ಕುಂದಾಪುರ (ಸೆ,16): ರಾಷ್ಟ್ರೀಯ ಶಿಕ್ಷಣ ನೀತಿ 2021 – 22 ವಿದ್ಯಾರ್ಥಿ ಕೇಂದ್ರಿತ ನೀತಿಯಾಗಿದ್ದು, ಇದರಲ್ಲಿನ ಪ್ರತಿ ಅಂಶವನ್ನೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ರೂಪಿಸಲಾಗಿದೆ. ಹೊಸ ಶಿಕ್ಷಣ ನೀತಿಯ ಮೂಲಕ ಆಸಕ್ತಿ-ಕೌಶಲ್ಯ ಆಧಾರಿತ ಕಲಿಕೆ ಹಾಗೂ ದೇಶದ ಮಾನವ ಸಂಪನ್ಮೂಲದ ಸದ್ಬಳಕೆ ನಿಜಾರ್ಥದಲ್ಲಿ ಆಗಲಿದೆ ಎಂದು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಕರುಣಾಕರ ಕೊಟೇಗಾರ್ ಹೇಳಿದರು. ಅವರು ಗುರುವಾರ ಕುಂದಾಪುರದ ಡಾ. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಹಿಂದಿ ಭಾಷೆಯ ಮೇಲೆ ಯಾಕಿಷ್ಟು ದ್ವೇಷ ?ಒಂದು ವಿಮರ್ಶೆ
ವಂದೇ ಮಾತರಂ,ಜನಗನಮನ,ಮಾ ತುಜೆ ಸಲಾಮ್ ,ಯೇ ಮೆರೆ ವತನ್ ಕೆ ಲೋಗೊ,ಸಂದೇಸೆ ಆತೆ ಹೆ ಹಮೆ ತಡಪಾತೆ ಹೆ….ಈ ಹಾಡುಗಳನ್ನು ನಾವೆಲ್ಲರೂ ಒಮ್ಮೆಯಾದರೂ ಹಾಡಿದ್ದೆವೆ.ಜೊತೆಗೆ ಸಂದರ್ಭಕ್ಕೆ ಅನುಗುಣವಾಗಿ ಒಂದೆರಡು ಕಂಬನಿ ಕಣ್ಣಂಚಲಿ ಸುರಿಸಿದ್ದೆವೆ. ಈ ಹಾಡುಗಳನ್ನು ಕೇಳುವಾಗ ಅಥವಾ ಹಾಡುವಾಗ ಮೈ ಮನಗಳಲ್ಲಿ ರೋಮಾಂಚನ ಹಾಗೂ ರಾಷ್ಟ್ರಭಕ್ತಿ ಉದ್ದೀಪನಗೊಂಡ ಅನುಭವ ಪ್ರತಿಯೊಬ್ಬ ಭಾರತೀಯನಿಗೂ ಆಗಿರುತ್ತದೆ ಎನ್ನುವುದು ನನ್ನ ಅನಿಸಿಕೆ .ಯಾಕೆಂದರೆ ಈ ಹಾಡುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಅದೆಷ್ಟೋ ಸಂಗತಿಗಳು ಅಡಗಿದೆ. […]
ಶಿಕ್ಷಪ್ರಭಾ ಆಕಾಡೆಮಿ ಕುಂದಾಪುರ : ಸಿ. ಎ. ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ (ಸೆ, 13) : ಕುಂದೇಶ್ವರ ದೇವಸ್ಥಾನ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡಮಿ ಆಫ್ ಕಾಮರ್ಸ್ ಏಜುಕೇಶನ್ (ಸ್ಪೇಸ್) ಸಿಎ/ಸಿಎಸ್/ಸಿಎಂಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳು ಇನ್ಟಿಟ್ಯೂಟ್ ಆಫ್ ಚಾರ್ಟರ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಅಂತಿಮ ಮತ್ತು ಸಿಎ ಪೌಂಡೇಶನ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ತೋರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿಲಾಸ್ ಶೆಟ್ಟಿ, ಸಿಎ ಅಂತಿಮ ಪರೀಕ್ಷೆಯಲ್ಲಿ 528 ಅಂಕ ಗಳಿಸುವುದರೊಂದಿಗೆ ಉತ್ತಮ ಅಂಕಗಳೊಂದಿಗೆ ಸಿ.ಎ. […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : ಫಿಟ್ ಇಂಡಿಯಾ ಫ್ರೀಡಂ ಓಟ – ಅಭಿಯಾನ
ಶಿರ್ವ (ಸೆ, 11) : ಸದೃಢ ಭಾರತ ನಿರ್ಮಾಣಕ್ಕೆ ದೇಶದಲ್ಲಿ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆ, ಕ್ರೀಡೆಯಲ್ಲಿ ತೊಡಗಿಸಿಕೊಂಡು ಆರೋಗ್ಯವಂತರಾಗಬೇಕು ಎಂಬುದು ಈ ಅಭಿಯಾನದ ಮೂಲ ಉದ್ದೇಶ. ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ವತಿಯಿಂದ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ರ ಅಭಿಯಾನಕ್ಕೆ ರಾಷ್ಟ್ರವ್ಯಾಪಿ ಚಾಲನೆ ನೀಡಿದ್ದಾರೆ. ಯುವ ಜನಾಂಗ ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಳ್ಳದೇ ಇರುವ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಕ್ಯಾಂಪಸ್ ವಾಯ್ಸ್ ವಾರ್ತಾ ಸಂಚಿಕೆ ಬಿಡುಗಡೆ
ಕುಂದಾಪುರ (ಸೆ. 10) : ಕುಂದಾಪುರದ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಅರ್ಧ ವಾರ್ಷಿಕ ವಾರ್ತಾ ಸಂಚಿಕೆಯಾದ ಕ್ಯಾಂಪಸ್ ವಾಯ್ಸ್ ನ್ನು ಸೆಪ್ಟೆಂಬರ್,5 ರಂದು ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕಾಳಾವರದ ಉದಯ್ ಕುಮಾರ್ ಶೆಟ್ಟಿಯವರು ಬಿಡುಗಡೆಗೊಳಿಸಿದರು. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸ್ಥಗಿತ ಉಂಟಾಗಿದೆ. ಆದರೆ ನಮಗೆ ಸಿಕ್ಕಿದ ದಿನಗಳನ್ನೆ ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಕ್ರೀಡಾ ದಿನಾಚರಣೆ, ಎಥ್ನಿಕ್ ಡೇ ಆಯೋಜಿಸುವುದರ ಜೊತೆಗೆ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸಕುತ್ತೂರು : ಶಿಕ್ಷಕರ ದಿನಾಚರಣೆ ಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ
ತೆಕ್ಕಟ್ಟೆ (ಸೆ, 10) : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸಕುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆ ಯ ಪ್ರಯುಕ್ತ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹೆಸಕುತ್ತೂರು ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಹೆಸಕುತ್ತೂರು ಒಕ್ಕೂಟ ಇವರ ವತಿಯಿಂದ ಗುರುವಂದನಾ ಕಾರ್ಯಕ್ರಮ ಜರುಗಿತು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್, ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ., ಜಯರಾಮ ಶೆಟ್ಟಿ, ವಿಜಯಾ ಅರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ, ರವೀಂದ್ರ […]
ಕೊಳಲುವಾದನ ಸ್ಪರ್ಧೆ : ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ಪ್ರಥಮ ಸ್ಥಾನ
ಕುಂದಾಪುರ (ಸೆ, 9) : ಮಧ್ಯಪ್ರದೇಶದ ಮೊರೆನಾದ ಶಿವ್ಸ್ ಮ್ಯೂಸಿಕಲ್ ಅಕಾಡೆಮಿ ವತಿಯಿಂದ ನಡೆದ ಆನ್ಲೈನ್ ಕೊಳಲುವಾದನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕೊಳಲುವಾದನದಲ್ಲಿ ಅಪಾರ ಆಸಕ್ತಿಯನ್ನು ಹೊಂದಿರುವ ಶ್ಯಾಮ್ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪಿ. ಪೂಜಾರಿ ಮತ್ತು ಮಾಲತಿ ದಂಪತಿಯ ಪುತ್ರ.
ಶಿಕ್ಷಕರ ದಿನಾಚರಣೆ: ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರಿಗೆ ಸನ್ಮಾನಿಸಿದ ಶಿಷ್ಯೆ ಶೈನಾ ಕಲ್ಯಾಣಪುರ
ಕಲ್ಯಾಣಪುರ(ಸೆ,07): ಗುರು ಮಾಡಿದ ಪಾಠವು ವರವಾಗಿ ನನ್ನ ಸಾಧನೆಗೆ ಮೆಟ್ಟಿಲಾಗಿ ನಿಂತ ಕ್ಷಣವನ್ನು ನೆನಪಿಸಿ ಶಿಕ್ಷಕರ ದಿನಾಚರಣೆಯೆಂದು ತವರು ಮನೆ ಟ್ರಸ್ಟ್ ನ ಸಂಸ್ಥಾಪಕಿ ಶೈನಾ ಕಲ್ಯಾಣಪುರ ತನ್ನ ಶಿಕ್ಷಕ ಶೇಖರ್ ಶೆಟ್ಟಿ ಮಟಪಾಡಿಯವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು. 6 ನೇ ತರಗತಿಯಲ್ಲಿ ತಾನು ಕಲಿತ ಪಾಠದ ವಿಷಯಗಳಾದ ಸತಿ ಪದ್ಧತಿ, ಹೆಣ್ಣು ಮಕ್ಕಳ ಶೋಷಣೆ, ಭ್ರೂಣ ಹತ್ಯೆ, ಲೈಂಗಿಕ ಶೋಷಣೆ ಇದರ ಬಗ್ಗೆ ಸಮಾಜ ವಿಜ್ಞಾನದ ಶಿಕ್ಷಕರಾದ ಶೇಖರ್ ಶೆಟ್ಟಿ […]
ಗುರು ಮಾತೆ – ಅಕ್ಷರ ಕಲಿಸಿದ ವಿದ್ಯಾ ಸರಸ್ವತಿ : ಸಿಂಗಾರಿ ಅಮ್ಮ ಟೀಚರ್ ನಾವುಂದ
ಗುರು ಎನ್ನುವ ಪರಿಕಲ್ಪನೆಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಸ್ಥಾನವನ್ನು ಕಲ್ಪಿಸಲಾಗಿದೆ. ಏಕೆಂದರೆ ಒರ್ವ ಗುರು ತಂದೆ-ತಾಯಿಯ ಎರಡು ಪಾತ್ರವನ್ನು ಏಕಕಾಲದಲ್ಲಿ ನಿರ್ವಹಿಸಬಲ್ಲವನಾಗಿದ್ದು, ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಭಾವಿಸುವ ,ಪ್ರೀತಿಸುವ ಹಾಗೂ ತನ್ನ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಮತ್ತು ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವ ದಾಗಿದೆ. ನಮ್ಮಲ್ಲಿರುವ ಅಜ್ಞಾನವನ್ನು ಹೊರಹಾಕಲು ಶಿಕ್ಷಕರು ಮಾರ್ಗದರ್ಶಕರಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವು ಅಜ್ಞಾನವನ್ನು ಓಡಿಸುವುದೇ ಆಗಿದೆ. ಪ್ರತಿಯೊಬ್ಬರ ಜೀವನದ ಏಳು- ಬೀಳುಗಳಿಗೆ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ: ಸ್ವಚ್ಛ ಸರ್ವೇಕ್ಷಣ ಜನಾಂದೋಲನ -2021
ಶಿರ್ವ(ಸೆ.4): ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ‘ಸ್ವಚ್ಛ ಸರ್ವೆಕ್ಷಣ ಗ್ರಾಮೀಣ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛತೆ, ಸುಚಿತ್ವ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರ ವ್ಯಾಪಿ ಚಾಲನೆಯಲ್ಲಿರುವ ಈ ಯೋಜನೆಯನ್ನು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಎನ್.ಸಿ.ಸಿ, ಎನ್.ಎಸ್.ಎಸ್, ಹಾಗು ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವಚ್ಚತೆ […]










