ಉಡುಪಿ (ಜೂ,24): ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಬ್ಯಾಂಕಿನ ಸದಸ್ಯರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80 ಹಾಗೂ 2021ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 70 ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ 65 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಹೆಸಕುತ್ತೂರು : ಯೋಗ ದಿನಾಚರಣೆ
ಕುಂದಾಪುರ(ಜೂ,25): ಯೋಗವು ನಮ್ಮ ದೇಹ ಹಾಗೂ ಮನಸ್ಸಿನ ಜೊತೆಗೆ ನಮ್ಮ ಬದುಕಿನ ಆರೋಗ್ಯವನ್ನು ಸದಾ ಸುಸ್ಥಿತಿಯಲ್ಲಿಡುವ ವಿಧಾನವಾಗಿದೆ” ಎಂದು ಸೈಬ್ರಕಟ್ಟೆಯ ಉದ್ಯಮಿಗಳಾದ ಶ್ರೀ ಸಂಕಯ್ಯ ಶೆಟ್ಟಿ ನುಡಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಯೋಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಿಸಸ್ ಸಮದ್, […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಯೋಗ ದಿನಾಚರಣೆ
ಗಂಗೊಳ್ಳಿ (ಜೂ,22): ಯೋಗವನ್ನು ನಾವು ಕಲಿಯುವುದರ ಜೊತೆಜೊತೆಗೆ ಮುಂದಿನ ಪೀಳಿಗೆಯವರಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಈ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ ಖಾರ್ವಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1200 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಆರಂಭಗೊಂಡ ಕಿರು ಅವಧಿಯಲ್ಲಿ ಶೈಕ್ಷಣಿಕವಾಗಿ, […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬಿ.ಸಿ.ಎ. ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಕುಂದಾಪುರ (ಜೂ,19): ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೂ ,12ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬಿ.ಸಿ.ಎ. ವಿಭಾಗದ ಪ್ರಥಮ ರ್ಯಾಂಕ ಗಳಿಸಿದ ಸಾಧಕಿ ದೇವಾಡಿಗ ಕಾವ್ಯ ಹಾಗೂ ನಾಲ್ಕನೇಯ ರ್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರಿಗೆ ಮುಖ್ಯ ಅತಿಥಿಗಳಾದ ಶ್ರೀ ಮಹಾಬಲೇಶ್ವರ ಎಮ್.ಎಸ್., ಎಮ್.ಡಿ ಮತ್ತು ಸಿ.ಇ.ಒ. ಕರ್ನಾಟಕ ಬ್ಯಾಂಕ್ ಮಂಗಳೂರು ಸನ್ಮಾನಿಸಿದರು . ಹಾಗೆಯೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾಧಿಕಾರಿ […]
ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್:ನಿತಾ ಬಿಲ್ಲವ ಪ್ರಥಮ ಸ್ಥಾನ
ಕುಂದಾಪುರ ( ಜೂ ,19): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನಿತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಈಕೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ […]
ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಸಾಧನೆ
ಕುಂದಾಪುರ(ಜೂ,19): ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿದ್ದು ,ಸಂಸ್ಥೆಯ ವಿದ್ಯಾರ್ಥಿಗಳಾದ, ಜ್ಞಾನ್ದೇವ್ ಉಪಾಧ್ಯಾಯ-583, ಸವಿನಾ-581,ದೀಕ್ಷಾ ಎ ಶೆಟ್ಟಿ-580, ಶೆಟ್ಟಿ ಅನನ್ಯಾ ದೇವರಾಜ್-575, ದೀಕ್ಷಾ-565, ಪ್ರಜ್ವಲ್ ಪೀಟರ್ ಬೆರೆಟೋ-573, ಕೀರ್ತಿ ವಿದ್ಯಾಧರ್ ಪೈ-572, ರಜತಾ-572, ಸುನಿತಾ ಸಿಂಗ್-572, ಕೀರ್ತೆಶ್ವಿನಿ-571, ಪ್ರತೀಕ್ ಕೋತ್-570, ತ್ರಶ್ಯಾ ಅಡಪ-570, ಸೌಮ್ಯ-569, ಸುಮನಾ-567, ಕೀರ್ತಿ ಕೆ ಶೆಟ್ಟಿ-566, ಅಭಿಷೇಕ್ಎಸ್-564, ಸುಮಿತ್ ಪಾಟೀಲ್-564, ಪನ್ನಗಾ […]
ವಿ. ಕೆ. ಆರ್. ಪ್ರೌಢ ಶಾಲೆ ಕುಂದಾಪುರ :ಸಾಧಕರಿಗೆ ಸನ್ಮಾನ
ಕುಂದಾಪುರ (ಜೂ ,19): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯಲ್ಲಿ ಜೂ,18 ನಡೆಯಿತು ಎಸ್. ಎಸ್. ಎಲ್. ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 2021-22 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 620 ಕ್ಕೂ ಅಧಿಕ ಅಂಕ ಪಡೆದ ಅನ್ವಿತಾ ಎಸ್.(624), ಅನಿರುದ್ಧ ಎಸ್. ಹತ್ವಾರ್(624), ಅಭಿಷೇಕ್ ಅಡಿಗ (623 […]
ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ: ವಿಶ್ವ ಪರಿಸರ ದಿನಾಚರಣೆ
ಕುಂದಾಪುರ(ಜೂ,10) : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ವಲಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಜೂ .04 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಕುಂದಾಪುರ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳಾಗಿರುವ ಕಾಂತರಾಜ್ರವರು ವಿದ್ಯಾರ್ಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಉಪವಲಯ ಅರಣ್ಯ ಅಧಿಕಾರಿ ಹಸ್ತ ಶೆಟ್ಟಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಕಾರ್ಯವೇನು? ಗಿಡಗಳನ್ನು ಏಕೆ ನಾವು ಬೆಳೆಸಬೇಕು? […]
ಕುಂದಾಪುರ: “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರ
ಕುಂದಾಪುರ(ಜೂ,14): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ “ಹ್ಯಾಪಿ ಟೀನ್” ಹದಿಹರೆಯದ ಶಿಕ್ಷಣ ಮಾಹಿತಿ ಕಾರ್ಯಾಗಾರವನ್ನು ಜೂ,06 ರಂದು ಆಯೋಜಿಸಲಾಯಿತು. ಸಂಸ್ಥೆಯ ಹಳೆವಿದ್ಯಾರ್ಥಿನಿ ರ್ಯಾಂಕ್ ವಿಜೇತೆ ಡಾ| ಸ್ವಾತಿ ಶೇಟ್ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿಯರ ಹದಿಹರೆಯದ ಸಮಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳಿಗೆ ಗಿಡಮೂಲಿಕೆಗಳ ಸಹಾಯದಿಂದ ಮನೆಮದ್ದುಗಳನ್ನು ಹೇಗೆ ತಯಾರಿಸಿಕೊಳ್ಳಬಹುದೆಂದು ಪ್ರಾಯೋಗಿಕವಾಗಿ ಮಾಹಿತಿ ನೀಡಿದರು. ಕಾರ್ಯಾಗಾರದ […]










