ಕುಂದಾಪುರ (ಸೆ,21): ಕುಂದಾಪುರ ಮೂಲದ ಚಲನ್ ಚಂದ್ರ ಶೆಟ್ಟಿಯವರು ಜೂನ್ 2021ರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಉಡುಪಿಯ ಶ್ರೀ ಸುರೇಂದ್ರ ನಾಯಕ್ ರವರಲ್ಲಿ ಆರ್ಟಿಕಲ್ ಶಿಪ್ ಮಾಡಿರುವ ಚಲನ್ ಚಂದ್ರ ಶೆಟ್ಟಿ ಯವರು ಅಧ್ಯಾಪಕರಾದ ಬಿಲ್ಲಾಡಿಮನೆ ಶ್ರೀ ಚಂದ್ರಶೇಖರ ಶೆಟ್ಟಿ ಮಣಿಗೇರಿ ಹಾಗೂ ಶಿರೂರು ಹೈಕಾಡಿಮನೆ ಶ್ರೀಮತಿ ಶ್ಯಾಮಲಾ ಸಿ ಶೆಟ್ಟಿ ಯವರ ಪುತ್ರ.
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿಎ ಇಂಟರ್ಮೀಡಿಯೇಟ್ ರ್ಯಾಂಕ್ ವಿಜೇತೆ ವೈಷ್ಣವಿ ಎಂ.ವಿ ಯವರಿಗೆ ಸನ್ಮಾನ
ಕುಂದಾಪುರ (ಸೆ,20): ಇಲ್ಲಿನ ಕುಂದೇಶ್ವರ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿಎ/ ಸಿಎಸ್/ ಸಿಎಮ್ಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಭಾರತಕ್ಕೆ 29ನೇ ರ್ಯಾಂಕ್ ಪಡೆದ ವೈಷ್ಣವಿ ಎಂ ವಿ ಯವರನ್ನು ಸನ್ಮಾನಿಸಲಾಯಿತು. ಅತ್ಯಂತ ಕಠಿಣ ಪಠ್ಯಕ್ರಮ ಪರೀಕ್ಷೆಯಲ್ಲೊಂದಾದ ಸಿಎ ಪರೀಕ್ಷೆಯಲ್ಲಿ ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಇಂತಹ ಸಾಧನೆ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅಖಿಲ ಭಾರತ 29ನೇ ರ್ಯಾಂಕ್
ಕುಂದಾಪುರ(ಸೆ,19): ಇಲ್ಲಿನ ಕುಂದೇಶ್ವರ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್(ಸ್ಪೇಸ್) ಸಿಎ/ಸಿಎಸ್/ಸಿಎಮ್ಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ವೈಷ್ಣವಿ ಅವರು 543 ಅಂಕ ಗಳಿಸುವುದರೊಂದಿಗೆ ಅಖಿಲ ಭಾರತಕ್ಕೆ 29ನೇರ್ಯಾಂಕ್ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ರಕ್ಷಿತ್ ಶೆಟ್ಟಿ 246, […]
ಸ್ಪರ್ಧೆಗಳ ಮೂಲಕ ವ್ಯಕ್ತಿತ್ವ ವಿಕಸನ ವೃದ್ಧಿ-ಡಾ| ಹೆರಾಲ್ಡ್ ಐವನ್ ಮೋನಿಸ್
ಶಿರ್ವ(ಸೆ,18) : ಪ್ರತಿಯೊಂದು ಕ್ಷೇತ್ರದಲ್ಲಿ ಕಂಪ್ಯೂಟರ್ ಬಳಕೆ ಹೆಚ್ಚುತ್ತಿರುವ ಕಾರಣ ಕಂಪ್ಯೂಟರ್ ಕಲಿಕೆಯ ಅವಶ್ಯಕತೆ ಇಂದು ಅಗತ್ಯವಾಗಿದೆ .ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಕಂಪ್ಯೂಟರ್ ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ,ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆದುಕೊಳ್ಳಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಹೇಳಿದರು. ಅವರು ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಾಂತ್ರಿಕ ಕಾರ್ಯಾಗಾರ
ಬಂಟಕಲ್ (ಸೆ, 17) : ಇಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗವು ಐಎಸ್ ಟಿಇ ಶಿಕ್ಷಕರ ಘಟಕದ ಸಹಯೋಗದೊಂದಿಗೆ ವಿಶ್ವ ಒಝೋನ್ ದಿನದ ಅಂಗವಾಗಿ “ಒಝೋನ್ ಪದರದ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸುವುದು” ಎಂಬ ವಿಷಯದ ಬಗ್ಗೆ ತಾಂತ್ರಿಕ ಕಾರ್ಯಾಗಾರವನ್ನು 16 ಸಪ್ಟೆಂಬರ್ 2021ರಂದು ಆಯೋಜಿಲಾಗಿತ್ತು. ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಬಾಲಕೃಷ್ಣ ಕೇಶವ್ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. […]
ವರಸಿದ್ದಿವಿನಾಯಕ ಪಿಯು ಕಾಲೇಜು ಕೆರಾಡಿ : ಫ್ರೇಶರ್ಸ್ ಡೇ ಕಾರ್ಯಕ್ರಮ
ಕೆರಾಡಿ (ಸೆ, 17) : ಇಲ್ಲಿನ ವರಸಿದ್ದಿವಿನಾಯಕ ಪಿಯು ಕಾಲೇಜಿ ನಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳಿಗೆ ಫ್ರೇಶರ್ಸ್ ಡೇ ಕಾರ್ಯಕ್ರಮವನ್ನು ಸಪ್ಟೆಂಬರ್ 15ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಉಪನ್ಯಾಸಕರಾದ ಅಭಿಜಿತ್ ಹೆಮ್ಮಾಡಿ, ನೇಹಾ ಶೆಟ್ಟಿ ಮತ್ತು ಶ್ವೇತಾ ಗೌಡ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಭು ಸ್ವಾಗತಿಸಿ, ಧನುಶ್ ರಾಜ್ ವಂದಿಸಿದರು. ಉಪನ್ಯಾಸಕರಾದ ಅಭಿಜಿತ್ ಹೆಮ್ಮಾಡಿ ಮತ್ತು […]
ಸಂತ ಮೇರಿ ಕಾಲೇಜು ಶಿರ್ವ: ಕಾಲೇಜು ಆಡಳಿತ ಕಛೇರಿಯ ಅಧೀಕ್ಷ ಕರಾಗಿ ಶ್ರೀಮತಿ ಡೊರಿನ್ ಡಿ’ಸಿಲ್ವ ನೇಮಕ
ಶಿರ್ವ (ಸೆ,16): ಇಲ್ಲಿನ ಸಂತ ಮೇರಿ ಕಾಲೇಜಿನಆಡಳಿತ ಕಛೇರಿಯ ಸಿಬ್ಬಂದಿಯಾದ ಶ್ರೀಮತಿ ಡೊರಿನ್ ಡಿ’ಸಿಲ್ವ ರವರನ್ನು ಕಾಲೇಜು ಆಡಳಿತ ಮಂಡಳಿಯಾದ ಕ್ಯಾಥೊಲಿಕ್ ಶಿಕ್ಷಣ ಸೊಸೈಟಿ ಉಡುಪಿ (CESU)ಯು ಸಪ್ಟೆಂಬರ್,16 ರಂದು ಪದೋನ್ನತಿಗೊಳಿಸಿ ಕಾಲೇಜು ಆಡಳಿತ ಕಛೇರಿಯ ಅಧೀಕ್ಷ ಕರನ್ನಾಗಿ ನೇಮಕಗೊಳಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಇಂಜಿನಿಯರ್ಸ್ ಡೇ ದಿನಾಚರಣೆ
ಕುಂದಾಪುರ (ಸೆ,17): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಸಪ್ಟೆಂಬರ್ 15 ರಂದು ಕುಂದಾಪುರದ ಜೆ. ಕೆ. ಹೋಟೆಲ್ ಸಭಾಂಗಣದಲ್ಲಿ ಆಚರಿಸಲಾಯಿತು.ಕೋಟ ಮೆಸ್ಕಾಂನ ಸಹಾಯಕ ಇಂಜಿನಿಯರ್ ಪ್ರಶಾಂತ್ ಶೆಟ್ಟಿ ಯವರನ್ನು ಕ್ಲಬ್ ನ ಅಧ್ಯಕ್ಷರಾದ ಲ. ಜಯಶೀಲ ಶೆಟ್ಟಿ ಕಂದಾವರ ಸನ್ಮಾನಿಸಿ ಗೌರವಿಸುವ ಮೂಲಕ ಆಚರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಶಾಂತ್ ಶೆಟ್ಟಿ ಇಂಜಿನಿಯರ್ಸ್ ಡೇ ದೇಶದಾದ್ಯಂತ ಸರ್. ಎಂ. ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ […]
ವರಸಿದ್ಧಿ ವಿನಾಯಕ ಪಿ.ಯು ಕಾಲೇಜು ಕೆರಾಡಿ: ವೃತ್ತಿಪರ ಕೋರ್ಸ್ ಕುರಿತಾದ ಮಾಹಿತಿ ಕಾರ್ಯಾಗಾರ
ಕೆರಾಡಿ(ಸೆ,17): ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಇದರ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶ ಪರೀಕ್ಷೆಗಳಾದ NEET, CET, ಮತ್ತು JEE ಎದುರಿಸಿ ಯಶಸ್ವಿಯಾಗಲು ಪೂರ್ವ ತಯಾರಿಯ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರ ದಿನಾಂಕ ಸಪ್ಟೆಂಬರ್ 13 ರಂದು ನಡೆಯಿತುಸಂಪನ್ಮೂಲ ವ್ಯಕ್ತಿ ಎಮ್.ಎಸ್ ರಾಮಚಂದ್ರ ಐಐಟಿ ರೂರ್ಕೆ ರವರು ವಿದ್ಯಾರ್ಥಿಗಳಿಗೆ ಸಮಗ್ರ […]
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ : ವಿವಿಧ ಬೇಡಿಕೆ ಇಡೇರಿಸುವಂತೆ ತಹಶೀಲ್ದಾರರಿಗೆ ಮನವಿ
ಕುಂದಾಪುರ(ಸೆ,27): ರಾಜ್ಯಾದ್ಯಂತ ಗ್ರಾಮೀಣ ಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಿಗೆ ಬಸ್ ಸೇವೆ ಪುನರಾಂಭಿಸಬೇಕು, ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ, ಹಾಸ್ಟಲ್ಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಭಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ತಾಲೂಕು ಇದರ ವತಿಯಿಂದ ತಹಶೀಲ್ದಾರರಾದ ಶ್ರೀ ಕಿರಣ್ ಗೊರಯ್ಯ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಬಿವಿಪಿಯ ಪ್ರಮುಖರಾದ ಜಯಸೂರ್ಯ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ಶೆಟ್ಟಿ , ಸುಚಿನ್, ದಿನೇಶ್, ರೋಹಿತ್, […]










