ಕುಂದಾಪುರ (ನ.14): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ.ಬಿ. ಹೆಗ್ಡೆ ಅವರು ಅಗ್ರಪಂಕ್ತಿ ಯಲ್ಲಿ ಗುರುತಿಸಿ ಕೊಂಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಅವಕಾಶ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ.ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಎನ್.ಎಸ್.ಎಸ್ ಘಟಕದ ವತಿಯಿಂದ ಕ್ಯಾಂಪಸ್ ಕ್ಲೀನ್
ಕುಂದಾಪುರ (ನ.14): ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕ್ಯಾಂಪಸ್ ಸ್ವಚ್ಛತೆ ಅಭಿಯಾನ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಕಾಲೇಜಿನ ಭದ್ರತಾ ಸಿಬ್ಬಂದಿ ರೇಮಂಡ್ ನಜರತ್ ಹಾಗೂ ಎನ್.ಎಸ್.ಎಸ್. ಸ್ವಯಂ ಸೇವಕರು ಉಪಸ್ಥಿತರಿದ್ದರು.
ಕರಾಟೆ – ವಿ. ಕೆ. ಆರ್. ಪ್ರೌಢ ಶಾಲಾ ವಿದ್ಯಾರ್ಥಿನಿ ನವಮಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ( ನ.14): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿನಿ ನವಮಿ ಎಸ್. ಶೆಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡ “ರಾಜ್ಯ ಮಟ್ಟದ ಶಾಲಾ […]
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಎನ್ಸಿಸಿಯ ಸ್ವಚ್ಛತಾ ಶ್ರಮದಾನ- ಜನಾಂದೋಲನ
ಶಿರ್ವ(ನ,13): ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಚ್ಛತಾ ಶ್ರಮದಾನ- ಜನಾಂದೋಲನ ಕಾರ್ಯಕ್ರಮ ನ .12 ರಂದು ನಡೆಯಿತು. ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ‘ಸ್ವಚ್ಛ ಸರ್ವೆಕ್ಷಣ ಗ್ರಾಮಿಣ–2022’ ಜನಾಂದೋಲನ ಕಾರ್ಯಕ್ರಮಕ್ಕೆ ಸ್ವಚ್ಛ ಭಾರತ್ ಅಭಿಯಾನದಡಿಯಲಿ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛತೆ, ಸುಚಿತ್ವ ಮತ್ತು ನೈರ್ಮಲ್ಯದ […]
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವಿಚಾರಗೋಷ್ಠಿ
ಹೆಮ್ಮಾಡಿ( ನ.13): ಇಲ್ಲಿನ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿ ನಲ್ಲಿ “ಕನ್ನಡ ನಾಡು-ನುಡಿ-ಸಂಸ್ಕೃತಿ” ವಿಷಯದ ಕುರಿತು ವಿದ್ಯಾರ್ಥಿ ವಿಚಾರಗೋಷ್ಠಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಶ್ರೀ ಗಣೇಶ ಮೊಗವೀರರವರು ವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜು ಬೈಂದೂರಿನ ಅತಿಥಿ ಉಪನ್ಯಾಸಕರಾದ ಎಸ್, ಮಣಿಕಂಠರವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಕನ್ನಡ ನಾಡು-ನುಡಿಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಮ್ಮ ನೆಲ,ಜಲ, ಸಂಸ್ಕೃತಿ,ಸಂಪ್ರದಾಯವನ್ನು ಗೌರವಿಸುವಂತೆ ಕರೆ ನೀಡಿದರು. ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ […]
ಕೋಟೇಶ್ವರ: ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಂಧದಗುಡಿ ಸಿನೆಮಾ ವೀಕ್ಷಣೆಗೆ ಅವಕಾಶ ಕಲ್ಪಿಸಿದ ಸಾಫ್ಟವೇರ್ ಕಂಪೆನಿಯ ಉದ್ಯೋಗಿ
ಕೋಟೇಶ್ವರ( ನ.13): ಬೆಂಗಳೂರು ಖಾಸಗಿ ಸಾಫ್ಟವೇರ್ ಕಂಪೆನಿಯ ಉದ್ಯೋಗಿ, ಗೋಪಾಡಿ ನಿವಾಸಿ ಸುಶ್ಮಿತಾ ಮೆಂಡನ್ ರವರು ಕನ್ನಡ ಚಿತ್ರರಂಗದ ಮಹಾನ್ ಕಲಾವಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ , ವನ್ಯಜೀವಿ ಸಂಕುಲ,ಪ್ರಾಕೃತಿಕ ವೈಶಿಷ್ಟ್ಯದ ಕುರಿತು ತಿಳಿಸುವ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮ ಕುರಿತು ಸಂದೇಶ ಸಾರುವ ಗಂಧದ ಗುಡಿ ಚಲನಚಿತ್ರ ವೀಕ್ಷಣೆಯನ್ನು ಪಡು ಗೋಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೋಟೇಶ್ವರದ ಭಾರತ್ ಸಿನೆಮಾಸ್ ಚಿತ್ರಮಂದಿರದಲ್ಲಿ […]
ಓದಿನೊಂದಿಗೆ ಜೀವನ ಕೌಶಲ್ಯ ಬೆಳೆಸಿಕೊಳ್ಳಿ: ಡಾ.ಶ್ರೀಕಾಂತ್ ರಾವ್ ಸಿದ್ದಾಪುರ
ಕುಂದಾಪುರ (ನ,10): ಶಿಕ್ಷಣವೆoದರೆ ಕೇವಲ ಓದು, ಪರೀಕ್ಷೆ, ಅಂಕಗಳಿಕೆ ಮಾತ್ರವಲ್ಲ ಅದು ಕಲಿಕೆಯೊಂದಿಗೆ ಜೀವನ ಕೌಶಲ್ಯವನ್ನು ಬೆಳೆಸಿಕೊಳ್ಳವ ಕಲೆ ಎಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಸಾಂಸ್ಕೃತಿಕ ಚಿಂತಕ ಡಾ.ಶ್ರೀಕಾಂತ್ ರಾವ್ ಸಿದ್ದಾಪುರ ಅಭಿಪ್ರಾಯಪಟ್ಟರು. ಅವರು ಡಾIಬಿ.ಬಿ.ಹೆಗ್ಡೆ ಕಾಲೇಜಿನ 2022-23 ನೇ ಸಾಲಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ತರಲು ಇರುವ […]
ತ್ರಿಶಾ ಪಿಯು ಕಾಲೇಜು ಕಲ್ಯಾಣಪುರ: ಕಾನೂನಿನ ಅರಿವು ಕಾರ್ಯಕ್ರಮ
ಕಲ್ಯಾಣಪುರ (ನ,9): ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ ಪ್ರವರ್ತಿತ ಕಲ್ಯಾಣಪುರದ ತ್ರಿಶಾ ಪಿಯು ಕಾಲೇಜಿನಲ್ಲಿ ನ.08 ರಂದು ಕಾನೂನು ಕಾನೂನಿನ ಅರಿವು ಹಾಗೂ ನೆರವಿನ ಮೂಲಕ ನಾಗರೀಕರ ಸಬಲೀಕರಣ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮಿಲಾಗ್ರಿಸ್ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕರಾದ ಶ್ರೀ ಜಯರಾಮ್ ಶೆಟ್ಟಿಗಾರ್ ಮಾತನಾಡಿ ಕಾನೂನಿನ ತಿಳುವಳಿಕೆ ಎಲ್ಲರಿಗೂ ಅನಿವಾರ್ಯ ಅದರಂತೆಯೇ ಸಾಮಾನ್ಯ ಜ್ಞಾನವು ಬಹಳ ಮುಖ್ಯ […]
ಎಂ.ಜಿ.ಎಂ ಕಾಲೇಜು: ಕನ್ನಡ ರಾಜ್ಯೋತ್ಸವ ವಿಶೇಷ ಉಪನ್ಯಾಸ
ಉಡುಪಿ(ನ,8): ಆಗಸ್ಟ್ 15ರಂದು ದೇಶಾಭಿಮಾನ, ನವೆಂಬರ್ 1ರಂದು ಭಾಷಾಭಿಮಾನಗಳು ಜಾಗೃತವಾಗುತ್ತವೆ. ದಿನನಿತ್ಯ ಕನ್ನಡವನ್ನು ಆಡಿದ ಅಥವಾ ಓದಿದ ಮಾತ್ರಕ್ಕೆ ಕನ್ನಡ ಬೆಳೆಯುವುದಿಲ್ಲ. ಭಾಷೆಯನ್ನು ಪ್ರೀತಿಸದೆ, ಗೌರವಿಸದೆ, ಮಮಕಾರವಿಲ್ಲದೆ ಭಾಷೆಯನ್ನು ಬೆಳೆಸುವುದಕ್ಕೆ ಅಥವಾ ಉಳಿಸುವುದಕ್ಕೆ ಸಾಧ್ಯವಿಲ್ಲ. ತಮಿಳರಿಗೆ, ಮಲಯಾಳಿಗಳಿಗೆ ಹೋಲಿಸಿದರೆ ನಮ್ಮಲ್ಲಿ ಭಾಷಾಭಿಮಾನದ ಕೊರತೆ ಎದ್ದುಕಾಣುತ್ತದೆ. ನಾವು ಅವರಿಂದ ಭಾಷಾಭಿಮಾನ, ಭಾಷಿಕ ಪ್ರೀತಿ, ಗೌರವಗಳನ್ನು ಕಲಿಯಬೇಕಾಗಿದೆ. ಭಾಷೆ ಎಂಬುದು ಕೇವಲ ಸಂವಹನ ಸಾಧನ ಮಾತ್ರವಲ್ಲ, ಅದೊಂದು ಸಂಸ್ಕೃತಿಯೂ ಹೌದು, ಅದೊಂದು ಪರಂಪರೆಯೂ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮ
ಕುಂದಾಪುರ( ನ,8) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಐಎಎಸ್ & ಕೆಎ ಎಸ್ ಮತ್ತು ಇತರೆ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಯುನಿವರ್ಸಲ್ ಕೋಚಿಂಗ್ ಸೆಂಟರ್ನ ತರಬೇತುದಾರರಾದ ಶ್ರೀ ಅಖಿಲೇಶ್ ಶೆಟ್ಟಿ ಮಾತನಾಡಿ, ಸರ್ಕಾರಿ […]










