ಶಿರ್ವ(ಮೇ13) : ಸಂತ ಮೇರಿಸ್ ಕಾಲೇಜು,ಶಿರ್ವ ಮತ್ತು ಉನ್ನತಿ ಕ್ಯಾರಿಯರ್ ಅಕಾಡೆಮಿ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಉದ್ಯೋಗ ತರಬೇತಿ ಕಾರ್ಯಕ್ರಮಗಳ ಪರಸ್ಪರ ಒಡಂಬಡಿಕೆಯು ಎರಡು ಸಂಸ್ಥೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ನಡೆಯಿತು. ನಮ್ಮ ದೇಶದಲ್ಲಿ ಶೇಕಡಾ 50ರಷ್ಟು ಜನರು 35ವರ್ಷಕ್ಕಿಂತ ಸಣ್ಣವರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಲಭಿಸುವುದು ಕಷ್ಟಸಾಧ್ಯವಾಗಿದೆ.ಯುವಜನರ ಉದ್ಯೋಗದ ಸಾಮಾರ್ಥ್ಯವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಾದರೆ ಅಯಾ ಉದ್ಯೋಗಗಳ ಹಿನ್ನಲೆಯಲ್ಲಿ ಸೂಕ್ತ ತರಬೇತಿಯು ಅತ್ಯಂತ ಅಗತ್ಯವಾಗಿದೆ. ತಾಂತ್ರಿಕತೆ ಇಂದು ಎಲ್ಲಾರಂಗಗಳಲ್ಲಿ ವ್ಯಾಪಕವಾಗಿರುವ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಪುಸ್ತಕ ದಾನ ನೀಡಿ ಜ್ಞಾನ ಹರಡಿಸಿ ಪುಸ್ತಕ ಸಂಗ್ರಹ ಅಭಿಯಾನಕ್ಕೆ ಕೈ ಜೋಡಿಸಿ
ರಾಣಿಬೇನ್ನೂರು ನಗರದ ಯುವ ಕವಿ,ಸಾಹಿತ್ಯ ಪರಿಚಾರಕ ಬಸವರಾಜ ಎಸ್. ಬಾಗೇವಾಡಿಮಠರವರು ತಮ್ಮ ಸಂಸ್ಥೆಯವತಿಯಿಂದ ಹಳೆಯ ಪುಸ್ತಕಗಳನ್ನು ಸಂಗ್ರಹಿಸಿ ಬಡ ಮಕ್ಕಳಿಗೆ ಓದಲು ಕೊಡುವ ದೃಷ್ಟಿಯಿಂದ ವಿನೂತನ ಯೋಜನೆಯೊಂದನ್ನು ಜಾರಿಗೊಳಿದ್ದಾರೆ. ಮನೆಯಲ್ಲಿ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದ ಯಾವುದೇ ಹಳೆಯ ಪಠ್ಯ ಪುಸ್ತಕ, ಕಾದಂಬರಿ,ಕಥೆ, ಕವನ ಸಂಕಲನ, ಲೇಖಕನಗಳ ಮಾಲಿಕೆ, ವಾರ-ಮಾಸ ಪತ್ರಿಕೆ,ಗ್ರಂಥಗಳು, ನಿಘಂಟುಗಳು ಸೇರಿದಂತೆ ಇತರೆ ಯಾವುದೇ ವಿಷಯ ಜ್ಞಾನಾರ್ಜನೆ ಹೆಚ್ಚಿಸುವ ಪುಸ್ತಕಗಳಿರಲಿ ಅವುಗಳನ್ನು ರದ್ದಿಗೆ ಹಾಕದೇ ಮುಕ್ತವಾಗಿ ಶೃಂಗಾರ ಕಾವ್ಯ […]
ಮೂಡ್ಲಕಟ್ಟೆ ಎಂ ಐ ಟಿ ಮತ್ತು ಐ ಸಿ ಟಿ ಅಕಾಡೆಮಿ ಒಪ್ಪಂದ
ಕುಂದಾಪುರ(ಮೇ,11): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಉದ್ಯೋಗವಕಾಶ ಕಲ್ಪಿಸುವ ಮತ್ತು ಹೊಸ ತಂತ್ರಜ್ಞಾನ ದ ಮೇಲೆ ತರಬೇತಿ ನೀಡುವ ಸಲುವಾಗಿ ಪ್ರತಿಷ್ಟಿತ ಐ ಸಿ ಟಿ ಅಕಾಡೆಮಿ ಜೊತೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕಾಲೇಜಿನ ಪ್ರಾಂಶುಪಾಲ, ಡಾ .ಚಂದ್ರರಾವ್ ಮದಾನೆ ಮತ್ತು ಐ ಸಿ ಟಿ ಕಡೆಯಿಂದ ರೋಹಿತ್ ಕಜವ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ । ಮೆಲ್ವಿನ್ ದ ಸೋಜಾ ಮತ್ತು ಡೀನ್ ಅಕಾಡೆಮಿಕ್ […]
ನೀ ಸೂತ್ರಧಾರಿ ನಾ ಪಾತ್ರಧಾರಿ
” ಕುಣಿಸಲು ನೀನು ಕುಣಿವೇನು ನಾನು ……..ನೀ ಸೂತ್ರಧಾರಿ ನಾ ಪಾತ್ರಧಾರಿ “ಎನ್ನುವ ಸಾಲು ಪ್ರತಿ ವ್ಯಕ್ತಿಯ ಜೀವನ ಬಂಡಿಯ ಚಲನೆಗೆ ಒಂದು ನಿದರ್ಶನ. ಭೂಮಿ ನಮ್ಮದಲ್ಲ, ಗಾಳಿ ನಮ್ಮದಲ್ಲ, ಈ ನಾಲ್ಕು ದಿನದ ಜೀವನದಲ್ಲಿ ಚಿರಾಸ್ಥಾಯಿಯಾಗಿ ಉಳಿಯುವು ಸತ್ಕರ್ಮವಷ್ಟೇ! ಜೀವನಕ್ಕೇನು? ನಿರ್ಜೀವ ವಸ್ತುಗಳಿಗೂ ಕೂಡ ಹುಟ್ಟು , ವಿಕಾಸ ಹಾಗೂ ಅವನತಿ ಎನ್ನುವ ಜೀವನದ ಹಂತವಿರುತ್ತದೆ. ಆದರೆ ಈ ಜೀವನದಲ್ಲಿ ಅವಶ್ಯವಾಗಿರುವುದು ಜೀವಿಸುವುದು ಹಾಗೂ ನಿರರ್ಥಕ ಜೀವನವನ್ನು ಸಾರ್ಥಕವನ್ನಾಗಿಸಿಕೊಂಡು ಬದುಕಿನಲ್ಲಿ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಪ್ರಥಮ ರ್ಯಾಂಕ್ ವಿಜೇತೆ ಕಾವ್ಯಾ ದೇವಾಡಿಗರಿಗೆ ಸನ್ಮಾನ
ಕುಂದಾಪುರ ( ಏ.24): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ದೇವಾಡಿಗ ಬಿ.ಸಿ.ಎ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದುಕೊಂಡ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ.ಉಮೇಶ್ ಶೆಟ್ಟಿ ಹಾಗೂ ಭೋಧಕ ವರ್ಗ ಕಾವ್ಯಾರವರ ಸ್ವಗ್ರಹಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಕಾವ್ಯಾ ಹಾಗೂ ಅವರ ತಾಯಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜು : ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ
ಬಂಟಕಲ್(ಏ.22) : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕಶಿಬಿರವನ್ನು ಎಪ್ರಿಲ್ 18 ರಂದು ಎಸ್ವಿಎಚ್ ಪದವಿಪೂರ್ವ ಕಾಲೇಜು ಇನ್ನಂಜೆಯಲ್ಲಿ ಉದ್ಘಾಟನೆಗೊಂಡಿತು. ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕ ಆಚಾರ್ಯ ರ ವರು ಒಂದು ವಾರದ ಎನ್ಎಸ್ಎಸ್ ಶಿಬಿರವನ್ನು ದೀಪ ಬೆಳಗಿಸುವ ಮೂಲಕಉದ್ಘಾಟಿಸಿ ಶಿಬಿರದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ತಮ್ಮ ಸಹಕಾರ ನೀಡುವುದಾಗಿ ಶಿಬಿರಾರ್ಥಿಗಳಿಗೆ ಹೇಳಿದರು. ಇನ್ನಂಜೆ ಎಸ್ವಿಎಚ್ ಪದವಿಪೂರ್ವ ಕಾಲೇಜಿನ […]
ಧವಲಾ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ
ವೇಣೂರು ( ಏ,20):: ಮೌಲ್ಯಧಾರಿತ ಜೀವನ ರೂಪಿಸಿಕೊಳ್ಳಲು ಎನೆಸ್ಸೆಸ್ ಸಹಕಾರಿ. ಶಿಕ್ಷಣದ ಜತೆ ನಮ್ಮ ವ್ಯಕ್ತಿತ್ವವು ಶಕ್ತಿಯಾಗಿ ಹೊರಹೊಮ್ಮಲಿ ಎಂದು ವೇಣೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಅರುಣ್ ಕ್ರಾಸ್ತ ಹೇಳಿದರು. ಅವರು ಬಜಿರೆ ಸ.ಉ.ಪ್ರಾ. ಶಾಲೆಯ ಸಭಾಂಗಣದಲ್ಲಿ ರವಿವಾರ ಜರಗಿದ ಮೂಡಬಿದಿರೆ ಶ್ರೀ ಧವಲಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಧವಲಾ ಕಾಲೇಜಿನ ಪ್ರಾಚಾರ್ಯ ಡಾ| ಸುದರ್ಶನ ಕುಮಾರ್ […]
ವೈಷ್ಣವಿ ಗೋಪಾಲ್ ಗೆ 5ನೇ ರ್ಯಾಂಕ್
ಗಂಗೊಳ್ಳಿ ( ಏ.20): ಮಂಗಳೂರು ವಿಶ್ವವಿದ್ಯಾನಿಲಯದ 20020-21 ನೇ ಸಾಲಿನ ಪರೀಕ್ಷೆಯಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗಂಗೊಳ್ಳಿಯ ವೈಷ್ಣವಿ ಗೋಪಾಲ ಚಂದನ್ ಬಿಎ ಪದವಿ ಪರೀಕ್ಷೆಯಲ್ಲಿ ಐದನೇ ರ್ಯಾಂಕ್ ಗಳಿಸಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿರುವ ಇವರು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಸಂಚಲನ ಫೌಂಡೇಶನ್ ಕುಂದಾಪುರ ಇದರ ಉಪಾಧ್ಯಕ್ಷೆ. ಗಂಗೊಳ್ಳಿಯ ಗೋಪಾಲ ಚಂದನ್ ಮತ್ತು ಖ್ಯಾತ ಆಯುರ್ವೇದ ವೈದ್ಯೆ ಡಾ. ವೀಣಾ ಕಾರಂತ್ ದಂಪತಿಯ ಪುತ್ರಿ.
ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಕಾವ್ಯ ದೇವಾಡಿಗ ಮಂಗಳೂರು ವಿ.ವಿ ಗೆ ಪ್ರಥಮ ರ್ಯಾಂಕ್
ಕುಂದಾಪುರ ( ಏ.18): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ .ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ ಪದವಿಯಲ್ಲಿ ಪ್ರಥಮ ರ್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿ ಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ.ಸುಕುಮಾರ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ,ಪ್ರಾಂಶುಪಾಲರು ಹಾಗೂ ಭೋಧಕ &ಭೋಧಕೇತರ ವ್ರಂದ […]
ಸಮುದಾಯ ಕುಂದಾಪುರ: ಏ. 22 ರಂದು ಮಕ್ಕಳಿಗಾಗಿ ಒಂದು ದಿನದ ವಿಜ್ಞಾನ ಮೇಳ
ಕುಂದಾಪುರ (ಏ.19): ಸಮುದಾಯ ಕುಂದಾಪುರ ಇವರ ಆಶ್ರಯದಲ್ಲಿ ದಿ.ಕಾರ್ಕಡ ರಾಮಚಂದ್ರ ಉಡುಪ ನೆನಪಿನ ಕಾರ್ಯಕ್ರಮ “ಚುಕ್ಕಿ ಚಂದ್ರಮ”- ಮಕ್ಕಳಿಗಾಗಿ ಒಂದು ದಿನದ ವಿಜ್ಞಾನ ಮೇಳ ವನ್ನು ಇದೇ ಏ,22 ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 4.30 ತನಕ ಕುಂದಾಪುರದ ಸಂತ ಜೊಸೆಫ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ. 6 ರಿಂದ 10ನೆಯ ತರಗತಿಯವರೆಗಿನ ನಲವತ್ತು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶ್ರೀಬಾಲಗಂಗಾಧರ ಶೆಟ್ಟಿ , ಉದಯ ಗಾಂವಕಾರ್ […]










