ಕುಂದಾಪುರ (ಏ, 6): ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ 10,000 ರೂ ನಗದು ಬಹುಮಾನದೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ “ಗೆಲುವಿನ ಹೆಜ್ಜೆ” ಪುಸ್ತಕ ಬಿಡುಗಡೆ
ಉಡುಪಿ (ಏ, 5): ಕರೋನಾ ಕಾರಣದಿಂದಾಗಿ ಎಸ್.ಎಸ್.ಎಲ್.ಸಿ ತರಗತಿಗಳು 7 ತಿಂಗಳು ವಿಳಂಬವಾಗಿ ಆರಂಭವಾದ ಹಿನ್ನೆಲೆಯಲ್ಲಿ ಪಠ್ಯಕ್ರಮಕ್ಕೆ ಸಂಭಂಧಪಟ್ಟಂತೆ ಎಲ್ಲಾ ವಿಷಯಗಳಿಗೆ ಸರಳ ಅಧ್ಯಯನ ಕ್ರಮ ಅನುಸರಿಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಅದರಲ್ಲೂ ವಿಶೇಷವಾಗಿ ನಿಧಾನಗತಿಯ ಕಲಿಕೆಯ ವಿದ್ಯಾರ್ಥಿಗಳು ಓದಿ ಕಲಿತು ಪರೀಕ್ಷೆ ಪಾಸಾಗಲು ಯೋಗ್ಯವಾಗಿರುವ 280 ಪುಟಗಳ” ಗೆಲುವಿನ ಹೆಜ್ಜೆ “ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅನಾವರಣಗೊಳಿಸಿದರು. ಅವರುಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ “ಗೆಲುವಿನ ಹೆಜ್ಜೆ” […]
ಸರ್ಕಾರಿ ಬಸ್ಸ್ ನೌಕರರ ಮುಷ್ಕರ ಹಿನ್ನೆಲೆ ಎಪ್ರಿಲ್ 7 ರಂದು ನಡೆಯ ಬೇಕಿದ್ದ ಮಂಗಳೂರು ವಿ.ವಿ. ಪದವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಮಂಗಳೂರು (ಏ, 6): ವೇತನ ಹೆಚ್ಚಳ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಇಲಾಖೆಯ ನೌಕರರು ಎಪ್ರಿಲ್ 7 ರಂದು ಕರೆ ನೀಡಿದ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಎಪ್ರಿಲ್ 7 ರ ಬುಧವಾರ ನಡೆಯಬೇಕಿದ್ದ ಮಂಗಳೂರು ವಿ.ವಿ. ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ಮಂಗಳೂರು ವಿ.ವಿ ಪರೀಕ್ಷಾಂಗ ಕುಲಸಚಿವರಾದ ಪ್ರೊ ಪಿ.ಎಲ್ ಧರ್ಮ ರವರು ತಿಳಿಸಿರುತ್ತಾರೆ.ಹಾಗೆಯೇ ಎಪ್ರಿಲ್ 7 ರಂದು ನಡೆಯ ಬೇಕಿದ್ದ ಪರೀಕ್ಷೆಯ ಮುಂದೂಡಲ್ಪಟ್ಟ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು […]
ಸರಸ್ವತಿ ವಿದ್ಯಾಲಯಕ್ಕೆ ಪ್ರಥಮ ಸ್ಥಾನ
ಗಂಗೊಳ್ಳಿ (ಏ, 5): ಪದವಿ ಪೂರ್ವ ಶಿಕ್ಷಣ ಇಲಾಖೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಜರಗಿದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಬಾಲಕರ ತಂಡ ಟೆನ್ನಿಕಾಯ್ಟ್ ಮತ್ತು ಬಾಲ್ ಬ್ಯಾಡ್ಮಿಂಟನ್ ಎರಡರಲ್ಲೂ ಪ್ರಥಮ ಸ್ಥಾನ ಗಳಿಸಿದರು.ಹಾಗೆಯೇ ಬಾಲಕಿಯರು ಟೆನ್ನಿಕಾಯ್ಟ್ ನಲ್ಲಿ ಪ್ರಥಮ […]
ಡಾ. ಸತ್ಯಮೂರ್ತಿ ವಿ. ಪರ್ವತಕರ್ ರವರಿಗೆ ಪಿಹೆಚ್.ಡಿ ಪದವಿ ಪ್ರದಾನ
ಹುಬ್ಬಳ್ಳಿ (ಎ, 5): ಬೆಳಗಾವಿ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ರಿಸರ್ಚ್ ಮಹಾವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಸಹಾಯಕ ಪ್ರಾಧ್ಯಾಪಕ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹ್ಯಾದ್ರಿ ಕಾಲೊನಿ ನಿವಾಸಿಯಾದ ಡಾ.ಸತ್ಯಮೂರ್ತಿವಿ.ಪರ್ವತಕರ್ ರವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಡಾ. ಸದಾನಂದ ಎಂ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಡಾ.ಸತ್ಯಮೂರ್ತಿವಿ.ಪರ್ವತಕರ್ ರವರು ಮಂಡಿಸಿದ THE STUDY OF SOME GENERALIZATION […]
ಪ್ರೋ. ರಾಮಚಂದ್ರ ರವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ
ಕುಂದಾಪುರ (ಎ. 1): ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ರಾಮಚಂದ್ರ ರವರು ಮಂಡಿಸಿದ ಮರಾಠಿ ಸಮುದಾಯಗಳ ತೌಲನಿಕ ಅಧ್ಯಯನ ಎನ್ನುವ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ. ನೀಡಿದೆ. ಇವರು ಹಂಪಿ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ। ಗಂಗಾಧರ ದೈವಜ್ಞ ರಿಂದ ಮಾರ್ಗದರ್ಶನ ಪಡೆದಿದ್ದಾರೆ. ಹಾಗೂ ಇವರಿಗೆ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಡಾ| ಪೂರ್ವಚಾರ್ ಎಂ. ರವರು ಸಹ […]
ಬಂಟಕಲ್ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ : ಮಾಹಿತಿ ಕಾರ್ಯಾಗಾರ
ಉಡುಪಿ (ಮಾ. 31) : ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಮಾಲೋಚನಾ (ಕೌನ್ಸೆಲಿಂಗ್) ಘಟಕವು ದಿನಾಂಕ 30 ಮಾರ್ಚ್2021ರಂದು “ಕೌನ್ಸೆಲಿಂಗ್ ಸ್ಟ್ರಾಟಜಿಸ್” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಿತ್ತು. ಕಾರ್ಯಗಾರದಲ್ಲಿ ರೋಶನಿ ನಿಲಯ, ಮಂಗಳೂರು ಇದರ ಉಪಪ್ರಾಂಶುಪಾಲರಾದ ಡಾ.ಜೆನಿಸ್ ಮೇರಿ ಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವ್ಯಕ್ತಿಯ ದೇಹ ಮತ್ತು ಮನಸ್ಸು ನಡುವಿನ ಸಮತೋಲನ ಹಾಗೂ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವಿನ ಸಂವಹನ, ವ್ಯಕ್ತಿಯ ಸಮಸ್ಯೆಗಳನ್ನು ಗುರುತಿಸುವುದು ಮತ್ತು […]
ಬಂಟಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – 2020 ಕುರಿತಾದ ಉಪನ್ಯಾಸ
ಉಡುಪಿ (ಮಾ. 30): ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಖಾತ್ರಿ ಘಟಕವು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ “ಉನ್ನತ ಶಿಕ್ಷಣ ರಂಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020ರ ಪರಿಣಾಮಗಳು” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಸಿ. ಕೆ. ಮಂಜುನಾಥ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇವರು ತಮ್ಮ ಉಪನ್ಯಾಸದಲ್ಲಿ ಭಾರತದಲ್ಲಿ ರಾಷ್ಟ್ರೀಯ ಶಿಕ್ಷಣ […]
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್
ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫಾರ್ಮೇಶನ್ ಸೈನ್ಸ್ ವಿಭಾಗಗಳು ಆಯೋಜಿಸಿದ್ದ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನ ಉದ್ಘಾಟನೆ ಮಾ. 29 ರಂದು ನಡೆಯಿತು.
ಪ್ರಥ್ವಿರಾಜ್ ಎನ್. ರವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿ.ಹೆಚ್.ಡಿ. ಪದವಿ
ಕುಂದಾಪುರ (ಮಾ. 31) : ಮಣಿಪಾಲ ಸ್ಕೂಲ್ ಆಫ್ ಇನ್ಫಾರ್ಮಶನ್ ಸೈನ್ಸಸ್ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರಥ್ವಿರಾಜ್ ಎನ್ ರವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪಿ.ಹೆಚ್.ಡಿ. ಪದವಿ ನೀಡಿದೆ. ಇವರು ಡಾ. ಸಂತೋಷ್ ದೇಶಪಾಂಡೆಯವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಓಪ್ಟಿಮೈಜ್ಡ್ ಅಲ್ಗಾರಿತಮ್ ಫಾರ್ ಮಲ್ಟಿ-ಕಾಂಸ್ಟ್ರೈನ್ಡ್ QoS ರೂಟಿಂಗ್ ಇನ್ MANET’ ಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ ಲಭಿಸಿರುತ್ತದೆ.ಇವರು ಅಂಪಾರು ಸಂಜಯ ಗಾಂಧಿ ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ನಾಗರಾಜ […]










