ಉಡುಪಿ (ಜು,8) : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ಮತ್ತು ಎಂಜಿನಿಯರಿಂಗ್ ವಿಭಾಗವು ಸಂಶೋಧನಾ ವಿಮರ್ಶೆ ಘಟಕದ ಸಹಯೋಗದೊಂದಿಗೆ “ಬ್ಲಾಕ್ ಚೈನ್ ತಂತ್ರಜ್ಞಾನದ ಕುರಿತು ಒಂದು ಸಂಶೋಧನಾ ದೃಷ್ಟಿಕೋನ” ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಗಾರವನ್ನು ಜುಲೈ 7 ರಂದು ಆಯೋಜಿಸಲಾಗಿತ್ತು. ಟೆಕ್ವೆಡ್ ಲ್ಯಾಟ್, ಎ.ಎಸ್.ಕ್ಯೂ.ಆರ್ ಟೆಕ್ನಾಲಜಿ ಇದರ ಸಹ ಸಂಸ್ಥಾಪಕ ಶ್ರೀ ಆದಿತ್ಯ ಎಸ್ ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಶ್ರೀ ಆದಿತ್ಯ ಅವರು ಕ್ರಿಪ್ಟೋ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ : ನಿರ್ಮಾಣ ಕಾರ್ಯದಲ್ಲಿ ಆಧುನಿಕ ಪ್ರವೃತ್ತಿಗಳ ಕುರಿತ ಆನ್ಲೈನ್ ತರಬೇತಿ ಕಾರ್ಯಕ್ರಮ
ಉಡುಪಿ (ಜು, 6) : ಉಡುಪಿಯ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ “ನಿರ್ಮಾಣ ಕಾರ್ಯದಲ್ಲಿ ಆಧುನಿಕ ಪ್ರವೃತ್ತಿ” ವಿಷಯದ ಕುರಿತು ಐದು ದಿನಗಳ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಜೂನ್ 28ರಿಂದ ಜುಲೈ 2ರವರೆಗೆ ಆಯೋಜಿಸಿಲಾಗಿತ್ತು. ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಡಾ.ರಾಘವೇಂದ್ರ ಹೊಳ್ಳ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸಿವಿಲ್ ಇಂಜಿನಿಯರಿಂಗ್ನಲ್ಲಿ ಕಟ್ಟಡ ನಿರ್ಮಾಣದಲ್ಲಿ ಮಾದರಿ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೌಶಲ್ಯವನ್ನು […]
ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯ : ಜುಲೈ 9ರಿಂದ 11ರವರೆಗೆ ರಾಷ್ಟ್ರಮಟ್ಟದ ಹ್ಯಾಕಥಾನ್ – “ಹ್ಯಾಕೋತ್ಸವ”
ಉಡುಪಿ (ಜು, 6): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕ ಯಂತ್ರವಿಭಾಗದ ಕೋಡ್ ಟ್ರೂಪರ್ಸ್ ಸಂಘ ಮತ್ತು ಐಇಇಇ ವಿದ್ಯಾರ್ಥಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ 48ಘಂಟೆಗಳ ರಾಷ್ಟ್ರಮಟ್ಟದ ಹ್ಯಾಕಥಾನ್ “ಹ್ಯಾಕೋತ್ಸವ”ವನ್ನು ಜುಲೈ 9ರಿಂದ 11ರವರೆಗೆ ಆಯೋಜಿಸಲಾಗಿದೆ. ಇದರ ಉದ್ಘಾಟನೆಯನ್ನು ಬೆಂಗಳೂರಿನ ವೋಲ್ವೋ ಸಮೂಹದ ಸುಧೀಂದ್ರ ಕೌಶಿಕ್ ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 280ಕ್ಕೂ ಹೆಚ್ಚು ವಿದ್ಯಾರ್ಥಿಗಳು […]
ಉಡುಪಿ ಡಯೆಟ್ ಯೂಟ್ಯೂಬ್ ಚಾನೆಲ್ – ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ಕೈಗೊಂಡ ಮಹತ್ವಪೂರ್ಣ ಹೆಜ್ಜೆ : ಶಿಕ್ಷಕ ಗಣೇಶ್ ಸಿ. ಎನ್. ಅಭಿಪ್ರಾಯ
ಉಡುಪಿ (ಜು, 4) : ಉಡುಪಿ ಡಯೆಟ್ ಯೂಟ್ಯೂಬ್ ಚಾನೆಲ್ ಇದು ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗಲು ಕೈಗೊಂಡ ಮಹತ್ವ ಪೂರ್ಣ ಹಾಗೂ ಅದ್ಭುತ ಹೆಜ್ಜೆ.ಈ ಕರೋನಾದಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಮಕ್ಕಳನ್ನು ಕಲಿಕೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಇದು ಶಿಕ್ಷಕರಿಗೆ ಮತ್ತು ಪೋಷಕರಿಗೆ ಸಹಕಾರಿಯಾಗುತ್ತದೆ. ಈ ಯೂಟ್ಯೂಬ್ ಚಾನೆಲ್ಗೆ ಚಂದಾದಾರರಾಗಲು ಮತ್ತು ಮಕ್ಕಳಿಗೆ ಇಂಗ್ಲಿಷ್ ಕಲಿಯಲು ಸಹಾಯ ಮಾಡಲು ನಾನು ಎಲ್ಲ ಪೋಷಕರನ್ನು ಕೋರುತ್ತೇನೆ ಎಂದು […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಪ್ರಾರಂಭ
ಕುಂದಾಪುರ (ಜು, 4): ಡಾ.ಬಿ.ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕಾಲೇಜು ಕುಂದಾಪುರ ಹಾಗೂ ಕುಂದಾಪುರದ ಪ್ರಸಿದ್ಧ ತರಬೇತಿ ಸಂಸ್ಥೆ ಸೃಷ್ಟಿ ಇನ್ಫೋಟೆಕ್, (ಕಿಯೋನಿಕ್ಸ್ ಕುಂದಾಪುರ, ಚಿನ್ಮಯಿ ಆಸ್ಪತ್ರೆಯ ಹತ್ತಿರ) ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವನ್ನು 2021-22 ರ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲಾಗುತ್ತಿದೆ. ಪದವಿ ಕೋರ್ಸುಗಳ ಜೊತೆಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಇದು ಅನುಕೂಲಕರವಾಗಿದ್ದು ಉನ್ನತ […]
ಬಲವಂತದ ಬರವಣಿಗೆ ಸರಿಯಲ್ಲ – ನರೇಂದ್ರ ಎಸ್. ಗಂಗೊಳ್ಳಿ : ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬದುಕಿಗೆ ಬರಹ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮ
ಬಲವಂತದ ಬರವಣಿಗೆ ಸರಿಯಲ್ಲ. ಸೃಜನಶೀಲತೆಯಿಂದ ಬರಹಗಳು ಹುಟ್ಟಬೇಕು. ಹೆಚ್ಚಿನ ಓದು, ವಿಚಾರ ಮಂಥನ, ಚರ್ಚೆ ಇತ್ಯಾದಿ ಉತ್ತಮ ಬರಹಗಾರರನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಆಸಕ್ತಿಯ ಕ್ಷೇತ್ರ ಯಾವುದೇ ಇದ್ದರೂ ಓದುವಿಕೆ ನಿರಂತರವಾಗಿರಲಿ ಎಂದು ಅವರು ಹೇಳಿದರು.
ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ಕುಂದಾಪುರ : 34ನೇ ಯೋಜನೆ – ಕಲಿಕೆಗೆ ಆಸರೆ
ಕುಂದಾಪುರ (ಜು, 02): ದ್ವಿತೀಯ ಪಿ.ಯು.ಸಿ ವ್ಯಾಸಂಗ ಮುಗಿಸಿದ ನಂತರ 2021-2022 ನೇ ಸಾಲಿನಲ್ಲಿ ವೃತ್ತಿಪರ ಶಿಕ್ಷಣ (ನರ್ಸಿಂಗ್, ಪ್ಯಾರಾ ಮೆಡಿಕಲ್, ಫುಡ್ ಟೆಕ್ನಿಷಿಯನ್, ಹೋಟೆಲ್ ಮ್ಯಾನೇಜ್ಮೆಂಟ್ ಇತ್ಯಾದಿ) ಕೋರ್ಸ್ ನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರದ ವತಿಯಿಂದ “ವಿದ್ಯಾರ್ಥಿವೇತನ” ಹಾಗೂ ಸಹಾಯಧನವನ್ನು ನೀಡುವ ಕಲಿಕೆಗೆ ಆಸರೆ ಎನ್ನುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳ ಬೇಕೆಂದು […]
ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ : ಕೋವಿಡ್ ಲಸಿಕಾ ಅಭಿಯಾನ
ಮಧುವನ (ಜು, 02) : ಇಲ್ಲಿನ ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನಲ್ಲಿ ಕಾಲೇಜು ಪ್ರಾರಂಭಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕಾಕರಣ ಹಮ್ಮಿಕೊಳ್ಳಲಾಗಿತ್ತು. ಜೂನ್ 30 ಬುಧವಾರದಂದು 100 ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಲಸಿಕೆ ನೀಡಲಾಗಿದೆ ಎಂದು ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್ ತಿಳಿಸಿದರು. ಲಸಿಕೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದ ಸೈಬರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯವರಿಗೆ ಪ್ರಾಂಶುಪಾಲರು […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡು ಗೋಪಾಡಿ : ಶಾಲಾ ಪ್ರಾರಂಭೋತ್ಸವ
ಕೋಟೇಶ್ವರ (ಜು, 2): ಕುಂದಾಪುರ ತಾಲೂಕಿನ ಪಡು ಗೋಪಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜುಲೈ,1ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಜೊತೆಗೆ ರಾಜ್ಯ ಸರಕಾರ ನಿಗದಿ ಪಡಿಸಿದ ಕರೋನದ ಮಾರ್ಗಸೂಚಿಯ ಬಗ್ಗೆ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೋಪಾಡಿ ಪಂಚಾಯಿತಿನ ಪ್ರಥಮ ಪ್ರಜೆ ಶ್ರೀಮತಿ ಸರೋಜಾ ಪೂಜಾರಿ ಕಾರ್ಯಕ್ರಮ ಅಧ್ಯಕ್ಷತೆಯನ್ನುವಹಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಶೆಟ್ಟಿ, ಸಹ ಶಿಕ್ಷಕಿ ಶ್ರೀಮತಿ ಮಾಲತಿ ನಾಯ್ಕ,ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್,ಪಂಚಾಯತ್ […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ : ಶಾಲಾ ಪ್ರಾರಂಭೋತ್ಸವ
ಜಡ್ಕಲ್ (ಜು, 01): ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ ಇದರ ಶಾಲಾ ಪ್ರಾರಂಭೋತ್ಸವ ಜುಲೈ,01 ರಂದು ನಡೆಯಿತು. ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಯುತ ನಾಗೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀಮತಿ ರಾಧಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಿಕ್ಷಣಾಭಿಮಾನಿ ರಾಮ ಶೆಟ್ಟಿ ಅತ್ತಿಕಾರ್, ಮುಖ್ಯ ಶಿಕ್ಷಕಿ ಶ್ರೀಮತಿ ದೇವಕಿ, ಸಹಶಿಕ್ಷಕಿ ಶ್ರೀಮತಿ ನೇತ್ರ ಹಾಗೂ ಶಾಲಾ ಮಕ್ಕಳ ಪೋಷಕರು […]










