ಮಧುವನ(ಫೆ.9): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಫೆ.4 ರಂದು “ಫ್ಲಾಶ್ ಮೊಬ್ – ಕ್ಯಾನ್ಸರ್ ಅರಿವು ಕಾರ್ಯಕ್ರಮ” ಆಯೋಜಿಸಲಾಗಿತ್ತು. ಕಾಲೇಜಿನಪ್ರಾಂಶುಪಾಲ ಶ್ರೀ ಆಕಾಶ್ ಸಾವಳ ಸಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ನೃತ್ಯ ರೂಪಕದ ಮೂಲಕ ಧೂಮಪಾನ, ಮಧ್ಯಪಾನ ಸೇವನೆಯಿಂದಾಗಿ ಕ್ಯಾನ್ಸರ್ಗೆ ಕಾರಣವಾಗುತ್ತದೆ ಹಾಗೆಯೇ ಇದರ ಸೇವನೆ ತ್ಯಜಿಸಿ ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡು ಬದುಕು ನಡೆಸುವ ಬಗೆಗೆ ಅರಿವು ಮೂಡಿಸಿದರು. ಕಾಲೇಜಿನ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕುಂದಾಪುರ ಸ.ಪ.ಪೂ ಕಾಲೇಜು: ವಿಶ್ವಾಸ ಕಿರಣ ಕಾರ್ಯಕ್ರಮ
ಕುಂದಾಪುರ (ಫೆ.6): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗಾಗಿ ಒಂದು ತಿಂಗಳ ಆಂಗ್ಲ ಭಾಷಾ ವಿಷಯದ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ವಿಶ್ವಾಸ ಕಿರಣ ತರಗತಿಗಳನ್ನು ಕುಂದಾಪುರ ಸ.ಪ.ಪೂ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 101 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿದ್ದು, ಪ್ರತಿ ದಿನವೂ ಮೂರು ತಂಡಗಳನ್ನು ಮಾಡಿ ತರಗತಿಗಳನ್ನು ನಡೆಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಶ್ರೀ […]
ಡಾ.ಬಿ.ಬಿ ಹೆಗ್ಡೆ ಕಾಲೇಜು: ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ (ಫೆ:03): ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಇದರ ಜಿಲ್ಲಾ ತರಬೇತಿ ಆಯುಕ್ತರಾದ ಆನಂದ ಅಡಿಗ ರವರು ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ 2021 -2022 ನೇ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹೆಚ್ಚಾಗಬೇಕು, ಪ್ರತಿಫಲದ ಅಪೇಕ್ಷೆ ಇಲ್ಲದೇ ಕಾರ್ಯಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಕಾರಕ್ಕೆ ಸ್ಪಂದಿಸಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. […]
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ
ಕೋಟೇಶ್ವರ (ಫೆ.2): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ.ಮೆಲ್ವಿನ್ ಡಿ’ಸೋಜ ರವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ- ಶಿಕ್ಷಕ ಸಭೆ
ಕುಂದಾಪುರ (ಫೆ.1):ಈಗಿನ ಆಹಾರ ಪದ್ಧತಿ, ಮೊಬೈಲ್ ಬಳಕೆಗಳ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ದುರ್ಬಲ ಮನಸ್ಸಿನ ಮಕ್ಕಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂತಹ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಾಮೂಹಿಕವಾಗಿ ವಿಚಾರಿಸುವುದಕ್ಕಿಂತ ಸಾಧ್ಯವಾದಷ್ಟು ಪ್ರತ್ಯೇಕವಾಗಿ ವಿಚಾರಣೆ ಅತಿ ಅವಶ್ಯಕ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ ಭಂಡಾರಿಯವರು ಹೇಳಿದರು. ಅವರು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು : ರಾಷ್ಟ್ರೀಯ ಮತದಾರರ ದಿನಾಚರಣೆ
ಕೊಲ್ಲೂರು(ಜ.30); ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ.25 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಸ್ ಅರುಣ್ಪ್ರಕಾಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತದಾನದ ಮಹತ್ವದ ಬಗ್ಗೆ ತಿಳಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಪ್ರತಿಜ್ಞೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಹಾಗೂ ಉಪಸ್ಥಿತರಿದ್ದರು.
ಇ ಸಿ ಆರ್ ಕಾಲೇಜ್: 73 ನೇ ಗಣರಾಜ್ಯೋತ್ಸವ
ಮಧುವನ(ಜ.30): ಇ ಸಿ ಆರ್ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ನೆರವೇರಿತು. ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಧು ಟಿ ಭಾಸ್ಕರನ್ ಧ್ವಜಾರೋಹಣ ನೆರವೇರಿಸಿ ಪ್ರಜಾ ಪ್ರಭುತ್ವದ ಕುರಿತು ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಜೋಬಿನ್ ಜೋಸೆಫ್, ಶ್ರೀ ಅನಿಲ್ ಪಣಿಕ್ಕರ್, ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್, ಕೆನರಾ ಕಾಲೇಜ್ ಆಫ್ ನರ್ಸಿಂಗ್ನ ಪ್ರಾಂಶುಪಾಲರಾದ ಶ್ರೀ ನಟರಾಜ್ ಕೆ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕುಮಾರಿ ಸುಷ್ಮಿತಾ ಸ್ವಾಗತಿಸಿದರು, […]
ಸಂತ ಮೇರಿ ಮಹಾವಿದ್ಯಾಲಯದ 73 ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ
ಶಿರ್ವ(ಜ.29): ಸಂತ ಮೇರಿ ಮಹಾವಿದ್ಯಾಲಯದ 73ನೆ ಗಣರಾಜ್ಯೋತ್ಸವ ದಿನಾಚರಣೆ ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು: 73 ನೇ ಗಣರಾಜ್ಯೋತ್ಸವ (ಧ್ವಜಾರೋಹಣ, ಎನ್ಸಿಸಿ ಪೆರೇಡ್, ಸೈನಿಕರಿಗೆ ಸಮ್ಮಾನ)
ಕುಂದಾಪುರ ( ಜ26) : ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ 73 ನೇ ಗಣರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲ್ಪಟ್ಟಿತು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರು ಶಾಸಕರಾದ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣ ನೆರವೇಸಿದರು. ನಂತರ ಮಾತನಾಡಿದ ಅವರು, ನಾವು ಸಮಾನತೆಯಿಂದ ಶಿಕ್ಷಣ ಕಲಿಯುತ್ತಿರುವುದೇ ಸಂವಿಧಾನ ಜಾರಿಗೆ ಬಂದದ್ದರಿಂದ. ಭಾರತ ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಮೇಲೆಯೇ ಈ ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಾದ ಸಮಾನತೆ, ಸ್ವತಂತ್ರ, ಧರ್ಮ, […]
ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ಮತದಾರರ ದಿನಾಚರಣೆ- ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ
ಮೂಡ್ಲಕಟ್ಟೆ( ಜ.26): ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಜ .25 ರಂದು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾಲೇಜಿನ ಎಲ್ಲಾ ವಿಭಾಗದ ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.










