ಗಂಗೊಳ್ಳಿ (ಆ,18) :ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸುವಾಗ ಅದರ ನೀತಿ-ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ವಿಷಯ ಸಂಗ್ರಹಣೆಗಾಗಿ ವಿವಿಧ ಆಕರಗಳನ್ನು ಬಳಸಿಕೊಂಡರೂ ಕೂಡ ಸ್ವಂತಿಕೆ ಸೃಜನಶೀಲತೆ ಮುಖ್ಯವಾಗಬೇಕು ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ(ರಿ)ಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜಿನಲ್ಲಿ ವನಮಹೋತ್ಸವ ಆಚರಣೆ
ಕೋಟೇಶ್ವರ (ಆ,18): ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಮೂಡಬಿದ್ರೆ, ಶಿಕ್ಷಾಪ್ರಭಾ ಅಕಾಡೆಮಿ ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಹಂಗಳೂರು (ಕುಂದಾಪುರ) ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ , 6 ರಂದು ವನಮಹೋತ್ಸವ ಕಾರ್ಯಕ್ರಮ ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜಿನಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮಾರುತಿಯವರು ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಎಮ್.ಎಮ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಂ. […]
ಸುಣ್ಣಾರಿ ಎಕ್ಸಲೆಂಟ್ ಕಾಲೇಜು :ಸಂಭ್ರಮದ 75ನೇ ಸ್ವಾತಂತ್ರ್ಯ ದಿನಾಚರಣೆ
ಕೋಟೇಶ್ವರ (ಆ ,18): ಇಲ್ಲಿನ ಸುಣ್ಣಾರಿ ಎಕ್ಸಲೆಂಟ್ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಂದಾಪುರದ ಪ್ರಸಿದ್ಧ ಹೋಮಿಯೋಪತಿ ವೈದ್ಯರಾದ, ಡಾಕ್ಟರ್ ಉತ್ತಮ್ ಕುಮಾರ್ ಶೆಟ್ಟಿ ಧ್ವಜಾರೋಹಣ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಬದುಕಿನ ಬಗ್ಗೆ ತಿಳಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರು, ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್ ರಮೇಶ್ ಶೆಟ್ಟಿ ಮಾತನಾಡಿ ನಮ್ಮ ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಇನ್ನೂರು ವರ್ಷ […]
ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವ
ಕುಂದಾಪುರ (ಆ, 16) : ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಸಂಸ್ಥಾಪಕರು, ಬೈಂದೂರಿನ ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣಗೈದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿ, ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಕೋವಾಡಿ ಚೇತನ್ ಶೆಟ್ಟಿ, ಎನ್ಸಿಸಿ ಅಧಿಕಾರಿ ಶಿವರಾಜ್ ಸಿ. ನಾವುಂದ ಹಾಗೂ ಸಂಸ್ಥೆಯ ಬೋಧಕ ಮತ್ತು […]
ಡಾನ್ ಬಾಸ್ಕೋ ಸ್ಕೂಲ್, ತ್ರಾಸಿ : ಸಂಭ್ರಮದ 75 ನೇ ಸ್ವಾತಂತ್ರ್ಯೋತ್ಸವ
ತ್ರಾಸಿ (ಆ, 16) : ಇಲ್ಲಿನ ಡಾನ್ ಬಾಸ್ಕೋ ಸೀನಿಯರ್ ಸೆಕೆಂಡರಿ ಸ್ಕೂಲ್ ನಲ್ಲಿ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಬಹಳ ಅದ್ಧೂರಿಯಾಗಿ ಆಚರಿಸಲಾಯಿತು. ಗ್ಲೋಬ್ ಇಂಟರ್ಲಾಕ್ಸ್ ನಾಡಾದ ಮಾಲೀಕರು ಮತ್ತು ಪೋಷಕರಾದ ಸಂತೋಷ ಡಿ’ಸೋಜಾಧ್ವಜಾರೋಹಣ ಗೈದರು. ಧ್ವಜಾರೋಹಣ ಸಮಾರಂಭದಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ, ಕೋವಿಡ್ ಸಂತ್ರಸ್ತರು ಮತ್ತು ಯೋಧರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನದ ಸಂದೇಶಗಳನ್ನು ಹಿಂದಿ, ಕನ್ನಡ ಮತ್ತು ಇಂಗ್ಲೀಷ್ 3 ಭಾಷೆಗಳಲ್ಲಿ ಕ್ರಮವಾಗಿ […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ
ಗಂಗೊಳ್ಳಿ (ಆ,15): ಇಲ್ಲಿನ ಸರಸ್ವತಿ ವಿದ್ಯಾಲಯದ ಪದವಿಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿದರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯ: 75ನೇ ಸ್ವಾತಂತ್ರ್ಯ ಸಂಭ್ರಮದ “ಅಮೃತ ಮಹೋತ್ಸವ” ದಿನಾಚರಣೆ
ಶಿರ್ವ(ಆ,15): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಆಗಸ್ಟ್ 15 ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯನ್ನು ಕೋವಿಡ್ 19 ಮಾರ್ಗಸೂಚಿಯಂತೆ ಆಚರಿಸಲಾಯಿತು. ಕಾಲೇಜಿನ ಆಡಳಿತಾತ್ಮಕ ಸಹಾಯಕ ಸಿಬ್ಬಂದಿ ಶ್ರೀರಂಗ ರವರು ಧ್ವಜಾರೋಹಣವನ್ನು ನೆರವೇರಿಸಿದ್ದರು. ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ,ಮಾತನಾಡಿ ದೇಶದ ಬುನಾದಿಯಾದ ಯುವಜನರು ಹಲವಾರು ಕ್ಷೇತ್ರಗಳಲ್ಲಿ ಸರ್ವತೋಮುಖವಾಗಿ ಪ್ರಗತಿ ಸಾಧಿಸಲು ಕಠಿಣ ಪರಿಶ್ರಮ,ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ನವಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ತಮ್ಮ ಕೈಲಾದ […]
ಎಸ್ಎಸ್ಎಲ್ಸಿ ಫಲಿತಾಂಶ : ಶೇಕಡಾ 98.24 ಅಂಕ ಪಡೆದ ಸುಚಿತ್ ಚಂದ್ರ
ಕುಂದಾಪುರ (ಆ, 13) : ಮುಂಬೈ ಪದ್ಮ ಕಮಲ ಕೇಟರರ್ಸ ಮಾಲಿಕರಾದ ಕಂಡ್ಲೂರು ಚಂದ್ರ ಮೊಗವೀರ ಹಾಗೂ ಶಿಕ್ಷಕಿ ಸುಜಾತ ಚಂದ್ರರ ಪುತ್ರ ಸುಚಿತ್ ಚಂದ್ರ ಕುಂದಾಪುರದ ವಿ.ಕೆ. ಆರ್. ಆಂಗ್ಲ ಮಾದ್ಶಮ ಶಾಲೆಯ ವಿದ್ಯಾರ್ಥಿಯಾಗಿದ್ದು ಈ ವರ್ಷ ನಡೆದ ಎಸ್ .ಎಸ್ .ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 98.24 ಅಂಕ ಪಡೆದಿರುತ್ತಾರೆ. ಶೈಕ್ಚಣಿಕ ಸಾಧನೆಯ ಜೊತೆಗೆ ಇತ ಕ್ರಿಕೆಟ್, ಕ್ವೀಜ್, ಚೆಸ್ ನಲ್ಲಿ ಆಸಕ್ತಿ ಹೊಂದಿದ್ದಾನೆ .
ತನ್ನ ಸಾಧನೆಯನ್ನು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಅರ್ಪಿಸಿದ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಣೀತಾ
ಕುಂದಾಪುರ (ಆ, 11) : ಬಸ್ರೂರಿನ ನಿವಾಸಿ, ಸರಕಾರಿ ಪ್ರೌಢಶಾಲೆ ಕೋಣಿಯ ಮುಖ್ಯೋಪಾಧ್ಯಾಯರಾದ ವಿದ್ವಾನ್ ಮಾಧವ ಅಡಿಗ ಹಾಗೂ ಶ್ರೀಮತಿ ಲಕ್ಷ್ಮೀ ಎಮ್, ಅಡಿಗರವರ ಪುತ್ರಿ ಪ್ರಣೀತಾ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಗಳಿಸಿ ರಾಜ್ಯದ ಗಮನ ಸೆಳೆದಿದ್ದಾಳೆ. ಪ್ರಣೀತಾ ಹೇಳುವಂತೆ “ಭವಿಷ್ಯದಲ್ಲಿ ಎಂಜಿನಿಯರ್ ಆಗಿ ಸಮಾಜ ಕಟ್ಟುವ ಬಯಕೆ ನನಗಿದೆ , ಕರೋನಾ ಆತಂಕದ ಕ್ಲಿಷ್ಟ ಕಾಲದಲ್ಲಿಯೂ ಶಿಕ್ಷಕರ ನಿರಂತರ ಪ್ರೋತ್ಸಾಹ , ತಂದೆ ತಾಯಿಯವರ […]
ಎಸ್ಎಸ್ಎಲ್ಸಿ ಫಲಿತಾಂಶ : ಕುಂದಾಪುರದ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯ ಸ್ರಜನ್ ಭಟ್ 625 ಕ್ಕೆ 625 ಅಂಕ
ಕುಂದಾಪುರ (ಆ, 10) : ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಸೃಜನ್ ಭಟ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಆಯಾಯ ದಿನದ ಪಾಠವನ್ನು ಆಂದೇ ಕಲಿತು ಮುಗಿಸುತ್ತಿದ್ದಿದ್ದರಿಂದ ಹೆಚ್ಚು ಒತ್ತಡದಿಲ್ಲದೆ ಪರೀಕ್ಷೆ ಬರೆಯಲು ಸಾಧ್ಯವಾಯಿತು. ಶಿಕ್ಷಕರು ಹಾಗೂ ತಂದೆ-ತಾಯಿಯ ಸಹಕಾರ ಮರೆಯಲಾಗದ್ದು ಎಂದು ಸೃಜನ್ ಅನುಭವವನ್ನು ಹಂಚಿಕೊಂಡಿದ್ದಾರೆ. ಕುಂದಾಪುರ ತಾಲೂಕು ವಡೇರ್ಹೋಬಳಿಯ ನಿವಾಸಿಗಳು […]










