ಕುಂದಾಪುರ (ಫೆ.1):ಈಗಿನ ಆಹಾರ ಪದ್ಧತಿ, ಮೊಬೈಲ್ ಬಳಕೆಗಳ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ದುರ್ಬಲ ಮನಸ್ಸಿನ ಮಕ್ಕಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂತಹ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಾಮೂಹಿಕವಾಗಿ ವಿಚಾರಿಸುವುದಕ್ಕಿಂತ ಸಾಧ್ಯವಾದಷ್ಟು ಪ್ರತ್ಯೇಕವಾಗಿ ವಿಚಾರಣೆ ಅತಿ ಅವಶ್ಯಕ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ ಭಂಡಾರಿಯವರು ಹೇಳಿದರು. ಅವರು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು : ರಾಷ್ಟ್ರೀಯ ಮತದಾರರ ದಿನಾಚರಣೆ
ಕೊಲ್ಲೂರು(ಜ.30); ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ.25 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಸ್ ಅರುಣ್ಪ್ರಕಾಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತದಾನದ ಮಹತ್ವದ ಬಗ್ಗೆ ತಿಳಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಹಾಗೂ ಉಪಸ್ಥಿತರಿದ್ದರು.
ಇ ಸಿ ಆರ್ ಕಾಲೇಜ್: 73 ನೇ ಗಣರಾಜ್ಯೋತ್ಸವ
ಮಧುವನ(ಜ.30): ಇ ಸಿ ಆರ್ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ನೆರವೇರಿತು. ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಧು ಟಿ ಭಾಸ್ಕರನ್ ಧ್ವಜಾರೋಹಣ ನೆರವೇರಿಸಿ ಪ್ರಜಾ ಪ್ರಭುತ್ವದ ಕುರಿತು ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಜೋಬಿನ್ ಜೋಸೆಫ್, ಶ್ರೀ ಅನಿಲ್ ಪಣಿಕ್ಕರ್, ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್, ಕೆನರಾ ಕಾಲೇಜ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಶ್ರೀ ನಟರಾಜ್ ಕೆ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕುಮಾರಿ ಸುಷ್ಮಿತಾ ಸ್ವಾಗತಿಸಿದರು, […]
ಸಂತ ಮೇರಿ ಮಹಾವಿದ್ಯಾಲಯದ 73 ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ
ಶಿರ್ವ(ಜ.29): ಸಂತ ಮೇರಿ ಮಹಾವಿದ್ಯಾಲಯದ 73ನೆ ಗಣರಾಜ್ಯೋತ್ಸವ ದಿನಾಚರಣೆ ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: 73 ನೇ ಗಣರಾಜ್ಯೋತ್ಸವ (ಧ್ವಜಾರೋಹಣ, ಎನ್ಸಿಸಿ ಪೆರೇಡ್, ಸೈನಿಕರಿಗೆ ಸಮ್ಮಾನ)
ಕುಂದಾಪುರ ( ಜ26) : ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ 73 ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲ್ಪಟ್ಟಿತು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರು ಶಾಸಕರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣ ನೆರವೇಸಿದರು. ನಂತರ ಮಾತನಾಡಿದ ಅವರು, ನಾವು ಸಮಾನತೆಯಿಂದ ಶಿಕ್ಷಣ ಕಲಿಯುತ್ತಿರುವುದೇ ಸಂವಿಧಾನ ಜಾರಿಗೆ ಬಂದದ್ದರಿಂದ. ಭಾರತ ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಮೇಲೆಯೇ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವತಂತ್ರ, ಧರ್ಮ, […]
ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ಮತದಾರರ ದಿನಾಚರಣೆ- ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ
ಮೂಡ್ಲಕಟ್ಟೆ( ಜ.26): ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಜ .25 ರಂದು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾಲೇಜಿನ ಎಲ್ಲಾ ವಿಭಾಗದ ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.
ಸಂತ ಮೇರಿ ಕಾಲೇಜು ಶಿರ್ವ: ಎನ್.ಎಸ್.ಎಸ್ ಮಾಹಿತಿ ಕಾರ್ಯಕ್ರಮ
ಶಿರ್ವ(ಜ.23):ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಥಮ ವರ್ಷದ ಸ್ವಯಂ ಸೇವಕರಿಗೆ ಮಾಹಿತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾಲೇಜಿನ ಎನ್.ಎಸ್.ಎಸ್ ಸಹ ಯೋಜನಾಧಿಕಾರಿ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಸ್ಯಾಮ್ಜೋಯಲ್ ಡಯಾಸ್ರವರು ಎನ್.ಎಸ್.ಎಸ್. ಸ್ವಯಂ ಸೇವಕರು ಸದಾ ಕಾರ್ಯ ಪ್ರವೃತ್ತವಾಗುವುದರೊಂದಿಗೆ ಸಮಾಜಕ್ಕಾಗಿ ಅರ್ಪಣಾ ಮನೋಭಾವನೆಯನ್ನು ಹೊಂದಿರಬೇಕು ಎಂದು ಹೇಳುತ್ತಾ ಎನ್,ಎಸ್.ಎಸ್ನ ಧ್ಯೇಯ, ವ್ಯಾಪ್ತಿ ಹಾಗೂ ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ನ […]
ಸಂತ ಮೇರಿ ಕಾಲೇಜು ಶಿರ್ವ: ರಾಷ್ಟ್ರೀಯ ಯುವ ಸಪ್ತಾಹ 2022 -ವಿಶೇಷ ಕಾರ್ಯಕ್ರಮ
ಶಿರ್ವ(ಜ.23): ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಮಂಗಳೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ಸಂತ ಮೇರಿ ಕಾಲೇಜು ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ-2022 ವಿಶೇಷ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ. ಆರ್ ಪಾಟ್ಕರ್ರವರು ಯುವಕರು ಸ್ವಾಮಿ ವಿವೇಕಾನಂದರ […]
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಪುತ್ತೂರು(ಜ.21): ಮಾನವನ ಪಾಲಿಗೆ ರಕ್ತ ಜೀವದ್ರವ, ರಕ್ತದಾನದ ಕುರಿತು ಅರಿವು ಅತ್ಯವಶ್ಯಕ ಎಂದು ಪುತ್ತೂರಿನ ರೋಟರಿ-ಕ್ಯಾಂಪ್ಕೋ ಬ್ಲಡ್ ಬ್ಯಾಂಕಿನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್.ಕೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್ಕ್ರಾಸ್ ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ನಗರ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಏರ್ಪಡಿಸಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತಾಡಿದರು. ಕಾಯಿಲೆ, ಶಸ್ತ್ರಚಿಕಿತ್ಸೆ, ಅಪಘಾತಗಳ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಂಡ್ಸೆ ಎಸ್ಎಲ್ಆರ್ಎಂ ಘಟಕಕ್ಕೆ ಭೇಟಿ
ಕುಂದಾಪುರ (ಜ.21): ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿಗಳು ವಂಡ್ಸೆ ಗ್ರಾಮ ಪಂಚಾಯತ್ನ ಘನ ಮತ್ತು ದ್ರವ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ವಿಸ್ತರಣಾ ಚಟುವಟಿಕೆಯ ಅಂಗವಾಗಿ ಭೇಟಿ ನೀಡಿದ ವಿದ್ಯಾರ್ಥಿಗಳು, ತ್ಯಾಜ್ಯ ನಿರ್ವಹಣೆಯ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಪಡೆದರು. ಭೇಟಿಯ ಸಂದರ್ಭದಲ್ಲಿ ರಾಜ್ಯದಲ್ಲಿಯೇ ಮಾದರಿತ್ಯಾಜ್ಯ ನಿರ್ವಹಣಾ ಘಟಕವಾಗಿ ರೂಪಿಸಿದ ರೂವಾರಿಗಳು, ವಂಡ್ಸೆ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಡಿಕೆಕೋಡ್ಲು ಅವರು ಉಪಸ್ಥಿತರಿದ್ದು […]










