ಉಡುಪಿ(ಅ,30):ರಾಜ್ಯದ ಹಿಂದುಳಿದ ವರ್ಗಗಳ, ಅಲೆಮಾರಿ, ಅರೆಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿ ವೇತನಕ್ಕೆ ವಾರ್ಷಿಕ ಆದಾಯ 2.50 ಲ.ರೂ. ಹಾಗೂ ರಾಜ್ಯ ಸರಕಾರದ ವಿದ್ಯಾರ್ಥಿವೇತನಕ್ಕೆ ಪ್ರವರ್ಗ-1 ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ 1 ಲ.ರೂ ಮೀರಿರದ, ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ www.ssp.karnataka.gov.in ನಲ್ಲಿ ಸೂಕ್ತ ದಾಖಲಾತಿಗಳ ಮೂಲಕ ಅರ್ಜಿ ಸಲ್ಲಿಸಲು ನ.21 ಕೊನೆದಿನ ಎಂದು ತಿಳಿಸಲಾಗಿದೆ. ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.backwardclasses.kar.nic.in […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಭಾಷಾಭಿಮಾನದ ಜೊತೆಗೆ ದೇಶಾಭಿಮಾನ ಬೆಳೆಸಿಕೊಳ್ಳಿ: ಬೈಂದೂರು ಚಂದ್ರಶೇಖರ ನಾವಡ (ಬಿ.ಬಿ ಹೆಗ್ಡೆ ಕಾಲೇಜಿನ ಕನ್ನಡಕ್ಕಾಗಿ ನಾವು ಕಾರ್ಯಕ್ರಮ)
ಕುಂದಾಪುರ (ಅ,30): ಪ್ರತಿಯೊಂದು ಭಾಷೆಗೆ ಅದರದ್ದೆ ಆದ ಅಸ್ತಿತ್ವ ಹಾಗೂ ಐತಿಹಾಸಿಕ ಹಿನ್ನೆಲೆ ಇರುತ್ತದೆ. ಆ ನೆಲೆಯಲ್ಲಿ ಕನ್ನಡ ಭಾಷಿಕರಾದ ನಾವು ಪುಣ್ಯವಂತರು. ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿರುವ ಕನ್ನಡ ಭಾಷೆಯನ್ನು ನಾವು ಉಳಿಸಿ ಬೆಳೆಸಬೇಕು.ಜೊತೆಗೆ ದೇಶಾಭಿಮಾನ, ದೇಶ ಭಕ್ತಿ ,ಸೈನ್ಯದ ಕುರಿತಾದ ಅಭಿಮಾನವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ನಿವ್ರತ್ತ ಯೋಧ ಹಾಗೂ ಸಾಹಿತಿಗಳಾದ ಶ್ರೀ ಚಂದ್ರಶೇಖರ ನಾವಡ ಹೇಳಿದರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಗೀತಗಾಯನ ಕಾರ್ಯಕ್ರಮ
ಬಂಟಕಲ್ (ಅ,29): ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಡಳಿತದ ಸೂಚನೆಯಂತೆ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮವು ಅ, 28 ರಂದು ಜರುಗಿತು. ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತೆಗಳನ್ನು ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಡಿದರು. ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಭ್ರಷ್ಟಾಚಾರ ನಿರ್ಮೂಲನೆಗೆ ಯುವಕರು ಕೈಜೋಡಿಸಬೇಕು -ಡಾ| ಹೆರಾಲ್ಡ್ ಐವನ್ ಮೋನಿಸ್ (ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜಾಗೃತಿ ಸಪ್ತಾಹ -2021)
ಶಿರ್ವ(ಅ,29): ಇಂದು ದೇಶದಲ್ಲಿ ಕಾಡುತ್ತಿರುವ ದೊಡ್ಡ ಸಮಸ್ಯೆಯೆಂದರೆ ಭ್ರಷ್ಟಾಚಾರ.ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ತೊಲಗಿಸಿ, ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಿ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇಂದಿನ ವ್ಯವಸ್ಥೆಯನ್ನು ಸುಧಾರಿಸುವ ಸಲುವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ‘ ಜಾಗೃತಿ ಅರಿವು ಸಪ್ತಾಹ-2021’ಏರ್ಪಡಿಸಲಾಯಿತು. ಪ್ರತಿಯೊಬ್ಬ ಪ್ರಜೆಯೂ ಯಾವುದೇ ಭ್ರಷ್ಟಾಚಾರಕ್ಕೆ ಒಳಪಡದೆ, ಭ್ರಷ್ಟಾಚಾರಿಗಳವಿರುದ್ಧ ಹೋರಾಡಲು ಸೂಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾನೂನು ರಕ್ಷಣೆ – […]
ಬದುಕಿನಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಿ- ಪ್ರೊ. ಕೆ.ಉಮೇಶ್ ಶೆಟ್ಟಿ (ಬಿ.ಬಿ ಹೆಗ್ಡೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಕಾರ್ಯಕ್ರಮ)
ಕುಂದಾಪುರ(ಅ,28): ವಿದ್ಯಾರ್ಥಿಗಳು ಬದುಕಿನಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು, ಆ ಮೂಲಕ ಭವಿಷ್ಯದ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದು ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬಿಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಕೆನರಾ ಬ್ಯಾಂಕ್ ವಡೇರಹೊಬಳಿ ಶಾಖೆಯ ಮುಖ್ಯ ಪ್ರಬಂಧಕರಾದ ಶ್ರೀ ಜಗದೀಶ್ ಪೂಜಾರಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯುತ ಮಾತುಗಳನ್ನಾಡಿದರು. ಕಾಲೇಜಿನ ಉಪಪ್ರಾಂಶುಪಾಲರಾದ […]
ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ:”ಮಾತಾಡ್ ಮಾತಾಡ್ ಕನ್ನಡ- ಕನ್ನಡಕ್ಕಾಗಿ ನಾವು ಅಭಿಯಾನ”
ವಂಡ್ಸೆ(ಅ,27): 66 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾತಾಡ್ ಮಾತಾಡ್ ಕನ್ನಡ ಕನ್ನಡಕ್ಕಾಗಿ ನಾವು ಅಭಿಯಾನ ಕೆರಾಡಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಅ,28 ರಂದು ನಡೆಯಿತು. ಕನ್ನಡ ವಿಭಾಗದ ಮುಖ್ಯಸ್ಥರಾದ ಅರುಣ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲಭಾಷ ಉಪನ್ಯಾಸಕ ನಾಗರಾಜ್ ಹೆಮ್ಮಾಡಿ ಪ್ರಾಸ್ತವಿಕ ಮಾತನಾಡಿದರು. ಉಪನ್ಯಾಸಕ ಸುಕೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ಅಭಿಜಿತ್ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು […]
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು: ವಿದ್ಯಾರ್ಥಿಗಳಿಗಾಗಿ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ
ಗಂಗೊಳ್ಳಿ(ಅ,26):ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗುಜ್ಜಾಡಿ ಗೋಪಾಲ ನಾಯಕ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಜೀವನ ಎಂಬುದು ಒಂದು ಕ್ರಿಕೆಟ್ ಸ್ಟೇಡಿಯಂ ಇದ್ದ ಹಾಗೆ .ಇಲ್ಲಿ ಬಾಲ್ ಎನ್ನುವ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇಕು.ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ಜೀವನದಲ್ಲಿ ಮಾತನಾಡುವ ಕಲೆ, ನಾಯಕತ್ವದ ಗುಣ,ಸಕಾರಾತ್ಮಕ […]
ಸಂವಿಧಾನ ದೇಶದ ಎಲ್ಲಾ ಕಾನೂನುಗಳಿಗೆ ತಾಯಿ ಇದ್ದಂತೆ- ನ್ಯಾಯಾಧೀಶ ಶ್ರೀ ರವೀಂದ್ರ ಎಂ.ಜೋಶಿ
ಕುಂದಾಪುರ(ಅ,24): ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು .ತಮ್ಮನ್ನು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾ, ದೇಶದ ಎಲ್ಲಾ ಕಾನೂನುಗಳಿಗೆ ತಾಯಿಯಂತಿರುವ ಸಂವಿಧಾನದ ಗೌರವಿಸುವುದರ ಜೊತೆಗೆ ಕಾನೂನುಗಳ ಅರಿವು ಹೊಂದಿರಬೇಕು ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ರವೀಂದ್ರ.ಎಂ. ಜೋಶಿ ಹೇಳಿದರು. ಅವರು ಡಾ|ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ(ರಿ). ಕುಂದಾಪುರ, […]
ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕ ನಾಗರಾಜ ಖಾರ್ವಿ ಆಯ್ಕೆ
ಕುಂದಾಪುರ (ಅ,23): ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶಿಕ್ಷಕ ನಾಗರಾಜ ಖಾರ್ವಿ ಬ್ರೆಸ್ಟ್ ಸ್ಟ್ರೋಕ್ 50 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 100 ಮೀ ಚಿನ್ನಬ್ರೆಸ್ಟ್ ಸ್ಟ್ರೋಕ್ 200 ಮೀ ಬೆಳ್ಳಿ50×4 ಮೆಡ್ಲೆ ರಿಲೇ ಕಂಚು100X4 ಫ್ರೀ ಸ್ಟೈಲ್ ರಿಲೇ ಕಂಚು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರುಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿಯಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ […]
ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ:ನೂತನ ಅಧ್ಯಕ್ಷರಾಗಿ ನಾಗರಾಜ್ ಹೆಮ್ಮಾಡಿ ,ಪ್ರಧಾನ ಕಾರ್ಯದರ್ಶಿಗಳಾಗಿ ಕೃಷ್ಣಮೂರ್ತಿ ಡಿಬಿ ಆಯ್ಕೆ
ಕುಂದಾಪುರ (ಅ,17): ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ(ರಿ) ಇದರಕುಂದಾಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಗೌರವಾಧ್ಯಕ್ಷರಾದ ಉದಯ ಬಳ್ಕೂರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಇದರ ಆಂಗ್ಲ ಭಾಷಾ ಉಪನ್ಯಾಸಕ ನಾಗರಾಜ್ ಹೆಮ್ಮಾಡಿ ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿಬಿ ಆಯ್ಕೆಯಾಗಿದ್ದಾರೆ.










