ಹೆಮ್ಮಾಡಿ(ಅ.9): ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 61 ಕೆ.ಜಿ ವಿಭಾಗದಲ್ಲಿ ನಿಶ್ಚಲ್ ಫಿಲಿಪ್ ಬೆಳ್ಳಿ ಪದಕ, 65 ಕೆ.ಜಿ ವಿಭಾಗದಲ್ಲಿ ಕ್ರಮವಾಗಿ ಅನುಲ್ ಚಿನ್ನದ ಪದಕ ಹಾಗೂ ಡೆನ್ಜಿಲ್ ಡಯಸ್ ಬೆಳ್ಳಿಯ ಪದಕ, 70ಕೆ.ಜಿ ಮೇಲ್ಪಟ್ಟ ವಿಭಾಗದಲ್ಲಿ ಸೂರಜ್ ಡಯಾಸ್ ಕಂಚಿನ ಪದಕ, 79 […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ
ಕಾರ್ಕಳ(ಅ.07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ದೇಶದ ದ್ವಿತೀಯ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.02 ರಂದು ಆಚರಿಸಲಾಯಿತು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ ಇಂದು ಗಾಂಧೀಜಿಯವರ ಸಾಮರಸ್ಯ ಚಿಂತನೆ ಜೀವನದ ಆದರ್ಶ ನಮಗೆ ದಾರಿದೀಪವಾಗಬೇಕಿದೆ ಮತ್ತು ದೇಶ ಕಂಡ ಅಪ್ರತಿಮ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ “ಜೈ ಜವಾನ್ ಜೈ ಕಿಸಾನ್” ಘೋಷಣೆ ಹಾಗೂ ಪ್ರಬುದ್ಧತೆಯನ್ನು ಯುವಜನತೆ ಅರಿತು […]
ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಶಾಲೆಯಲ್ಲಿ ಗಾಂಧಿ & ಶಾಸ್ತ್ರಿಜಿ ಜಯಂತಿ
ಕುಂದಾಪುರ (ಅ,7) : ಕುಂದಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲೆ ಹಾಗೂ ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭಾ ಕೆ. ಎನ್ ಮತ್ತು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಮಹಾತ್ಮರ ಭಾವಚಿತ್ರಕ್ಕೆ […]
ನಮ್ಮ ನಡಿಗೆ ಗ್ರಾಮದೆಡೆಗೆ-ಸ್ವಾತಂತ್ರ್ಯಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ “ಹೊಂಬೆಳಕು”
ಕುಂದಾಪುರ (ಅ.05) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಸ್ವರಾಜ್ಯ 75 ಸಂಘಟನೆಯ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯಹೋರಾಟಗಾರ ತಲ್ಲೂರು ಎಸ್.ಎನ್. ಸುಬ್ಬಣ್ಣ ಗುಪ್ತ ಅವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.02 ರಂದು ನಡೆಯಿತು. ರಾಷ್ಟ್ರ ಧ್ವಜಕ್ಕೆ ಪುಪ್ಪಾರ್ಚನೆಯ ಮೂಲಕ ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭೀಮವ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವದಾಖಲೆಯ ಯೋಗಪಟು ತಲ್ಲೂರು ನಿರಂಜನ ಶೆಟ್ಟಿ ನಾಮಫಲಕ […]
ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಮತ್ತು ಶಾಸ್ತ್ರೀ ಜಯಂತಿ ಆಚರಣೆ
ಕುಂದಾಪುರ (ಅ.04):ಗಾಂಧಿ ಮತ್ತು ಶಾಸ್ತ್ರೀ ಇಬ್ಬರು ರಾಷ್ಟ್ರ ನಾಯಕರ ನಾಯಕತ್ವದ ಗುಣಗಳು ಮತ್ತು ದೇಶದ ಬಗೆಗಿನ ಕಾಳಜಿ ಅವರ ಬಗ್ಗೆ ನಮ್ಮ ವೈಯುಕ್ತಿಕ ಒಲವು-ನಿಲುವುಗಳನ್ನು ಮೀರಿ ನಿಲ್ಲುತ್ತವೆ.ಈ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರನ್ನು ನಾವೆಲ್ಲರೂ ಸದಾ ನೆನಪಿಸಿಕೊಳ್ಳಬೇಕು” ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ತಿಳಿಸಿದರು. ಗಾಂಧೀಜಿ- ಶಾಸ್ತ್ರೀಜಿ ಜಯಂತಿಯ ಅಂಗವಾಗಿ ಇಬ್ಬರೂ ಮಹಾನ್ […]
ಸಂತ ಮೇರಿ ಕಾಲೇಜು, ಶಿರ್ವ ” ಸಿ ಪ್ರೋಗ್ರಾಮ್ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆ
ಶಿವ೯(ಅ,4):: ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಕಚೇರಿ ಅಧೀಕ್ಷಕ್ಕಿ ಶ್ರೀಮತಿ ಡೋರಿನ್ ಡೀಸಿಲ್ವ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ್ರವರ “ಸಿ ಪ್ರೋಗ್ರಾಮ್ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು. ಪ್ರತಿಯೊಂದು ಪುಸ್ತಕ ಒಂದು ಒಳ್ಳೆಯ ಸ್ನೇಹಿತ, ಪುಸ್ತಕಗಳ ಓದುವ ಮೂಲಕ ಅನೇಕ ವಿಷಯಗಳನ್ನು ಸಂಗ್ರಹಿಸಬಹುದು ಮತ್ತು ವಿವಿಧ ಜ್ಞಾನಾರ್ಜನೆಗಳನ್ನು ವಿದ್ಯಾರ್ಥಿಗಳು ವೃದ್ಧಿಸಿಕೊಳ್ಳಬಹುದು.ಪರೀಕ್ಷಾ […]
ಶಿವಮೊಗ್ಗ ಮಕ್ಕಳ ದಸರಾ 2022: ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು
ಶಿವಮೊಗ್ಗ (ಸೆ,2022): ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ (ರಿ), ಶಿವಮೊಗ್ಗ ಇವರ ಪ್ರಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ರ ಅಂಗವಾಗಿ ಸೆಪ್ಪಂಬರ್ 27 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2 ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಗಾoಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಅ,02) ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ಆಶ್ರಯದಲ್ಲಿ ನಡೆದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|ಕೆ.ಉಮೇಶ್ ಶೆಟ್ಟಿಯವರು ಮಾತನಾಡಿ ಗಾಂಧಿ ಹಾಗೂ ಶಾಸ್ತ್ರಿ ಇಬ್ಬರೂ ನುಡಿದಂತೆ ನಡೆದವರು ಅವರ ತತ್ವ ಬೋಧನೆಗಳು ಇಂದಿಗೂ ಪ್ರಸ್ತುತ. ಸಮಕಾಲೀನವಾಗಿ ಅವರು ಸಾದರ ಪಡಿಸಿದ ಮೌಲ್ಯಗಳು ಇನ್ನಷ್ಟು ಅಧ್ಯಯನ ಶೀಲತೆಗೆ ಒಳಗಾಗಲಿ ಎಂದರು. ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ […]
ಎಸ್ ವಿ ಪಿ ಯು ಕಾಲೇಜು ಗಂಗೊಳ್ಳಿ : ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಗಂಗೊಳ್ಳಿ (ಸೆ.01): ಎನ್ಎಸ್ಎಸ್ ಮೂಲಕ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳು ಬಳಸಿಕೊಂಡರೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಸಮಾಜವನ್ನು ಕಟ್ಟುವಲ್ಲಿಯೂ ಎನ್ಎಸ್ಎಸ್ ಕೊಡುಗೆಯನ್ನು ನೀಡುತ್ತದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶ್ರೀ ಎಚ್ ಗಣೇಶ್ ಕಾಮತ್ ಅವರು ಅಭಿಪ್ರಾಯ ಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸರಸ್ವತಿ ವಿದ್ಯಾಲಯ ಅಂಗ್ಲ ಮಾಧ್ಯಮ […]
ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ
ಕಾರ್ಕಳ(ಸೆ.30): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಕ್ಕಾಗಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ, ಆರೋಗ್ಯವಂತ ಹೃದಯವಿರಬೇಕಾದರೆ ನಿಯಮಿತವಾದ ವ್ಯಾಯಾಮ, ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸೈನ್ಸ್ ಕ್ಲಬ್ನ ಮುಖ್ಯಸ್ಥ ಲೋಹಿತ್ ಎಸ್ .ಕೆ ಸುಂದರ್ ಮಾತನಾಡಿ ಸ್ವಸ್ಥಮನಸ್ಸುಗಳ ಮೂಲಕ ಎಲ್ಲರೂ ಹೃದಯವಂತರಾಗಿ, ಆರೋಗ್ಯವಂತರಾಗಲಿ ಎಂದು ಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ […]










