ಕುಂದಾಪುರ (ಆ,24):ಕುಂದಾಪುರ ಎಜುಕೇಶನ್ ಸೊಸೈಟಿ(ರಿ.), ಪ್ರವರ್ತಿತ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿಗೆ ಯುಜಿಸಿ “ನ್ಯಾಕ್’ ಸಂಸ್ಥೆಯು “B++’ ಗ್ರೇಡ್ ಮಾನ್ಯತೆ ನೀಡಿದೆ. ಹೊಸ ಮಾನ್ಯತಾ ಕ್ರಮದಲ್ಲಿ ಸಿಜಿಪಿಎ 2.92/4. ಸಂಸ್ಥೆ ಪಡೆದಿದ್ದು ಮಂಗಳೂರು ವಿ ವಿ ವ್ಯಾಪ್ತಿಗೆ ಒಳಪಟ್ಟಿರುವ ಅನುದಾನ ರಹಿತ ಶಿಕ್ಷಣ ಸಂಸ್ಥೆಯೊಂದು ಕೇವಲ 11 ವರ್ಷಗಳಲ್ಲಿ ಮಾಡಿದ ಸಾಧನೆಗೆ ಮೊಟ್ಟ ಮೊದಲ ಬಾರಿಗೆ B++ Grade ಬಂದಿರುವುದು ಬಹಳ ವಿಶೇಷವಾಗಿದೆ ಎಂಬುದಾಗಿ ಕಾಲೇಜು ಪ್ರಕಟಣೆಯಲ್ಲಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಚದುರಂಗ ಸ್ಪರ್ಧೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ,22): ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಚದುರಂಗ ಸ್ಪರ್ಧೆ ಶ್ರೀ ಮೂಕಾಂಬಿಕ ದೇವಳದ ಸ್ವತಂತ್ರ ಪ.ಪೂ. ಕಾಲೇಜು ಕೊಲ್ಲೂರು ಆ,22 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ವಿದ್ಯಾರ್ಥಿಗಳಾದ ಮಾನಸ ಪ್ರಥಮ ಸ್ಥಾನ ಹಾಗೂ ನಿಹಾಲ್ ಎನ್ ಶೆಟ್ಟಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು […]
ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಛಾಯಾ ಸಿ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಆ,22): ಪದವಿಪೂರ್ವ ಶಿಕ್ಷಣ ಇಲಾಖೆವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆ,19ರಂದು ಆಯೋಜಿಸಿದ ಉಡುಪಿ ಜಿಲ್ಲಾ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ.ಪೂಜಾರಿ ಜಿಲ್ಲೆಗೆ ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಜನತಾ ಸ್ವತಂತ್ರ […]
ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ರಾಷ್ಟ್ರ ಧ್ವಜ ವಿತರಣೆ
ಕುಂದಾಪುರದ (ಆ.12)ಇಲ್ಲಿನಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ‘ಆಝಾದಿ ಕಾ ಅಮೃತ್ ಮಹೋತ್ಸವ್ ‘ ಆಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್, ಕುಂದಾಪುರ ಇದರ ವತಿಯಿಂದ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳಿಗೆ ರಾಷ್ಟ್ರ ಧ್ವಜ ವಿತರಣೆ ಮಾಡಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ ಇದರ ಅಧ್ಯಕ್ಷರೂ, ಕಾಲೇಜಿನ ಪ್ರಾಂಶುಪಾಲರೂ ಆದ ಶ್ರೀ ನವೀನ್ ಕುಮಾರ ಶೆಟ್ಟಿಯವರು ರಾಷ್ಟ್ರ ಧ್ವಜಕ್ಕೆ ನೀಡಬೇಕಾದ ಗೌರವಸೂಚಕ ನಡಾವಳಿಗಳನ್ನು ವಿವರಿಸಿ ಕಾಲೇಜಿನ ಎಲ್ಲ ಪ್ರಾಧ್ಯಾಪಕರಿಗೆ ಮತ್ತು ಕಛೇರಿ ಸಿಬ್ಬಂಧಿಯವರಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು.
ಸಿ.ಎ ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ
ಉಡುಪಿ(ಆ,12): ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ (C.A) ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್ ಎ ಎಂ ಹಾಗೂ ಅಭಿಷೇಕ್ ಲಕ್ಷ್ಮಣ್ ನಾಯ್ಕ್ ಇವರು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಪ್ರಥಮ ವರ್ಷದ ಸಿ. ಎ ಫೌಂಡೇಶನ್ ಫಲಿತಾಂಶದಲ್ಲಿಯೇ ಅರ್ಹತೆ ಪಡೆದಿರುವುದು ಪ್ರಶಂಸನೀಯ. ಮುಂದಿನ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಪರೀಕ್ಷೆಯನ್ನು ಗುರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಅರ್ಹತಾ ಪರೀಕ್ಷೆಯಲ್ಲಿ […]
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿ ಎ ಫೌಂಡೇಶನ್ ಪರೀಕ್ಷೆ ಯಲ್ಲಿ ಉತ್ಕ್ರಷ್ಟ ಸಾಧನೆ
ಕುಂದಾಪುರ(ಅ,11): ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್(ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ರಡ್ ಅಕೌಂಟೆoಟ್ಸ್ ಆಫ್ ಇಂಡಿಯ ಜೂನ್ 2022 ರಲ್ಲಿ ನೆಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದುದರ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ. ಸಂಸ್ಥೆಯ ೬ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ […]
ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧಿಕಾರ ಸ್ವೀಕಾರ
ಉಡುಪಿ(ಆ,10): ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ, ಸಾಲಿಗ್ರಾಮದ ಚಿತ್ರಪಾಡಿಯ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧಿಕಾರ ಸ್ವೀಕರಿಸಿದರು. 1992ರಲ್ಲಿ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ, 1998ರಲ್ಲಿ ಎಂಜಿಎಂಗೆ ವರ್ಗಾವಣೆಗೊಂಡು ಕಳೆದ 24 ವರ್ಷದಿಂದ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ಕಾಲೇಜಿನ ಎನ್ನೆಸ್ಸೆಸ್, ರೆಡ್ ಕ್ರಾಸ್ ಅಧಿಕಾರಿಯಾಗಿ, ಕಾಲೇಜಿನ ಸ್ಟಾಫ್ ಕ್ಲಬ್ಬಿನ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಯಲ್ಲಿ ಕ್ರಿಯೇಟಿವ್ ಕಾಲೇಜ್ ಗೆ ಪ್ರಥಮ ಸ್ಥಾನ
ಉಡುಪಿ (ಆ,07): 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವ್ʼ ನ ಸುಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆಯಲ್ಲಿ ದಿನಾಂಕ : ಆಗಸ್ಟ್ 3 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ […]
ಸೇವೆಯಿಂದ ನಿವ್ರತ್ತರಾದ ನೆಂಪು ಅಂಗನವಾಡಿ ಶಿಕ್ಷಕಿ ಭಾರತಿ ಶೆಟ್ಟಿಯವರಿಗೆ ಬಿಳ್ಕೋಡುಗೆ
ವಂಡ್ಸೆ (ಜು, 30) : ಸುಧಿರ್ಘ 25 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜು,30 ರಂದು ಸೇವೆಯಿಂದ ನಿವ್ರತ್ತರಾದ ನೆಂಪು ಅಂಗನವಾಡಿ ಶಿಕ್ಷಕಿ ಭಾರತಿ ಶೆಟ್ಟಿಯವರನ್ನು ಶ್ರೀ ವಿನಾಯಕ ಯುವಕ ಸಂಘ (ರಿ) ನೆಂಪು ಹಾಗೂ ನೆಂಪು ಗ್ರಾಮಸ್ಥರ ವತಿಯಿಂದ ಅವರ ಸೇವೆಯನ್ನು ಗುರುತಿಸಿ ಬೀಳ್ಕೊಡುಗೆಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ನೆಂಪು ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ನೆಂಪುವಹಿಸಿದ್ದರು. […]
ಸಿ.ಇ.ಟಿ ಫಲಿತಾಂಶ : ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜು ಪ್ರಥಮ ವರ್ಷದಲ್ಲಿಯೇ ಅಮೋಘ ಸಾಧನೆ
ಕಾರ್ಕಳ (ಜು, 30) : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ. ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ್ಯಾಂಕ್ ಹಾಗೂ ಪಶುವೈದ್ಯಕೀಯ […]










