತಿಕ, ದಿಯಾ, ಅಮೀಕ್ಷಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು ಒಟ್ಟು […]
ಗಂಗೊಳ್ಳಿ: ನಾಯಿ ನಾನು ಪುಸ್ತಕ ಬಿಡುಗಡೆ
ಗಂಗೊಳ್ಳಿ(ಡಿ.18): ಸಾಹಿತ್ಯ ಸೇರಿದಂತೆ ಎಲ್ಲ ರಂಗಗಳಲ್ಲಿನ ಪ್ರತಿಯೊಬ್ಬ ವ್ಯಕ್ತಿಯ ಯಶಸ್ಸಿನ ಹಿಂದೆಯೂ ಅಪಾರ ಪರಿಶ್ರಮ ಅಡಗಿರುತ್ತದೆ. ಅದನ್ನು ಮೆಚ್ಚಿ ಅಭಿನಂದಿಸುವ ಪರಸ್ಪರ ಸಹಕರಿಸುವ ಮನಸ್ಸುಗಳು ಸಮಾಜದಲ್ಲಿ ಹೆಚ್ಚಬೇಕು ಎಂದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಗೋವಿಂದ ಬಾಬು ಪೂಜಾರಿ ಯವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಆಶ್ರಯದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆ ಮತ್ತು ರೋಟರಿ […]
ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ
ಕಲ್ಯಾಣಪುರ(ಡಿ.15): ಮಿಲಾಗ್ರಿಸ್ ಕಾಲೇಜಿನ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಟ್ರೈ ಸೆಂಟಿನರಿ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿತು. ಜಿ . ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಬ್ರಹ್ಮಾವರ ಇದರ ಚೇರ್ಮನ್ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಆಗಿರುವ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಹಣೆ ಬರಹಗಳನ್ನು ತಾವೇ ರೂಪಿಸಿಕೊಳ್ಳಬೇಕು. ಸರಳತೆಯೊಂದಿಗೆ ಜ್ಞಾನ, ಶಿಸ್ತು, ಹಾಗೂ ಜೀವನ ಪಾಠಗಳನ್ನು ಸಂಸ್ಥೆಯಿಂದ ಪಡೆದು […]
ಕುಂದಗನ್ನಡ ಅಧ್ಯಯನ ಆಸಕ್ತಿ ಬೆಳೆಸಿಕೊಳ್ಳಿ- ಡಾ. ಕಿಶೋರ್ ಕುಮಾರ್ ಶೆಟ್ಟಿ
ಕುಂದಾಪುರ (ಡಿ.15): ಕುಂದಗನ್ನಡ ಭಾಷೆ ಹಾಗೂ ಸಂಸ್ಕೃತಿ ಬಹಳ ವೈಶಿಷ್ಟ್ಯ ಪೂರ್ಣವಾಗಿದ್ದು, ತನ್ನದೇ ಆದ ಸ್ವಂತಿಕೆ ಮತ್ತು ಅಸ್ಮಿತೆಯನ್ನು ಹೊಂದಿರುವ ಕುಂದಾಪುರದ ಪ್ರಾದೇಶಿಕ ಭಾಷೆ ,ಸಂಸ್ಕೃತಿ ಸಂಪ್ರದಾಯ, ಆಚಾರ ,ವಿಚಾರಗಳು ಈ ಮಣ್ಣಿನಲ್ಲಿ ಅಡಗಿದ್ದು ಅದನ್ನು ಸಂಶೋಧನೆ ಮುಖಾಂತರ ಹೊರತೆಗೆಯುವ ಪ್ರಯತ್ನವನ್ನು ವಿದ್ಯಾರ್ಥಿಗಳು ಮಾಡಬೇಕೆಂದು ಸರಕಾರಿ ಪ್ರೌಢಶಾಲೆ ಹಕ್ಲಾಡಿ ಇದರ ಕನ್ನಡ ಶಿಕ್ಷಕರು ಹಾಗೂ ಸಂಶೋಧಕರಾದ ಡಾ. ಕಿಶೋರ್ ಕುಮಾರ್ ಶೆಟ್ಟಿ ಹೇಳಿದರು. ಅವರು ಡಾ| ಬಿ.ಬಿ ಹೆಗ್ಡೆ ಪ್ರಥಮ […]
ಎಚ್.ಎಮ್.ಎಮ್ & ವಿ.ಕೆ.ಆರ್ ಶಾಲೆ – ಜೆ ಇ ಲಸಿಕಾ ಅಭಿಯಾನ
ಕುಂದಾಪುರ(ಡಿ,12): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಮೆದುಳು ಜ್ವರದ ವಿರುದ್ಧಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಕುಂದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಮಕ್ಕಳಿಗೆ ಸಂಭವಿಸಬಹುದಾದ ಮೆದುಳುಜ್ವರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಜಪಾನೀಸ್ ಎನ್ಸೆಫಲೈಟಿಸ್ ಲಸಿಕೆಯನ್ನುಹಾಕಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತುಪ್ರೌಢಶಾಲಾ ಮುಖ್ಯ ಶಿಕ್ಷಕಿ […]










