ಕುಂದಾಪುರ (ಡಿ,9): ದೇಶಕ್ಕೆ ಅತಿ ಹೆಚ್ಚು ಬ್ಯಾಂಕುಗಳನ್ನು ಕೊಡುಗೆಯಾಗಿ ನೀಡಿದ ಅವಳಿ ಜಿಲ್ಲೆ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಬ್ಯಾಂಕಿಂಗ್ ಉದ್ಯೋಗಕ್ಕೆ ಮತ್ತು ಬ್ಯಾಂಕ್ ಪರೀಕ್ಷೆ ಎದುರಿಸಲು ಅತಿ ಹೆಚ್ಚು ವಿದ್ಯಾರ್ಥಿಗಳು ಪ್ರಯತ್ನ ಪಡಬೇಕು ಮತ್ತು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ ಇದರ ಕಾರ್ಯ ಮೆಚ್ಚುವಂತದ್ದು ಎಂದು ಕೆನರಾ ಬ್ಯಾಂಕಿನ ರಿಕವರಿ ಮ್ಯಾನೇಜರ್ ಪ್ರಭಾಕರ ಶೆಟ್ಟಿಯವರು ನೂತನ ಬ್ಯಾಚ್ನ್ನು […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಡಾ.ಬಿ.ಬಿ. ಹೆಗ್ಡೆ ಕಾಲೇಜು : ಐವರಿಗೆ ಚಿನ್ನದ ಪದಕ
ಕುಂದಾಪುರ(ಡಿ,9): ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಪೂರೈಸಿದ ಐದು ವಿದ್ಯಾರ್ಥಿಗಳು ಪೈನಾನ್ಶಿಯಲ್ ಎಕೌಂಟಿಗ್ನಲ್ಲಿ ಮುನ್ನೂರಕ್ಕೆ ಮುನ್ನೂರು ಅಂಕಗಳನ್ನು ಪಡೆದುಕೊಂಡಿದ್ದಾರೆ. ಈ ಜಿಲ್ಲೆಯಲ್ಲಿಯೇ ಇದೊಂದು ವಿಶಿಷ್ಠ ಸಾಧನೆಗೆ ಕಾಲೇಜು ಸಾಕ್ಷಿಯಾಗಿದೆ. ಕಾಲೇಜಿನ ಸಾಧನೆಯ ಕಿರೀಟಕ್ಕೆ ಐದು ಚಿನ್ನದ ಗರಿ ಎಂದು ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ತಿಳಿಸಿದ್ದಾರೆ. ಪ್ರತೀಕ್ಷಾ, ಅಂಕಿತಾ, ಸುಚಿತ್ರಾ ಶೆಟ್ಟಿ, ಬಿಬಿ ಹಾಜಿರಾ, ಹಾಗೂ ಅನನ್ಯ ಈ ಸಾಧನೆಗೈದ ವಿದ್ಯಾರ್ಥಿನಿಯರು. ಈ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು: ಅಪರಾಧ ತಡೆ ಮಾಸಾಚರಣೆ-2021
ಕೊಲ್ಲೂರು(ಡಿ,7): ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆರಕ್ಷಕ ಠಾಣೆ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಚರಣೆ 2021ರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅಪರಾಧ ತಡೆಯ ಬಗ್ಗೆ ಕೊಲ್ಲೂರಿನ ಠಾಣಾಧಿಕಾರಿ ನಾಸಿರ್ ಹುಸೇನ್ರವರು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಅರುಣ್ಪ್ರಕಾಶ್ ಶೆಟ್ಟಿಯವರು ವಹಿಸಿಕೊಂಡಿದ್ದರು.ಉಪನ್ಯಾಸಕರಾದ ಗೋಪಾಲಕೃಷ್ಣ ಜಿ.ಬಿ. ಪೂರ್ಣಿಮಾ ಎನ್ ಜೋಯಿಸ್, ಸುಕೇಶ್ ಶೆಟ್ಟಿ ಹೊಸಮಠ, ರಾಮನಾಯ್ಕ ಕೆ.ಬಿ. […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಏಡ್ಸ್ ಕುರಿತು ಅರಿವು ಮೂಡಿಸುವ ಭಿತ್ತಿ ಚಿತ್ರ ಸ್ಪರ್ಧೆ
ಕುಂದಾಪುರ (ಡಿ,6): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಹಾಗೂ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ- 2021 ಮತ್ತು 75ನೇ ವರ್ಷದ ಸ್ವತಂತ್ರ ದಿನವನ್ನು ಆಚರಿಸುವ (New India @75) ಪ್ರಯುಕ್ತ ಹೆಚ್ಐವಿ / ಏಡ್ಸ್ ಬಗ್ಗೆ ಅರಿವು ಮೂಡಿಸಲು ಕಾಲೇಜಿನ ವಿದ್ಯಾರ್ಥಿಗಳಿಗೆ ಭಿತ್ತಿ ಚಿತ್ರ ಸ್ಪರ್ಧೆಯನ್ನು […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ
ಕುಂದಾಪುರ (ಡಿ,06): ಅಪರಾಧಗಳು ಸಂಭವಿಸದಂತೆ ಎಚ್ಚರವಹಿಸುವುದು ನಮ್ಮ ಕರ್ತವ್ಯ.ಬದುಕಿನ ಭದ್ರತೆಗೆ ನೀವೆಲ್ಲರೂ ಪೋಲಿಸ್ನಂತೆಯೇ ಎಚ್ಚರದಲ್ಲಿ ಇರಬೇಕು. ತಂತ್ರಜ್ಞಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಬದಲಾಗಿ ಅದನ್ನು ದುರುಪಯೋಗ ಮಾಡಿಕೊಳ್ಳಬಾರದು. ಅಪರಾಧಗಳು ನಮ್ಮ ಬದುಕಿನ ಕನಸನ್ನು ಕಸಿದುಕೊಳ್ಳುತ್ತವೆ. ಹಾಗಾಗಿ ಕೆಟ್ಟದನ್ನು ನಾವು ಯೋಚಿಸಬಾರದು ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಕುಂದಾಪುರ ಪೋಲಿಸ್ ಉಪಾಧೀಕ್ಷಕರಾದ ಶ್ರೀಕಾಂತ್ ಕೆ. ಕರೆ ನೀಡಿದರು. ಅವರು ಬಿ.ಬಿ. ಹೆಗ್ಡೆ ಕಾಲೇಜಿನವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜನೆಯ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ […]
ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಕೊಲ್ಲೂರು: ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣಾ ದಿನಾಚರಣೆ
ಕೊಲ್ಲೂರು(ಡಿ,6): ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ ಪರಿನಿರ್ವಾಣಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಅರುಣ್ಪ್ರಕಾಶ್ ಶೆಟ್ಟಿಯವರು ವಹಿಸಿಕೊಂಡು ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ರವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಗೊಳ್ಳಬೇಕೆಂದು ಕರೆನೀಡಿದರು. ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ದೀಕ್ಷಾ, ಪ್ರಥಮ ಕಲಾ ವಿಭಾಗದ ಕೀರ್ತನಾ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಹಾಗೂ ದ್ವಿತೀಯ ಕಲಾ ವಿಭಾಗದ ಸಿಂದುಶ್ರೀ ಮಯ್ಯ ದೇಶಭಕ್ತಿಗೀತೆ ಹಾಡಿದರು. ಉಪನ್ಯಾಸಕರಾದ ಗೋಪಾಲಕೃಷ್ಣ ಜಿ.ಬಿ, […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ: ಬೀಳ್ಕೊಡುಗೆ ಸಮಾರಂಭ
ಶಿರ್ವ(ಡಿ.5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 36 ವರ್ಷ ಅಧಿಕ ಕಾಲ ಕಾಲೇಜಿನ ಕಚೇರಿ ಸಹಾಯಕ ಸಿಬ್ಬಂದಿಯಾಗಿ ಸೇವೆಸಲ್ಲಿಸಿದ ಶ್ರೀರಂಗ ರವರಿಗೆ ಬಿಳ್ಕೊಡುಗೆ ಕಾರ್ಯಕ್ರಮವನ್ನು ಡಿ,04 ಹಮ್ಮಿಕೊಳ್ಳಲಾಯಿತು. ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಜೊತೆಗೆ ಕಚೇರಿ ಸಿಬ್ಬಂದಿ ವರ್ಗದವರು ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ. ಕಾಲೇಜಿನ ಸ್ವಚ್ಛತೆ ಮತ್ತು ಶುಚಿತ್ವವನ್ನು ಕಾಪಾಡುವುದರಲ್ಲಿ ಸಹಾಯಕ ಸಿಬ್ಬಂದಿ ಪಾತ್ರ ಮಹತ್ವದ್ದು. ಶ್ರೀರಂಗ ರವರು ನಮ್ಮ ಸಂಸ್ಥೆಯಲ್ಲಿ ಅಚ್ಚುಕಟ್ಟಾಗಿ ಅವರ ಕಾರ್ಯ ದಕ್ಷತೆಯನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರು ಹಾಗೂ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸ
ಶಿರ್ವ(ಡಿ,5): ಇಂದಿನ ವಾಣಿಜ್ಯ ಕ್ಷೇತ್ರಗಳಲ್ಲಿ ಲೆಕ್ಕಪತ್ರಗಳ ಲೆಕ್ಕಚಾರ ಮಾಡಲು ಬೇಸಿಕ್ ಅಕೌಂಟಿಂಗ್ ಬಗ್ಗೆ ಯುವಕರಲ್ಲಿ ಜ್ಞಾನದ ಅರಿವು ಇರಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಸ್ಯಾಮ್ ಜೋಯಲ್ ಡೈಸ್ ರವರು ಪ್ರಾಯೋಗಿಕವಾಗಿ ವಿವರಿಸಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಉದ್ಯೋಗ ಕ್ಷೇತ್ರದಲ್ಲಿ ಅಕೌಂಟಿಂಗ್ ಎಕ್ಸ್ಪರ್ಟ್ ಗಳಿಗೆ […]
ಶ್ರೀ ಧವಲಾ ಕಾಲೇಜು ಮೂಡಬಿದಿರೆ: ಎನ್.ಎಸ್.ಸ್ ಘಟಕದ 2021- 22 ನೇ ಸಾಲಿನ ಕಾರ್ಯಕ್ರಮಗಳ ಉದ್ಘಾಟನೆ
ಮೂಡಬಿದಿರೆ(ಡಿ,5): ಶ್ರೀ ಧವಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇದರ 2021 -22 ನೇ ಸಾಲಿನ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ಡಿ,03ರಂದು ಕಾಲೇಜಿನ ಕಾನ್ಫರೆನ್ಸ್ ಹಾಲಿನಲ್ಲಿ ನಡೆಯಿತು. ನಿವೃತ್ತ ವೃತ್ತ ನಿರೀಕ್ಷಕ ಶ್ರ ರಾಜಾರಾಮ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಎನ್ಎಸ್ಎಸ್ ನ ಉಪಯುಕ್ತತೆ ಮತ್ತು ಅದನ್ನು ವಿದ್ಯಾರ್ಥಿಗಳು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ವಿವರಿಸಿದರು. ಎನ್ಎಸ್ಎಸ್ ಎನ್ನುವುದು ಸ್ವಯಂ ಸೇವಕರಿಂದ ಕೂಡಿದ ಸಂಸ್ಥೆ. ಸ್ವಯಂಸೇವಕರು ಸ್ವ ಹಿತಾಸಕ್ತಿಯಿಂದ ಸಾಮಾಜಿಕ ಶೈಕ್ಷಣಿಕ ಸೇವೆಗಳನ್ನು […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ
ಶಿರ್ವ(ಡಿ,5): ಕಂಪ್ಯೂಟರ್ ಜ್ಞಾನ ಇಂದಿನ ಯುವಕರಲ್ಲಿ ಅತ್ಯಂತ ಅವಶ್ಯಕವಾಗಿದೆ. ಕಲಿಕೆಯ ಜೊತೆಗೆ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಬಹುದೆಂದು ಕಾಲೇಜಿನ ಕಚೇರಿ ಅಧೀಕ್ಷಕಿ ಶ್ರೀಮತಿ ಡೊರಿಯನ್ ಡಿಸಿಲ್ವಾ ಹೇಳಿದರು. ಅವರು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]










