ತ್ರಾಸಿ (ಆ, 16) : ಇಲ್ಲಿನ ಡಾನ್ ಬಾಸ್ಕೋ ಸೀನಿಯರ್ ಸೆಕೆಂಡರಿ ಸ್ಕೂಲ್ ನಲ್ಲಿ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಬಹಳ ಅದ್ಧೂರಿಯಾಗಿ ಆಚರಿಸಲಾಯಿತು. ಗ್ಲೋಬ್ ಇಂಟರ್ಲಾಕ್ಸ್ ನಾಡಾದ ಮಾಲೀಕರು ಮತ್ತು ಪೋಷಕರಾದ ಸಂತೋಷ ಡಿ’ಸೋಜಾಧ್ವಜಾರೋಹಣ ಗೈದರು. ಧ್ವಜಾರೋಹಣ ಸಮಾರಂಭದಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ, ಕೋವಿಡ್ ಸಂತ್ರಸ್ತರು ಮತ್ತು ಯೋಧರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನದ ಸಂದೇಶಗಳನ್ನು ಹಿಂದಿ, ಕನ್ನಡ ಮತ್ತು ಇಂಗ್ಲೀಷ್ 3 ಭಾಷೆಗಳಲ್ಲಿ ಕ್ರಮವಾಗಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ
ಗಂಗೊಳ್ಳಿ (ಆ,15): ಇಲ್ಲಿನ ಸರಸ್ವತಿ ವಿದ್ಯಾಲಯದ ಪದವಿಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿದರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯ: 75ನೇ ಸ್ವಾತಂತ್ರ್ಯ ಸಂಭ್ರಮದ “ಅಮೃತ ಮಹೋತ್ಸವ” ದಿನಾಚರಣೆ
ಶಿರ್ವ(ಆ,15): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಆಗಸ್ಟ್ 15 ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯನ್ನು ಕೋವಿಡ್ 19 ಮಾರ್ಗಸೂಚಿಯಂತೆ ಆಚರಿಸಲಾಯಿತು. ಕಾಲೇಜಿನ ಆಡಳಿತಾತ್ಮಕ ಸಹಾಯಕ ಸಿಬ್ಬಂದಿ ಶ್ರೀರಂಗ ರವರು ಧ್ವಜಾರೋಹಣವನ್ನು ನೆರವೇರಿಸಿದ್ದರು. ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ,ಮಾತನಾಡಿ ದೇಶದ ಬುನಾದಿಯಾದ ಯುವಜನರು ಹಲವಾರು ಕ್ಷೇತ್ರಗಳಲ್ಲಿ ಸರ್ವತೋಮುಖವಾಗಿ ಪ್ರಗತಿ ಸಾಧಿಸಲು ಕಠಿಣ ಪರಿಶ್ರಮ,ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ನವಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ತಮ್ಮ ಕೈಲಾದ […]
ಎಸ್ಎಸ್ಎಲ್ಸಿ ಫಲಿತಾಂಶ : ಶೇಕಡಾ 98.24 ಅಂಕ ಪಡೆದ ಸುಚಿತ್ ಚಂದ್ರ
ಕುಂದಾಪುರ (ಆ, 13) : ಮುಂಬೈ ಪದ್ಮ ಕಮಲ ಕೇಟರರ್ಸ ಮಾಲಿಕರಾದ ಕಂಡ್ಲೂರು ಚಂದ್ರ ಮೊಗವೀರ ಹಾಗೂ ಶಿಕ್ಷಕಿ ಸುಜಾತ ಚಂದ್ರರ ಪುತ್ರ ಸುಚಿತ್ ಚಂದ್ರ ಕುಂದಾಪುರದ ವಿ.ಕೆ. ಆರ್. ಆಂಗ್ಲ ಮಾದ್ಶಮ ಶಾಲೆಯ ವಿದ್ಯಾರ್ಥಿಯಾಗಿದ್ದು ಈ ವರ್ಷ ನಡೆದ ಎಸ್ .ಎಸ್ .ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 98.24 ಅಂಕ ಪಡೆದಿರುತ್ತಾರೆ. ಶೈಕ್ಚಣಿಕ ಸಾಧನೆಯ ಜೊತೆಗೆ ಇತ ಕ್ರಿಕೆಟ್, ಕ್ವೀಜ್, ಚೆಸ್ ನಲ್ಲಿ ಆಸಕ್ತಿ ಹೊಂದಿದ್ದಾನೆ .
ತನ್ನ ಸಾಧನೆಯನ್ನು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಅರ್ಪಿಸಿದ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಣೀತಾ
ಕುಂದಾಪುರ (ಆ, 11) : ಬಸ್ರೂರಿನ ನಿವಾಸಿ, ಸರಕಾರಿ ಪ್ರೌಢಶಾಲೆ ಕೋಣಿಯ ಮುಖ್ಯೋಪಾಧ್ಯಾಯರಾದ ವಿದ್ವಾನ್ ಮಾಧವ ಅಡಿಗ ಹಾಗೂ ಶ್ರೀಮತಿ ಲಕ್ಷ್ಮೀ ಎಮ್, ಅಡಿಗರವರ ಪುತ್ರಿ ಪ್ರಣೀತಾ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಗಳಿಸಿ ರಾಜ್ಯದ ಗಮನ ಸೆಳೆದಿದ್ದಾಳೆ. ಪ್ರಣೀತಾ ಹೇಳುವಂತೆ “ಭವಿಷ್ಯದಲ್ಲಿ ಎಂಜಿನಿಯರ್ ಆಗಿ ಸಮಾಜ ಕಟ್ಟುವ ಬಯಕೆ ನನಗಿದೆ , ಕರೋನಾ ಆತಂಕದ ಕ್ಲಿಷ್ಟ ಕಾಲದಲ್ಲಿಯೂ ಶಿಕ್ಷಕರ ನಿರಂತರ ಪ್ರೋತ್ಸಾಹ , ತಂದೆ ತಾಯಿಯವರ […]
ಎಸ್ಎಸ್ಎಲ್ಸಿ ಫಲಿತಾಂಶ : ಕುಂದಾಪುರದ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ಸ್ರಜನ್ ಭಟ್ 625 ಕ್ಕೆ 625 ಅಂಕ
ಕುಂದಾಪುರ (ಆ, 10) : ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಸೃಜನ್ ಭಟ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಆಯಾಯ ದಿನದ ಪಾಠವನ್ನು ಆಂದೇ ಕಲಿತು ಮುಗಿಸುತ್ತಿದ್ದಿದ್ದರಿಂದ ಹೆಚ್ಚು ಒತ್ತಡದಿಲ್ಲದೆ ಪರೀಕ್ಷೆ ಬರೆಯಲು ಸಾಧ್ಯವಾಯಿತು. ಶಿಕ್ಷಕರು ಹಾಗೂ ತಂದೆ-ತಾಯಿಯ ಸಹಕಾರ ಮರೆಯಲಾಗದ್ದು ಎಂದು ಸೃಜನ್ ಅನುಭವವನ್ನು ಹಂಚಿಕೊಂಡಿದ್ದಾರೆ. ಕುಂದಾಪುರ ತಾಲೂಕು ವಡೇರ್ಹೋಬಳಿಯ ನಿವಾಸಿಗಳು […]
ಎಸ್ಎಸ್ಎಲ್ಸಿ ಫಲಿತಾಂಶ : ಕುಂದಾಪುರದ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ಅನುಶ್ರೀ 625 ಕ್ಕೆ 625 ಅಂಕ
ಕುಂದಾಪುರ (ಆ, 10) : ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಅನುಶ್ರೀ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಾಳಾವರದ ನಿವಾಸಿ ಶ್ರೀ ಬಾಬು ಶೆಟ್ಟಿ ಹಾಗೂ ಶ್ರೀಮತಿ ಸುಲೋಚನ ದಂಪತಿಯ ಪುತ್ರಿ ಅನುಶ್ರೀ ಶೆಟ್ಟಿಯ ಸಾಧನೆ ನಿಜಕ್ಕೂ ಸ್ಫೂರ್ತಿದಾಯಕ. “ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನನ್ನಿಂದಾಗಬಹುದಾದ ಸಹಾಯ ಮಾಡುವುದು ನನ್ನ ಬದುಕಿನ ಗುರಿ. ಐ.ಎ.ಎಸ್. ಅಧಿಕಾರಿಯಾಗಿ […]
ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಬೋಧಕ ಮತ್ತು ಬೋಧಕೇತರ ಸಂಘದ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ
ಕುಂದಾಪುರ (ಆ, 11) : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ಬೋಧಕ ಮತ್ತು ಬೋಧಕೇತರ ಸಂಘದ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿಯವರು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಉಪನ್ಯಾಸಕ ಯೋಗಿಶ್ ಶ್ಯಾನುಭೋಗ್ರವರಿಗೆ ಮತ್ತು ಇನ್ನೊರ್ವರಾದ ಶ್ರೀಲತಾ ಇವರಿಗೆ ಸಂಘದಿಂದ ಉಡುಗೊರೆ ನೀಡಲಾಯಿತು. […]
ಅಕ್ಷೋಹಿಣಿ ಟೀಮ್ : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ
ಕುಂದಾಪುರ (ಆ, 09) : ಆಸಾಡಿ ಅಮಾಸಿ ಆಗಸ್ಟ್ 8 ರ ವಿಶ್ವ ಕುಂದಾಪ್ರ ಕನ್ನಡ ದಿನ ಅಂಗವಾಗಿ ಅಕ್ಷೋಹಿಣಿ ಟೀಮ್ ಕುಂದಾಪುರ ಆಯೋಜಿಸಿದ “ನಾನು ನನ್ನ ಕುಂದಾಪ್ರ “ಎನ್ನುವ ವಿಷಯದ ಬಗ್ಗೆ ಪ್ರಬಂಧ ಬರೆಯುವ ಸ್ಪರ್ಧೆಯ ಮೊದಲ ಬಹುಮಾನ ಮಂಜುನಾಥ ಗುಂಡ್ಮಿ ಹಾಗೂ ದ್ವೀತಿಯ ನವ್ಯಶೀ ದೊರೆತಿದ್ದು, ಸಂಸ್ಥೆಯ ವತಿಯಿಂದ ವಿಜೇತರಿಗೆ ಹಸ್ತಾಂತರಿಸಲಾಯಿತು.
ಡಾನ್ ಬಾಸ್ಕೋ ಸ್ಕೂಲ್ ತ್ರಾಸಿ : ಸೈಬರ್ ಸೆಕ್ಯುರಿಟಿ ಅರಿವು ಕಾರ್ಯಕ್ರಮ
ತ್ರಾಸಿ (ಆ, 10) : ಇಲ್ಲಿನ ಡಾನ್ ಬಾಸ್ಕೋ ಸೀನಿಯರ್ ಸೆಕೆಂಡರಿ ಶಾಲೆಯ ವೆಲ್ಫೇರ್ ವಿಭಾಗದ ಆಶ್ರಯದಲ್ಲಿ ಇತ್ತೀಚೆಗೆ ವರ್ಚುವಲ್ ಮೋಡ್ನಲ್ಲಿ ಸೆಕೆಂಡರಿ ಮತ್ತು ಸೀನಿಯರ್ ಸೆಕೆಂಡರಿ ವಿಭಾಗದ ವಿದ್ಯಾರ್ಥಿಗಳಿಗೆ ಸೈಬರ್ ಸೆಕ್ಯೂರಿಟಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಿತು. ಉಡುಪಿಯ ಪೃಥ್ವಿಷನ್ ಸಂಸ್ಥೆಯ ಸ್ಥಾಪಕರು ಹಾಗೂ ಸೈಬರ್ ಸೆಕ್ಯೂರಿಟಿ ಕ್ಷೇತ್ರದಲ್ಲಿ ಪರಿಣಿತರಾಗಿರುವ ಶ್ರೀ ಪೃಥ್ವೀಶ್ ಕೆ, ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಸೈಬರ್ ಭದ್ರತೆಗೆ ಸಂಬಂಧಿಸಿದ ಪ್ರಸ್ತುತ ಸಮಸ್ಯೆಗಳ […]










