ಮಂಗಳೂರು(ಆ,26): ಕ್ರಿಯೇಟಿವ್ ಪಿ.ಯು ಕಾಲೇಜು, ಕಾರ್ಕಳ ಸಂಸ್ಥೆಯ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ “ಕೈಗಾರಿಕಾ ಭೇಟಿ” ಕಾರ್ಯಕ್ರಮವನ್ನು ಆ .23 ರಂದು ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್ ಕೈಗಾರಿಕೆಗೆ ಭೇಟಿ ನೀಡಿ ಕೈಗಾರಿಕೆಯಲ್ಲಿನ ಹಾಲು ಉತ್ಪಾದನಾ ಘಟಕದ ಪ್ರಕ್ರೀಯೆಗಳು, ಹಂತಗಳು ಉತ್ಪಾದನಾ ವಿಧಾನಗಳು ಹಾಗೂ ಉತ್ಪನ್ನಗಳ ಬಗ್ಗೆ ಸವಿಸ್ಥಾರವಾದ ಮಾಹಿತಿಯನ್ನು ಸಂಗ್ರಹಿಸಿದರು. ಬದುಕಿನಲ್ಲಿ ಪಠ್ಯದ ಜ್ಞಾನದ ಜೊತೆಗೆ ಪಠ್ಯದಲ್ಲಿನ ವಿಷಯಗಳ ಪ್ರಾಯೋಗಿಕ ಜ್ಞಾನವು ಮಹತ್ತರವಾದದು ಹಾಗೂ ಒಬ್ಬ ಯಶಸ್ವಿ ಉದ್ಯಮದಾರನ್ನಾಗಿಸಲು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಕ್ಸಲೆಂಟ್ ಕುಂದಾಪುರ: ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ, ಅಂತಾರಾಷ್ಟ್ರೀಯ ಪಂದ್ಯಾಕೂಟದಲ್ಲಿ ಮೂರು ಪದಕ
ಕುಂದಾಪುರ(ಆ,26):: ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಸಾಧನೆಗೈಯುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಚಾಪನ್ನು ಮೂಡಿಸಿದ್ದಾರೆ.ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಚದುರಂಗ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳಾದ ಮಾನಸ ಪ್ರಥಮ ಸ್ಥಾನಿಯಾಗಿ ಹಾಗೂ ನಿಹಾಲ್ ಎನ್ ಶೆಟ್ಟಿ ತೃತೀಯ ಸ್ಥಾನಿಯಾಗಿ ರಾಜ್ಯ […]
ಗೀತಗಾಯನ :ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ,26): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಕುಂದಾಪುರದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿಗೀತಗಾಯನ ಸ್ಪರ್ಧೆಯಲ್ಲಿ […]
ಡಾ.ಬಿ.ಬಿ.ಹೆಗ್ಡೆ ಕಾಲೇಜಿಗೆ ನ್ಯಾಕ್ “B++’’ಗ್ರೇಡ್ ಮಾನ್ಯತೆ
ಕುಂದಾಪುರ (ಆ,24):ಕುಂದಾಪುರ ಎಜುಕೇಶನ್ ಸೊಸೈಟಿ(ರಿ.), ಪ್ರವರ್ತಿತ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿಗೆ ಯುಜಿಸಿ “ನ್ಯಾಕ್’ ಸಂಸ್ಥೆಯು “B++’ ಗ್ರೇಡ್ ಮಾನ್ಯತೆ ನೀಡಿದೆ. ಹೊಸ ಮಾನ್ಯತಾ ಕ್ರಮದಲ್ಲಿ ಸಿಜಿಪಿಎ 2.92/4. ಸಂಸ್ಥೆ ಪಡೆದಿದ್ದು ಮಂಗಳೂರು ವಿ ವಿ ವ್ಯಾಪ್ತಿಗೆ ಒಳಪಟ್ಟಿರುವ ಅನುದಾನ ರಹಿತ ಶಿಕ್ಷಣ ಸಂಸ್ಥೆಯೊಂದು ಕೇವಲ 11 ವರ್ಷಗಳಲ್ಲಿ ಮಾಡಿದ ಸಾಧನೆಗೆ ಮೊಟ್ಟ ಮೊದಲ ಬಾರಿಗೆ B++ Grade ಬಂದಿರುವುದು ಬಹಳ ವಿಶೇಷವಾಗಿದೆ ಎಂಬುದಾಗಿ ಕಾಲೇಜು ಪ್ರಕಟಣೆಯಲ್ಲಿ […]
ಚದುರಂಗ ಸ್ಪರ್ಧೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ,22): ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಚದುರಂಗ ಸ್ಪರ್ಧೆ ಶ್ರೀ ಮೂಕಾಂಬಿಕ ದೇವಳದ ಸ್ವತಂತ್ರ ಪ.ಪೂ. ಕಾಲೇಜು ಕೊಲ್ಲೂರು ಆ,22 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ವಿದ್ಯಾರ್ಥಿಗಳಾದ ಮಾನಸ ಪ್ರಥಮ ಸ್ಥಾನ ಹಾಗೂ ನಿಹಾಲ್ ಎನ್ ಶೆಟ್ಟಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು […]
ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಛಾಯಾ ಸಿ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಆ,22): ಪದವಿಪೂರ್ವ ಶಿಕ್ಷಣ ಇಲಾಖೆವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆ,19ರಂದು ಆಯೋಜಿಸಿದ ಉಡುಪಿ ಜಿಲ್ಲಾ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ.ಪೂಜಾರಿ ಜಿಲ್ಲೆಗೆ ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಜನತಾ ಸ್ವತಂತ್ರ […]
ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ರಾಷ್ಟ್ರ ಧ್ವಜ ವಿತರಣೆ
ಕುಂದಾಪುರದ (ಆ.12)ಇಲ್ಲಿನಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ‘ಆಝಾದಿ ಕಾ ಅಮೃತ್ ಮಹೋತ್ಸವ್ ‘ ಆಚರಣೆಯ ಪ್ರಯುಕ್ತ ಲಯನ್ಸ್ ಕ್ಲಬ್, ಕುಂದಾಪುರ ಇದರ ವತಿಯಿಂದ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳಿಗೆ ರಾಷ್ಟ್ರ ಧ್ವಜ ವಿತರಣೆ ಮಾಡಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ ಇದರ ಅಧ್ಯಕ್ಷರೂ, ಕಾಲೇಜಿನ ಪ್ರಾಂಶುಪಾಲರೂ ಆದ ಶ್ರೀ ನವೀನ್ ಕುಮಾರ ಶೆಟ್ಟಿಯವರು ರಾಷ್ಟ್ರ ಧ್ವಜಕ್ಕೆ ನೀಡಬೇಕಾದ ಗೌರವಸೂಚಕ ನಡಾವಳಿಗಳನ್ನು ವಿವರಿಸಿ ಕಾಲೇಜಿನ ಎಲ್ಲ ಪ್ರಾಧ್ಯಾಪಕರಿಗೆ ಮತ್ತು ಕಛೇರಿ ಸಿಬ್ಬಂಧಿಯವರಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು.
ಸಿ.ಎ ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ
ಉಡುಪಿ(ಆ,12): ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ (C.A) ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್ ಎ ಎಂ ಹಾಗೂ ಅಭಿಷೇಕ್ ಲಕ್ಷ್ಮಣ್ ನಾಯ್ಕ್ ಇವರು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಪ್ರಥಮ ವರ್ಷದ ಸಿ. ಎ ಫೌಂಡೇಶನ್ ಫಲಿತಾಂಶದಲ್ಲಿಯೇ ಅರ್ಹತೆ ಪಡೆದಿರುವುದು ಪ್ರಶಂಸನೀಯ. ಮುಂದಿನ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಪರೀಕ್ಷೆಯನ್ನು ಗುರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಅರ್ಹತಾ ಪರೀಕ್ಷೆಯಲ್ಲಿ […]
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿ ಎ ಫೌಂಡೇಶನ್ ಪರೀಕ್ಷೆ ಯಲ್ಲಿ ಉತ್ಕ್ರಷ್ಟ ಸಾಧನೆ
ಕುಂದಾಪುರ(ಅ,11): ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್(ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ರಡ್ ಅಕೌಂಟೆoಟ್ಸ್ ಆಫ್ ಇಂಡಿಯ ಜೂನ್ 2022 ರಲ್ಲಿ ನೆಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದುದರ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ. ಸಂಸ್ಥೆಯ ೬ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ […]
ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧಿಕಾರ ಸ್ವೀಕಾರ
ಉಡುಪಿ(ಆ,10): ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ, ಸಾಲಿಗ್ರಾಮದ ಚಿತ್ರಪಾಡಿಯ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧಿಕಾರ ಸ್ವೀಕರಿಸಿದರು. 1992ರಲ್ಲಿ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ, 1998ರಲ್ಲಿ ಎಂಜಿಎಂಗೆ ವರ್ಗಾವಣೆಗೊಂಡು ಕಳೆದ 24 ವರ್ಷದಿಂದ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ಕಾಲೇಜಿನ ಎನ್ನೆಸ್ಸೆಸ್, ರೆಡ್ ಕ್ರಾಸ್ ಅಧಿಕಾರಿಯಾಗಿ, ಕಾಲೇಜಿನ ಸ್ಟಾಫ್ ಕ್ಲಬ್ಬಿನ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.










