ಗಂಗೊಳ್ಳಿ(ಸೆ,25): ಹದಿ ಹರೆಯದಲ್ಲಿ ಕ್ರೀಡೆಯಂತಹ ಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ವಿಕಾಸಗೊಳ್ಳಲು ಸಹಾಯವಾಗುತ್ತದೆ. ಇಲ್ಲಿನ ಶಿಸ್ತು ಬದ್ಧತೆ ಎನ್ನುವಂತಾದ್ದು ಉತ್ತಮ ಜೀವನವನ್ನು ರೂಪಿಸಿಕೊಳ್ಳಿವಲ್ಲಿ ಕೂಡ ನೆರವು ನೀಡುತ್ತದೆ ಎಂದು ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಕಾರ್ಯದರ್ಶಿ ಹೆಚ್ ಗಣೇಶ ಕಾಮತ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಹೊಸಂಗಡಿ ಪಿ.ಯು ಕಾಲೇಜು: ಉಚಿತ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಿಇಟಿ ತರಬೇತಿಗಳ ಉದ್ಘಾಟನಾ ಸಮಾರಂಭ
ಹೊಸಂಗಡಿ(ಸೆ.25): ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಹಾಗೂ ಸಿಇಟಿ ತರಬೇತಿ ತರಗತಿಗಳ ಉದ್ಘಾಟನಾ ಸಮಾರಂಭ ಸೆ.24ರಂದು ಜರುಗಿತು. ಬದಲಾಗುತ್ತಿರುವ ಕಾಲಮಾನ ಹಾಗೂ ಪೋಷಕರ ಬೇಡಿಕೆಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಬೇಕಾಗಿರುವ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಸದಾ ಮುನ್ನುಡಿಯನ್ನು ಬರೆಯುತ್ತಿದೆ ಎಂದು ಪ್ರಾಂಶುಪಾಲರಾದ ಶ್ರೀ ಗೋಪಾಲ್ ಭಟ್ ಪ್ರಸ್ತಾವಿಸಿದರು. ಸಿಇಟಿ ತರಬೇತಿ, ಅದರ ಅಗತ್ಯ , ಸಿಇಟಿ ಆಧಾರಿತ ಕೋರ್ಸ್ ಗಳು, ಅದರ ಪಠ್ಯಕ್ರಮ […]
ಶಟಲ್ ಬ್ಯಾಡ್ಮಿಂಟನ್ ನಲ್ಲಿ ಕ್ರಿಯೇಟಿವ್ ಕಾಲೇಜಿನ ಲೇಖನಾ ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ (ಸೆ,24): ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಕುಮಾರಿ ಲೇಖನಾ ಬಾಲಕಿಯರ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 18 ರ ವಯೋಮಿತಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಮುಂದಿನ ರಾಜ್ಯಮಟ್ಟದ ತಂಡದಲ್ಲಿ ಆಡುವ ಅವಕಾಶ ಗಳಿಸಿದ್ದಾರೆ. […]
ಕುಂದಾಪುರ: ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ಸೇವನೆ ನಿಯಂತ್ರಣಾ ಮಾಹಿತಿ ಕಾರ್ಯಕ್ರಮ
ಕುಂದಾಪುರ(ಸೆ,23): ಹದಿಹರೆಯವೆನ್ನುವುದು ತಂಬಾಕು ಸೇವಿಸಬೇಕೆನ್ನುವ ಆಮಿಷಗಳಿಗೆ ಒಳಗಾಗುವ ಆರಂಭಿಕ ಹಂತ. ವೈಯುಕ್ತಿಕ ಆರೋಗ್ಯದ ಮೇಲೆ ತಂಬಾಕು ಸೇವನೆ ಬೀರುವ ಅಪಾಯಕಾರಿ ಪರಿಣಾಮಗಳ ಬಗ್ಗೆ ಯುವಜನರು ಗಂಭೀರವಾಗಿ ಯೋಚಿಸಿ, ಆರೋಗ್ಯ ಇಲಾಖೆ ಹೊರಡಿಸುವ ಮುನ್ನೆಚ್ಚರಿಕಾ ಮಾಹಿತಿಗಳು ಸಂದೇಶಗಳನ್ನು ಚೆನ್ನಾಗಿ ಮನಗಂಡು ತಂಬಾಕು- ಮುಕ್ತ ಸಮಾಜ ಸೃಷ್ಟಿಯಾಗಬೇಕು” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಸೆಲ್ […]
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ಹೆಮ್ಮಾಡಿ(ಸೆ.23): ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮಲಶಿಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾದ ವರ್ಷಾ ರವಿಶಂಕರ್ ಪ್ರಥಮ ಪಿ.ಯು.ಸಿ.ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಅಲಕಾ ಹೆಬ್ಬಾರ್ ಪ್ರಥಮ ಪಿ.ಯು.ಸಿ. ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ, ಪ್ರಜ್ವಲ್ ಪೂಜಾರಿ ಪ್ರಥಮ ಪಿ.ಯು.ಸಿ. ಜಾನಪದಗೀತೆಯಲ್ಲಿ […]
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ,23): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಬಾಲಕರ ವಿಭಾಗದಲ್ಲಿ ಪ್ರಜ್ವಲ್ ಪೂಜಾರಿ ಪ್ರಥಮ ಪಿ.ಯು.ಸಿ.ಮತ್ತು ಸಾತ್ವಿಕ್ ಪೂಜಾರಿ ದ್ವಿತೀಯ ಪಿ.ಯು.ಸಿ ಹಾಗೂ ಬಾಲಕಿಯರ ವಿಭಾಗದಲ್ಲಿ ಅಮಿಷಾ ಚೌದ್ರಿ ಪ್ರಥಮ ಪಿ.ಯು.ಸಿ ಮತ್ತು ಉನ್ನತಿ ಶೆಟ್ಟಿ ದ್ವಿತೀಯ ಪಿ.ಯು.ಸಿ.ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಕ್ರೀಡಾ […]
ತಾಲ್ಲೂಕು ಮಟ್ಟದ ಕ್ರೀಡಾ ಕೂಟ -2022 : ಕುಂದಾಪುರ ಟ್ರ್ಯಾಕ್ & ಫಿಲ್ಡ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಪ್ರಥಮ್ .ಪಿ ಸಾಧನೆ
ಕುಂದಾಪುರ (ಸೆ,18): ಇಲ್ಲಿನ ಗಾಂಧಿ ಮೈದಾನದಲ್ಲಿ ಇತ್ತೀಚೆಗೆ ನಡೆದ ತಾಲ್ಲೂಕು ಮಟ್ಟದಕ್ರೀಡಾ ಕೂಟ-2022 ರಲ್ಲಿ ಕುಂದಾಪುರದ ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಪ್ರಥಮ್.ಪಿ ಯವರು ಗುಂಡು ಎಸೆತ ಹಾಗೂ ಚಕ್ರ ಎಸೆತದಲ್ಲಿ ಬೆಳ್ಳಿ ಪದಕಗಳನ್ನು ಪಡೆದಿರುತ್ತಾರೆ. ಇವರು ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ಸ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶ್ರೀ ಪ್ರಶಾಂತ್ ಶೆಟ್ಟಿಯವರಿಂದ ತರಬೇತಿಯನ್ನು ಪಡೆದಿರುತ್ತಾರೆ.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಹೆಮ್ಮಾಡಿ: ಪದವಿಪೂರ್ವ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದ ಉದ್ಘಾಟನೆ
ಹೆಮ್ಮಾಡಿ(ಸೆ,21): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಬಾಲಕ ಹಾಗೂ ಬಾಲಕಿಯರ ಕಬ್ಬಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಸೆ.21 ರಂದು ನೆರವೇರಿತು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿಯವರು ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಗೋಪಾಲ ಪೂಜಾರಿಯವರು ವಹಿಸಿ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ ಕಾರ್ಯಕ್ರಮ
ಕುಂದಾಪುರ(ಸೆ,21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐ ಕ್ಯೂಎಸಿ ಆಶ್ರಯದಲ್ಲಿ ಸೆ .21 ರಂದು ನಡೆದ ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ (Faculty Development Programme) ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಎಸ್.ಎಮ್.ಎಸ್. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಹೇಶ್ ಕುಮಾರ್, ಶಿಕ್ಷಕರಿಗೆ ಬೇಕಾದ ಗುಣಗಳು ಮತ್ತು ತರಗತಿಯ ಒಳಗೆ ಮತ್ತು ಹೊರಗೆ ಶಿಕ್ಷಕರು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಬೇರೆ-ಬೇರೆ ಚಟುವಟಿಕೆಗಳ ಮೂಲಕ […]
ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ಸಂಚಿಕೆ “ಶಿಖರ” ಅನಾವರಣ
ಕುಂದಾಪುರ(ಸೆ,20): ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಸತತ 4 ಬಾರಿ ಪ್ರಥಮ ಸ್ಥಾನವನ್ನು ಪಡೆದಿರುವ ಕುಂದಾಪುರದ ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ -ಶಿಖರ ಇದರ 2020-21 ನೆ ಸಾಲಿನ ಸಂಚಿಕೆ ಯನ್ನು ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿಯವರು ಇತ್ತೀಚೆಗೆ ನಡೆದ ಕಾಲೇಜಿನ ವಾರ್ಷಿಕೋತ್ಸವದ ಸಭಾ ಕಾರ್ಯಕ್ರದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮoಗಳೂರಿನ ಡಾ| […]










