ಶಿರ್ವ(ಸೆ,26): ವಿದ್ಯಾರ್ಥಿಗಳ ಜೀವನದಲ್ಲಿ ಅಮೂಲ್ಯವಾದ ಶಿಕ್ಷಣವೆಂದರೆ ಅದು ಪದವಿ ಶಿಕ್ಷಣ. ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಕಾಲೇಜು ಶಿಕ್ಷಣದಲ್ಲಿ ಅನೇಕ ಅವಕಾಶಗಳಿವೆ. ಆಟ-ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಯಬೇಕಾಗಿರುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಗುರುಹಿರಿಯರ ಮಾರ್ಗದರ್ಶನವನ್ನು ಪಡೆದು ಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಬೇಕು ಎಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ವೃತ್ತಿ ಮತ್ತು ಉದ್ಯೋಗ ಕೌಶಲ್ಯಗಳ ವೇಬಿನರ್
ಉಡುಪಿ (ಸೆ, 26): ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನುಪಡೆದು, ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಕಂಪ್ಯೂಟರ್ ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ,ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕು. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಮೂಲಭೂತ ಸೌಕರ್ಯಗಳನ್ನು ಸದ್ಬಳಕೆ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿದೆಸೆಯಿಂದಲೇ ರೂಡಿಸಿಕೊಳ್ಳಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ […]
ಸಿಎ ಫೌಂಡೇಶನ್ನ ಪರೀಕ್ಷೆ ತೇರ್ಗಡೆ – ಸಮ್ಮಾನ
ಕುಂದಾಪುರ (ಸೆ,28): ಇನ್ಸ್ಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ 11 ವಿದ್ಯಾರ್ಥಿಗಳು ಸಿಎ ಫೌಂಡೇಶನ್ನ ಪರೀಕ್ಷೆ ತೇರ್ಗಡೆ ಹೊಂದಿದ್ದಾರೆ. ಅವರನ್ನು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಪ್ರೊ. ಕರುಣಾಕರ ಕೊಟೇಗಾರ್ ಸಮ್ಮಾನಿಸಿ ಗೌರವಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಪ್ರಭಾ ಅಕಾಡೆಮಿಯ ಮುಖ್ಯಸ್ಥರಾದ […]
ಕನಕದಾಸ ಸಂಶೋಧನಾ ಕೇಂದ್ರಕ್ಕೆ ಡಾ. ಶುಭಾ ಮರವಂತೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕ
ಶಿವಮೊಗ್ಗ(ಸೆ,27): ನಗರದ ಸಹ್ಯಾದ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಕುಂದಾಪುರ ಮೂಲದ ಡಾ.ಶುಭಾ ಮರವಂತೆ ಯವರನ್ನು ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ವೆಂಕಟೇಶಪ್ಪ, ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ದೈನಂದಿನ ಕಾರ್ಯಚಟುವಟಿಕೆಗಳ ಹಾಗೂ ಕಾರ್ಯಕ್ರಮಗಳ ಅನುಷ್ಠಾನಗಳ ದೃಷ್ಠಿಯಿಂದ […]
ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ- (ಸಹವಾಸಗಳು ಸಾಮರ್ಥ್ಯ ಹಿಗ್ಗಿಸುವಂತಿರಲಿ – ಆರ್. ಉಪೇಂದ್ರ ಶೆಟ್ಟಿ)
ಕುಂದಾಪುರ (ಸೆ,27) :ನಿಮ್ಮನ್ನು ನೀವು ನಂಬಿ, ನಿಮ್ಮ ಸಾಮರ್ಥ್ಯವನ್ನು ನಂಬಿ, ಅದು ನಿಮ್ಮನ್ನು ಯಶಸ್ಸಿನತ್ತ ಸಾಗಿಸುತ್ತದೆ. ನಿಮ್ಮಿಂದ ಅಸಾಧ್ಯ ಎಂಬುದು ಯಾವುದು ಇಲ್ಲ. ಸಂಪರ್ಕವನ್ನು ಬೆಳೆಸಿ, ಸಾಮರ್ಥ್ಯವನ್ನು ಬಳಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ. ಹಾಗೆ ಸಹಾಯ ಪಡೆದ ಸಂಸ್ಥೆಯನ್ನು ಸ್ಮರಿಸಿ ಎಂದು ಯುನಿವರ್ಸಲ್ ಗ್ರೂಫ್ ಆಫ್ ಇನ್ಸ್ಟಿಟ್ಯೂಶನ್ಸ್ನ ಅಧ್ಯಕ್ಷರಾದ ಆರ್.ಉಪೇಂದ್ರ ಶೆಟ್ಟಿಯವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು-ಎನ್.ಎಸ್.ಎಸ್ ಘಟಕ: ಬಸ್ರೂರಿನಲ್ಲಿ “ನಿರ್ಮಲ ದೇಗುಲ ” ಸ್ವಚ್ಚತಾ ಕಾರ್ಯಕ್ರಮ
ಬಸ್ರೂರು (ಸೆ, 26): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಸೆಪ್ಟೆಂಬರ್26 ರಂದು ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ , ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ […]
ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ, 25) : ಕೊಡುಗೈ ದಾನಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ ಸಂಸ್ಥೆ ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸಮಾಜ ಸೇವಾ ಕ್ಷೇತ್ರದ ಅನನ್ಯ ಕೊಡುಗೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಡಾ। ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಎನ್.ಎಸ್.ಎಸ್ ಘಟಕದ ವತಿಯಿಂದ ಸೆ,26 ರಂದು ಸ್ವಚ್ಚತಾ ಕಾರ್ಯಕ್ರಮ
ಕುಂದಾಪುರ (ಸೆ, 24):ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದ ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಇದೇ ಸೆಪ್ಟೆಂಬರ್ 26 ರ ಭಾನುವಾರದಂದು ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜು ವತಿಯಿಂದ ತಿಳಿಸಿದ್ದಾರೆ.
ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿಯ ಚಿತ್ರ ರಚಿಸುವ ಸ್ಪರ್ಧೆ
ಕೋಟೇಶ್ವರ (ಸೆ,24): ಸ್ಮಾರ್ಟ್ ಕ್ರೀಯೇಷನ್ಸ್ ಎಜುಕೇಶನ್ ಮತ್ತು ಜ್ಞಾನವಾಹಿನಿ ಯುಟ್ಯೂಬ್ ಚಾನೆಲ್ ರವರ ಸಹಭಾಗಿತ್ವದಲ್ಲಿ ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂಗವಾಗಿ “ನಮ್ಮ ಬಾಪೂಜೀ” ಶೀರ್ಷಿಕೆ ಅಡಿಯಲ್ಲಿ ರಾಜ್ಯ ಮಟ್ಟದ ಅಂಚೆ ಕಾರ್ಡ್ ನಲ್ಲಿ ಗಾಂಧೀಜಿ ಚಿತ್ರ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗ(ಎಲ್.ಕೆ.ಜಿ ಯಿಂದ 7ನೇ ತರಗತಿವರೆಗೆ), ಪ್ರೌಢ ವಿಭಾಗ (8ನೇ ತರಗತಿಯಿಂದ 10ನೇ ತರಗತಿ) ಹಾಗೂ ಪದವಿಪೂರ್ವ ವಿಭಾಗ ( ಪ್ರಥಮ ಪಿಯುಸಿ ಮತ್ತು […]
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಎರಡನೇ ಡೋಸ್ ಲಸಿಕಾ ಅಭಿಯಾನ
ಶಿರ್ವ(ಸೆ,21): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್ ಹಾಗೂ ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕರೋನಾ ವಿರುದ್ದ ಎರಡನೇಡೋಸ್ ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರರು, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಸೆಪ್ಟೆಂಬರ್ 21ರಿಂದ ಆಯೋಜಿಸಲಾಗಿದೆ. ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗೆ […]










