ಕೋಟೇಶ್ವರ( ನ.13): ಬೆಂಗಳೂರು ಖಾಸಗಿ ಸಾಫ್ಟವೇರ್ ಕಂಪೆನಿಯ ಉದ್ಯೋಗಿ, ಗೋಪಾಡಿ ನಿವಾಸಿ ಸುಶ್ಮಿತಾ ಮೆಂಡನ್ ರವರು ಕನ್ನಡ ಚಿತ್ರರಂಗದ ಮಹಾನ್ ಕಲಾವಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ , ವನ್ಯಜೀವಿ ಸಂಕುಲ,ಪ್ರಾಕೃತಿಕ ವೈಶಿಷ್ಟ್ಯದ ಕುರಿತು ತಿಳಿಸುವ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮ ಕುರಿತು ಸಂದೇಶ ಸಾರುವ ಗಂಧದ ಗುಡಿ ಚಲನಚಿತ್ರ ವೀಕ್ಷಣೆಯನ್ನು ಪಡು ಗೋಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೋಟೇಶ್ವರದ ಭಾರತ್ ಸಿನೆಮಾಸ್ ಚಿತ್ರಮಂದಿರದಲ್ಲಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಓದಿನೊಂದಿಗೆ ಜೀವನ ಕೌಶಲ್ಯ ಬೆಳೆಸಿಕೊಳ್ಳಿ: ಡಾ.ಶ್ರೀಕಾಂತ್ ರಾವ್ ಸಿದ್ದಾಪುರ
ಕುಂದಾಪುರ (ನ,10): ಶಿಕ್ಷಣವೆoದರೆ ಕೇವಲ ಓದು, ಪರೀಕ್ಷೆ, ಅಂಕಗಳಿಕೆ ಮಾತ್ರವಲ್ಲ ಅದು ಕಲಿಕೆಯೊಂದಿಗೆ ಜೀವನ ಕೌಶಲ್ಯವನ್ನು ಬೆಳೆಸಿಕೊಳ್ಳವ ಕಲೆ ಎಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಹಾಗೂ ಸಾಂಸ್ಕೃತಿಕ ಚಿಂತಕ ಡಾ.ಶ್ರೀಕಾಂತ್ ರಾವ್ ಸಿದ್ದಾಪುರ ಅಭಿಪ್ರಾಯಪಟ್ಟರು. ಅವರು ಡಾIಬಿ.ಬಿ.ಹೆಗ್ಡೆ ಕಾಲೇಜಿನ 2022-23 ನೇ ಸಾಲಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ತರಲು ಇರುವ […]
ತ್ರಿಶಾ ಪಿಯು ಕಾಲೇಜು ಕಲ್ಯಾಣಪುರ: ಕಾನೂನಿನ ಅರಿವು ಕಾರ್ಯಕ್ರಮ
ಕಲ್ಯಾಣಪುರ (ನ,9): ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ ಪ್ರವರ್ತಿತ ಕಲ್ಯಾಣಪುರದ ತ್ರಿಶಾ ಪಿಯು ಕಾಲೇಜಿನಲ್ಲಿ ನ.08 ರಂದು ಕಾನೂನು ಕಾನೂನಿನ ಅರಿವು ಹಾಗೂ ನೆರವಿನ ಮೂಲಕ ನಾಗರೀಕರ ಸಬಲೀಕರಣ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮಿಲಾಗ್ರಿಸ್ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕರಾದ ಶ್ರೀ ಜಯರಾಮ್ ಶೆಟ್ಟಿಗಾರ್ ಮಾತನಾಡಿ ಕಾನೂನಿನ ತಿಳುವಳಿಕೆ ಎಲ್ಲರಿಗೂ ಅನಿವಾರ್ಯ ಅದರಂತೆಯೇ ಸಾಮಾನ್ಯ ಜ್ಞಾನವು ಬಹಳ ಮುಖ್ಯ […]
ಎಂ.ಜಿ.ಎಂ ಕಾಲೇಜು: ಕನ್ನಡ ರಾಜ್ಯೋತ್ಸವ ವಿಶೇಷ ಉಪನ್ಯಾಸ
ಉಡುಪಿ(ನ,8): ಆಗಸ್ಟ್ 15ರಂದು ದೇಶಾಭಿಮಾನ, ನವೆಂಬರ್ 1ರಂದು ಭಾಷಾಭಿಮಾನಗಳು ಜಾಗೃತವಾಗುತ್ತವೆ. ದಿನನಿತ್ಯ ಕನ್ನಡವನ್ನು ಆಡಿದ ಅಥವಾ ಓದಿದ ಮಾತ್ರಕ್ಕೆ ಕನ್ನಡ ಬೆಳೆಯುವುದಿಲ್ಲ. ಭಾಷೆಯನ್ನು ಪ್ರೀತಿಸದೆ, ಗೌರವಿಸದೆ, ಮಮಕಾರವಿಲ್ಲದೆ ಭಾಷೆಯನ್ನು ಬೆಳೆಸುವುದಕ್ಕೆ ಅಥವಾ ಉಳಿಸುವುದಕ್ಕೆ ಸಾಧ್ಯವಿಲ್ಲ. ತಮಿಳರಿಗೆ, ಮಲಯಾಳಿಗಳಿಗೆ ಹೋಲಿಸಿದರೆ ನಮ್ಮಲ್ಲಿ ಭಾಷಾಭಿಮಾನದ ಕೊರತೆ ಎದ್ದುಕಾಣುತ್ತದೆ. ನಾವು ಅವರಿಂದ ಭಾಷಾಭಿಮಾನ, ಭಾಷಿಕ ಪ್ರೀತಿ, ಗೌರವಗಳನ್ನು ಕಲಿಯಬೇಕಾಗಿದೆ. ಭಾಷೆ ಎಂಬುದು ಕೇವಲ ಸಂವಹನ ಸಾಧನ ಮಾತ್ರವಲ್ಲ, ಅದೊಂದು ಸಂಸ್ಕೃತಿಯೂ ಹೌದು, ಅದೊಂದು ಪರಂಪರೆಯೂ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮ
ಕುಂದಾಪುರ( ನ,8) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಐಎಎಸ್ & ಕೆಎ ಎಸ್ ಮತ್ತು ಇತರೆ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಯುನಿವರ್ಸಲ್ ಕೋಚಿಂಗ್ ಸೆಂಟರ್ನ ತರಬೇತುದಾರರಾದ ಶ್ರೀ ಅಖಿಲೇಶ್ ಶೆಟ್ಟಿ ಮಾತನಾಡಿ, ಸರ್ಕಾರಿ […]
ಕುಂದಾಪುರದ ಎಕ್ಸಲೆಂಟ್ ಪಿ.ಯು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
ಕುಂದಾಪುರ( ನ,8): ಎಕ್ಸಲೆಂಟ್ ಪಿ. ಯು ಕಾಲೇಜು, ಸುಣ್ಣಾರಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ , ವಕೀಲರ ಸಂಘ (ರಿ) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಎಕ್ಸಲೆಂಟ್ ಪಿ ಯು ಕಾಲೇಜಿನಲ್ಲಿ ನವೆಂಬರ್ 7 ರಂದು “ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರೀಕರ ಸಬಲೀಕರಣ” ಎನ್ನುವ ವಿಷಯದ ಕುರಿತು ಕಾರ್ಯಕ್ರಮ ಜರುಗಿತು. ಕಾನೂನು ಅರಿವು ಕಾರ್ಯಕ್ರಮವನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ […]
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಡಗರದ ದೀಪಾವಳಿ ಹಾಗೂ ತುಳಸಿ ಹಬ್ಬ
ಕಾರ್ಕಳ(ನ,07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ನ.05 ರಂದು ದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳನ್ನು ತಿಳಿಯಲು ಮತ್ತು ಹಬ್ಬಗಳ ಮಹತ್ವ ತಿಳಿಯಲು ಭಾರತೀಯ ಪರಂಪರೆಯ ಹಬ್ಬಗಳು ಮಾದರಿಯಾಗಿವೆ ಎಂದು ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ತಿಳಿಸಿದರು. ಸಂಸ್ಥಾಪಕರಲ್ಲೊಬ್ಬರಾದ ಅಶ್ವಥ್ ಎಸ್ ಎಲ್ ಮಾತನಾಡಿ ಭಾರತೀಯ ಹಬ್ಬಗಳು ವೈಜ್ಞಾನಿಕವಾಗಿಯೂ, ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವ ಹೊಂದಿದೆ. ಆಧ್ಯಾತ್ಮಿಕವಾಗಿ ನೋಡಿದಾಗಲು ಶ್ರೇಷ್ಠ […]
ಶಿರ್ವ: ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಭೇಟಿ
ಶಿರ್ವ(ನ,7): ಇಲ್ಲಿನ ಶಿರ್ವ ಸಂತ ಮೇರಿ ವಿದ್ಯಾಲಯಕ್ಕೆ 21 ಕರ್ನಾಟಕ ಬೆಟಾಲಿಯನ್ ಎನ್ ಸಿಸಿ, ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಅವರ ಭೇಟಿ ನೀಡಿದರು. ಯುವ ಸೇನಾದಳದ ಕೆಡೆಟ್ಗಳನ್ನು ಉದ್ದೇಶಿಸಿ ಮಾತನಾಡುತ್ತಾ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಎನ್ ಸಿಸಿ ಸಹಾಯಕಾರಿ. ಎನ್ಸಿಸಿ ತರಬೇತಿಯಿಂದ ಕ್ಯಾಡೆಡ್ಗಳಲ್ಲಿ ದೇಶ ಸೇವೆ ಹಾಗೂ ಸಾಮಾಜಿಕ ಸೇವೆ ಮಾಡಲು ಪ್ರೇರೇಪಿಸುತ್ತದೆ. ಶಿಸ್ತುಬದ್ಧವಾದ ಜೀವನವನ್ನು ನಡೆಸಲು, ಉನ್ನತ ಉದ್ಯೋಗ ಪಡೆಯಲು ಕ್ಯಾಡೆಡ್ಗಳಿಗೆ ಎನ್ಸಿಸಿ […]
ವಿದ್ಯಾರ್ಥಿಗಳೇ ದೇಶದ ಶಕ್ತಿ: ಡಾ.ಎಸ್.ಭಾಸ್ಕರ್ ಶೆಟ್ಟಿ
ಕುಂದಾಪುರ (ನ,7): ವಿದ್ಯಾರ್ಥಿಗಳೇ ದೇಶದ ಆಸ್ತಿ. ಯುವ ಸಮುದಾಯವು ಕಲಿಕೆಯ ಜೊತೆಗೆ ಬದುಕಿನ ಕೌಶಲ್ಯಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗ ಬೇಕು. ವಿದ್ಯಾರ್ಥಿಗಳು ದೇಶದ ಶಕ್ತಿ ಇದ್ದಂತೆ,ಆ ನಿಟ್ಟಿನಲ್ಲಿ ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿ ಕೊಳ್ಳಬೇಕು ಎಂದು ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ,ಉಡುಪಿ ಇದರ ಪ್ರಾಂಶುಪಾಲರಾದ ಡಾ.ಎಸ್.ಭಾಸ್ಕರ್ ಶೆಟ್ಟಿಯವರು ಹೇಳಿದರು. ಅವರು ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23 ನೇ ಸಾಲಿನ […]
ಟೆನ್ನಿ ಕಾಯ್ಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಿಶನ್ ಮತ್ತು ಮಹಿಮಾ
ಗಂಗೊಳ್ಳಿ (ನ,6): ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಟೆನ್ನಿ ಕಾಯ್ಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕಿಶನ್ ಡಿ ಪೂಜಾರಿ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಹಿಮಾ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆ ಆಗಿರುತ್ತಾರೆ. ಇವರನ್ನು ಕಾಲೇಜಿನ ಬಳಗ ಮತ್ತು […]










