ಬಂಟಕಲ್(ಏ.22) : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕಶಿಬಿರವನ್ನು ಎಪ್ರಿಲ್ 18 ರಂದು ಎಸ್ವಿಎಚ್ ಪದವಿಪೂರ್ವ ಕಾಲೇಜು ಇನ್ನಂಜೆಯಲ್ಲಿ ಉದ್ಘಾಟನೆಗೊಂಡಿತು. ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕ ಆಚಾರ್ಯ ರ ವರು ಒಂದು ವಾರದ ಎನ್ಎಸ್ಎಸ್ ಶಿಬಿರವನ್ನು ದೀಪ ಬೆಳಗಿಸುವ ಮೂಲಕಉದ್ಘಾಟಿಸಿ ಶಿಬಿರದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ತಮ್ಮ ಸಹಕಾರ ನೀಡುವುದಾಗಿ ಶಿಬಿರಾರ್ಥಿಗಳಿಗೆ ಹೇಳಿದರು. ಇನ್ನಂಜೆ ಎಸ್ವಿಎಚ್ ಪದವಿಪೂರ್ವ ಕಾಲೇಜಿನ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಧವಲಾ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ
ವೇಣೂರು ( ಏ,20):: ಮೌಲ್ಯಧಾರಿತ ಜೀವನ ರೂಪಿಸಿಕೊಳ್ಳಲು ಎನೆಸ್ಸೆಸ್ ಸಹಕಾರಿ. ಶಿಕ್ಷಣದ ಜತೆ ನಮ್ಮ ವ್ಯಕ್ತಿತ್ವವು ಶಕ್ತಿಯಾಗಿ ಹೊರಹೊಮ್ಮಲಿ ಎಂದು ವೇಣೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಅರುಣ್ ಕ್ರಾಸ್ತ ಹೇಳಿದರು. ಅವರು ಬಜಿರೆ ಸ.ಉ.ಪ್ರಾ. ಶಾಲೆಯ ಸಭಾಂಗಣದಲ್ಲಿ ರವಿವಾರ ಜರಗಿದ ಮೂಡಬಿದಿರೆ ಶ್ರೀ ಧವಲಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಧವಲಾ ಕಾಲೇಜಿನ ಪ್ರಾಚಾರ್ಯ ಡಾ| ಸುದರ್ಶನ ಕುಮಾರ್ […]
ವೈಷ್ಣವಿ ಗೋಪಾಲ್ ಗೆ 5ನೇ ರ್ಯಾಂಕ್
ಗಂಗೊಳ್ಳಿ ( ಏ.20): ಮಂಗಳೂರು ವಿಶ್ವವಿದ್ಯಾನಿಲಯದ 20020-21 ನೇ ಸಾಲಿನ ಪರೀಕ್ಷೆಯಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗಂಗೊಳ್ಳಿಯ ವೈಷ್ಣವಿ ಗೋಪಾಲ ಚಂದನ್ ಬಿಎ ಪದವಿ ಪರೀಕ್ಷೆಯಲ್ಲಿ ಐದನೇ ರ್ಯಾಂಕ್ ಗಳಿಸಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿರುವ ಇವರು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಸಂಚಲನ ಫೌಂಡೇಶನ್ ಕುಂದಾಪುರ ಇದರ ಉಪಾಧ್ಯಕ್ಷೆ. ಗಂಗೊಳ್ಳಿಯ ಗೋಪಾಲ ಚಂದನ್ ಮತ್ತು ಖ್ಯಾತ ಆಯುರ್ವೇದ ವೈದ್ಯೆ ಡಾ. ವೀಣಾ ಕಾರಂತ್ ದಂಪತಿಯ ಪುತ್ರಿ.
ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಕಾವ್ಯ ದೇವಾಡಿಗ ಮಂಗಳೂರು ವಿ.ವಿ ಗೆ ಪ್ರಥಮ ರ್ಯಾಂಕ್
ಕುಂದಾಪುರ ( ಏ.18): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ .ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ ಪದವಿಯಲ್ಲಿ ಪ್ರಥಮ ರ್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿ ಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ.ಸುಕುಮಾರ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ,ಪ್ರಾಂಶುಪಾಲರು ಹಾಗೂ ಭೋಧಕ &ಭೋಧಕೇತರ ವ್ರಂದ […]
ಸಮುದಾಯ ಕುಂದಾಪುರ: ಏ. 22 ರಂದು ಮಕ್ಕಳಿಗಾಗಿ ಒಂದು ದಿನದ ವಿಜ್ಞಾನ ಮೇಳ
ಕುಂದಾಪುರ (ಏ.19): ಸಮುದಾಯ ಕುಂದಾಪುರ ಇವರ ಆಶ್ರಯದಲ್ಲಿ ದಿ.ಕಾರ್ಕಡ ರಾಮಚಂದ್ರ ಉಡುಪ ನೆನಪಿನ ಕಾರ್ಯಕ್ರಮ “ಚುಕ್ಕಿ ಚಂದ್ರಮ”- ಮಕ್ಕಳಿಗಾಗಿ ಒಂದು ದಿನದ ವಿಜ್ಞಾನ ಮೇಳ ವನ್ನು ಇದೇ ಏ,22 ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 4.30 ತನಕ ಕುಂದಾಪುರದ ಸಂತ ಜೊಸೆಫ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ. 6 ರಿಂದ 10ನೆಯ ತರಗತಿಯವರೆಗಿನ ನಲವತ್ತು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶ್ರೀಬಾಲಗಂಗಾಧರ ಶೆಟ್ಟಿ , ಉದಯ ಗಾಂವಕಾರ್ […]
ಶ್ವೇತಾ ಪೂಜಾರಿಗೆ ಚಿನ್ನದ ಪದಕ
ಕುಂದಾಪುರ( ಏ.18): ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ನ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21 ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ ಕಾಲೇಜಿಗೆ ಅತ್ಯಧಿಕ ಅಂಕ ಗಳಿಸುವ ಮೂಲಕ ಚಿನ್ನದ ಪದಕವನ್ನು ಗಳಿಸಿರುತ್ತಾರೆ. ಪಠ್ಯಕ್ರಮದ ಹೊರತಾಗಿ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ವಿದ್ಯಾರ್ಥಿಗಳಿಗೆ ನೀಡಲಾಗುವ ಐ ಎಸ್ ಬಿ ಆರ್ ಕಾಲೇಜಿನ ಜೆಮ್ಸ್ ಮತ್ತು […]
ಡಾ. ಬಿ.ಬಿ. ಹೆಗ್ಡೆ ಕಾಲೇಜಿಗೆ 2 ರ್ಯಾಂಕ್ & 5 ಚಿನ್ನದ ಪದಕ
ಕುಂದಾಪುರ ( ಏ.18): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ,ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ .ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಹಾಗೂ ಸುಮಧುರ ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವುದರ ಜೊತೆಗೆ ಬಿ.ಸಿ.ಎ ಪದವಿಯಲ್ಲಿ ಮೂರನೇ ರ್ಯಾಂಕ್ ಹಾಗೂ ನಾಲ್ಕನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಹಾಗೆಯೇ ಅಂತಿಮ ಪದವಿ ಬಿ.ಕಾಂ ಫೈನಾನ್ಸಿಯಲ್ ಎಕೌಂಟಿಂಗ್ ವಿಷಯದಲ್ಲಿ ವಿದ್ಯಾರ್ಥಿನಿಯರಾದ ಪ್ರತೀಕ್ಷಾ ಪಿ.ಎಸ್ ,ಅಂಕಿತಾ,ಸುಚಿತ್ರಾ ಶೆಟ್ಟಿ ,ಬಿ.ಬಿ ಹಾಜಿರಾ […]
ಸಮುದಾಯದತ್ತ ಶಾಲೆಯಲ್ಲಿ ಸಂಜಿತ್ ಸ್ಯಾಕ್ಸೋಫೋನ್ ವಾದನ
ಗಂಗೊಳ್ಳಿ( ಏ.13): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿಯಲ್ಲಿ ಕಳೆದ ಶನಿವಾರ ನಡೆದ ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಈ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗನಿಂದ ಸ್ಯಾಕ್ಸೋಪೋನ್ ವಾದನದ ಕರ್ಯಕ್ರಮ ನಡೆಯಿತು. ಭಕ್ತಿಗೀತೆ, ದೇಶಭಕ್ತಿ ಗೀತೆ, ಭಾವಗೀತೆ, ಚಲನಚಿತ್ರ ಗೀತೆಯ ಜೊತೆಗೆ ರಾಷ್ಟ್ರಗೀತೆಯನ್ನು ನುಡಿಸಿ ಮೆಚ್ಚುಗೆ ಗಳಿಸಿದ ಸಂಜಿತ್ ಎಂ ದೇವಾಡಿಗನನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಸ್. […]
ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ.ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಏ.10): ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಛೇರಿ- ಕ್ಷಯ ಘಟಕ ಕುಂದಾಪುರ, ತಾಲ್ಲೂಕು ಆರೋಗ್ಯ ಕೇಂದ್ರ ಕುಂದಾಪುರ ಇವರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಕ್ಷಯ ರೋಗದ ಕುರಿತಾದ ಆಯ್ದ ಪದವಿ ಕಾಲೇಜುಗಳ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ. ವಿಜೇತರಿಗೆ ಕುಂದಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ರಾಜೇಶ್ವರಿಯವರು ಪ್ರಶಸ್ತಿ ನೀಡಿ ಗೌರವಿಸಿದರು. ತಂಡದಲ್ಲಿ ಭಾಗಿಯಾದ ಅಕ್ಷಯ್ ಶೆಟ್ಟಿ, ಅಕ್ಷತ್ , ಶ್ವೇತಾ,ಮೇಘನಾ […]
ಗುಣಾತ್ಮಕ ಶಿಕ್ಷಣ ನೀಡಲು ಸಜ್ಜಾಗಿದೆ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು
“ ಶಿಕ್ಷಣ ಭಾರತದ ಗ್ರಾಮೀಣ ಪ್ರದೇಶಗಳನ್ನು ತಲುಪಬೇಕು. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಗುರಿಯನ್ನು ಸಾಧಿಸುವಂತಾಗಬೇಕು ” ಎಂಬ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರವರ ನುಡಿಯಂತೆ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾದದ್ದು. ಸ್ಪರ್ಧಾತ್ಮಕ ಜಗತ್ತಿನ ವೇಗದ ಜೊತೆಗೆ ಹೆಜ್ಜೆ ಹಾಕಲು ಇಂದಿನ ಯುವ ಪೀಳಿಗೆಗೆ ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಪ್ರಕೃತಿ ರಮಣೀಯ ಪರಿಸರದಲ್ಲಿ ಮೈ ತಳೆದು ನಿಂತಿರುವ […]










