ಕುಂದಾಪುರ(ಜು,21): ಉಡುಪಿ ಜಿಲ್ಲಾ ಪಂಚಾಯತ್ ಆಯೋಜಿಸಿದ ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟವು ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ತಾಲ್ಲೂಕು ಮತ್ತು ಕುಂದಾಪುರ ಎಜುಕೇಶನ್ ಸೊಸೈಟಿ ಪವರ್ತಿತ ಹೆಚ್ ಎಂ ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟ ಇತ್ತೀಚಿಗೆ ನಡೆಯಿತು. ಎಕ್ಸಲೆಂಟ್ ಪಿಯು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸಿ.ಎ ಪರೀಕ್ಷೆಯಲ್ಲಿ ತನುಷಾ ಡಿ.ರಾವ್ ಉತ್ತೀರ್ಣ
ಕುಂದಾಪುರ (ಜು,15); ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕೋಟೇಶ್ವರದ ತನುಷಾ ಡಿ.ರಾವ್ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಸಿ. ಎ ಎನ್. ಶಾಂತರಾಮ್ & ಕೋ ಇಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಕೋಟೇಶ್ವರದ ಕುಂಬ್ರಿ ಯ ದಿನೇಶ್ ಚಂದ್ರ ರಾವ್ ಹಾಗೂ ಮಮತಾ ಎಸ್ ರಾವ್ ದಂಪತಿಯ ಪುತ್ರಿ ಮತ್ತು ಕುಂದಾಪುರದ ಪ್ರತಿಷ್ಠಿತ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಹಳೆವಿದ್ಯಾರ್ಥಿ.
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ :ಸಿಎ ಪರೀಕ್ಷೆ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ(ಜು,15): ಸಿಎ /ಸಿಎಸ್ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ರಾಷ್ಟ್ರೀಯ ಮಟ್ಟದ ಅನೇಕ ರ್ಯಾಂಕ್ ಗಳನ್ನು ಪಡೆದ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಕುಂದಾಪುರ. ಸಿಎ ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಜುಲೈ15ರಂದು ಕುಂದೇಶ್ವರ ರಸ್ತೆಯ ಸಂಸ್ಥೆಯ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿತು. ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ 2022 ರಲ್ಲಿ ನಡೆಸಿದ […]
ಲಾ & ಪ್ರ್ಯಾಕ್ಟೀಸ್ ಆಫ್ ಬ್ಯಾಂಕಿಂಗ್ ಪುಸ್ತಕ ಬಿಡುಗಡೆ
ಕುಂದಾಪುರ (ಜು,8):ಮಂಗಳೂರು ವಿ.ವಿ ಬಿ.ಕಾಂ ದ್ವೀತಿಯ ಸೆಮೆಸ್ಟರ್ ಹೊಸ ಶಿಕ್ಷಣ ನೀತಿಗೆ ಅನುಗುಣವಾದ ಲಾ & ಪ್ರ್ಯಾಕ್ಟೀಸ್ ಆಫ್ ಬ್ಯಾಂಕಿಂಗ್ ಪುಸ್ತಕವನ್ನು ಬೈಂದೂರು ಶಾಸಕ & ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್.ಸುಕುಮಾರ್ ಶೆಟ್ಟಿ ತಮ್ಮ ಗ್ರಹ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು. ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಣ ಕ್ಷೇತ್ರದಲ್ಲಿ 26 ವರ್ಷಗಳ ಅನುಭವ ಹೊಂದಿರುವ ಪ್ರೋ.ಕೆ.ಉಮೇಶ್ ಶೆಟ್ಟಿ ಹಾಗೂ ತ್ರಿಶಾ ಕಾಲೇಜು ಉಡುಪಿ ಇದರ ಉಪನ್ಯಾಸಕರಾದ ಶ್ರೀ ಸಂತೋಷ ಶೆಟ್ಟಿಯವರು ಈ […]
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಪೂರಕ : ಡಾ.ರಮೇಶ್ ಶೆಟ್ಟಿ
ಕೋಟೇಶ್ವರ(ಜು,4): ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಶಾಲೆಯಲ್ಲಿ ಮಕ್ಕಳ ಸೃಜನಶೀಲ ಚಟುವಟಿಕೆಗೆ ವೇದಿಕೆ ಕಲ್ಪಿಸಲು ಶಾಲಾ ಭಿತ್ತಿಫಲಕವನ್ನು ವಿಶೇಷವಾಗಿ ಉದ್ಘಾಟಿಸಲಾಯಿತು. ಸಂಸ್ಥೆಯ ಅವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಪೂರಕ : ಡಾ.ರಮೇಶ್ ಶೆಟ್ಟಿಧ್ಯಕ್ಷರಾದ ಡಾ. ರಮೇಶ್ ಶೆಟ್ಟಿಯವರು ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪುರವರ ಕವಿವಾಣಿಯಂತೆ ಶಾಲಾ ಕಾಲೇಜಿನಲ್ಲಿ ‘ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಠ್ಯೇತರ ಚಟುವಟಿಕೆ ಪೂರಕ’ ಎಂದು ಹೇಳಿದರು. ಮುಖ್ಯಶಿಕ್ಷಕಿಯಾದ ಶ್ರೀಮತಿ ಸುರೇಖಾರವರು […]
ಆರ್. ಎನ್. ಶೆಟ್ಟಿ ಪಿ. ಯು ಕಾಲೇಜು: ಸಿ.ಇ.ಟಿ, ಜೆ.ಇ.ಇ ಹಾಗೂ ನೀಟ್ ಕೋಚಿಂಗ್ ತರಬೇತಿಗಳ ಉದ್ಘಾಟನೆ
ಕುಂದಾಪುರ(ಜು,2): ಪೃಕೃತಿಯ ಮೂಲಭೂತ ಸಂಗತಿಗಳನ್ನು ತಿಳಿಸುವ ಮೂಲಕ ಹೊಸ ಚಿಂತನೆಗೆ ದಾರಿ ಮಾಡಿಕೊಡುವ ವಿಜ್ಞಾನ ವಿಭಾಗದ ವಿಷಯಗಳ ಆಳದ ವಿಚಾರಗಳನ್ನು ಕಲಿಯುವಲ್ಲಿ ಸಿ.ಇ.ಟಿ, ಜೆ. ಇ. ಇ, ನೀಟ್ ಕೋಚಿಂಗ್ ಸಹಕಾರಿಯಾಗಿದೆ. ಇಂಥ ಕೋಚಿಂಗ್ ಪಡೆದ ಪರಿಣಿತರಿಗೆ ಉನ್ನತ ವ್ಯಾಸಂಗಕ್ಕೆ ಸಂಬಂಧ ಪಟ್ಟ ಸಂಶೋಧನಾ ಕೇಂದ್ರಗಳಲ್ಲಿ ಸಾಕಷ್ಟು ಅವಕಾಶಗಳಿವೆ ” ಎಂದು ಉಡುಪಿಯ ಪೂರ್ಣ ಪ್ರಜ್ಞ ಕಾಲೇಜಿನ ಮಾಜಿ ಪ್ರಾಂಶುಪಾಲರು ಮತ್ತು ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ. […]
ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಅವರಿಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪ್ರಶಸ್ತಿ’
ಕುಂದಾಪುರ (ಜು,2): ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ 2021-22ನೇ ಸಾಲಿನ ಪ್ರತಿಷ್ಠಿತ‘ಮುಖ್ಯಮಂತ್ರಿಗಳ ಪ್ರಶಸ್ತಿ’ ಗೆ ಶ್ರೀ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಅವರು ಆಯ್ಕೆಯಾಗಿದ್ದು ಜುಲೈ 1 ರಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಇವರು ಪ್ರಸ್ತುತ ಮಂಗಳೂರಿನ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಎಸ್ ಟಿ […]
ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿನಿ ಸುರಕ್ಷ ಶೆಟ್ಟಿಗೆ ಪ್ರೋತ್ಸಾಹ ಧನ ವಿತರಣೆ
ನಾವುಂದ( ಜೂ,27): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಸುರಕ್ಷ ಶೆಟ್ಟಿ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಭಾಷ್ ಟೆಕ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಹೆಬ್ಬಾರ್ […]
ಎಕ್ಸಲೆಂಟ್ ಪಿಯು ಕಾಲೇಜು & ಶಾಲೆ : ವಿಶ್ವ ಪರಿಸರ ದಿನಾಚಾರಣೆ
ಕುಂದಾಪುರ (ಜೂ ,27): ಜೂನ್ 05 ರ ವಿಶ್ವ ಪರಿಸರ ದಿನದ ಅಂಗವಾಗಿ ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಶಾಲೆಯಲ್ಲಿ ವಿಶ್ವಪರಿಸರ ದಿನ ಕಾರ್ಯಕ್ರಮ ಜರುಗಿತು. ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿಯವರು ಮಾತಾನಾಡಿ ಪ್ರತಿಯೊಬ್ಬರು ಗಿಡ-ಮರ ನೆಟ್ಟು ಬೆಳಸಿ ಹಸಿರೇ ಉಸಿರಾಗಿರುವಂತೆ ಮತುವರ್ಜಿವಹಿಸಬೇಕೆಂದರು. ಶಾಲೆಯ ಆವರಣದಲ್ಲಿ ಗಿಡನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದ ಸಂಸ್ಥೆಯ ಖಜಾಂಚಿಯಾದ ಭರತ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಸಾಲುಮರದ ತಿಮ್ಮಕ್ಕನಂತೆ ಪರಿಸರ ಉಳಿಸಿ ಬೆಳೆಸುವ ಕಾಳಜಿಯನ್ನು ಮೈಗೂಡಿಕೊಳ್ಳಬೇಕೆಂದರು. ವಿಶ್ವ […]
ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು,ಕುಂದಾಪುರ: ಮಾದಕ ವಸ್ತು- ವ್ಯಸನದ ದುಷ್ಪರಿಣಾಮಗಳ ಕುರಿತು ಉಪನ್ಯಾಸ
ಕುಂದಾಪುರ(ಜೂ,27): ಮಾದಕವಸ್ತು ಸೇವನೆಯು ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ.ಈ ವ್ಯಸನದಿಂದ ಸಂಪೂರ್ಣ ದೂರವಿರುವ ಜೊತೆಗೆ ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಕುರಿತು ಅರಿವು ಹೊಂದಿರಬೇಕು ಎಂದು ಕುಂದಾಪುರದ ಪೋಲಿಸ್ ಠಾಣಾಧಿಕಾರಿ ಶ್ರೀ ಸದಾಶಿವ ಗವರೋಜಿ ಹೇಳಿದರು. ಅವರು ಕುಂದಾಪುರದ ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಮಾದಕವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು. ಕಾರ್ಯಕ್ರಮದ […]










