ಕುಂದಾಪುರ (ನ,5): ಡಾ.ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ ,ಸ್ವರಾಜ್ಯ ೭೫ ಹಾಗೂ ಭಾರತೀಯ ಇತಿಹಾಸ ಸಂಕಲನ ಸಮಿತಿ ಇವರ ವತಿಯಿಂದ ಡಾ.ಬಿ.ಬಿ.ಹೆಗ್ಡೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಗಳಿಗೆ ಒಂದು ದಿನದ ಶಾಸನದ ಬಗ್ಗೆ ಮಾಹಿತಿ,ಪಡಿಯಚ್ಚು ತೆಗೆಯುವ ಹಾಗೂ ತರಬೇತಿಯೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ನ,03 ರಂದು ಕಂದಾವರ ಶ್ರೀ ಮಹಾಗಣಪತಿ ,ಈಶ್ವರ ,ಪಾವ೯ತಿ ದೇವಸ್ಥಾನ ಕೊಳನಕೋಡು ನಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಸುಭಾಸ್ ನಾಯಕ್ ಬಂಟಕಲ್ಲು ಪುರಾತತ್ವ ಹಾಗೂ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸರಸ್ವತಿ ವಿದ್ಯಾಲಯದ ರೋಟರಾಕ್ಟ್ ಕ್ಲಬ್ ರನ್ನರ್ ಅಪ್
ಗಂಗೊಳ್ಳಿ (ನ, 04) : ರೋಟರಾಕ್ಟ್ ಡಿಸ್ಟ್ರಿಕ್ಟ್ ಕೌನ್ಸಿಲ್ ಮತ್ತು ರೋಟರಾಕ್ಟ್ ಕ್ಲಬ್ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿನ ದಾಮೋದರ ಕಿಣಿ ಮೆಮೋರಿಯಲ್ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ರೋಟರಾಕ್ಟ್ ಇಂಡೋರ್ ಸ್ಫೋರ್ಟ್ಸ್ ಮೀಟ್ ನಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಾಕ್ಟ್ ಕ್ಲಬ್ ರನ್ನರ್ ಅಪ್ ಸ್ಥಾನವನ್ನು ಪಡೆಯಿತು. ಅರ್ಲಿ ಬರ್ಡ್, ಅತಿ ಹೆಚ್ಚು ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ಶ್ರೀನಿಧಿ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು:ರಾಷ್ಟ್ರೀಯ ಏಕತಾ ದಿವಸ್- ಪ್ರತಿಜ್ಞೆ ಸ್ವೀಕಾರ
ಕುಂದಾಪುರ (ನ 2): ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾತಂತ್ರ್ಯ ಭಾರತದ ಪ್ರಥಮ ಗ್ರಹ ಸಚಿವ,ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜನ್ಮ ದಿನಾಚರಣೆ ಸಲುವಾಗಿ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದು, ಎನ್.ಎಸ್.ಎಸ್.ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್.ಎಸ್.ಎಸ್. ಘಟಕದ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಶ್ರಮದಾನ- ಸ್ವಚ್ಚತಾ ಕಾರ್ಯಕ್ರಮ
ಕುಂದಾಪುರ(ನ,2): ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ನ,2 ರಂದು ಸಂಗಮ್ ಬಸ್ ನಿಲ್ದಾಣದಿಂದ ಕಾಲೇಜ್ ಕ್ಯಾಂಪಸ್ ತನಕ ಶ್ರಮದಾನ- ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಎನ್.ಎಸ್.ಎಸ್ ಸ್ವಯಂಸೇವಕರು ಸಕ್ರಿಯವಾಗಿ ಶ್ರಮದಾನ- ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್.ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್.ಟಿ.ಎನ್, ಉಪನ್ಯಾಸಕರಾದ ಸುಧಾಕರ್ ಪಾರಂಪಳ್ಳಿ, ಸುಕುಮಾರ […]
ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಪಿಎಚ್ಡಿ ಪದವಿ
ಉಡುಪಿ (ನ, 02) : ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಪಾರು ನಿತ್ಯಾನಂದ ಶೆಟ್ಟಿಯವರು ‘ಕುಂದಾಪುರ ಪರಿಸರದ ದೈವಾರಾಧನೆ’ ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ಅಭಯ್ ಕುಮಾರ್ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಪಿಎಚ್ ಡಿ ಪದವಿ ಲಭಿಸಿದೆ. ಬಹುಬಗೆಯ ಸಾಂಸ್ಕೃತಿಕ ಸಂಶೋಧನಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು ವಿವಿಧ ಸಂಘ ಸಂಸ್ಥೆಗಳ ಸಕ್ರಿಯ […]
ಶಾರದಾ ಆಂಗ್ಲ ಮಾಧ್ಯಮ ಶಾಲೆ ಬಸ್ರೂರು : ಕನ್ನಡ ರಾಜ್ಯೋತ್ಸವ
ಬಸ್ರೂರು (ನ, 01) : ಇಲ್ಲಿನ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅರ್ಥಶಾಸ್ತ್ರ ಉಪನ್ಯಾಸಕ ,ಪ್ರಸಿದ್ಧ ನಿರೂಪಕ, ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಧ್ವಜರೋಹಣಗೈದು ಕನ್ನಡ ನಾಡು, ನುಡಿ, ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ , ಆಡಳಿತ ಮಂಡಳಿಯ ಮೊಸೆಸ್ ಮನೋಹರ್, ಜುನೈದ್, […]
ಲಿಯೋ ಅಧ್ಯಕ್ಷರಾಗಿ ಭವಿಷ್ಯ ಶೆಟ್ಟಿ ಕೊವಾಡಿ ಆಯ್ಕೆ
ತಲ್ಲೂರು (ಅ. 30) : ಲಿಯೋ ಕ್ಲಬ್ ಬಸ್ರೂರು ಮೂಡ್ಲಕಟ್ಟೆಯ ನೂತನ ಅಧ್ಯಕ್ಷರಾಗಿ ಭವಿಷ್ಯ ಶೆಟ್ಟಿ ಕೋವಾಡಿ ಆಯ್ಕೆ ಯಾಗಿರುತ್ತಾರೆ. ಇವರು ಬಾಲ ಬರಹಗಾರ, ವಾಗ್ಮಿ ,ಯಕ್ಷಗಾನ ಕಲಾ ಪ್ರತಿಭೆ. ಉತ್ತಮ ನಾಯಕತ್ವ ಗುಣಗಳನ್ನು ಮೈಗುಾಡಿಸಿಕೊಂಡಿರುವ ಇವರು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಎಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಯೆನೆಪೋಯ ಇಂಜಿನಿಯರಿಂಗ್ ಕಾಲೇಜು : ಯೆನ್ ಸಂಭ್ರಮ – 2021
ಮೂಡುಬಿದ್ರಿ (ಅ, 31) : ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ವಿವಿಧ ಕಾರ್ಯಕ್ರಮಗಳು “ಯೆನ್ ಸಂಭ್ರಮ – 2021 ” ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಿಮಿಕ್ರಿ ಕಲಾವಿದೆ ಮತ್ತು ಗಿನ್ನಿಸ್ ರೆಕಾರ್ಡ್ ನಾಮನಿರ್ದೇಶಿತ ಕಲಾವಿದೆ ಅಕ್ಷತಾ ಕುಡ್ಲ ಮಾತನಾಡಿ, ಇಂತಹ ಸ್ಪರ್ಧಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಮತ್ತು ಕ್ರಿಯಾಶೀಲತೆಗೆ ವೇದಿಕೆಯಾಗುತ್ತದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು […]
ನ.7 ರಂದು ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ
ಬಂಟಕಲ್(ಅ,30): ಇಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಇದರ 8ನೇ ವರ್ಷದ ಪದವಿ ಪ್ರದಾನ ಸಮಾರಂಭವು ನ, 07 ರ ಭಾನುವಾರದಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.ಕಾರ್ಯಕ್ರಮದಲ್ಲಿ 2020-21ರ ಶೈಕ್ಷಣಿಕ ವರ್ಷದಲ್ಲಿ ಅಂತಿಮ ವರ್ಷದ ಬಿ.ಇ. ಪದವಿ ಪೂರೈಸಿದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಪ್ರತಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಚಿನ್ನದ ಪದಕವನ್ನು ನೀಡಲಾಗುವುದು. ಶ್ರೀ ರಾಮ ನಾಯಕ್, ಜನರಲ್ ಮ್ಯಾನೇಜರ್, ಕೆನರಾ ಬ್ಯಾಂಕ್, ಮಣಿಪಾಲ […]
ಸರಸ್ವತಿ ವಿದ್ಯಾಲಯದಲ್ಲಿ ಸವಿ ಪ್ರತಿಭಾ ಶೋಧ
ಗಂಗೊಳ್ಳಿ( ಅ,30): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸವಿ ಪ್ರತಿಭಾ ಶೋಧ ಎನ್ನುವ ಶೈಕ್ಷಣಿಕ ಸ್ಪರ್ಧೆಯನ್ನು ಆಯೋಸಲಾಯಿತು. ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ (ರಿ )ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ […]










