ಗಂಗೊಳ್ಳಿ (ಜು, 17) : ಇಲ್ಲಿನ ಸಮುದಾಯ ಹಿತರಕ್ಷಣಾ ಸಮಿತಿ(ರಿ). ಗಂಗೊಳ್ಳಿ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ. 2021- 22 ನೇ ಶೈಕ್ಷಣಿಕ ಸಾಲಿನಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ಕಲಿಯುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಮಾತ್ರ ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಪ್ರಬಂಧದ ವಿಷಯ ದೇಶಪ್ರೇಮ ಎಂದರೆ?. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಮಂಗಳೂರು ವಿಶ್ವವಿದ್ಯಾನಿಲಯ : ಬಾಕಿ ಉಳಿದ ಸೆಮಿಸ್ಟರ್ ಪರೀಕ್ಷೆ ನಡೆಸಲು ಚಿಂತನೆ
ಮಂಗಳೂರು (ಜು,13) : ಕೋವಿಡ್ ಕಾರಣದಿಂದಾಗಿ ಬಾಕಿ ಉಳಿದಿರುವ ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಥಮ,ತ್ರತೀಯ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾನಿಯ ಚಿಂತನೆ ನಡೆಸಿದೆ. ಬಾಕಿ ಉಳಿದ ಪರೀಕ್ಷೆಗಳನ್ನು ನಡೆಸುವ ಕುರಿತಾದ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ವಿ.ವಿ. ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ನಿರ್ಧರಿಸಿದ್ದಾರೆ. ಬಾಕಿ ಉಳಿದ ಪರೀಕ್ಷೆಗಳನ್ನು ಆದಷ್ಟು ಬೇಗ ನಡೆಸಿ ಮೌಲ್ಯಮಾಪನ ನಡೆಸಲು ಚಿಂತನೆ ನಡೆಸಲಾಗಿದೆ. ಆಗಸ್ಟ್ […]
“ಹ್ಯಾಕೋತ್ಸವ” – ರಾಷ್ಟ್ರಮಟ್ಟದ ಹ್ಯಾಕಥಾನ್ ಸಮಾರೋಪ ಸಮಾರಂಭ
ಉಡುಪಿ (ಜು, 13) : ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಕಯಂತ್ರ ವಿಭಾಗದ ಆಶ್ರಯದಲ್ಲಿ ಕೋಡ್ ಟ್ರೂಪರ್ ಕ್ಲಬ್ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಭಾಗಿತ್ವದಲ್ಲಿ ನಡೆದ ಎರಡು ದಿನಗಳ ರಾಷ್ಟ್ರಮಟ್ಟದ ಅಂತರ್ಜಾಲ ಹ್ಯಾಕಥಾನಿನ ಸಮಾರೋಪ ಸಮಾರಂಭವು ಜುಲೈ 11ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕಟ್ಟಗೆಯನ್ನು ಮಥನ ಮಾಡಿದರೆ ಬೆಂಕಿಯ ಉತ್ಪನ್ನವಾಗುವಂತೆ, ಭೂಮಿಯ […]
ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ
ಕುಂದಾಪುರ (ಜು, 12) : ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಜ್ಯೇಷ್ಠ ಇನ್ಫೋಟೆಕ್ ಸಂಸ್ಥೆ ಜುಲೈ 10ರಂದು ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿತ್ತು . ಸಂದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ 05 ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ. ಉಮೇಶ್ ಶೆಟ್ಟಿಯವರು ನೇಮಕಾತಿ ಪತ್ರವನ್ನು ನೀಡಿದರು. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಕೋರಲಾಗಿದೆ.
ಕುಂದಾಪುರ : ‘ಸುರಗಂಗೆ’ ಪುಸ್ತಕ ಬಿಡುಗಡೆ
ಕುಂದಾಪುರ (ಜು, 11) : ಪಂಚಭಾಷಾ ಲೇಖಕಿ ಪಾರ್ವತಿ ಜಿ ಐತಾಳ್ ವಿಶೇಷವಾಗಿ ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಸೇವೆ ಅನುಪಮವಾದದ್ದು. ಅವರ ಸಾಧನೆ ಸದಾ ಕಾಲ ಪ್ರೇರಣೆ ನೀಡುವಂತದ್ದು. ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರದ ಮನ್ನಣೆ ಸಿಗಲೇ ಬೇಕಿದೆ ಎಂದು ಖ್ಯಾತ ಕಲಾವಿದೆ ಸಾಹಿತಿ ಪೂರ್ಣಿಮಾ ಸುರೇಶ್ ಅಭಿಪ್ರಾಯಪಟ್ಟರು. ಅವರು ಕುಂದಾಪುರದ ಜನಪ್ರತಿನಿಧಿ ಪ್ರಕಾಶನ ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಸಂಪಾದಕತ್ವದ ಡಾ. ಪಾರ್ವತಿ ಜಿ ಐತಾಳ್ ಅವರ ಸಮಗ್ರ ಕೃತಿಗಳ […]
ಎಕ್ಸಲೆಂಟ್ ಕಾಲೇಜ್ ಕುಂದಾಪುರ : ಎಸ್.ಎಸ್.ಎಲ್.ಸಿ. ಪರೀಕ್ಷಾರ್ಥಿಗಳಿಗಾಗಿ “ಭವಿಷ್ಯದ ಬಾಗಿಲು” ಕಾರ್ಯಕ್ರಮ
ಕುಂದಾಪುರ (ಜು, 11): ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಮೂಡಬಿದಿರೆಯ ಆಡಳಿತಕ್ಕೆ ಒಳಪಟ್ಟ ಕುಂದಾಪುರದ ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಸ್ಕೂಲ್ ಪ್ರಸ್ತುತ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ “ಭವಿಷ್ಯದ ಬಾಗಿಲು” ಎನ್ನುವ ವಿನೂತನ ಕಾರ್ಯಕ್ರಮವನ್ನು ಆನ್ ಲೈನ್ ನಲ್ಲಿ ಜುಲೈ 12 ಮತ್ತು 13 ರಂದು ಹಮ್ಮಿಕೊಂಡಿದೆ. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾಗಿರುವ ಡಾ|| […]
ಜುಲೈ, 25 ಭಾನುವಾರದಂದು ಕೆಸೆಟ್ ಪರೀಕ್ಷೆ
ಮೈಸೂರು (ಜು, 10): ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ.ಎಸ್.ಇ.ಟಿ.) ಯನ್ನು ಜುಲೈ,25 ರ ಆದಿತ್ಯವಾರದಂದು ನಡೆಸಲು ನಿರ್ಧರಿಸಿದೆ.ದಿನಾಂಕ 11 ನೇ ಏಪ್ರಿಲ್ 2021 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆದ್ದರಿಂದ, ಸದರಿ ಕೆಸೆಟ್ 2021 ಪರೀಕ್ಷೆಯನ್ನು 25.07.2021 (ಭಾನುವಾರ) ರಂದು ನಡೆಸಲು ತೀರ್ಮಾಸಲಾಗಿರುತ್ತದೆ. ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ರ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಕೆಸೆಟ್ ವೆಬ್ಸೈಟ್ನಲ್ಲಿ (http://kset.uni-mysore.ac.in) ಆಗಿಂದಾಗ್ಗೆ […]
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು : ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೊಸ ಇಂಜಿನಿಯರಿಂಗ್ ಕೋರ್ಸ್ ಆರಂಭ
ಮೂಡ್ಲಕಟ್ಟೆ (ಜು, 9): ಕುಂದಾಪುರದ ಪ್ರತಿಷ್ಠಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು (ಎಮ್.ಐ.ಟಿ.) ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನ ಭರಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ತಂತ್ರಜ್ಞಾನ ದ ಹೊಸ ಕೋರ್ಸ್ ಅನ್ನು ಪ್ರಾರಂಭಿಸಲು ಅನುಮೋದನೆ ದೊರಕಿದ್ದು, ಇದೇ ಸಾಲಿನಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಪ್ರಸ್ತುತ ಆಧುನಿಕ ಯುಗದಲ್ಲಿ ಇಂಜಿನಿಯರಿಂಗ್ ಒಳಗೊಳ್ಳುವಿಕೆ ಇಲ್ಲದಿರುವುದನ್ನು ಊಹಿಸಲು ಕಷ್ಟವಾಗಿದ್ದು, ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುವ ಉತ್ಪನ್ನಗಳಿಗೆ ಬಹಳ ಬೇಡಿಕೆ ಇರುವುದರಿಂದ ಕೃತಕ ಬುದ್ದಿಶಕ್ತಿ ತಂತ್ರಜ್ಞಾನ […]
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ : “ಬ್ಲಾಕ್ ಚೈನ್ ತಂತ್ರಜ್ಞಾನದ ಸಂಶೋಧನಾ ದೃಷ್ಟಿಕೋನ” ಎಂಬ ವಿಷಯದ ಕುರಿತು ತಾಂತ್ರಿಕ ಕಾರ್ಯಗಾರ
ಉಡುಪಿ (ಜು,8) : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ಮತ್ತು ಎಂಜಿನಿಯರಿಂಗ್ ವಿಭಾಗವು ಸಂಶೋಧನಾ ವಿಮರ್ಶೆ ಘಟಕದ ಸಹಯೋಗದೊಂದಿಗೆ “ಬ್ಲಾಕ್ ಚೈನ್ ತಂತ್ರಜ್ಞಾನದ ಕುರಿತು ಒಂದು ಸಂಶೋಧನಾ ದೃಷ್ಟಿಕೋನ” ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಗಾರವನ್ನು ಜುಲೈ 7 ರಂದು ಆಯೋಜಿಸಲಾಗಿತ್ತು. ಟೆಕ್ವೆಡ್ ಲ್ಯಾಟ್, ಎ.ಎಸ್.ಕ್ಯೂ.ಆರ್ ಟೆಕ್ನಾಲಜಿ ಇದರ ಸಹ ಸಂಸ್ಥಾಪಕ ಶ್ರೀ ಆದಿತ್ಯ ಎಸ್ ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಶ್ರೀ ಆದಿತ್ಯ ಅವರು ಕ್ರಿಪ್ಟೋ […]
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ : ನಿರ್ಮಾಣ ಕಾರ್ಯದಲ್ಲಿ ಆಧುನಿಕ ಪ್ರವೃತ್ತಿಗಳ ಕುರಿತ ಆನ್ಲೈನ್ ತರಬೇತಿ ಕಾರ್ಯಕ್ರಮ
ಉಡುಪಿ (ಜು, 6) : ಉಡುಪಿಯ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ “ನಿರ್ಮಾಣ ಕಾರ್ಯದಲ್ಲಿ ಆಧುನಿಕ ಪ್ರವೃತ್ತಿ” ವಿಷಯದ ಕುರಿತು ಐದು ದಿನಗಳ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಜೂನ್ 28ರಿಂದ ಜುಲೈ 2ರವರೆಗೆ ಆಯೋಜಿಸಿಲಾಗಿತ್ತು. ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಡಾ.ರಾಘವೇಂದ್ರ ಹೊಳ್ಳ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸಿವಿಲ್ ಇಂಜಿನಿಯರಿಂಗ್ನಲ್ಲಿ ಕಟ್ಟಡ ನಿರ್ಮಾಣದಲ್ಲಿ ಮಾದರಿ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೌಶಲ್ಯವನ್ನು […]










