ಶಿವ೯(ಅ,4):: ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಕಚೇರಿ ಅಧೀಕ್ಷಕ್ಕಿ ಶ್ರೀಮತಿ ಡೋರಿನ್ ಡೀಸಿಲ್ವ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ್ರವರ “ಸಿ ಪ್ರೋಗ್ರಾಮ್ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು. ಪ್ರತಿಯೊಂದು ಪುಸ್ತಕ ಒಂದು ಒಳ್ಳೆಯ ಸ್ನೇಹಿತ, ಪುಸ್ತಕಗಳ ಓದುವ ಮೂಲಕ ಅನೇಕ ವಿಷಯಗಳನ್ನು ಸಂಗ್ರಹಿಸಬಹುದು ಮತ್ತು ವಿವಿಧ ಜ್ಞಾನಾರ್ಜನೆಗಳನ್ನು ವಿದ್ಯಾರ್ಥಿಗಳು ವೃದ್ಧಿಸಿಕೊಳ್ಳಬಹುದು.ಪರೀಕ್ಷಾ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಶಿವಮೊಗ್ಗ ಮಕ್ಕಳ ದಸರಾ 2022: ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು
ಶಿವಮೊಗ್ಗ (ಸೆ,2022): ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ (ರಿ), ಶಿವಮೊಗ್ಗ ಇವರ ಪ್ರಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ರ ಅಂಗವಾಗಿ ಸೆಪ್ಪಂಬರ್ 27 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2 ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಗಾoಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಅ,02) ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ಆಶ್ರಯದಲ್ಲಿ ನಡೆದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|ಕೆ.ಉಮೇಶ್ ಶೆಟ್ಟಿಯವರು ಮಾತನಾಡಿ ಗಾಂಧಿ ಹಾಗೂ ಶಾಸ್ತ್ರಿ ಇಬ್ಬರೂ ನುಡಿದಂತೆ ನಡೆದವರು ಅವರ ತತ್ವ ಬೋಧನೆಗಳು ಇಂದಿಗೂ ಪ್ರಸ್ತುತ. ಸಮಕಾಲೀನವಾಗಿ ಅವರು ಸಾದರ ಪಡಿಸಿದ ಮೌಲ್ಯಗಳು ಇನ್ನಷ್ಟು ಅಧ್ಯಯನ ಶೀಲತೆಗೆ ಒಳಗಾಗಲಿ ಎಂದರು. ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ […]
ಎಸ್ ವಿ ಪಿ ಯು ಕಾಲೇಜು ಗಂಗೊಳ್ಳಿ : ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಗಂಗೊಳ್ಳಿ (ಸೆ.01): ಎನ್ಎಸ್ಎಸ್ ಮೂಲಕ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳು ಬಳಸಿಕೊಂಡರೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಸಮಾಜವನ್ನು ಕಟ್ಟುವಲ್ಲಿಯೂ ಎನ್ಎಸ್ಎಸ್ ಕೊಡುಗೆಯನ್ನು ನೀಡುತ್ತದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶ್ರೀ ಎಚ್ ಗಣೇಶ್ ಕಾಮತ್ ಅವರು ಅಭಿಪ್ರಾಯ ಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸರಸ್ವತಿ ವಿದ್ಯಾಲಯ ಅಂಗ್ಲ ಮಾಧ್ಯಮ […]
ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ
ಕಾರ್ಕಳ(ಸೆ.30): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಕ್ಕಾಗಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ, ಆರೋಗ್ಯವಂತ ಹೃದಯವಿರಬೇಕಾದರೆ ನಿಯಮಿತವಾದ ವ್ಯಾಯಾಮ, ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸೈನ್ಸ್ ಕ್ಲಬ್ನ ಮುಖ್ಯಸ್ಥ ಲೋಹಿತ್ ಎಸ್ .ಕೆ ಸುಂದರ್ ಮಾತನಾಡಿ ಸ್ವಸ್ಥಮನಸ್ಸುಗಳ ಮೂಲಕ ಎಲ್ಲರೂ ಹೃದಯವಂತರಾಗಿ, ಆರೋಗ್ಯವಂತರಾಗಲಿ ಎಂದು ಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ […]
ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.29):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ನೀತಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ಒದಗಿಸುವ ದೃಷ್ಠಿಯಿಂದ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮ ಸೆ.28 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಶಿಸ್ತು ಮತ್ತು ಶ್ರಮದ ಅಗತ್ಯತೆಗಳ ಕುರಿತು ತಿಳಿಸಿದರು. […]
ನರೇಂದ್ರ ಎಸ್ ಗಂಗೊಳ್ಳಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಗಂಗೊಳ್ಳಿ (ಸೆ,29): ಪ್ರತಿಷ್ಠಿತ ರೋಟರಿ ಕ್ಲಬ್ ನ ರೋಟರಿ ಇಂಡಿಯಾ ಲಿಟರಸಿ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡ ಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರಿಗೆ ಲಭಿಸಿದೆ. ರೋಟರಿ ಕ್ಲಬ್ ಗಂಗೊಳ್ಳಿ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಉಪನ್ಯಾಸಕ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಬಿ.ಬಿ.ಎ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ,29): ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಪ್ರತೀ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಾ, ನಿರಂತರ ಕಲಿಕೆಗೆ ಬದುಕು ತೆರೆದುಕೊಳ್ಳಲಿ. ಕಲಿಕೆ ಬದುಕಿನ ಭಾಗವಾಗದೆ ಕಲಿಕೆಯೇ ಬದುಕಾಗಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು.ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಶೈಕ್ಷಣಿಕ ವಿಚಾರಗಳ ಕುರಿತ […]
ಶ್ರೀ ಚೇತನ್ ಶೆಟ್ಟಿ ಕೊವಾಡಿಯವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಕುಂದಾಪುರ (ಸೆ.29): ಶೈಕ್ಷಣಿಕ ,ಸಾಹಿತಿಕ, ಸಾಂಸ್ಕೃತಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡಿರುವ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಉಪಪ್ರಾಂಶುಪಾಲರು,ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರು ರೋಟರಿ ಕ್ಲಬ್ ಗಂಗೊಳ್ಳಿ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಟರಿ ಕ್ಲಬ್ ಗಂಗೊಳ್ಳಿ ಇವರ ವತಿಯಿಂದ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ಮೂಕಾಂಬಿಕಾ ಸಭಾ ಭವನದಲ್ಲಿ ಸೆ.28 ರಂದು ಹಮ್ಮಿಕೊಂಡ ಶಿಕ್ಷಕರಿಗೆ ನೀಡಲಾಗುವ ನೇಷನ್ ಬಿಲ್ಡರ್ […]
ಶಿಕ್ಷಕರು ಭಾಗ್ಯವಂತರು-ಪ್ರೊ.ಕೆ.ಉಮೇಶ್ ಶೆಟ್ಟಿ
ಕುಂದಾಪುರ (ಸೆ.29): ಶಿಕ್ಷಕ ವೃತ್ತಿ ಶ್ರೇಷ್ಠ ವಾದುದು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಜೊತೆಗೆ ಶಿಕ್ಷಕ ವ್ರತ್ತಿಯಲ್ಲಿ ಇರುವ ನಾವು ಭಾಗ್ಯವಂತರು ಎಂದು ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ಇವರ ವತಿಯಿಂದ ಕಾಲೇಜಿನ ಮೂಕಾಂಬಿಕಾ ಸಭಾoಗಣದಲ್ಲಿ ಸೆ.28 ರಂದು ಹಮ್ಮಿಕೊಂಡ ಶಿಕ್ಷಕರಿಗೆ ನೀಡಲಾಗುವ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ […]










