ಮಂಗಳೂರು (ಏ, 13) : ಮಂಗಳೂರು ವಿಶ್ವವಿದ್ಯಾನಿಲಯ 2019-20 ರಲ್ಲಿ ನಡೆಸಿದ ಎಮ್.ಬಿ.ಎ. ಸ್ನಾತಕೋತ್ತರ ಅಂತಿಮ ಪರೀಕ್ಷೆಯಲ್ಲಿ ಮಂಗಳೂರಿನ ಎಸ್.ಡಿ.ಎಮ್. ಉದ್ಯಮಾಡಳಿತ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕುಂದಾಪುರ ಮೂಲದ ಸಂದೇಶ್ ಶೆಟ್ಟಿ ನಾಲ್ಕನೇ ರ್ಯಾಂಕ್ ಪಡೆದಿರುತ್ತಾರೆ.ಇವರು ಕುಂದಾಪುರ ತಾಲೂಕಿನ ಇಡೂರು-ಕುಂಜ್ಞಾಡಿ ಗ್ರಾಮದ ನಿವಾಸಿ ಶ್ರೀಮತಿ ಮುಕಾಂಬು ಮತ್ತು ಪ್ರಭಾಕರ ಶೆಟ್ಟಿಯವರ ಪುತ್ರ.
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಏಪ್ರಿಲ್ 12 ರಂದು ನಡೆಯ ಬೇಕಿದ್ದ ಮಂಗಳೂರು ವಿ. ವಿ. ಪದವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಮಂಗಳೂರು (ಏ, 10) : ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಮುಷ್ಕರದಿಂದಾಗಿ ಸಾರಿಗೆ ವ್ಯವಸ್ಥೆಯಲ್ಲಾದ ವ್ಯತ್ಯಯದಿಂದಾಗಿ ಮಂಗಳೂರು ವಿಶ್ವವಿದ್ಯಾನಿಲಯವು ಏಪ್ರಿಲ್ 12 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ. ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು, ಉಳಿದ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯುತ್ತದೆ ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಂಗಳೂರು ವಿ.ವಿ. ಪರೀಕ್ಷಾಂಗ ಕುಲಸಚಿವರಾದ ಪ್ರೋ. […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜು : ಹಳೆ ವಿದ್ಯಾರ್ಥಿಗಳಿಂದ ಯಕ್ಷಗಾನ ಬಯಲಾಟ
ಉಡುಪಿ (ಏ, 7) : ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳು “ಯಕ್ಷಸಿರಿ ಶಾಶ್ವತ ಬಳಗ” ಎಂಬ ಹೆಸರಿನಲ್ಲಿ ಸಂಘಟನೆಯನ್ನು ಹುಟ್ಟು ಹಾಕಿದ್ದು, ಇದರ ವತಿಯಿಂದ ಶ್ರೀ ಕೃಷ್ಣ ಲೀಲಾರ್ಣವ’ ಎಂಬ ಯಕ್ಷಗಾನ ಬಯಲಾಟ ಕಾರ್ಯಕ್ರಮವನ್ನು ಎರ್ಮಾಳಿನ ಶ್ರೀ ಲಕ್ಷ್ಮೀ ಜನಾರ್ಧನ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ವಹಿಸಿದ್ದರು. […]
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಮೂಂದೂಡಿಕೆ
ಮೈಸೂರು (ಏ, 10): ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ.) ಯನ್ನು ಎಪ್ರಿಲ್ 11 ರ ಭಾನುವಾರದಂದು ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ ಕಾರಣಾಂತರಗಳಿಂದ ಕೆ.ಎಸ್.ಇ.ಟಿ. (KSET) ಪರೀಕ್ಷೆಯನ್ನು ಮುಂದೂಡಲು ನಿರ್ಧರಸಿದೆ. ಕೆ.ಎಸ್.ಇ.ಟಿ. ನ ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ಸೈಟ್ನಲ್ಲಿ http://kset.uni-mysore.ac.in/ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ಗಮನಿಸಬೇಕೆಂದು ಎಂದು […]
ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ದೀಪಾ ಹಾಗೂ ಜ್ಯೋತಿ ಯವರಿಗೆ ಚಿನ್ನದ ಪದಕ
ಕುಂದಾಪುರ (ಏ, 8): ಮಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 2020ರಲ್ಲಿ ನಡೆಸಿದ ಅಂತಿಮ ಬಿ.ಕಾಂ ಪರೀಕ್ಷೆಯಲ್ಲಿ ಐದನೇ ಹಾಗೂ ಆರನೇ ಸೆಮಿಸ್ಟರ್ಗಳ ‘ಪೈನಾನ್ಶಿಯಲ್ ಎಕೌಂಟಿಗ್’ ವಿಷಯದಲ್ಲಿ ಕಾಲೇಜಿನ ದೀಪಾ ದೇವಾಡಿಗ ಮತ್ತು ಜ್ಯೋತಿ ಇವರು 300 ರಲ್ಲಿ 300 ಅಂಕ ಗಳಿಸಿ ICAI ನೀಡುವ ಚಿನ್ನದ ಪದಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ […]
ಯೆನೆಪೋಯ ಇಂಜಿನಿಯರಿಂಗ್ ಕಾಲೇಜು : ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ
ಮೂಡುಬಿದ್ರಿ (ಏ, 8): ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗ ಆಯೋಜಿಸಿದ್ದ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಉದ್ಘಾಟನೆ ಏ. 8 ರಂದು ನಡೆಯಿತು. ‘ಪೈಥಾನ್ ಬಳಸಿ ಕೃತಕ ಬುದ್ಧಿಮತ್ತೆಯ ಉಪಯೋಗಗಳು’ (Applications of Artificial Intelligence using Python) ಎಂಬ ವಿಷಯದಲ್ಲಿ ನಡೆದ ಈ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ.ಆರ್.ಜಿ. ಡಿ’ಸೋಜಾ ರವರು ಉದ್ಘಾಟಿಸಿದರು. ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್ಟಿಇ) ಸಹಯೋಗದೊಂದಿಗೆ […]
ಇ ಸಿ ಆರ್ ಗ್ರೂಫ್ ಆಫ್ ಇನ್ಸ್ಟಿಟ್ಯೂಶನ್ಸ್ : ವಿಶ್ವ ಆರೋಗ್ಯ ದಿನಾಚರಣೆ
ಮಧುವನ (ಏ, 7): ಇಲ್ಲಿನ ನರ್ಸಿಂಗ್ ಕಾಲೇಜಿನಲ್ಲಿ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಧು ಟಿ. ಭಾಸ್ಕರನ್ ರವರು ಕಾರ್ಯಕ್ರಮವನ್ನುಉದ್ಘಾಟಿಸುವುದರ ಜೊತೆಗೆ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು. ಇಂದಿನ ದಿನಗಳಲ್ಲಿ ಆರೋಗ್ಯದ ಸಮಸ್ಯೆ ಒಬ್ಬರ ಸಮಸ್ಯೆಯಾಗಿರದೆ ವಿಶ್ವದ ಸಮಸ್ಯೆಯಾಗಿದೆ ಆದ್ದರಿಂದ ಎಲ್ಲಕ್ಕಿಂತ ಹೆಚ್ಚಾಗಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು. ಕಾರ್ಯಕ್ರಮದ ಸಂಯೋಜಕರು ಪ್ರಾಂಶುಪಾಲರಾದ ಪ್ರೊ. ನಟರಾಜ್ ಕೆ, ಮಾತನಾಡಿ ಆರೋಗ್ಯದ […]
ಡಾ. ಮಹಾಂತೇಶ ಏಳಮ್ಮಿ ರವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ
ಬೆಳಗಾವಿ (ಏ, 7): ಬೆಳಗಾವಿಯ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಸಂಶೋಧನೆ ಮಹಾವಿದ್ಯಾಲಯದ ಗಣಕಯಂತ್ರ-ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಮಹಾಂತೇಶ ಏಳಮ್ಮಿ ರವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಬಾಗಲಕೋಟೆ ಜಿಲ್ಲೆಯ ನಿವಾಸಿಯಾದ ಡಾ.ಮಹಾಂತೇಶ ಏಳಮ್ಮಿ ಯವರು ಡಾ. ಬಸವರಾಜ್ ಅನಾಮಿ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “CHARACTERIZATION AND CLASSIFICATION OF COMMON FABRIC MATERIALS AND THEIR DEFECTS” ಎನ್ನುವ ವಿಷಯಕ್ಕೆ ಪಿ.ಎಚ್.ಡಿ […]
ಏಪ್ರಿಲ್ 8 ರಿಂದ 10 ರ ತನಕ ನಡೆಯ ಬೇಕಿದ್ದ ಮಂಗಳೂರು ವಿ. ವಿ. ಪದವಿ ಸೆಮಿಸ್ಟರ್ ಪರೀಕ್ಷೆ ಮುಂಡೂಡಿಕೆ
ಮಂಗಳೂರು (ಏ, 7): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಮುಷ್ಕರ ಆನಿರ್ದಿಷ್ಟಾವಧಿಗೆ ಮುಂದುವರೆದಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯವು ದಿನಾಂಕ 08-04-2021 ರಿಂದ 10-04-2021ರ ವರೆಗೆ ನಿಗದಿಪಡಿಸಿದ್ದ ಎಲ್ಲಾ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ. ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು,ಉಳಿದ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯುತ್ತದೆ ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ಈ ಕುರಿತು ಕೂಡಲೇ ವಿದ್ಯಾರ್ಥಿಗಳ ಗಮನಕ್ಕೆ ತರಲಾಗುವುದು ಎಂದು […]
ಕೆಎಸ್ಇಟಿ (KSET) ಪರೀಕ್ಷಾ ಕೇಂದ್ರಗಳ ವಿವರ ವೆಬ್ ಸೈಟ್ ನಲ್ಲಿ ಲಭ್ಯ
ಉಡುಪಿ (ಏ, 7): ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ.ಎಸ್.ಇ.ಟಿ. (KSET) ಇದೇ ಎಪ್ರಿಲ್ 11 ರಂದು ನಡೆಯಲಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವಿವರವನ್ನು ಮೈಸೂರು ವಿಶ್ವವಿದ್ಯಾಲಯ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ kset.uni-mysore.ac.in ಗೆ ಭೇಟಿ ನೀಡಬೇಕೆಂದು ಸೂಚಿಸಲಾಗಿದೆ.










