ಶಿರ್ವ(ಜು,27): ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ 23ನೇ ಕಾರ್ಗಿಲ್ ವಿಜಯ ದಿನಾಚರಣೆಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ನಮ್ಮ ಭಾರತಾಂಬೆಯ ರಕ್ಷಕರು ವೀರಯೋಧರರು. ಆಂತರಿಕ ಮತ್ತು ಬಾಹ್ಯ ರಾಷ್ಟ್ರ ಭದ್ರತೆಯನ್ನು ಯಶಸ್ವಿಯಾಗಿ ಕಾಪಾಡಲು ಸೇನಾ ತನ ನೆಲೆಯಲ್ಲಿ ತನ್ನ ಹದ್ದಿನ ಕಣ್ಣಿನ ಹಾಗೆ ಕಾರ್ಯನಿರ್ವಹಿಸುತ್ತಿದೆ. ಪ್ರತಿಯೊಬ್ಬ ಸೈನಿಕರ ಸಾಹಸ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಹೆಮ್ಮಾಡಿ: ಜನತಾ ಸ್ವತಂತ್ರ ಪಿ.ಯು ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ
ಹೆಮ್ಮಾಡಿ(ಜು,27): ಇಲ್ಲಿನ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಜು,26 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ನಿವೃತ್ತ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಅಧಿಕಾರಿ ಜೋಷಿ ಪಿ.ಪಿ. ಆಗಮಿಸಿ ತಾವು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ನೆನಪುಗಳೊಂದಿಗೆ ಯುದ್ಧದ ಕುರಿತಾದ ಸಂಪೂರ್ಣ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ವಹಿಸಿದ್ದರು.ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷರು […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಫುಡ್ ಆರ್ಟ್ -2K22
ಕುಂದಾಪುರ (ಜು,25): ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕಾಲೇಜು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಹಾಗೂ ಸಾಮಾಜಿಕ ವಲಯದಲ್ಲಿ ಗಮನ ಸೆಳೆದಿದೆ. ಈ ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿರುವುದು ಹಾಗೂ 4೦೦ ಕ್ಕೂ ಮಿಕ್ಕಿ ವಿವಿಧ ಬಗೆಯ ಖಾದ್ಯಗಳನ್ನು ವಿದ್ಯಾರ್ಥಿಗಳು ಸೀಮಿತ ಅವಧಿಯಲ್ಲಿ ತಯಾರಿಸಿರುವುದು ಶ್ಲಾಘನೀಯ ಎಂದು ಬಸ್ರೂರಿನ ಪ್ರತಿಭಾ ಟುಟೋರಿಯಲ್ ನ ಸಂಚಾಲಕ ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಆಗಸ್ಟ್ 03 ರಂದು ಕ್ಯಾಂಪಸ್ ಸಂದರ್ಶನ
ಶಿರ್ವ(ಜು ,23): ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಆಗಸ್ಟ್ 03 ರಂದು ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಜೀಸ್ ಸಂಸ್ಥೆ( ದಿಯಾ ಸಿಸ್ಟಮ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲು ಉದ್ದೇಶಿಸಿದೆ. ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್, ಸ್ಟಾಟಿಸ್ಟಿಕ್ಸ್, ಎಲೆಕ್ಟ್ರಾನಿಕ್ಸ್), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ.ಎಸ್),ಎಂಎಸ್ಸಿ, ಎಂಸಿಎ, ಬಿಇ,ಬಿಟೆಕ್ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.30 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ […]
ಜನತಾ ಸ್ವತಂತ್ರ ಪಿ.ಯು ಕಾಲೇಜು ಹೆಮ್ಮಾಡಿ: ಕಾನೂನು ಅರಿವು ಕಾರ್ಯಕ್ರಮ
ಹೆಮ್ಮಾಡಿ(ಜು,23): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ,ಮಕ್ಕಳ ಸಹಾಯವಾಣಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಫೋಕ್ಸೋ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಹಾಗೂ ಮಕ್ಕಳ ಸಹಾಯವಾಣಿಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು […]
ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಉಪನ್ಯಾಸ
ಕುಂದಾಪುರ(ಜು,23):ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ, ಪ್ರಸಕ್ತ ಮಣಿಪಾಲದ ಎಮ್. ಐ. ಟಿ ಯಲ್ಲಿ ಎರೋನಾಟಿಕಲ್ಸ್ ನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿರುವ ಶ್ರೀ ಫ್ಲೆಕ್ಸನ್ ನಝ್ರತ್ ಇವರು ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ತಾವು ಆಯ್ದುಕೊಂಡ ವಿಷಯದಲ್ಲಿ ಸರಳ ನೈಪುಣ್ಯತೆಯನ್ನು ಪಡೆದು ಸೂಕ್ತವಾದ ಔದ್ಯೋಗಿಕ ಜೀವನವನ್ನು ಆಯ್ಕೆ ಮಾಡಿಕೊಳ್ಳಲು ಲಭ್ಯವಿರುವ ವಿವಿಧ ಅವಕಾಶಗಳ ಬಗ್ಗೆ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಸ್ವಾಗತಿಸಿದರು. ದ್ವಿತೀಯ ಪಿ.ಯು. ಸಿ ವಿಜ್ಞಾನ ವಿಭಾಗದ ವೈಷ್ಣವಿ ಭಂಡಾರಿಯವರು ಧನ್ಯವಾದ ಸಲ್ಲಿಸಿದರು. ಕಾಲೇಜಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿಎ ಇಂಟರ್ಮಿಡಿಯೇಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
ಕುಂದಾಪುರ(ಜು,23): ಸಿಎ ,ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯ ವಿದ್ಯಾರ್ಥಿಗಳು ಮೇ 2022 ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕಿರಣ್ ಕಾಮತ್ (273), ಸುಪ್ರೀತಾ (246), ಜಸ್ವಿಟಾ ಡಿಸೋಜಾ (235), ಅಭಿಷೇಕ್ ಶೆಟ್ಟಿ (219), ಮನೋಜ್ […]
ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿ.ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
ಕುಂದಾಪುರ(ಜು,22): ಸಿಎ ,ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯ ವಿದ್ಯಾರ್ಥಿಗಳು ಮೇ ಮತ್ತು ಜುಲೈ 2022ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸಿದ ಸಿ ಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕೃತಿಕ್ ಶೆಟ್ಟಿ (163), ಶ್ರವಣ್ ಕಾಮತ್ (161), ಅಜಯ್ (147), ಮಹೇಶ […]
ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಕ್ಸಲೆಂಟ್ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಜು,21): ಉಡುಪಿ ಜಿಲ್ಲಾ ಪಂಚಾಯತ್ ಆಯೋಜಿಸಿದ ತಾಲ್ಲೂಕು ಮಟ್ಟದ ಚೆಸ್ ಪಂದ್ಯಾಟವು ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ತಾಲ್ಲೂಕು ಮತ್ತು ಕುಂದಾಪುರ ಎಜುಕೇಶನ್ ಸೊಸೈಟಿ ಪವರ್ತಿತ ಹೆಚ್ ಎಂ ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟ ಇತ್ತೀಚಿಗೆ ನಡೆಯಿತು. ಎಕ್ಸಲೆಂಟ್ ಪಿಯು […]
ಸಿ.ಎ ಪರೀಕ್ಷೆಯಲ್ಲಿ ತನುಷಾ ಡಿ.ರಾವ್ ಉತ್ತೀರ್ಣ
ಕುಂದಾಪುರ (ಜು,15); ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕೋಟೇಶ್ವರದ ತನುಷಾ ಡಿ.ರಾವ್ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಸಿ. ಎ ಎನ್. ಶಾಂತರಾಮ್ & ಕೋ ಇಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಕೋಟೇಶ್ವರದ ಕುಂಬ್ರಿ ಯ ದಿನೇಶ್ ಚಂದ್ರ ರಾವ್ ಹಾಗೂ ಮಮತಾ ಎಸ್ ರಾವ್ ದಂಪತಿಯ ಪುತ್ರಿ ಮತ್ತು ಕುಂದಾಪುರದ ಪ್ರತಿಷ್ಠಿತ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಹಳೆವಿದ್ಯಾರ್ಥಿ.










